ಪೆಟ್ರೋಲ್ ಬಂಕ್ ಮ್ಯಾನೇಜರ್ಗೆ ಹಲ್ಲೆಗೈದು 4.20 ಲ.ರೂ. ಸುಲಿಗೆ
ಚಿಲಿಂಬಿಯಲ್ಲಿ ಹಾಡಹಗಲೇ ನಡೆದ ಘಟನೆ
Team Udayavani, Sep 29, 2021, 1:38 AM IST
ಸಾಂದರ್ಭಿಕ ಚಿತ್ರ,
ಮಂಗಳೂರು ಪೆಟ್ರೋಲ್ ಬಂಕ್ ಮ್ಯಾನೇಜರ್ಗೆ ಹಲ್ಲೆ ನಡೆಸಿ 4.20 ಲಕ್ಷ ರೂ. ಸುಲಿಗೆ ಮಾಡಿದ ಘಟನೆ ಮಂಗಳವಾರ ನಗರದ ಚಿಲಿಂಬಿಯ ಗಾಂಧಿನಗರದಲ್ಲಿ ನಡೆದಿದೆ.
ಪೆಟ್ರೋಲ್ ಬಂಕ್ ಮ್ಯಾನೇಜರ್ ಭೋಜಪ್ಪ (57) ಅವರು ಮಧ್ಯಾಹ್ನ 12.30ರ ವೇಳೆಗೆ ಚಿಲಿಂಬಿಯಲ್ಲಿರುವ ಬ್ಯಾಂಕ್ ಖಾತೆಗೆ ಜಮೆ ಮಾಡಲೆಂದು 4.20 ಲ.ರೂ.ಗಳನ್ನು ಬ್ಯಾಗಿನಲ್ಲಿರಿಸಿಕೊಂಡು ಬೈಕ್ನಲ್ಲಿ ಹೋಗುತ್ತಿದ್ದರು. ಚಿಲಿಂಬಿಯಲ್ಲಿ ಬೈಕನ್ನು ಯುಟರ್ನ್ ಮಾಡಿ ಬ್ಯಾಂಕ್ ಕಡೆಗೆ ತೆರಳುವಾಗ ಇಬ್ಬರು ತಡೆದು ನಿಲ್ಲಿಸಿ ಬ್ಯಾಟ್ನಿಂದ ಹಲ್ಲೆ ನಡೆಸಿ ಹಣ ಸುಲಿಗೆ ಮಾಡಿ ಬೈಕ್ನಲ್ಲಿ ಪರಾರಿಯಾಗಿದ್ದಾರೆ. ಭೋಜಪ್ಪ ಅವರ ತಲೆ ಮತ್ತು ಭುಜಕ್ಕೆ ಗಾಯಗಳಾಗಿವೆ.
ಮಾಹಿತಿ ಇತ್ತೆ?
ಪೆಟ್ರೋಲ್ ಬಂಕ್ನಿಂದ ಬ್ಯಾಂಕ್ಗೆ ಪ್ರತೀದಿನ ಕೂಡ ಹಣವನ್ನು ಕೊಂಡೊಯ್ಯುವ ಬಗ್ಗೆ ಸುಲಿಗೆಕೋರರಿಗೆ ಮೊದಲೇ ಮಾಹಿತಿ ಇದ್ದು ಅದರಂತೆ ಯೋಜನೆ ರೂಪಿಸಿ ಸುಲಿಗೆ ನಡೆಸಿರುವ ಸಂಶಯ ವ್ಯಕ್ತವಾಗಿದೆ.
ಇದನ್ನೂ ಓದಿ:ಶಿರಾಡಿ ರಸ್ತೆ ಎಲ್ಲ ವಾಹನಗಳಿಗೆ ಮುಕ್ತ
ಸರ ಕಳವು ನಡೆದಿತ್ತು
ಎರಡು ತಿಂಗಳ ಹಿಂದೆ ಚಿಲಿಂಬಿಯಲ್ಲಿ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಮಹಿಳೆಯರ ಸರ ಕಳವು ನಡೆದಿತ್ತು. ಮಾತ್ರವಲ್ಲದೆ ನಗರದ ಮೂರು ಕಡೆ ನಿಲ್ಲಿಸಲಾಗಿದ್ದ ಕಾರುಗಳ ಗಾಜು ಒಡೆದು ಬೆಲೆಬಾಳುವ ಸೊತ್ತುಗಳ ಕಳವು ನಡೆದಿತ್ತು. ಇದರೊಂದಿಗೆ ನಗರದ 6 ಕಡೆಗಳಲ್ಲಿ ಬೈಕ್ ಕಳ್ಳತನ ಘಟನೆಗಳು ಕೂಡ ನಡೆದಿದ್ದು ಕಳ್ಳರು, ದರೋಡೆಕೋರರ ಪತ್ತೆಯಾಗಿಲ್ಲ. ಪೊಲೀಸರು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಇತ್ತೀಚೆಗೆ ಸುಲಿಗೆ ಪ್ರಕರಣದ ಅಣಕು ಪ್ರದರ್ಶನ ನಡೆಸಿದ್ದರು. ಕೆಲವು ದಿನಗಳಿಂದ ವಾಹನಗಳ ವಿಶೇಷ ತಪಾಸಣ ಅಭಿಯಾನ ನಡೆಸುತ್ತಿದ್ದಾರೆ. ಈ ನಡುವೆ ಮಂಗಳವಾರ ಸುಲಿಗೆ ಘಟನೆ ನಡೆದಿದೆ.
ಫುಡ್ ಡೆಲಿವರಿ ಸಂಸ್ಥೆಯ ಟಿ-ಶರ್ಟ್!
ಬೈಕ್ನಲ್ಲಿ ಬಂದಿದ್ದವರು ಫುಡ್ ಡೆಲಿವರಿ ಸಂಸ್ಥೆಯೊಂದರ ಸಮವಸ್ತ್ರದ ರೀತಿಯ ಟೀ ಶರ್ಟ್ ಧರಿಸಿದ್ದರು ಎಂದು ತಿಳಿದುಬಂದಿದೆ. ಉರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸಿಸಿ ಕೆಮರಾಗಳ ದೃಶ್ಯಗಳನ್ನು ಪರಿಶೀಲಿಸಿದ್ದಾರೆ. ಇಬ್ಬರು ಕೂಡ ಹೆಲ್ಮೆಟ್ ಧರಿಸಿಯೇ ಕೃತ್ಯ ನಡೆಸಿರುವುದು ಗೊತ್ತಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
MUST WATCH
ಹೊಸ ಸೇರ್ಪಡೆ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ