ಆಸ್ತಿ ತಕರಾರು : ಪೆರಾಜೆಯಲ್ಲಿ ಯುವಕನ ಕೊಲೆ

ಪಾನಮತ್ತನಾಗಿ ಮನೆಗೆ ಹೊಕ್ಕ ಮೈದುನನಿಗೆ ಕಡಿದ ಅತ್ತಿಗೆ

Team Udayavani, May 9, 2020, 12:31 PM IST

ಆಸ್ತಿ ತಕರಾರು : ಪೆರಾಜೆಯಲ್ಲಿ ಯುವಕನ ಕೊಲೆ

ಸುಳ್ಯ : ಆಸ್ತಿ ತಕರಾರಿನ ಹಿನ್ನಲೆಯಲ್ಲಿ ತನ್ನ ಮನೆಗೆ ಪಾನಮತ್ತನಾಗಿ ಹೊಕ್ಕ ಮೈದುನನ್ನು ಅತ್ತಿಗೆ ಹಾಗೂ ಆಕೆಯ ಮಗ ಸೇರಿ ಕತ್ತಿಯಿಂದ ಕಡಿದ ಪರಿಣಾಮ ಮೈದುನ ಸ್ಥಳದಲ್ಲೇ ಮೃತಪಟ್ಟ ಘಟನೆಯೊಂದು ಪೆರಾಜೆಯಲ್ಲಿ ನಡೆದಿದೆ. ಈ ಸಂಬಂಧ ಕೊಲೆ ಪ್ರಕರಣ ದಾಖಲಾಗಿದ್ದು, ಕತ್ತಿಯಿಂದ ಕಡಿದ ಅತ್ತಿಗೆ ಮತ್ತು ಆಕೆಯ ಪುತ್ರನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಪೆರಾಜೆ ಗ್ರಾಮದ ಪೀಚೆ ಎಂಬಲ್ಲಿ  ಶುಕ್ರವಾರ ಮಧ್ಯರಾತ್ರಿ ಈ ಘಟನೆ ಸಂಭವಿಸಿದೆ. ಪೀಚೆ ಮನೆಯ ಶ್ರೀಮತಿ ತಾರಿಣಿ ಹಾಗೂ ಉತ್ತರಕುಮಾರ ಎಂಬವರ ಜಾಗ ಅಕ್ಕಪಕ್ಕದಲ್ಲಿದ್ದು, ಸಂಬಂಧದಲ್ಲಿ ಇವರು ಅತ್ತಿಗೆ ಮತ್ತು ಮೈದುನ. ಇವರೊಳಗೆ ಆಸ್ತಿ ತಕರಾರು ಇತ್ತು. ನಿನ್ನೆ ಮಧ್ಯರಾತ್ರಿ ಉತ್ತರಕುಮಾರ ಪಾನಮತ್ತನಾಗಿ ತಾರಿಣಿಯವರ ಮನೆಯಂಗಳಕ್ಕೆ ಬಂದು ಬೈಯ್ಯತೊಡಗಿದರೆನ್ನಲಾಗಿದೆ ನಂತರ ಅವರ ಮನೆ ಹೊಕ್ಕಲು ಪ್ರಯತ್ನ ಪಟ್ಟಾಗ ತಾರಿಣಿ ಮತ್ತು ಆಕೆಯ ಪುತ್ರ ಧರಣೀಧರ ಕತ್ತಿಯಿದ ಕಡಿದಿದ್ದಾರೆ ಗಂಭೀರ ಗಾಯಗೊಂಡು ಕುಸಿದು ಬಿದ್ದ ಉತ್ತರಕುಮಾರ ಸ್ಥಳದಲ್ಲಿಯೇ ಸಾವನ್ನಪ್ಪಿದರೆನ್ನಲಾಗಿದೆ.

ಇಂದು ಬೆಳಿಗ್ಗೆ ಮಡಿಕೇರಿಯಿಂದ ಪೊಲೀಸ್ ಅಧಿಕಾರಿಗಳು ಆಗಮಿಸಿ ತನಿಖೆ ಆರಂಭಿಸಿದ್ದಾರೆ. ತಾರಿಣಿ ಮತ್ತು ಧರಣೀಧರ ಅವರನ್ನು ವಶಕ್ಕೆ ಪಡೆದಿದ್ದಾರೆ.

ಆಸ್ತಿ ವೈಷಮ್ಯ

ಪೀಚೆ ಮನೆಯ ದಿ.ಸಣ್ಣಯ್ಯ ಮತ್ತು ದಿ.ಮುದ್ದಯ್ಯ ಸಹೋದರರು. ಸಣ್ಣಯ್ಯ ಗೌಡರ ಪುತ್ರ ದಿ.ಕೇಶವ, ಇವರ ಪತ್ನಿ ತಾರಿಣಿ. ಮುದ್ದಯ್ಯರವರ ಪುತ್ರ ಉತ್ತರಕುಮಾರ. ಆಸ್ತಿ ವಿಂಗಡಣೆಗೆ ಸಂಬಂಧಿಸಿ ತಾರಿಣಿ ಹಾಗೂ ಉತ್ತರಕುಮಾರರ ಮಧ್ಯೆ ವಿವಾದವಿತ್ತು. ಅವರ ಮಧ್ಯೆ ಆಗಾಗ್ಗೆ ಜಗಳ ನಡೆಯುತ್ತಿತ್ತು. ಕೆಲವು ತಿಂಗಳ ಹಿಂದೆ ತಾರಿಣಿಯವರ ಮನೆಗೆ ಸಂಬಂಧಿಕರೊಬ್ಬರು ಬಂದಿದ್ದಾಗ ಇವರು ಮಾಡಿಕೊಟ್ಟ ಚಹಾದಲ್ಲಿ ವಿಷ ಬೆರೆಸಿದ ಆರೋಪವನ್ನು ಉತ್ತರ ಮತ್ತು ಭವಾನಿಶಂಕರರ ಮೇಲೆ ತಾರಿಣಿಯವರು ಹೊರಿಸಿದ್ದರು. ಈ ಬಗ್ಗೆ ತಾರಿಣಿಯವರು ಪೊಲೀಸರಿಗೆ ದೂರನ್ನು ಕೂಡಾ ನೀಡಿದ್ದರು. ಆದರೆ ಅದು ತನಿಖೆಯಾಗಿಲ್ಲವೆನ್ನಲಾಗಿದೆ.

ಟಾಪ್ ನ್ಯೂಸ್

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

Aranthodu ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

Aranthodu ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

6-fusion

Yugadi: ಯುಗಾದಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.