ಮರ ಕಡಿಯುತ್ತಿದ್ದಾಗ ವಿದ್ಯುತ್‌ ಸ್ಪರ್ಶವಾಗಿ ಕಾರ್ಮಿಕ ಸಾವು; ತೋಟದಲ್ಲೇ ಹೂತು ಹಾಕಿರುವ ತಂಡ

ಒಂದೂವರೆ ತಿಂಗಳ ಬಳಿಕ ಮಂಜೇಶ್ವರದ ಕನಿಯಾಲದಲ್ಲಿ ಬಯಲಾದ ಪ್ರಕರಣ, ಹಲವರು ವಶಕ್ಕೆ

Team Udayavani, Feb 6, 2022, 7:05 AM IST

ಮರ ಕಡಿಯುತ್ತಿದ್ದಾಗ ವಿದ್ಯುತ್‌ ಸ್ಪರ್ಶವಾಗಿ ಕಾರ್ಮಿಕ ಸಾವು; ತೋಟದಲ್ಲೇ ಹೂತು ಹಾಕಿರುವ ತಂಡ

ಕುಂಬಳೆ: ಪೈವಳಿಕೆ ಪಂಚಾಯತ್‌ನ ಕನಿಯಾಲ ಮುಂಡೋಳಿ ಎಂಬಲ್ಲಿ ಝಾರ್ಖಂಡ್‌ ಮೂಲದ ಕೂಲಿ ಕಾರ್ಮಿಕನೋರ್ವನ ಮೃತ ದೇಹವನ್ನು ಅಡಿಕೆ ತೋಟದಲ್ಲಿ ಹೂತು ಹಾಕಿದ ಪ್ರಕರಣವನ್ನು ಮಂಜೇಶ್ವರ ಪೊಲೀಸರು ಬಯಲಿಗೆಳೆದಿದ್ದು, ತೋಟದ ಮಾಲಕನ ಭಾವ ಹಾಗೂ ಕೆಲವು ಕಾರ್ಮಿಕರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಸುಮಾರು ಒಂದೂವರೆ ತಿಂಗಳ ಹಿಂದೆ ನಡೆದಿದ್ದ ಈ ಪ್ರಕರಣ ಶುಕ್ರವಾರ ಬಯಲಿಗೆ ಬಂದಿತ್ತು.

ಪ್ರಕರಣದ ವಿವರ
ಸ್ಥಳೀಯ ನಿವಾಸಿ ವಿಶ್ವನಾಥ ಭಟ್ಟ ಎಂಬವರ ಭಾವನ ಅಡಿಕೆ ತೋಟದಲ್ಲಿ ಡಿ. 25ರಂದು ಝಾರ್ಖಂಡ್‌ ಮೂಲದ ಶಿವಚಂದ್‌ (35) ಎಂಬವರು ಕೊಳದ ಬಳಿಯ ಮರವೊಂದನ್ನು ಕಡಿಯುತ್ತಿದ್ದಾಗ ಕೊಂಬೆ ಮುರಿದು ವಿದ್ಯುತ್‌ ಕಂಬಕ್ಕೆ ಬಡಿದಿತ್ತು. ಪರಿಣಾಮ ವಿದ್ಯುತ್‌ ಆಘಾತಕ್ಕೊಳಗಾಗಿ ಅವರು ಸಾವಿಗೀಡಾಗಿರುವುದಾಗಿ ಪ್ರಾಥಮಿಕ ಹಂತದ ತನಿಖೆಯಿಂದ ತಿಳಿದು ಬಂದಿದೆ.

ಇಡೀ ಘಟನೆಯಿಂದ ಕಂಗೆಟ್ಟ ತೋಟದ ಕೆಲಸ ಮಾಡಿಸುತ್ತಿದ್ದ ವ್ಯಕ್ತಿ ಹಾಗೂ ಇತರ ಕಾರ್ಮಿಕರು ಶವವನ್ನು ಅಲ್ಲೇ ಹೂತು ಹಾಕಿ ಪ್ರಕರಣವನ್ನು ಮುಚ್ಚಿ ಹಾಕಲು ನೋಡಿದ್ದರು. ಮೃತನ ಸಂಬಂಧಿಯೂ ಆಗಿರುವ ಸಂಜಯ ಮತ್ತು ಇತರ 14 ಮಂದಿ ಕೂಲಿಯಾಳುಗಳ ತಂಡವು ತೋಟದ ಮಾಲಕರ ಜತೆ ಸೇರಿ ಶವವನ್ನು ಹೂತು ಹಾಕಿ ಅದರ ಮೇಲೆ ತೆಂಗಿನ ಸಸಿಯನ್ನು ನೆಟ್ಟಿದ್ದರು.

ಶಿವಚಂದ್‌ ನಿಗೂಢವಾಗಿ ನಾಪತ್ತೆಯಾಗಿರುವ ಬಗ್ಗೆ ಝಾರ್ಖಂಡ್‌ ಮೂಲದ ಕಾರ್ಮಿಕರಲ್ಲಿ ತೀವ್ರ ಚರ್ಚೆ ನಡೆಯುತ್ತಿತ್ತು. ಚರ್ಚೆ ತೀವ್ರ ಸ್ವರೂಪ ಪಡೆದು ಭಟ್ಟರ ಮೇಲೆ ಸಂಶಯ ವ್ಯಕ್ತವಾಗುವ ವರೆಗೆ ತಲುಪಿತ್ತು. ಪರಿಣಾಮ ಫೆ. 4ರಂದು ಮಂಜೇಶ್ವರ ಪೊಲೀಸರು ಘಟನಾ ಸ್ಥಳಕ್ಕೆ ಆಗಮಿಸಿ ತನಿಖೆ ನಡೆಸಿದಾಗ ಗುಟ್ಟು ಬಯಲಾಗಿದೆ.

ಶವ ಮೇಲೆತ್ತಲು ಚಿಂತನೆ
ಪ್ರಸ್ತುತ ಘಟನಾ ಸ್ಥಳದಲ್ಲಿ ಇನ್‌ಸ್ಪೆಕ್ಟರ್‌ ಕೆ. ಸಂತೋಷ್‌ ಕುಮಾರ್‌ ಅವರು ಪೊಲೀಸ್‌ ಕಾವಲು ಏರ್ಪಡಿಸಿದ್ದಾರೆ. ಶನಿವಾರ ಮೃತದೇಹವನ್ನು ಕಂದಾಯ ಅಧಿಕಾರಿಗಳು ಮತ್ತು ವಿಧಿ ವಿಜ್ಞಾನ ತಂಡದ ಸಮ್ಮುಖದಲ್ಲಿ ಮೇಲಕ್ಕೆತ್ತಲು ನಿರ್ಧರಿಸಲಾಗಿತ್ತು. ಆದರೆ ಕಾರಣಾಂತರಗಳಿಂದ ಶನಿವಾರ ಯಾವುದೇ ಪ್ರಕ್ರಿಯೆ ನಡೆದಿಲ್ಲ. ಸಾವಿಗೀಡಾದ ಯುವಕನ ಮನೆಯವರು ಝಾರ್ಖಂಡಿನಿಂದ ಆಗಮಿಸಿದ ಬಳಿಕ ಅವರ ಸಮ್ಮುಖದಲ್ಲೇ ಮೃತದೇಹವನ್ನು ಮೇಲೆತ್ತುವುದಾಗಿ ಪೊಲೀಸರು ತಿಳಿಸಿದ್ದಾರೆ. ಈ ಬಗ್ಗೆ ಮಂಜೇಶ್ವರ ಪೊಲೀಸರನ್ನು ಸಂಪರ್ಕಿಸಿದಾಗ, ಕೆಲವು ಕಾನೂನು ಪ್ರಕ್ರಿಯೆ ನಡೆಯುತ್ತಿದ್ದು, ಹೆಚ್ಚಿನ ಮಾಹಿತಿ ನೀಡಲು ಸಾಧ್ಯವಿಲ್ಲ ಎಂದು ತಿಳಿಸಿದ್ದಾರೆ.

ಹೈನುಗಾರಿಕೆ ಕೆಲಸಕ್ಕಾಗಿ ಬಂದಿದ್ದರು
ಝಾರ್ಖಂಡ್‌ನ‌ ಈ ಕಾರ್ಮಿಕರು ಭಟ್ಟರ ಮನೆಯಲ್ಲಿ ಹೈನುಗಾರಿಕೆ ಕೆಲಸಕ್ಕಾಗಿ ಎರಡು ತಿಂಗಳ ಹಿಂದೆ ಆಗಮಿಸಿದ್ದರು. ಈ ನಡುವೆ ದುರಂತ ಸಂಭವಿಸಿದೆ. ಪ್ರಸ್ತುತ ಕಾರ್ಮಿಕರು ಹಾಗೂ ಸ್ಥಳದ ಮಾಲಕರ ಭಾವ ಗೊಂದಲದ ಹೇಳಿಕೆ ನೀಡುತ್ತಿದ್ದು, ಅವು ಪರಸ್ಪರ ತಾಳೆಯಾಗುತ್ತಿಲ್ಲ. ಆದ್ದರಿಂದ ಇನ್ನಷ್ಟು ತನಿಖೆ ಅಗತ್ಯವಿದೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

ಟಾಪ್ ನ್ಯೂಸ್

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.