ಅತಿವೃಷ್ಟಿಯಿಂದ 19 ಕೋಟಿ ರೂ. ನಷ್ಟ : 14 ಸಾವಿರ ಎಕರೆ ಬೆಳೆ ಹಾನಿ
Team Udayavani, Oct 28, 2020, 10:41 AM IST
ಕೊಪ್ಪಳ: ಜಿಲ್ಲೆಯಲ್ಲಿ ಸುರಿದ ಅತಿಯಾದ ಮಳೆಯಿಂದಾಗಿ ಬರೊಬ್ಬರಿ 19 ಕೋಟಿ ರೂ. ನಷ್ಟವಾಗಿದೆ. ಈ ಕುರಿತು ಜಂಟಿ ಸಮೀಕ್ಷೆ ನಡೆಸಿರುವ ಜಿಲ್ಲಾಡಳಿತವು ಸರ್ಕಾರಕ್ಕೆ ಪ್ರಸ್ತಾವನೆಯನ್ನೂ ಸಲ್ಲಿಸಿದೆ. ಹಾನಿಯ ನಷ್ಟ ನಿವಾರಣೆಗೆ 90 ಕೋಟಿ ರೂ.
ಯೋಜನೆಯನ್ನೂ ರೂಪಿಸಿ ಅನುದಾನ ಬಿಡುಗಡೆ ಮಾಡಲು ಕೋರಿದೆ.
ಬರದ ನಾಡಿಗೆ ಹೆಸರಾಗಿದ್ದ ಕೊಪ್ಪಳ ಜಿಲ್ಲೆಯಲ್ಲಿ ಮಳೆ ಸಾಕಪ್ಪ ಸಾಕು ಎಂದು ದೇವರಲ್ಲಿ ಪ್ರಾರ್ಥಿಸುವಷ್ಟು ಮಳೆ ಸುರಿದಿದೆ. ಕಳೆದ 2 ತಿಂಗಳಲ್ಲಿ ಸುರಿದ ಅತಿಯಾದ ಮಳೆ ದೊಡ್ಡ ಅವಾಂತರವನ್ನೇ ಸೃಷ್ಟಿಸಿ ಜನರ ಬದುಕಿಗೆ ಕುತ್ತು ತಂದಿತು.
ಅದರಲ್ಲೂ ಅತಿಯಾದ ಮಳೆಯಿಂದಾಗಿ ರೈತರಿಗೆ ತುಂಬ ಸಂಕಷ್ಟ ಎದುರಾಗಿದೆ. ವಾಡಿಕೆಗಿಂತಲೂ ಹೆಚ್ಚು ಮಳೆಯಾಗಿದ್ದರಿಂದ ಭೂಮಿ ಹೆಚ್ಚು ತೇವಾಂಶವಾಗಿ ಬಿತ್ತನೆ ಮಾಡಿದ ಬೆಳೆ ಕೊಳೆಯುವ ಸ್ಥಿತಿ ಎದುರಾಯಿತು. ಅದರಲ್ಲೂ ಈರುಳ್ಳಿ, ಮೆಣಸಿನಕಾಯಿ ಬೆಳೆ ಹೊಲದಲ್ಲೇ ಕೊಳೆಯಿತು. ಜಿಲ್ಲಾಡಳಿತವು ಜಂಟಿ ಸಮೀಕ್ಷೆ ಕೈಗೊಂಡ ಬಳಿಕ 2,275 ಹೆಕ್ಟೇರ್ ಪ್ರದೇಶ ತೋಟಗಾರಿಕೆ ಬೆಳೆ ಹಾನಿಯಾಗಿದೆ. ಅಂದರೆ 5687 ಎಕರೆ ಪ್ರದೇಶ ಹಾನಿಗೀಡಾಗಿದೆ. ಇನ್ನೂ ಕೃಷಿ ಇಲಾಖೆಯಡಿ 3,584 ಹೆಕ್ಟೇರ್ ಪ್ರದೇಶ
ಹಾನಿಯಾಗಿದೆ. ಅಂದರೆ 8,960 ಎಕರೆ ಪ್ರದೇಶ ಒಟ್ಟು ಸೇರಿ 14,647 ಎಕರೆ ಪ್ರದೇಶ ಮಳೆಯಿಂದ ಹಾನಿಗೀಡಾಗಿದೆ. ಕಳೆದ 3-4 ತಿಂಗಳಿಂದ ಕಷ್ಟಪಟ್ಟು ಬೆಳೆದಿದ್ದ ಬೆಳೆಯಲ್ಲ ಮಳೆಗೆ ಕೊಳೆಯುವಂತಾದ ಸ್ಥಿತಿಯನ್ನು ನೋಡಿ ಅನ್ನದಾತ ಕಣ್ಣೀರಿಡುವಂತ ಸ್ಥಿತಿ ಎದುರಾಗಿದೆ.
ಇದನ್ನೂ ಓದಿ:ಮೈದುಂಬಿ ಹರಿಯುತ್ತಿದೆ ದೂಧ್ ಸಾಗರ ಜಲಪಾತ ! ಪ್ರವಾಸಿಗರ ಸಂಖ್ಯೆ ವಿರಳ
ಮಳೆಗೆ 718 ಮನೆ ಹಾನಿ: ಇನ್ನೂ ಜಿಲ್ಲೆಯಲ್ಲಿ ಮಳೆಯಿಂದಾಗಿ 718 ಮನೆಗಳು ಹಾನಿಯಾಗಿವೆ. ಜೊತೆಗೆ 13 ಸೇತುವೆಗಳು ಮಳೆಗೆ ತುತ್ತಾಗಿದ್ದರೆ, 318 ಸರ್ಕಾರಿ ಪ್ರಾಥಮಿಕ ಶಾಲೆಗಳ ಕಟ್ಟಡಗಳು, 211 ಸರ್ಕಾರಿ ಅಂಗನವಾಡಿ ಸೇರಿ ಇತರೆ ಸಮುದಾಯಿಕ
ಕಟ್ಟಡಗಳು ಹಾನಿಯಾಗಿವೆ. ಸದ್ಯ ಶಾಲೆಗಳು ಇನ್ನೂ ಆರಂಭವಾಗಿಲ್ಲ. ಸರ್ಕಾರ ಶಾಲೆಗಳನ್ನು ಆರಂಭ ಮಾಡಿದರೆ ಮಕ್ಕಳಿಗೆ ಕೊಠಡಿಗಳ ಕೊರತೆಯು ಎದುರಾಗಲಿದೆ. ಏಕೆಂದರೆ ಅತಿಯಾದ ಮಳೆಯಿಂದ ಗೋಡೆಗಳು ಕುಸಿದಿದ್ದು, ಮೇಲ್ಛಾವಣೆ ಬಿದ್ದಿವೆ.
ಕೆಲವೆಡೆ ಬಹುಪಾಲು ನೆಲಸಮವಾಗಿವೆ. 19 ಕೋಟಿ ನಷ್ಟ: ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ. ಪಾಟೀಲ್ ಅವರು ಜಂಟಿ ಸಮೀಕ್ಷೆ ಕೈಗೊಂಡು ಶೀಘ್ರ ವರದಿ ಸಲ್ಲಿಸಿ ಸಿಎಂ ಅವರನ್ನು ಭೇಟಿ ಮಾಡಿ ಹಾನಿ ವರದಿ ಸಲ್ಲಿಕೆ ಮಾಡುವ ಕುರಿತು ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧಿ ಕಾರಿ ವರ್ಗಕ್ಕೆ ಸೂಚಿಸಿದ್ದರಿಂದ ಜಿಲ್ಲೆಯ ಕಂದಾಯ, ತೋಟಗಾರಿಕೆ ಹಾಗೂ ಕೃಷಿ ಇಲಾಖೆ ಅ ಧಿಕಾರಿಗಳು ಜಂಟಿ ಸಮೀಕ್ಷೆ ನಡೆಸಿ, ಮಂಗಳವಾರ ಜಿಲ್ಲಾಡಳಿತಕ್ಕೆ ವರದಿ ಸಲ್ಲಿಕೆ ಮಾಡಿದ್ದಾರೆ. ಜಿಲ್ಲಾಡಳಿತವು ರಾಜ್ಯ ಕಂದಾಯ ಪ್ರಧಾನ ಕಾರ್ಯದರ್ಶಿಗಳಿಗೆ ಹಾನಿ 19 ಕೋಟಿ ರೂ. ಹಾನಿಯನ್ನು ಎನ್ಡಿಆರ್ಎಫ್, ಎಸ್ಡಿಆರ್ಎಫ್ ನಿಯಮದ ಅನ್ವಯವೇ ಸರ್ಕಾರಕ್ಕೆ ವರದಿ ಸಲ್ಲಿಸಿದೆ.
ಕ್ರಿಯಾಯೋಜನೆ: ಜಿಲ್ಲೆಯಲ್ಲಿ ಕೋಳೂರು ಸೇತುವೆ, ರಸ್ತೆಗಳು, ಸರ್ಕಾರಿ ಕಟ್ಟಡಗಳು ಸೇರಿ ಇತರೆ ಕಟ್ಟಡಗಳು ಹಾನಿಯಾದ ಹಿನ್ನೆಲೆಯಲ್ಲಿ ಜಿಲ್ಲಾಡಳಿತವು ಅವುಗಳನ್ನು ಪುನರ್ ನಿರ್ಮಾಣ ಮಾಡಬೇಕಿದೆ. ಅವು ಜನತೆಗೆ ಅಗತ್ಯ ಸೌಕರ್ಯಗಳಾಗಿದ್ದರಿಂದ
ತುರ್ತಾಗಿ ಕಾಮಗಾರಿ ಕೈಗೊಳ್ಳಬೇಕಿದೆ. ಹೀಗಾಗಿ ಹಾನಿಯ ನಷ್ಟದ ಜೊತೆಗೆ 90 ಕೋಟಿ ರೂ. ನಷ್ಟು ಕ್ರಿಯಾಯೋಜನೆಯ ಪ್ರಸ್ತಾವನೆಯನ್ನೂ ಸಲ್ಲಿಸಿದೆ.
– ದತ್ತು ಕಮ್ಮಾರ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
MUST WATCH
ಹೊಸ ಸೇರ್ಪಡೆ
Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ
O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ
Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ