ಜೀವಕ್ಕೆ ಕುತ್ತು ತಂದ ಅನೈತಿಕ ಸಂಬಂಧ : ಕೊರಟಗೆರೆಯಲ್ಲಿ ವಿವಾಹಿತ ಪ್ರೇಮಿಗಳಿಬ್ಬರ ಆತ್ಮಹತ್ಯೆ
Team Udayavani, Dec 2, 2021, 7:35 PM IST
ಕೊರಟಗೆರೆ : ವಿವಾಹಿತ ಪ್ರೇಮಿಗಳಿಬ್ಬರು ತಮ್ಮ ಅನೈತಿಕ ಸಂಬಂಧ ಕುಟುಂಬಗಳಿಗೆ ತಿಳಿದು ಪ್ರಶ್ನೆ ಮಾಡಿದ ಕಾರಣ ಪ್ರೇಯಸಿ ವಿಷ ಸೇವಿಸಿದರೆ ಪ್ರೇಮಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊರಟಗೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಜರುಗಿದೆ.
ಕೊರಟಗೆರೆ ತಾಲೂಕಿನ ಬಿಡಿಪುರ ಬಳಿಯ ಗಿರಚಿಕ್ಕನಹಳ್ಳಿ ಗ್ರಾಮದಲ್ಲಿ ಈ ದುರ್ಘಟನೆ ಜರಗಿದ್ದು, ಇದೇ ಗ್ರಾಮದ ತಿಮ್ಮಯ್ಯನ ಮಾಡಿದಿ ವೆಂಕಟಲಕ್ಷ್ಮಮ್ಮ (25 ವರ್ಷ) ಹಾಗೂ ಆನಂದ್ ಕುಮಾರ್ (27 ವರ್ಷ) ಎಂಬ ಪ್ರೇಮಿಗಳು ಆತ್ಮಹತ್ಯೆ ಮಾಡಿಕೊಂಡಿರುವ ದುರ್ದೈವಿಗಳಾಗಿದ್ದಾರೆ.
ಮೃತೆ ವೆಂಕಟಲಕ್ಷ್ಮಮ್ಮ ಎರಡು ಮಕ್ಕಳ ತಾಯಿಯಾಗಿದ್ದು, ಗಂಡ ಟ್ಯಾಕ್ಸಿ ಚಾಲಕನಾಗಿದ್ದು ಆತನ ಜೊತೆ ಆನಂದ್ ಕುಮಾರ್ ಹೆಲ್ಪರ್ ಆಗಿ ಕೆಲಸ ನಿರ್ವಹಿಸುತ್ತಿದ್ದ ಎನ್ನಲಾಗಿದೆ. ಒಂದು ದಿನ ವೆಂಕಟಲಕ್ಷ್ಮಮ್ಮಳ ಗಂಡ ಕೆಲಸಕ್ಕೆ ಹೊರಗೆ ಹೋದ ಸಂದರ್ಭದಲ್ಲಿ ಆನಂದ್ ಕುಮಾರ್ ಸಲಿಗೆಯಿಂದ ವರ್ತಿಸಿ ಪುಸಲಾಯಿಸಿದ್ದ ಎನ್ನಲಾಗಿದ್ದು, ಇವರ ಸಲಿಗೆ ಅನೈತಿಕ ಸಂಬಂಧಕ್ಕೆ ತಿರುಗಿ ಊರಿನ ಜನರಿಗೆ ತಿಳಿಯಿತು ಎಂದು ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ.
ಇದನ್ನೂ ಓದಿ : ವಿಜಯಪುರದ ಯೋಧ ಅಸ್ಸಾಂನಲ್ಲಿ ಹೃದಯಾಘಾತದಿಂದ ಸಾವು, ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ
ಇಬ್ಬರು ಹೊಸ ಪಾಳ್ಯದ ಖಾಸಗಿ ಜಮೀನದಲ್ಲಿ ಸ್ವಲ್ಪ ಹೊತ್ತು ಮಾತನಾಡಿ, ನಂತರ ವೆಂಕಟಲಕ್ಷ್ಮಮ್ಮ ಗಾಬರಿಯಿಂದ ವಿಷ ಸೇವಿಸಿದ ಪರಿಣಾಮ ಆನಂದ್ ಕುಮಾರ್ ದಿಕ್ಕುತೋಚದೆ ಸ್ವಲ್ಪ ದೂರದಲ್ಲೇ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಗೆ ಶರಣಾಗಿದ್ದಾನೆ ಎನ್ನಲಾಗಿದೆ.
ಈ ಸಂಬಂಧ ಕೊರಟಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸಿಪಿಐ ಸಿದ್ದರಾಮೇಶ್ವರ ಹಾಗೂ ಪಿಎಸ್ಐ ನಾಗರಾಜು ಸ್ಥಳಕ್ಕೆ ಭೇಟಿ ನೀಡಿ ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ
ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್
MUST WATCH
ಹೊಸ ಸೇರ್ಪಡೆ
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ