ಶವರ್ಮ ಸೇವನೆ: ವಿದ್ಯಾರ್ಥಿನಿಯ ಸಾವಿಗೆ ವಿಷ ಪದಾರ್ಥವೇ ಕಾರಣ
Team Udayavani, May 3, 2022, 11:57 PM IST
ಕಾಸರಗೋಡು: ಚೆರ್ವತ್ತೂರಿನ ಕೂಲ್ ರೆಸ್ಟೋರೆಂಟ್ನಲ್ಲಿ ಶವರ್ಮ ಸೇವಿಸಿದ ಪಿಯುಸಿ ವಿದ್ಯಾರ್ಥಿನಿ ಕರಿವೆಳ್ಳೂರು ಪೇರಳದ ದೇವನಂದ (16) ಸಾವಿಗೆ ವಿಷ ಪದಾರ್ಥ ಸೇವನೆಯೇ ಕಾರಣವೆಂದು ಪರಿಯಾರಂ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ನಡೆಸಿದ ಪೋಸ್ಟ್ಮಾರ್ಟಂ ರಿಪೋರ್ಟ್ನಲ್ಲಿ ತಿಳಿಸಿದೆ.
ಶವರ್ಮ ಸೇವಿಸಿ ಕಾಂಞಂಗಾಡ್ನ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ನಾಲ್ವರು ಮಕ್ಕಳಿಗೆ ಶಿಗೆಲ್ಲಾ ಸೋಂಕು ಪತ್ತೆಯಾಗಿದೆ. ಅವರು ಆರೋಗ್ಯವಾಗಿದ್ದಾರೆ ಎಂದು ಆಸ್ಪತ್ರೆ ಅಧಿಕಾರಿಗಳು ತಿಳಿಸಿದ್ದಾರೆ.
ಇದೇ ವೇಳೆ ಬಾಲಕಿ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೂಲ್ ರೆಸ್ಟೋರೆಂಟ್ ಮ್ಯಾನೇಜರ್, ಕಾಸರಗೋಡು ನಿವಾಸಿ ಟಿ. ಅಹಮ್ಮದ್ನನ್ನು ಪೊಲೀಸರು ಬಂಧಿಸಿದ್ದು, ಬಂಧಿತರ ಸಂಖ್ಯೆ ಮೂರಕ್ಕೇರಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು
LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ
Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ