ಆ್ಯಸಿಡ್ ದಾಳಿಕೋರನ ಸೆರೆಗೆ ಲುಕ್ ಔಟ್ ನೋಟಿಸ್
Team Udayavani, May 3, 2022, 7:45 AM IST
ಬೆಂಗಳೂರು: ಯುವತಿ ಮೇಲೆ ಆ್ಯಸಿಡ್ ದಾಳಿ ಮಾಡಿ ಪರಾರಿಯಾಗಿರುವ ಆರೋಪಿ ಪತ್ತೆಗೆ ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರು ಲುಕ್ಔಟ್ ನೋಟಿಸ್ ಜಾರಿಗೊಳಿಸಿದ್ದಾರೆ.
ಆರೋಪಿ ಹೊರ ರಾಜ್ಯದಲ್ಲಿ ತಲೆಮರೆಸಿಕೊಂಡಿ ದ್ದಾನೆ. ಹೀಗಾ ಗಿ ಆರೋಪಿ ಪತ್ತೆಗೆ ಲುಕ್ಔಟ್ ನೋಟಿಸ್ ಹೊರಡಿಸಲಾಗಿದ್ದು, ತಮಿಳುನಾಡು, ಆಂಧ್ರಪ್ರದೇಶ, ಉತ್ತರಪ್ರದೇಶ, ಮಹಾರಾಷ್ಟ್ರ, ಗುಜರಾತ್ ಸೇರಿ ಎಲ್ಲ ರಾಜ್ಯಗಳ ದೇವಾಲಯಗಳು, ಸಾರ್ವಜನಿಕ ಸ್ಥಳಗಳಲ್ಲಿ ಲುಕ್ಔಟ್ ನೋಟಿಸ್ ಅಂಟಿಸಲಾಗಿದೆ ಎಂದು ಪೊಲೀ ಸರು ಹೇಳಿದರು.
ಗಾರ್ಮೆಂಟ್ಸ್ ಮಾರಿ ಪರಾರಿ
ಆರೋಪಿ ನಾಗೇಶ್ ಬಾಬು ತನ್ನ ಗಾರ್ಮೆಂಟ್ಸ್ ಮಾರಾಟ ಮಾಡಿ ಅದರಲ್ಲಿ ಬಂದ ಹಣದ ಜತೆ ಪರಾರಿಯಾಗಿರುವುದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ. ಆರೋಪಿ ಒಬ್ಬನೇ ಆಗಿರುವುದರಿಂದ ಸುಳಿವು ಪತ್ತೆ ಮಾಡುವುದು ತಡವಾಗುತ್ತಿದೆ. ಆದರೆ, ಸದ್ಯ ದ ಲ್ಲೇ ಆತನನ್ನು ಪತ್ತೆಹಚ್ಚಿ ಬಂಧಿಸಲಾಗುವುದು ಎಂದರು.
ಆರು ವಿಶೇಷ ತಂಡಗಳು
ಈಗಾಗಲೇ ಆರು ವಿಶೇಷ ಪೊಲೀಸ್ ತಂಡಗಳು ತಮಿಳುನಾಡು, ಆಂಧ್ರಪ್ರದೇಶ ಹಾಗೂ ಉತ್ತರ ಭಾರತದ ರಾಜ್ಯಗಳಲ್ಲೂ ಆರೋಪಿಗಾಗಿ ಶೋಧ ನಡೆಸುತ್ತಿವೆ ಎಂದು ಪೊಲೀಸರು ತಿಳಿಸಿದರು.