ಶಿರ್ವ: ಆತ್ಮಹತ್ಯೆಗೆ ಯತ್ನಿಸಿದ್ದ ಯುವತಿ ಸಾವು
Team Udayavani, May 9, 2022, 8:41 PM IST
ಶಿರ್ವ: ಉನ್ನತ ವ್ಯಾಸಂಗ ನಡೆಸಿಯೂ ಸರಿಯಾದ ಉದ್ಯೋಗ ಲಭಿಸದ ಕಾರಣ ಮನನೊಂದ ಯುವತಿ ಎಡ್ಮೇರುವಿನ ತನ್ನ ಅಕ್ಕನ ಮನೆಯಲ್ಲಿ ಆತ್ಮಹತ್ಯೆಗೆ ಯತ್ನಿಸಿ ಚಿಕಿತ್ಸೆ ಫಲಕಾರಿಯಾಗದೆ ಮೇ 9ರಂದು ಮೃತಪಟ್ಟ ಘಟನೆ ನಡೆದಿದೆ.
ಸಹನಾ (23) ಮೃತಪಟ್ಟ ಯುವತಿ. ಆಕೆ ಮಂಗಳೂರಿನ ಕಾಲೇಜಿನಲ್ಲಿ ಒಂದೂವರೆ ವರ್ಷದ ಹಿಂದೆ ಎಂಬಿಎ ವ್ಯಾಸಂಗ ಮಾಡಿದ್ದು, ಈವರೆಗೆ ಯಾವುದೇ ಉದ್ಯೋಗ ದೊರಕಿರಲಿಲ್ಲ.
ಎ. 30ರಂದು ತನ್ನ ಅಕ್ಕ ಕಟ್ಟಿಂಗೇರಿ ಗ್ರಾಮದ ಎಡ್ಮೇರು ನಿವಾಸಿ ಸೌಮ್ಯಾ (30) ಅವರ ಮನೆಗೆ ಬಂದಿದ್ದು, ರಾತ್ರಿ ವಿಷ ಪದಾರ್ಥ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು.
ಮೇ 1ರ ಬೆಳಗ್ಗೆ ವಾಂತಿ ಮಾಡುತ್ತಿದ್ದವರನ್ನು ಚಿಕಿತ್ಸೆಗಾಗಿ ಮೂಡುಬೆಳ್ಳೆಯ ಕ್ಲಿನಿಕ್ಗೆ ಕರೆದುಕೊಂಡು ಹೋಗಿದ್ದರು. ಮರುದಿನ ಉಡುಪಿಯ ಮಿಷನ್ ಆಸ್ಪತ್ರೆಗೆ ದಾಖಲಿಸಿದ್ದು, ಹೆಚ್ಚಿನ ಚಿಕಿತ್ಸೆಗೆ ಮಣಿಪಾಲದ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಆರೋಗ್ಯ ತೀರಾ ಹದಗೆಟ್ಟಿದ್ದರಿಂದ ಮೇ 7ರಂದು ಉಡುಪಿ ಜಿಲ್ಲಾ ಸರಕಾರಿ ಆಸ್ಪತ್ರೆಗೆ ದಾಖಲಿಸಿದ್ದು, ಅಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ಮೇ 9ರ ಬೆಳಗ್ಗೆ ಮೃತಪಟ್ಟಿದ್ದಾರೆ.
ಮೃತರ ಸಹೋದರಿ ನೀಡಿದ ದೂರಿನಂತೆ ಶಿರ್ವ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್ ಈಗ “ಸಂಯುಕ್ತ’
High Court ಎಚ್ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್ಗೆ ಹೈಕೋರ್ಟ್ ತಡೆ
Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು
Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್ಗೆ ಹಲ್ಲೆ
Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮನೆ ರತ್ನಾಕರ್