ಬ್ರಾತ್‌ವೇಟ್‌-ಟಿ. ಚಂದರ್‌ಪಾಲ್‌ ದಾಖಲೆ:  ಮೊದಲ ವಿಕೆಟಿಗೆ 336 ರನ್ನುಗಳ ಜತೆಯಾಟ


Team Udayavani, Feb 7, 2023, 12:09 AM IST

ಬ್ರಾತ್‌ವೇಟ್‌-ಟಿ. ಚಂದರ್‌ಪಾಲ್‌ ದಾಖಲೆ:  ಮೊದಲ ವಿಕೆಟಿಗೆ 336 ರನ್ನುಗಳ ಜತೆಯಾಟ

ಬುಲಾವಾಯೊ: ಜಿಂಬಾಬ್ವೆ ತಂಡದೆದುರಿನ ಮೊದಲ ಟೆಸ್ಟ್‌ ಪಂದ್ಯದಲ್ಲಿ ವೆಸ್ಟ್‌ಇಂಡೀಸ್‌ನ ಆರಂಭಿಕ ಆಟಗಾರರಾದ ನಾಯಕ ಕ್ರೆಗ್‌ ಬ್ರಾತ್‌ವೇಟ್‌ ಮತ್ತು ತಗೆನಾರಾಯಣ್‌ ಚಂದರ್‌ಪಾಲ್‌ 33 ವರ್ಷ ಹಿಂದಿನ ದಾಖಲೆಯನ್ನು ಅಳಿಸಿ ಹಾಕಿದ್ದಾರೆ. ಅವರಿಬ್ಬರ ಈ ಸಾಧನೆಯಿಂದಾಗಿ ವೆಸ್ಟ್‌ಇಂಡೀಸ್‌ ತಂಡವು ಮಳೆಯಿಂದ ತೊಂದರೆಗೊಳಗಾದ ಈ ಪಂದ್ಯದಲ್ಲಿ 6 ವಿಕೆಟಿಗೆ 447 ರನ್‌ ಪೇರಿಸಿ ಇನ್ನಿಂಗ್ಸ್‌ ಡಿಕ್ಲೇರ್‌ ಮಾಡಿಕೊಂಡಿದೆ.
ಮೂರನೇ ದಿದ ಆಟ ಸಾಗುತ್ತಿದ್ದು ಜಿಂಬಾಬ್ವೆ ಒಂದು ವಿಕೆ‌ಟ್‌ ಕಳೆದುಕೊಂಡಿದ್ದು 76 ರನ್‌ ಗಳಿಸಿದೆ.

ಬ್ರಾತ್‌ವೇಟ್‌ ಮತ್ತು ಚಂದರ್‌ಪಾಲ್‌ ಮೂರನೇ ದಿನವೂ ಎಲ್ಲರ ಆಕರ್ಷಣೆಯ ಬಿಂದುವಾಗಿದ್ದರು. ಅವರಿಬ್ಬರು ಮೊದಲ ವಿಕೆಟಿಗೆ 336 ರನ್ನುಗಳ ಜತೆಯಾಟದಲ್ಲಿ ಪಾಲ್ಗೊಂಡು ಬೇರ್ಪಟ್ಟರು. 1990ರಲ್ಲಿ ಸೇಂಟ್‌ ಜಾನ್ಸ್‌ನಲ್ಲಿ ಇಂಗ್ಲೆಂಡ್‌ ವಿರುದ್ಧ ನಡೆದ ಪಂದ್ಯದಲ್ಲಿ ಗಾರ್ಡನ್‌ ಗ್ರೀನಿಡ್ಜ್ ಮತ್ತು ಡೆಸ್ಮಂಡ್‌ ಹೇಯ್ನ ಅವರು ಮೊದಲ ವಿಕೆಟಿಗೆ 298 ರನ್‌ ಪೇರಿಸಿರುವುದು ವೆಸ್ಟ್‌ಇಂಡೀಸ್‌ ಪರ ಈ ಹಿಂದಿನ ಗರಿಷ್ಠ ಮೊತ್ತವಾಗಿತ್ತು,

ಟೆಸ್ಟ್‌ ಇತಿಹಾಸದಲ್ಲಿ ಇದು ಸಮಗ್ರವಾಗಿ ಮೊದಲ ವಿಕೆಟಿಗೆ ಪàರಿಸಿದ 9ನೇ ಗರಿಷ್ಠ ಮೊತ್ತವಾಗಿದೆ. ದಕ್ಷಿಣ ಆಫ್ರಿಕಾದ ಗ್ರೇಮ್‌ ಸ್ಮಿತ್‌ ಮತ್ತು ನೀಲ್‌ ಮೆಕೆಂಝಿ ಅವರು 2008ರಲ್ಲಿ ಚಟ್ಟೊಗ್ರಾಮ್‌ನಲ್ಲಿ ಬಾಂಗ್ಲಾದೇಶ ವಿರುದ್ಧ ಮೊದಲ ವಿಕೆಟಿಗೆ 415 ರನ್‌ ಪೇರಿಸಿರುವುದು ಗರಿಷ್ಠ ಮೊತ್ತವಾಗಿದೆ.

ಟೆಸ್ಟ್‌ನಲ್ಲಿ 12ನೇ ಶತಕ ದಾಖಲಿಸಿರುವ ಬ್ರಾತ್‌ವೇಟ್‌ ವೈಯಕ್ತಿಕವಾಗಿ 182 ರನ್‌ ಗಳಿಸಿ ಮೊದಲಿಗರಾಗಿ ಔಟಾದರು. ಬ್ರಾತ್‌ವೇಟ್‌ ಈ ಹಿಂದಿನ ಟೆಸ್ಟ್‌ನಲ್ಲಿ ಕೇವಲ 19 ಮತ್ತು 3 ರನ್‌ ಗಳಿಸಿದ್ದರು. ಇಲ್ಲಿ ಭರ್ಜರಿ ಆಟವಾಡುವ ಮೂಲಕ ಅವರು ಗಮನ ಸೆಳೆದರು. ಭಾರೀ ಮಳೆಯಿಂದಾಗಿ ಮೊದಲ ಎರಡು ದಿನಗಳಲ್ಲಿ ಕೇವಲ 89 ಓವರ್‌ಗಳ ಆಟ ಸಾಗಿತ್ತು. ಆದರೆ ಮೂರನೇ ದಿನ ಪ್ರವಾಸಿ ತಂಡದ ಆರಂಭಿಕರು ಭರ್ಜರಿ ಬ್ಯಾಟಿಂಗ್‌ ಪ್ರದರ್ಶಿಸಿ ಸಂಭ್ರಮಿಸಿದರು.

101 ರನ್ನಿನಿಂದ ಮೂರನೇ ದಿನದಾಟ ಆರಂಭಿಸಿದ ಚಂದರ್‌ಪಾಲ್‌ ದಾಖಲೆಯ ಜತೆಯಾಟ ದಾಖಲಿಸಿದಲ್ಲದೇ ವೈಯಕ್ತಿಕವಾಗಿ ದ್ವಿಶತಕ ಬಾರಿಸಿ ಮಿಂಚಿದರು. ತನ್ನ ಮೂರನೇ ಟೆಸ್ಟ್‌ನಲ್ಲಿ ಚೊಚ್ಚಲ ಶತಕದ ಸಂಭ್ರಮ ಆಚರಿಸಿದ ಅವರು 16 ಬೌಂಡರಿ ಮತ್ತು 3 ಸಿಕ್ಸರ್‌ ನೆರವಿನಿಂದ 207 ರನ್‌ ಗಳಿಸಿ ಅಜೇಯರಾಗಿ ಉಳಿದರು. 26ರ ಹರೆಯದ ಅವರು ವೆಸ್ಟ್‌ಇಂಡೀಸ್‌ನ ಮಾಜಿ ಆಟಗಾರ ಶಿವನಾರಾಯಣ್‌ ಚಂದರ್‌ಪಾಲ್‌ ಅವರ ಪುತ್ರರಾಗಿದ್ದಾರೆ.

ಸಂಕ್ಷಿಪ್ತ ಸ್ಕೋರು: ವೆಸ್ಟ್‌ಂಡೀಸ್‌ ಮೊದಲ ಇನ್ನಿಂಗ್ಸ್‌ 6 ವಿಕೆಟಿಗೆ 447 ಡಿಕ್ಲೇರ್‌x (ಬ್ರಾತ್‌ವೇಟ್‌ 182, ಟಿ.ಚಂದರ್‌ಪಾಲ್‌ 207, ಬ್ರ್ಯಾಂಡನ್‌ ಮಾವುತ 140ಕ್ಕೆ 5); ಜಿಂಬಾಬ್ವೆ ಒಂದು ವಿಕೆಟಿಗೆ 76.

ಟಾಪ್ ನ್ಯೂಸ್

ಕಾಪು: ಸುಗ್ಗಿ ಮಾರಿಪೂಜೆಗೆ ಸಂಭ್ರಮದ ಚಾಲನೆ

ಕಾಪು: ಸುಗ್ಗಿ ಮಾರಿಪೂಜೆಗೆ ಸಂಭ್ರಮದ ಚಾಲನೆ

ಚಾಮರಾಜನಗರ: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 45 ಲಕ್ಷ ರೂ. ನಗದು ವಶ

ಚಾಮರಾಜನಗರ: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 45 ಲಕ್ಷ ರೂ. ನಗದು ವಶ

ಮುಸ್ಲಿಮರು, ಒಕ್ಕಲಿಗರನ್ನು ಎತ್ತಿಕಟ್ಟಲು ಉರಿಗೌಡ ನಂಜೇಗೌಡ ಪಾತ್ರ ಸೃಷ್ಟಿ: ಸಿ.ಎಂ.ಇಬ್ರಾಹಿಂ

ಮುಸ್ಲಿಮರು, ಒಕ್ಕಲಿಗರನ್ನು ಎತ್ತಿಕಟ್ಟಲು ಉರಿಗೌಡ ನಂಜೇಗೌಡ ಪಾತ್ರ ಸೃಷ್ಟಿ: ಸಿ.ಎಂ.ಇಬ್ರಾಹಿಂ

ಬೆಳಗಾವಿ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 9 ಲಕ್ಷ ರೂ. ನಗದು ವಶ

ಬೆಳಗಾವಿ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 9 ಲಕ್ಷ ರೂ. ನಗದು ವಶ

ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ರಥಾರೋಹಣ ಸಂಪನ್ನ

ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ರಥಾರೋಹಣ ಸಂಪನ್ನ

ಕಪ್ಪತ್ತಗುಡ್ಡದಲ್ಲಿ ಚಿರತೆ ಪ್ರತ್ಯಕ್ಷ: ಸಾಮಾಜಿಕ ಜಾಲತಾಣದಲ್ಲಿ ಫೋಟೋ ವೈರಲ್

ಕಪ್ಪತ್ತಗುಡ್ಡದಲ್ಲಿ ಚಿರತೆ ಪ್ರತ್ಯಕ್ಷ: ಗ್ರಾಮಸ್ಥರು ಎಚ್ಚರವಹಿಸಲು ಅರಣ್ಯ ಅಧಿಕಾರಿಗಳ ಸೂಚನೆ

ಬಂಧಿಸಲು ಹೋದ ಪೊಲೀಸರ ಮೇಲೆ ಆರೋಪಿಗಳಿಂದ ದಾಳಿ: ಓರ್ವನ ಸೆರೆ, ಇನ್ನೋರ್ವ ಪರಾರಿ

ಬಂಧಿಸಲು ಹೋದ ಪೊಲೀಸರ ಮೇಲೆ ಆರೋಪಿಗಳಿಂದ ದಾಳಿ ಯತ್ನ: ಓರ್ವನ ಸೆರೆ, ಇನ್ನೋರ್ವ ಪರಾರಿ



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಜಯದೊಂದಿಗೆ ಮುಗಿಯಲಿ ಅಭಿಯಾನ: ಸೀಸನ್ ನ ಕೊನೆಯ ಪಂದ್ಯಕ್ಕೆ ಸ್ಮೃತಿ ಟೀಂ ರೆಡಿ

ಜಯದೊಂದಿಗೆ ಮುಗಿಯಲಿ ಅಭಿಯಾನ: ಸೀಸನ್ ನ ಕೊನೆಯ ಪಂದ್ಯಕ್ಕೆ ಸ್ಮೃತಿ ಟೀಂ ರೆಡಿ

ಭಾರತೀಯನೊಬ್ಬ ಪಾಕಿಸ್ಥಾನ ತಂಡಕ್ಕೆ ಬೆದರಿಕೆ ಹಾಕಿದ್ದ, ಆದರೆ…; ಬಾಂಬ್ ಸಿಡಿಸಿದ ಅಫ್ರಿದಿ

ಭಾರತೀಯನೊಬ್ಬ ಪಾಕಿಸ್ಥಾನ ತಂಡಕ್ಕೆ ಬೆದರಿಕೆ ಹಾಕಿದ್ದ, ಆದರೆ…; ಬಾಂಬ್ ಸಿಡಿಸಿದ ಅಫ್ರಿದಿ

delhi

ವನಿತಾ ಪ್ರೀಮಿಯರ್‌ ಲೀಗ್‌ :ಡೆಲ್ಲಿ ಕ್ಯಾಪಿಟಲ್ಸ್‌ ಫೈನಲಿಗೆ

ಏಕದಿನ ಸರಣಿ ಗೆದ್ದರಷ್ಟೇ ಭಾರತ ನಂ. 1

ಏಕದಿನ ಸರಣಿ ಗೆದ್ದರಷ್ಟೇ ಭಾರತ ನಂ. 1

ಪ್ಲೇ ಆಫ್ ಪ್ರವೇಶಿಸಿದ ಯುಪಿ ; ಗ್ರೇಸ್‌ ಹ್ಯಾರಿಸ್‌, ಮೆಕ್‌ಗ್ರಾತ್‌ ಗ್ರೇಟ್‌ ಬ್ಯಾಟಿಂಗ್‌

ಪ್ಲೇ ಆಫ್ ಪ್ರವೇಶಿಸಿದ ಯುಪಿ ; ಗ್ರೇಸ್‌ ಹ್ಯಾರಿಸ್‌, ಮೆಕ್‌ಗ್ರಾತ್‌ ಗ್ರೇಟ್‌ ಬ್ಯಾಟಿಂಗ್‌

MUST WATCH

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

udayavani youtube

ನಮ್ಮ ಅಪ್ಪು ಕುರಿತ ಒಂದಷ್ಟು ಸುಂದರ ವಿಚಾರಗಳು

udayavani youtube

ವಿವಿಧ ದೇಶದ 2500 ವಿಭಿನ್ನ ರೀತಿಯ ನಾಯಿಗಳ ಸ್ಟ್ಯಾಂಪ್ ಸಂಗ್ರಹ

udayavani youtube

ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಮಠದಲ್ಲಿ ಬೈಬಲ್ ಕೃತಿ, ಮೊಹರಂ ಪಂಜಾ

ಹೊಸ ಸೇರ್ಪಡೆ

ಕಾಪು: ಸುಗ್ಗಿ ಮಾರಿಪೂಜೆಗೆ ಸಂಭ್ರಮದ ಚಾಲನೆ

ಕಾಪು: ಸುಗ್ಗಿ ಮಾರಿಪೂಜೆಗೆ ಸಂಭ್ರಮದ ಚಾಲನೆ

ಚಾಮರಾಜನಗರ: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 45 ಲಕ್ಷ ರೂ. ನಗದು ವಶ

ಚಾಮರಾಜನಗರ: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 45 ಲಕ್ಷ ರೂ. ನಗದು ವಶ

ಮುಸ್ಲಿಮರು, ಒಕ್ಕಲಿಗರನ್ನು ಎತ್ತಿಕಟ್ಟಲು ಉರಿಗೌಡ ನಂಜೇಗೌಡ ಪಾತ್ರ ಸೃಷ್ಟಿ: ಸಿ.ಎಂ.ಇಬ್ರಾಹಿಂ

ಮುಸ್ಲಿಮರು, ಒಕ್ಕಲಿಗರನ್ನು ಎತ್ತಿಕಟ್ಟಲು ಉರಿಗೌಡ ನಂಜೇಗೌಡ ಪಾತ್ರ ಸೃಷ್ಟಿ: ಸಿ.ಎಂ.ಇಬ್ರಾಹಿಂ

ಬೆಳಗಾವಿ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 9 ಲಕ್ಷ ರೂ. ನಗದು ವಶ

ಬೆಳಗಾವಿ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 9 ಲಕ್ಷ ರೂ. ನಗದು ವಶ

ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ರಥಾರೋಹಣ ಸಂಪನ್ನ

ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ರಥಾರೋಹಣ ಸಂಪನ್ನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.