ವಿಮೆ ಮೊಬೈಲ್‌ ಆ್ಯಪ್‌ ಮೂಲಕ ಬೆಳೆ ಸಮೀಕ್ಷೆ


Team Udayavani, Jun 29, 2019, 3:10 AM IST

krishna byre

ಬೆಂಗಳೂರು: ಫ‌ಸಲ್‌ ಭಿಮಾ ಯೋಜನೆಗೆ ನೋಂದಾಯಿಸುವ ಪ್ರತಿಯೊಬ್ಬ ರೈತನ ಬೆಳೆ ಮಾದರಿಯನ್ನು ಮೊಬೈಲ್‌ ಆ್ಯಪ್‌ ಮೂಲಕ ಸಮೀಕ್ಷೆ ನಡೆಸಲು ತೀರ್ಮಾನಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವ ಕೃಷ್ಣ ಬೈರೇಗೌಡ ಹೇಳಿದ್ದಾರೆ.

ಸಚಿವ ಸಂಪುಟ ಸಭೆ ನಂತರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರೈತರು ಪಹಣಿಯಲ್ಲಿ ತೋರಿಸುವ ಬೆಳೆಗೂ, ವಾಸ್ತವವಾಗಿ ಬೆಳೆದಿರುವ ಬೆಳೆಗೂ ಅಜಗಜಾಂತರ ವ್ಯತ್ಯಾಸವಿರುತ್ತದೆ. ಪಹಣಿಯಲ್ಲಿ ಇಪ್ಪತ್ತು, ಮೂವತ್ತು ವರ್ಷಗಳ ಹಳೆಯ ಮಾಹಿತಿ ಇರುತ್ತದೆ. ಈಗ ರೈತರು ಬೆಳೆಯುವ ಬೆಳೆ ಬದಲಾಗಿರುತ್ತದೆ. ಇದರಿಂದ ಬರಗಾಲ ಅಥವಾ ಪ್ರವಾಹ ಪರಿಸ್ಥಿತಿ ನಿರ್ಮಾಣವಾದಾಗ ರೈತರಿಗೆ ಪರಿಹಾರ ನೀಡುವಲ್ಲಿಯೂ ತೊಂದರೆಯಾಗುತ್ತಿತ್ತು.

ಹೀಗಾಗಿ, ಬೆಳೆ ಸಮೀಕ್ಷೆಗೆ 2017ರಿಂದ ಪರಿಹಾರ ಸಾಪ್ಟವೇರ್‌ ಜಾರಿಗೆ ತಂದಿದ್ದೇವೆ. ರೈತರ 2.20 ಕೋಟಿ ತಾಕುಗಳಿವೆ. ಎಲ್ಲವನ್ನೂ ಮೊಬೈಲ… ಆ್ಯಪ್‌ನಿಂದ ಜಿಪಿಎಸ್‌ ಮೂಲಕ ಸಮೀಕ್ಷೆ ಮಾಡಿ, ಸಾಧ್ಯವಾದಷ್ಟು ರೈತರ ಜೊತೆ ಫೊಟೊ ಅಪ್‌ಡೇಟ… ಮಾಡಲು ಸೂಚನೆ ನೀಡಿದ್ದೇವೆ ಎಂದರು.

ಮುಂಗಾರು ಹಾಗೂ ಹಿಂಗಾರು ಎರಡೂ ಹಂಗಾಮಿನ ಸಮೀಕ್ಷೆಯನ್ನು ಖಾಸಗಿ ಸರ್ವೇಯರ್‌ಗಳ ಮೂಲಕ ನಡೆಸಲು ತೀರ್ಮಾನಿಸಲಾಗಿದೆ. ಒಬ್ಬ ರೈತನ ಜಮೀನನ್ನು ಸಮೀಕ್ಷೆ ಮಾಡಿದರೆ 10ರೂ.ನೀಡಲು ನಿರ್ಧರಿಸಲಾಗಿದೆ. ಒಬ್ಬ ಸರ್ವೇಯರ್‌ ಒಂದು ದಿನಕ್ಕೆ ಕನಿಷ್ಠ 50 ರೈತರ ಸಮೀಕ್ಷೆ ಮಾಡಬಹುದು. ಜಿಲ್ಲಾವಾರು ಬಿತ್ತನೆ ಸಮಯ ಬೇರೆ ಇರುವುದರಿಂದ ಆಯಾ ಸಮಯಕ್ಕೆ ಸಮೀಕ್ಷೆ ಮಾಡಲಾಗುವುದು. ಈ ಯೋಜನೆಗೆ 90 ಕೋಟಿ ರೂ.ನೀಡಲು ಸಂಪುಟ ಒಪ್ಪಿಗೆ ನೀಡಿದೆ ಎಂದರು.

ರೈತರು ವಿಮೆಯ ತಮ್ಮ ಪಾಲಿನ ಹಣವನ್ನು ಆಹಾರ ಧಾನ್ಯಗಳಿಗೆ ಶೇ 1.5ರಷ್ಟು, ವಾಣಿಜ್ಯ ಬೆಳೆಗಳಿಗೆ ಶೇ.2ರಷ್ಟು ತುಂಬಬೇಕು. ಸರ್ಕಾರ ಅದರ ಐದು ಪಟ್ಟು ವಿಮೆ ಹಣವನ್ನು ಭರಿಸುತ್ತದೆ. ರಾಜ್ಯದ ಪಾಲು 546 ಕೋಟಿ ರೂ.ಭರಿಸಲು ಸಂಪುಟ ಒಪ್ಪಿಗೆ ನೀಡಿದೆ. ಬೆಳೆ ಸಮೀಕ್ಷೆ ಮಾಡಲು 10 ಕ್ಲಸ್ಟರ್‌ಗಳನ್ನು ಮಾಡಲು ತೀರ್ಮಾನಿಸಲಾಗಿದೆ ಎಂದು ಹೇಳಿದರು.

ದೇಶದಲ್ಲಿ ಯಾವ ರಾಜ್ಯದಲ್ಲಿಯೂ ಮೊಬೈಲ್‌ ಆ್ಯಪ್‌ ಮೂಲಕ ಸಮೀಕ್ಷೆ ಮಾಡುವ ಪದ್ದತಿ ಇಲ್ಲ. ನೀತಿ ಆಯೋಗದವರು ನಮ್ಮ ಅಧಿಕಾರಿಗಳಿಂದ ಮಾಹಿತಿ ಪಡೆದು ಬೇರೆ ರಾಜ್ಯಗಳಲ್ಲಿ ಅಳವಡಿಸಲು ಸೂಚನೆ ನೀಡಿದ್ದಾರೆ ಎಂದು ಹೇಳಿದರು.

ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ ಪಾವಗಡದಲ್ಲಿ 60 ಹಾಸಿಗೆಯ ಹೆರಿಗೆ ಆಸ್ಪತ್ರೆ, ರಾಯಚೂರು ಹೆರಿಗೆ ಆಸ್ಪತ್ರೆಯಲ್ಲಿ ಹೆಚ್ಚುವರಿ ಸೌಲಭ್ಯ, ದಾವಣಗೆರೆ, ಬಳ್ಳಾರಿಯಲ್ಲಿ 100 ಹಾಸಿಗೆಗಳ ಹೆರಿಗೆ ಆಸ್ಪತ್ರೆ, ಇತರ ಸೌಲಭ್ಯಗಳು ಸೇರಿ 71 ಕೋಟಿ ರೂ.ಗಳ ಯೋಜನೆಗೆ ಸಂಪುಟ ಒಪ್ಪಿಗೆ ನೀಡಿದೆ ಎಂದು ಹೇಳಿದರು.

ಟಾಪ್ ನ್ಯೂಸ್

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.