ತಲೆಮರೆಸಿಕೊಂಡಿದ್ದ ಆರೋಪಿ ಪತ್ತೆ: ನ್ಯಾಯಾಂಗ ಬಂಧನ
Team Udayavani, Jul 23, 2022, 12:52 AM IST
ಬಜಪೆ: ಮೊಗರು ಗ್ರಾಮದ ಕುಕ್ಕಟ್ಟೆಯಲ್ಲಿ ಅಜರುದ್ದೀನ್, ಹಸನಬ್ಬ ಯಾನೆ ನೌಶದ್ ಅವರು ಜತೆ ಸೇರಿ 2013ರ ಮಾ. 22ರಂದು ಮಹಿಳೆಯ ಚೂಡಿದಾರದ ಶಾಲನ್ನು ಎಳೆದು ಮಾನಭಂಗವನ್ನುಂಟು ಮಾಡಿದ್ದಲ್ಲದೇ ಕೋರ್ಟಿನಿಂದ ಆರೋಪಿಗಳ ಮೇಲಿರುವ ಕೇಸ್ ಅನ್ನು ಹಿಂದಕ್ಕೆ ತೆಗೆಯದಿದ್ದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿ ಅವಾಚ್ಯ ಶಬ್ದಗಳಿಂದ ಬೈದಿರುವ ಬಗ್ಗೆ ಬಜಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಈ ಪ್ರಕರಣದಲ್ಲಿ ನ್ಯಾಯಾಲಯದಲ್ಲಿ ಜಾಮೀನು ಪಡೆದ ಆರೋಪಿಗಳ ಪೈಕಿ ಮಂಗಳೂರು ತಾಲೂಕಿನ ಮೊಗರು ಗ್ರಾಮದ ನಿವಾಸಿ ಹಸನಬ್ಬ ಯಾನೆ ನೌಶದ್ (30) ವಿಚಾರಣೆಯ ಸಮಯ ನ್ಯಾಯಾಲಯದ ಮುಂದೆ ಹಾಜರಾಗದೆ ಸುಮಾರು 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ.
ಬಜಪೆ ಇನ್ಸ್ಪೆಕ್ಟರ್ ಪ್ರಕಾಶ್ ಅವರ ತಂಡವು ವಿಳಾಸ ಬದಲಿಸಿ ಉಡುಪಿ ಜಿಲ್ಲೆಯ ಕಾಪುವಿನಲ್ಲಿ ವಾಸ ಮಾಡಿಕೊಂಡಿದ್ದ ಆರೋಪಿ ಹಸನಬ್ಬ ಯಾನೆ ನೌಶದ್ನನ್ನು ಜು. 21ರಂದು ಪತ್ತೆ ಮಾಡಿ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದು, ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಂಗಳೂರು: ಬಿಸಿಲ ಧಗೆ ಹೆಚ್ಚಿದ್ದರೂ ಅಗ್ನಿ ಆಕಸ್ಮಿಕ ಪ್ರಮಾಣ ಕಡಿಮೆ
ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ
Tulu Movie ಮೇ 3: “ಗಬ್ಬರ್ ಸಿಂಗ್’ ತುಳು ಸಿನೆಮಾ ತೆರೆಗೆ
Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ
Temperature ಕರಾವಳಿಯಲ್ಲಿ ಬಿಸಿ ವಾತಾವರಣದ ಮುನ್ಸೂಚನೆ
MUST WATCH
ಹೊಸ ಸೇರ್ಪಡೆ
Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ
Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್ ಹೇಳಿಕೆ
ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…
Kollywood: ದಳಪತಿ ವಿಜಯ್ ʼGOATʼ ಸಿನಿಮಾದಲ್ಲಿ ಧೋನಿ, ರುತ್ ರಾಜ್ ನಟನೆ?
Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ