ಶ್ರೀಲಂಕಾದಂತೆಯೇ ದಿವಾಳಿಯಾಗುವಂಚಿಗೆ ಪಾಕ್
ಐಎಂಎಫ್ ನೆರವು ಸಿಗದಿದ್ದರೆ ನೆರೆಯ ರಾಷ್ಟ್ರದಲ್ಲಿ ಪೂರ್ಣವಾಗಿ ಆರ್ಥಿಕ ಕುಸಿತ
Team Udayavani, Feb 1, 2023, 7:25 AM IST
ಇಸ್ಲಾಮಾಬಾದ್: ಪಾಕಿಸ್ತಾನಕ್ಕೀಗ ಶ್ರೀಲಂಕಾ ಮಾದರಿಯಲ್ಲೇ ಆರ್ಥಿಕವಾಗಿ ದಿವಾಳಿಯಾಗುವ ಭೀತಿ ಶುರುವಾಗಿದೆ. ಐಎಂಎಫ್ (ಅಂತಾರಾಷ್ಟ್ರೀಯ ಹಣಕಾಸು ನಿಧಿ) ಅಧಿಕಾರಿಗಳು ಸದ್ಯ ಪಾಕ್ಗೆ ತೆರಳಿ, ಪರಿಸ್ಥಿತಿಯ ಅವಲೋಕನ ಶುರು ಮಾಡಿದ್ದಾರೆ. ಇದರ ಬೆನ್ನಲ್ಲೇ ಪಾಕ್ ಅರ್ಥಶಾಸ್ತ್ರಜ್ಞರಿಂದ, ಜನನಾಯಕರಿಂದ ಪರಿಸ್ಥಿತಿ ತೀರಾ ಹದಗೆಟ್ಟಿದೆ ಎಂಬ ಮಾಹಿತಿ ಹೊರಬಿದ್ದಿದೆ.
ಪಾಕಿಸ್ತಾನದ ರೂಪಾಯಿ ಮೌಲ್ಯ ತೀರಾ ಕುಸಿದಿದೆ, ಹಣದುಬ್ಬರ ವಿಪರೀತ ಹೆಚ್ಚಾಗಿದೆ. ಇಂಧನ ಪೂರೈಕೆ ಕಡಿಮೆಯಾಗಿದೆ. ಮಾತ್ರವಲ್ಲ ಡಾಲರ್ ಎದುರು ಅದರ ರೂಪಾಯಿ ಪೂರ್ಣವಾಗಿ ನೆಲಕಚ್ಚಿದೆ. ಪರಿಸ್ಥಿತಿ ಹೀಗಿದ್ದರೂ ಆ ದೇಶಕ್ಕೆ ಇತರೆ ದೇಶಗಳು ಷರತ್ತುರಹಿತವಾಗಿ ನೆರವು ನೀಡಲು ಮುಂದೆ ಬರುತ್ತಿಲ್ಲ. ಜೊತೆಗೆ ಐಎಂಎಫ್ ಕೂಡ ನೆರವು ಬೇಕಾದರೆ ತೆರಿಗೆಗಳನ್ನು ಏರಿಸಬೇಕು, ಸಬ್ಸಿಡಿ ಪ್ರಮಾಣವನ್ನು ಕಡಿಮೆ ಮಾಡಬೇಕೆಂದು ಹೇಳಿದೆ. ಅದಕ್ಕೆ ಪಾಕ್ ಪ್ರಧಾನಿ ಶಹಬಾಜ್ ಷರೀಫ್ ಚುನಾವಣಾ ಹಿನ್ನೆಲೆಯಲ್ಲಿ ಒಪ್ಪಿಲ್ಲ. ಸದ್ಯದ ಪರಿಸ್ಥಿತಿ ನೋಡಿದರೆ ಈ ಷರತ್ತುಗಳಿಗೆ ತಲೆಬಾಗುವ ಸ್ಥಿತಿ ಎದುರಾಗಿದೆ.
ನಾವು ಪೂರ್ತಿ ರಸ್ತೆಯಂಚಿಗೆ ಬಂದಿದ್ದೇವೆ. ಇನ್ನು ದಾರಿಯೇ ಇಲ್ಲ. ಒಂದು ವೇಳೆ ಸರ್ಕಾರ ಐಎಂಎಫ್ ಷರತ್ತುಗಳನ್ನು ಪಾಲಿಸದಿದ್ದರೆ ಪಾಕ್ ದಿವಾಳಿಯಾಗುತ್ತದೆ, ಶ್ರೀಲಂಕಾ ಮಾದರಿಯನ್ನೇ ಎದುರಿಸಬೇಕಾಗುತ್ತದೆ ಎಂದು ವಿಶ್ವ ಬ್ಯಾಂಕ್ ಮಾಜಿ ಅರ್ಥಶಾಸ್ತ್ರಜ್ಞ ಅಬಿದ್ ಹಸನ್ ಹೇಳಿದ್ದಾರೆ.
ಬಾಂಗ್ಲಾಕ್ಕೆ ನೆರವು, ಶ್ರೀಲಂಕಾ, ಪಾಕ್ಗೆ ಇನ್ನೂ ಇಲ್ಲ;
ಇನ್ನೊಂದು ಕಡೆ ಆರ್ಥಿಕವಾಗಿ ದುಸ್ಥಿತಿಯಲ್ಲಿರುವ ಬಾಂಗ್ಲಾಕ್ಕೆ ಐಎಂಎಫ್ ಹಲವು ಷರತ್ತುಗಳೊಡನೆ 4.7 ಬಿಲಿಯನ್ ಡಾಲರ್ ಸಾಲ ನೀಡಲು ಒಪ್ಪಿದೆ. ವಿಚಿತ್ರವೆಂದರೆ ಬಹಳ ಮುಂಚೆಯೇ ಅರ್ಜಿ ಹಾಕಿ ಕಾದು ಕುಳಿತಿರುವ ಶ್ರೀಲಂಕಾ, ಪಾಕ್ಗಳಿಗೆ ಇನ್ನೂ ಸಾಲ ಸಿಕ್ಕಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್
Russia War: ಉಕ್ರೇನ್ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ
ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್
Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ
Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ
MUST WATCH
ಹೊಸ ಸೇರ್ಪಡೆ
ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್
ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್ಗೆ ಕೇಜ್ರಿವಾಲ್ ಮಾಹಿತಿ
ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ
ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್ನದ್ದು: ಮೀನಾಕ್ಷಿ ಲೇಖಿ
Lok Sabha Elections; ಕಾಂಗ್ರೆಸ್ಗೆ ಉತ್ತಮ ಅವಕಾಶ: ದಿನೇಶ್ ಗುಂಡೂರಾವ್