ಬಡಕಾನಶಿರಡಾದಲ್ಲಿ ಬೆಳೆ ಹಾನಿ ಸಮೀಕ್ಷೆ ನಡೆಸಿದ ಬೆಳೆ ವಿಮಾ ಕಂಪೆನಿ ಅಧಿಕಾರಿಗಳು
Team Udayavani, Nov 25, 2021, 10:27 AM IST
ದಾಂಡೇಲಿ: ಅಕಾಲಿಕ ಮಳೆಯಿಂದ ಹಾನಿಯಾದ ಬಡಕಾನಶಿರಡಾ ಗ್ರಾಮದ ರೈತರ ಬೆಳೆ ಹಾನಿ ಪ್ರದೇಶಕ್ಕೆ ಬುಧವಾರ ಬೆಳೆ ವಿಮಾ ಕಂಪೆನಿಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಬಡಕಾನಶಿರಡಾ ಗ್ರಾಮದ ಬಹುಪಾಲು ರೈತರ ಬೆಳೆಗಳು ಮೊನ್ನೆ ಮೊನ್ನೆ ಸುರಿದ ಅಕಾಲಿಕ ಮಳೆಯಿಂದ ಹಾನಿಗೀಡಾಗಿದ್ದು, ರೈತರನ್ನು ಸಂಕಷ್ಟಕ್ಕೆ ತಳ್ಳಿದೆ. ಬೆಳೆ ಹಾನಿ ಬಗ್ಗೆ ಸಮೀಕ್ಷೆ ನಡೆಸುವ ನಿಟ್ಟಿನಲ್ಲಿ ಇಂದು ಬಜಾಜ್ ಅಲಾಯನ್ಸ್ ವಿಮಾ ಕಂಪೆನಿಯ ಅಧಿಕಾರಿಗಳಾದ ಎ.ಜಗದೀಶ, ವಿನಾಯಕ ಪಾವಡೆ ಮತ್ತು ಹೊಳೆಪ್ಪ ನವರುಗಳು ಬೇಟಿ ನೀಡಿ ಬೆಳೆ ಹಾನಿ ಸಮೀಕ್ಷೆ ನಡೆಸಿ, ಹಾನಿಗೊಳಗಾದ ರೈತರನ್ನು ಸಂಪರ್ಕಿಸಿ ವಿವರವಾದ ಮಾಹಿತಿಯನ್ನು ಪಡೆದುಕೊಂಡರು.
ಬೆಳೆ ಹಾನಿ ಸಮೀಕ್ಷಾ ಕಾರ್ಯಕ್ಕೆ ಶ್ರೀ.ದಾಂಡೇಲಪ್ಪ ಕೃಷಿ ಪತ್ತಿನ ಸಹಕಾರಿ ಸಂಘದ ಮುಖ್ಯ ಕಾರ್ಯ ನಿರ್ವಾಹಣಾಧಿಕಾರಿ ಕೃಷ್ಣ ಪೂಜಾರಿ ಹಾಗೂ ಸಂಘದ ಅಧಿಕಾರಿ ಮನೋಹರ ಪತಕಾಂಡೆ, ಪ್ರಮುಖರುಗಳಾದ ಚಂದ್ರಹಾಸ ಪೂಜಾರಿ, ನಾಮದೇವ ಮಾಡ್ದೋಳ್ಕರ, ನಾರಾಯಣ ದಳವಿ ಹಾಗೂ ಬೆಳೆ ಹಾನಿಗೊಳಗಾದ ರೈತರು ಉಪಸ್ಥಿತರಿದ್ದು ಸಹರಿಸಿದರು.
ಬೆಳೆಹಾನಿಗೊಳಗಾದ ರೈತರಿಗೆ ಯೋಗ್ಯ ರೀತಿಯಲ್ಲಿ ಪರಿಹಾರ ಧನವನ್ನು ಕೊಡುವ ನಿಟ್ಟಿನಲ್ಲಿ ಅಗತ್ಯ ಕ್ರಮವನ್ನು ಕೈಗೊಳ್ಳುವಂತೆ ಶ್ರೀ.ದಾಂಡೇಲಪ್ಪ ಕೃಷಿ ಪತ್ತಿನ ಸಹಕಾರಿ ಸಂಘದ ಮುಖ್ಯ ಕಾರ್ಯ ನಿರ್ವಾಹಣಾಧಿಕಾರಿ ಕೃಷ್ಣ ಪೂಜಾರಿಯವರು ಬೆಳೆ ವಿಮಾ ಕಂಪೆನಿಯ ಅಧಿಕಾರಿಗಳಲ್ಲಿ ಮನವಿ ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Uttara Kannada BJP; ಅನಂತ್ ಕುಮಾರ ಹೆಗಡೆ ತಟಸ್ಥ?: ಪ್ರಚಾರದಿಂದಲೂ ದೂರ
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
Kumta: ರಾಜಕೀಯದಲ್ಲಿ ಧರ್ಮ ಇರಬೇಕು, ಧರ್ಮದಲ್ಲಿ ರಾಜಕೀಯ ಇರಬಾರದು: ಡಿ.ಕೆ.ಶಿವಕುಮಾರ್
ಪಾದುಕೆ ದರ್ಶನ: ಸಂಭ್ರಮ ಹೆಚ್ಚಿಸಿದ ಮಂತ್ರಾಲಯ ಶ್ರೀಗಳ ಸಂಚಾರ
Karnataka Politics: ಜೆಡಿಎಸ್ ಸರ್ವನಾಶ, ಒಡೆದು ಮನೆಯಂತಾದ ಬಿಜೆಪಿ : ಡಿ.ಕೆ ಶಿವಕುಮಾರ್
MUST WATCH
ಹೊಸ ಸೇರ್ಪಡೆ
ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ
Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ
Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ
Gobi Manchurian ಬ್ಯಾನ್ ಎಫೆಕ್ಟ್: ಚಾಟ್ಸ್ ಮಾರಾಟ ಕುಸಿತ
Book Brahma ಸ್ವಾತಂತ್ರ್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು