ನೆಲಕಚ್ಚಿದ ಭತ್ತದ ಬೆಳೆ: ಅಪಾರ ಹಾನಿ; ಅಕಾಲಿಕ ಮಳೆ; ರೈತರು ಕಂಗಾಲು


Team Udayavani, Oct 18, 2021, 5:24 AM IST

ನೆಲಕಚ್ಚಿದ ಭತ್ತದ ಬೆಳೆ: ಅಪಾರ ಹಾನಿ; ಅಕಾಲಿಕ ಮಳೆ; ರೈತರು ಕಂಗಾಲು

ಕಾಪು: ತಾಲೂಕಿನಲ್ಲಿ ಅಕಾಲಿಕ ಮಳೆಯಿಂದಾಗಿ ಬೈಲು ಸಾಲಿನ ಭತ್ತದ ಗದ್ದೆಗಳಲ್ಲಿ ಮಳೆ ನೀರು ಸಂಗ್ರಹವಾಗಿದ್ದು ವಿವಿಧೆಡೆ ಬೆಳೆದು ನಿಂತ ಭತ್ತದ ಪೈರುಗಳು ನೆಲಕಚ್ಚಿವೆ. ಇದರಿಂದಾಗಿ ಲಕ್ಷಾಂತರ ರೂ. ಮೌಲ್ಯದ ಬೆಳೆ ಹಾನಿ ಸಂಭವಿಸಿದೆ. ಕೃಷಿಕರು ತಾವು ಕಷ್ಟಪಟ್ಟು ಬೆಳೆಸಿದ ಬೆಳೆಯನ್ನು ಸುರಕ್ಷಿತವಾಗಿ ಮನೆಯೊಳಗೆ ತರಲಾಗದೆ ಕಂಗಾಲಾಗಿದ್ದಾರೆ.

ತಾಲೂಕಿನ ಕಾಪು, ಮಜೂರು, ಕಳತ್ತೂರು, ಮಲ್ಲಾರು, ಬೆಳಪು, ಎಲ್ಲೂರು ಕುಂಜೂರು, ಎರ್ಮಾಳು, ಪಡುಬಿದ್ರಿ ಶಿರ್ವ, ಕಟಪಾಡಿ, ಪಾಂಗಾಳ, ಇನ್ನಂಜೆ, ಪಲಿಮಾರು, ಹೇರೂರು, ಪಾದೂರು ಸಹಿತವಾಗಿ ಹೊಳೆ ಬದಿಯಲ್ಲಿರುವ ಭತ್ತದ ಗದ್ದೆಗಳಲ್ಲಿ ನೀರು ನಿಂತು ಪೈರುಗಳು ನೀರಿನಲ್ಲಿ ತೇಲುತ್ತಿವೆ. ಇದರಿಂದ ಭತ್ತ ಮೊಳಕೆಯೊಡೆಯಲಾರಂಭಿಸಿವೆ.

ಕೆಲವು ಕಡೆಗಳಲ್ಲಿ ರೈತರು ಭತ್ತದ ಕೊಯ್ಲು ನಡೆಸಲು ಕೂಡ ಹಿಂಜರಿ ಯುತ್ತಿದ್ದಾರೆ. ಗ್ರಾಮೀಣ ಪ್ರದೇಶಗಳ ಬಹುತೇಕ ಕಡೆಗಳಿಗೆ ಗ್ರಾಮಕ್ಕೆ ಒಂದು, ಎರಡರಂತೆ ಈಗಾಗಲೇ ಬಾಡಿಗೆ ಕೊಯ್ಲು ಯಂತ್ರಗಳು ಬಂದಿವೆಯಾದರೂ ಅದು ಗದ್ದೆಯಲ್ಲಿ ಓಡಾಡಿದರೆ ಮತ್ತಷ್ಟು ಬೆಳೆ ಹಾನಿಯ ಭೀತಿ ಎದುರಾಗಿದೆ.

3 ದಿನಗಳ ಹಿಂದೆ ಕರಾವಳಿಯಲ್ಲಿ ಸುರಿದ ಮಳೆಯಿಂದ ಹಾಳಾಗಿರುವ ಭತ್ತದ ಬೆಳೆಯನ್ನು ಕಂದಾಯ ಮತ್ತು ಕೃಷಿ ಇಲಾಖೆ ಅಧಿಕಾರಿಗಳು ಪರಿಶೀಲಿಸಿ, ಹಾನಿಯ ಬಗ್ಗೆ ಅಂದಾಜು ಪಟ್ಟಿ ಮಾಡಿ ಸೂಕ್ತ ಪರಿಹಾರ ದೊರಕಿಸಿಕೊಡುವಂತೆ ಕಳತ್ತೂರು, ಹೆಜಮಾಡಿ, ಮಜೂರು, ಕುಂಜೂರು, ಎಲ್ಲೂರು, ಬೆಳಪು ಸುತ್ತ ಮುತ್ತಲಿನ ಕೃಷಿಕರು ಆಗ್ರಹಿಸಿದ್ದಾರೆ.

ಬೆಂಬಲ ಬೆಲೆ ಘೋಷಿಸಿ,
ಬೆಳೆ ಹಾನಿ ಪರಿಹಾರಕ್ಕೆ ಆಗ್ರಹ
ಮಜೂರು, ಹೇರೂರು, ಪಾದೂರು ಸುತ್ತಮುತ್ತ ಕಟಾವು ಹಂತದಲ್ಲಿನ ಭತ್ತದ ಬೆಳೆ ಗಾಳಿ ಮತ್ತು ಧಾರಾಕಾರ ಮಳೆಗೆ ನೆಲ ಕಚ್ಚಿದ್ದು ರೈತರು ಸಂಕಷ್ಟಕ್ಕೀಡಾಗಿದ್ದಾರೆ. ಈ ಬಗ್ಗೆ ಇಲಾಖೆಯ ಅಧಿಕಾರಿಗಳು ತುರ್ತಾಗಿ ಸ್ಪಂದಿಸಿ, ವರದಿ ಸಿದ್ಧಪಡಿಸಿ, ಇಲಾಖೆಯಿಂದ ಪರಿಹಾರ ದೊರಕಿಸಿ ಕೊಡಲು ಪ್ರಯತ್ನಿಸಬೇಕಿದೆ. ಸರಕಾರ ಕೂಡ ಈ ಬಗ್ಗೆ ವಿಶೇಷ ಗಮನಹರಿಸಿ ವಿಶೇಷ ಆರ್ಥಿಕ ಪರಿಹಾರ ನೀಡಲು ಮುಂದಾಗಬೇಕಿದೆ. ಕಟಾವಿಗೆ ಮೊದಲೇ ಭತ್ತಕ್ಕೆ ಬೆಂಬಲ ಬೆಲೆಯನ್ನು ಘೋಷಿಸುವ ಅಗತ್ಯವಿದೆ ಎಂದು ಕೃಷಿಕರಾದ ಪ್ರಭಾವತಿ, ಭಾಸ್ಕರ ಪೂಜಾರಿ ಕರಂದಾಡಿ, ಪುನೀತ್‌ ಕುಮಾರ್‌ ಆಗ್ರಹಿಸಿದ್ದಾರೆ.

ಇದನ್ನೂ ಓದಿ:ನಕಲಿ ನಂಬರ್ ಪ್ಲೇಟ್ ಬಳಸಿ ಬೈಕ್ ಮಾರಾಟ ಮಾಡುತ್ತಿದ್ದ ಜಾಲ ಭೇದಿಸಿದ ಕೊರಟಗೆರೆ ಪೊಲೀಸರು

ಕೃಷಿಕರಿಗೆ ಸಂಕಷ್ಟ
ಭತ್ತ ಪೈರು ಬೆಳೆದಿದ್ದು, ಕಟಾವಿನ ಸಮಯದಲ್ಲೇ ಮಳೆ ಬಂದು ಕಟಾವು ನಡೆಸದ ಸ್ಥಿತಿಗೆ ತಲುಪಿದ್ದೇವೆ. ಕೊಯ್ಲು ನಡೆಸದಿದ್ದರೆ ಭತ್ತ ಗದ್ದೆಯಲ್ಲೇ ಬಿದ್ದು ಮೊಳಕೆಯೊಡುವ ಭೀತಿ ಎದುರಾಗಿದೆ. ಮಳೆ ಬಂದು ಗದ್ದೆಯಲ್ಲಿ ನೀರು ನಿಂತ ಪರಿಣಾಮ ಕಟಾವು ಯಂತ್ರಗಳನ್ನು ಗದ್ದೆಗೆ ಇಳಿಸಲಾಗದ ಸ್ಥಿತಿ ಎದುರಾಗಿದೆ. ಆಗಾಗ್ಗೆ ಮಳೆ ಸುರಿಯುತ್ತಿರುವುದರಿಂದ ಬೈಹುಲ್ಲು ಕೂಡ ಹಾಳಾಗುವ ಭೀತಿ ಇದೆ. ಇದುವರೆಗೂ ಭತ್ತಕ್ಕೆ ಸೂಕ್ತ ಬೆಂಬಲ ಬೆಲೆ ಘೋಷಣೆಯಾಗದ ಪರಿಣಾಮ ಕಟಾವಿನ ಬಳಿಕ ಭತ್ತವನ್ನು ಮಾರುವುದು ಹೇಗೆ ಎಂಬ ಗೊಂದಲವೂ ಇದೆ. ಭತ್ತ ಖರೀದಿದಾರರು ಕೂಡ ಒಣ ಭತ್ತವನ್ನು ಮಾತ್ರ ಸ್ವೀಕರಿಸುತ್ತಿದ್ದು ಭತ್ತದ ಕೃಷಿಕರ ಪಾಡು ಅಯೋಮಯವಾಗಿದೆ.
-ಪ್ರವೀಣ್‌ ಕುಮಾರ್‌ ಗುರ್ಮೆ, ಕೃಷಿಕರು

ಸ್ಥಳ ಸಮೀಕ್ಷೆ
ಅಕಾಲಿಕ ಮಳೆಯಿಂದಾಗಿ ವಿವಿಧೆಡೆ ಭತ್ತದ ಬೆಳೆಗೆ ಹಾನಿಯುಂಟಾಗಿದ್ದು ಹೆಜಮಾಡಿ ಗ್ರಾಮದಲ್ಲಿ ಕೃಷಿಕರ ದೂರಿನ ಹಿನ್ನೆಲೆಯಲ್ಲಿ ಬೆಳೆ ಹಾನಿ ಬಗ್ಗೆ ಸ್ಥಳ ಸಮೀಕ್ಷೆ ನಡೆಸಲಾಗಿದೆ. ಕೃಷಿ, ಕಂದಾಯ ಇಲಾಖೆಯು ಜಂಟಿ ಸಮೀಕ್ಷೆ ನಡೆಸಿ ಸರಕಾರಕ್ಕೆ ವರದಿ ಸಲ್ಲಿಸಲಾಗುವುದು. ಅರ್ಜಿ ಸ್ವೀಕಾರ, ವರದಿ ಸಲ್ಲಿಕೆಯ ತಂತ್ರಾಂಶದಲ್ಲಿ ಅಪ್‌ಲೋಡ್‌ ಮಾಡಲಾಗುತ್ತದೆ. ಭತ್ತದ ಬೆಳೆ ಹಾನಿಗೆ ಎರಡೂವರೆ ಎಕರೆಗೆ 6,800 ರೂ. ಪರಿಹಾರ ವಿತರಿಸಲು ಅವಕಾಶವಿದ್ದು, ಬೆಳೆ ಹಾನಿಯ ಬಗ್ಗೆ ರೈತರು ಕೃಷಿ ಅಧಿಕಾರಿಗಳನ್ನು ಸಂಪರ್ಕಿಸಬಹುದಾಗಿದೆ.
-ಪುಷ್ಪಲತಾ, ಕೃಷಿ ಅಧಿಕಾರಿ ಕಾಪು ತಾಲೂಕು

ಭಾರೀ ಮಳೆ: ಜನಜೀವನ ಅಸ್ತವ್ಯಸ್ತ
ಉಡುಪಿ: ಜಿಲ್ಲಾದ್ಯಂತ ರವಿವಾರ ಗಾಳಿ ಸಹಿತ ಭಾರೀ ಮಳೆಯಾಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿತು. ನಗರ ಹಾಗೂ ಗ್ರಾಮೀಣ ಭಾಗದ ವಿವಿಧೆಡೆಯಲ್ಲಿ ವಿದ್ಯುತ್‌ ವ್ಯತ್ಯಯ ಉಂಟಾಯಿತು.

ಅ.17ರ ಮುಂಜಾನೆ 8.30ರ ಹಿಂದಿನ 24 ಗಂಟೆಯಲ್ಲಿ ಉಡುಪಿ ತಾಲೂಕಿನಲ್ಲಿ 20.4 ಮಿ.ಮೀ., ಬ್ರಹ್ಮಾವರ 14 ಮಿ.ಮೀ., ಕಾಪು 41 ಮಿ.ಮೀ., ಬೈಂದೂರು 2 ಮಿ.ಮೀ., ಕಾರ್ಕಳ 10.9 ಮಿ.ಮೀ., ಹೆಬ್ರಿ 32.4 ಮಿ.ಮೀ. ಮಳೆಯಾಗಿದೆ. ಜಿಲ್ಲೆಯಲ್ಲಿ ಸರಾಸರಿ 17.35 ಮಿ.ಮೀ ಮಳೆಯಾಗಿದೆ. ರವಿವಾರ ಬೆಳಗ್ಗೆ 9 ಗಂಟೆಯ ಬಳಿಕ ಭಾರೀ ಮಳೆ ಸುರಿದ ಕಾರಣ ಜನರು ಭಾರೀ ಸಂಕಷ್ಟ ಅನುಭವಿಸಿದರು. ಕೆಲವೆಡೆ ಸಿಡಿಲು, ಮಿಂಚಿನಿಂದ ವಿದ್ಯುತ್‌ ವ್ಯತ್ಯಯವಾಯಿತು. ನಗರ ರಸ್ತೆ ಹಾಗೂ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಇಕ್ಕೆಲಗಳ ಚರಂಡಿಗಳು ತುಂಬಿ ಮಳೆ ನೀರು ರಸ್ತೆಯಲ್ಲೇ ಹರಿಯುತ್ತಿತ್ತು. ಮಳೆಯಿಂದಾಗಿ ನಗರದ ರಸ್ತೆಗಳಲ್ಲಿ ಟ್ರಾಫಿಕ್‌ ಜಾಮ್‌ ಉಂಟಾಯಿತು.

ಟಾಪ್ ನ್ಯೂಸ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ ಅಡಿಗೆ ಸಿಲುಕಿದ ಬೈಕ್; ಯಕ್ಷಗಾನ ಕಲಾವಿದ ಸ್ಥಳದಲ್ಲೇ ಮೃತ್ಯು

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.