“ಖಾಸಗಿ ಆಸ್ಪತ್ರೆ ವಿರುದ್ಧ ಕ್ರಿಮಿನಲ್ ಮೊಕದ್ದಮೆ
Team Udayavani, Apr 9, 2020, 5:58 AM IST
ಬೆಂಗಳೂರು: ಕಲಬುರಗಿಯಲ್ಲಿ ಮಂಗಳವಾರ ಕೋವಿಡ್ 19ದಿಂದ ಸಾವಿಗೀಡಾಗಿದ್ದ ವ್ಯಕ್ತಿಯ ಚಿಕಿತ್ಸೆಯಲ್ಲಿ ನಿರ್ಲಕ್ಷ್ಯ ವಹಿಸಿದ ಖಾಸಗಿ ಆಸ್ಪತ್ರೆಗೆ ನೋಟಿಸ್ ಜಾರಿ ಮಾಡಿದ್ದು ಕ್ರಿಮಿನಲ್ ಆರೋಪದಡಿ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಸಚಿವ ಸುರೇಶ್ ಕುಮಾರ್ ತಿಳಿಸಿದರು.
ರೋಗಿಗೆ ಸೋಂಕಿನ ಲಕ್ಷಣಗಳಿದ್ದರೂ ಕೊನೆ ಕ್ಷಣದವರೆಗೂ ಖಾಸಗಿ ಆಸ್ಪತ್ರೆಯವರು ಸರಕಾರಿ ಆಸ್ಪತ್ರೆಗೆ ಶಿಫಾರಸು ಮಾಡಿರಲಿಲ್ಲ. ಪ್ರಕರಣದಲ್ಲಿ ನಿರ್ಲಕ್ಷ್ಯ ವಹಿಸಿದ ಖಾಸಗಿ ಆಸ್ಪತ್ರೆಗೆ ನೋಟಿಸ್ ಜಾರಿ ಮಾಡಿದ್ದು ಕ್ರಿಮಿನಲ್ ಆರೋಪದಡಿ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳಲಾಗುತ್ತಿದೆ. ಅಲ್ಲದೆ ಎರಡು ದಿನಗಳು ಆಸ್ಪತ್ರೆ ಬಂದ್ ಮಾಡಿ ಎಲ್ಲ ಸಿಬಂದಿಗೆ 14 ದಿನಗಳ ಕ್ವಾರಂಟೈನ್ ವಿಧಿಸಲಾಗಿದೆ ಎಂದು ತಿಳಿಸಿದರು. ಇನ್ನಾದರೂ ಖಾಸಗಿ ಆಸ್ಪತ್ರೆಗಳು ರೋಗಿಯಲ್ಲಿ ಕೊರೊನಾ ಲಕ್ಷಣ ಇದ್ದರೆ ಕೂಡಲೇ ಸರಕಾರಿ ಆಸ್ಪತ್ರೆಗೆ ಸೂಚಿಸಿ. ಇನ್ನು ಮೃತ ವೃದ್ಧ ಬಸ್ ನಿಲ್ದಾಣದಲ್ಲಿ ಹಣ್ಣಿನ ವ್ಯಾಪಾರಿಯಾಗಿದ್ದರು. ಹೀಗಾಗಿ ನೂರಾರು ಮಂದಿಯೊಂದಿಗೆ ಪ್ರಾಥಮಿಕ ಸಂಪರ್ಕ ಹೊಂದಿರುತ್ತಾರೆ. ಅವರೆಲ್ಲರ ಪತ್ತೆಗೆ ಆರೋಗ್ಯ ಇಲಾಖೆ ಮುಂದಾಗಿದೆ ಎಂದರು.
ತಜ್ಞರ ಸಮಿತಿಯಿಂದ ವರದಿ
ಲಾಕ್ಡೌನ್ ಮುಂದುವರಿಸಲು ಮತ್ತು ಇನ್ನಷ್ಟು ಅಗತ್ಯ ಕ್ರಮ ಕೈಗೊಳ್ಳಲು ಸರಕಾರ ರಚಿಸಿದ್ದ ಆರೋಗ್ಯ ತಜ್ಞರ ಸಮಿತಿ ವರದಿ ಬಂದಿದ್ದು, ಅಲ್ಲಿನ ಸಲಹೆ ಸೂಚನೆ ಪರಿಶೀಲನೆ ಮಾಡಿ ನಿರ್ಧರಿಸಲಾಗುತ್ತದೆ. ಇಂದಿಗೂ ಕೋವಿಡ್ 19 ಸೋಂಕು ಹೇಗೆ ತಗಲಿದೆ ಎಂದು ಪತ್ತೆಯಾದ ಪ್ರಕರಣಗಳನ್ನು ಆರೋಗ್ಯ ಇಲಾಖೆ ತನಿಖೆ ನಡೆಸುತ್ತಿದೆ ಎಂದು ತಿಳಿಸಿದರು.
ಶಂಕಿತರ ಸೋಂಕು ಪರೀಕ್ಷೆ
ನಿಜಾಮುದ್ದೀನ್ ಧಾರ್ಮಿಕ ಸಮಾವೇಶ ಸಂಬಂಧಿಸಿದಂತೆ ಕರ್ನಾಟಕದ 808 ಮಂದಿಯ ಸೋಂಕು ಪರೀಕ್ಷೆ ಮಾಡಿದ್ದೇವೆ. ಇವರನ್ನು ಸರಕಾರಿ ಕ್ವಾರಂಟೈನ್ನಲ್ಲಿ ಇರಿಸ ಲಾಗಿದೆ. ರಾಜ್ಯದ 581 ಮಂದಿಯನ್ನು ಹೊರರಾಜ್ಯಗಳಿಗೆ ತೆರಳಿದ್ದು, ಇಂದಿಗೂ ವಾಸಸ್ಥಳಕ್ಕೆ ಮರಳಿಲ್ಲ. ಹೀಗಾಗಿ ಅಲ್ಲಿನ ರಾಜ್ಯಗಳಿಗೆ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಲಾಗಿದೆ. ಇನ್ನು ರಾಜ್ಯ 181ಕೋವಿಡ್ 19 ಸೋಂಕಿತರಲ್ಲಿ 71 ಮಂದಿ ವಿದೇಶಿ ಪ್ರಯಾಣಿಕರು, 110 ಮಂದಿ ಇತರ ಸಂಪರ್ಕಿತರು ಎಂದು ಸುರೇಶ್ ಕುಮಾರ್ ಮಾಹಿತಿ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
MUST WATCH
ಹೊಸ ಸೇರ್ಪಡೆ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್