ಕೆರೆಯನ್ನು ನಿರ್ಮಿಸದೇ ಕೋಟ್ಯಂತರ ರೂಪಾಯಿ ವಂಚನೆ

ಗುರುತು ಮಾಡಿ ಹದ್ದುಬಸ್ತ್ ಮಾಡುವಂತೆ ಕಂದಾಯ ಅಧಿ ಕಾರಿ, ಗ್ರಾಮ ಲೆಕ್ಕಿಗರಿಗೆ ಸೂಚನೆ ನೀಡಿದ್ದಾರೆ.

Team Udayavani, Aug 5, 2021, 5:33 PM IST

ಕೆರೆಯನ್ನು ನಿರ್ಮಿಸದೇ ಕೋಟ್ಯಂತರ ರೂಪಾಯಿ ವಂಚನೆ

ಮಸ್ಕಿ: ಪಹಣಿಯಲ್ಲಿರುವುದು ಸರಕಾರಿ ಜಮೀನು ಅಂದರೆ ಅಸಲಿಗೆ ಇದು ಕಂದಾಯ ಇಲಾಖೆ ಆಸ್ತಿ. ಆದರೆ ಪಂಚಾಯಿತಿ ದಾಖಲೆಯಲ್ಲಿ ಕೆರೆ. ಈ ಕೆರೆ ಹೆಸರಲ್ಲಿ ಕೋಟ್ಯಂತರ ರೂ. ಹಣ ಎತ್ತುವಳಿ. ಇಂತಹ ಅಚ್ಚರಿ ಪ್ರಕರಣ ಬೆಳಕಿಗೆ ಬಂದಿದ್ದು, ತಾಲೂಕಿನ ಪಾಮನಕಲ್ಲೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಲ್ಕರಾಗಿ ಗ್ರಾಮದಲ್ಲಿ.

ಸರ್ವೇ ನಂಬರ್‌ 102ರಲ್ಲಿ 11.22 ಎಕರೆ, ಸರ್ವೇ ನಂ.98ರಲ್ಲಿ 6.6 ಎಕರೆ ಸರಕಾರಿ ಗೆ„ರಾಣಿ ಭೂಮಿ ಇದೆ. ಆದರೆ ಇದೇ ಸರ್ವೇ ನಂಬರ್‌ನ ಜಮೀನು ಪಂಚಾಯಿತಿ ದಾಖಲೆಯಲ್ಲಿ ಸರಕಾರಿ ಕೆರೆಯಾಗಿ ಬದಲಾಗಿದೆ. ಮಸ್ಕಿ ತಹಸೀಲ್ದಾರ್‌ ಕವಿತಾ ಆರ್‌. ಸ್ಥಾನಿಕ ಪರಿಶೀಲನೆ ವೇಳೆ ಈ ಅಂಶ ಬಯಲಾಗಿದ್ದು, ಕಂದಾಯ ಇಲಾಖೆ ಜಮೀನನ್ನು ಪಂಚಾಯಿತಿ ದಾಖಲೆಯಲ್ಲಿ ಕೆರೆಯಾಗಿ ಬದಲಾಯಿಸಿದ್ದು ಮತ್ತು ಈ ಕಂದಾಯ ಜಮೀನಲ್ಲಿ, ಕೆರೆ ಹೂಳೆತ್ತುವ ಕಾಮಗಾರಿ
ಎಂದು ನಮೂದಿಸಿ ಉದ್ಯೋಗ ಖಾತರಿಯಲ್ಲಿ ಪ್ರತಿ ವರ್ಷವೂ ನೂರಾರು ಕೋಟಿ ರೂ. ಅನುದಾನ ಖರ್ಚು ಮಾಡಲಾಗಿದೆ.

ತನಿಖೆಗೆ ಆದೇಶ: ಸ್ಥಾನಿಕ ಪರಿಶೀಲನೆ ನಡೆಸಿದ ತಹಸೀಲ್ದಾರ್‌ ಈ ಬೆಳವಣಿಗೆ ಕಂಡು ಸ್ವತಃ ಅಚ್ಚರಿಗೊಳಗಾಗಿದ್ದಾರೆ. ದಾಖಲೆ ನೋಡದೇ ಕಾಮಗಾರಿ ಕೈಗೊಂಡಿದ್ದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ತಹಸೀಲ್ದಾರ್‌ ಕವಿತಾ ಆರ್‌., ಪಿಡಿಒ ಅಮರೇಶರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಕೂಡಲೇ ತನಿಖೆ ಮಾಡಬೇಕೆಂದು ಆದೇಶ ನೀಡಿದ್ದು, ಇವರೆಗೂ ಎಲ್ಲೆಲ್ಲಿ ನರೇಗಾ ಕೆಲಸ ಮಾಡಲಾಗಿದೆ? ಎಷ್ಟು ಮೊತ್ತ ಡ್ರಾ ಮಾಡಲಾಗಿದೆ?ಎನ್ನುವ ವರದಿ ನೀಡಬೇಕು. ಕಂದಾಯ ಇಲಾಖೆಯ ಜಮೀನು ಎಲ್ಲೆಲ್ಲಿದೆ? ಗುರುತು ಮಾಡಿ ಹದ್ದುಬಸ್ತ್ ಮಾಡುವಂತೆ ಕಂದಾಯ ಅಧಿ ಕಾರಿ, ಗ್ರಾಮ ಲೆಕ್ಕಿಗರಿಗೆ ಸೂಚನೆ ನೀಡಿದ್ದಾರೆ.

ಒತ್ತುವರಿ ಆರೋಪ: ಇಲ್ಲಿನ ಸರಕಾರಿ ಗೈರಾಣಿ ಜಮೀನಿನಲ್ಲಿ ಕೆಲ ಬಡ ಕುಟುಂಬಗಳು ಹಲವು ವರ್ಷಗಳಿಂದಲೂ ಉಳುಮೆ ಮಾಡುತ್ತಿವೆ. ಇವರಿಗೆ ಸಾಗುವಳಿ ಚೀಟಿ ಜತೆಗೆ ಪಟ್ಟಾ ಭೂಮಿ ಮಾಡಿಕೊಡಲು ಹಲವು ವರ್ಷಗಳಿಂದಲೂ ಬೇಡಿಕೆ ಇದೆ. ಆದರೆ ಅರ್ಹ ಬಡವರಿಗೆ ಇದುವರೆಗೂ ಭೂಮಿ ಹಂಚಿಕೆಯಾಗಿಲ್ಲ. ಆದರೆ ಇದರ ನಡುವೆಯೇ ಇಲ್ಲಿನ ಸರಕಾರಿ ಜಮೀನು ಒತ್ತುವರಿಗೆ ಹೊಂಚು ನಡೆದಿದೆ. ಗ್ರಾಮ ಪಂಚಾಯಿತಿಯ ಕೆಲ ಹಾಲಿ-ಮಾಜಿ ಸದಸ್ಯರು ಕೆರೆ ಹೆಸರಲ್ಲಿ ಕೋಟ್ಯಂತರ ರೂ. ಎತ್ತುವಳಿಗೆ ವಂಚನೆ ಹಾಕಿದ್ದಾರೆ. ಅಲ್ಲದೇ ಕೆಲ ಪ್ರಭಾವಿಗಳು ಇಲ್ಲಿನ ಭೂಮಿಯನ್ನು ಒತ್ತುವರಿ ಮಾಡಿದ್ದು, ಸಂಪೂರ್ಣ ತನಿಖೆ ಬಳಿಕಷ್ಟೇ ಸತ್ಯಾಂಶ ಬಯಲಾಗಲಿದೆ ಎನ್ನುತ್ತಾರೆ ಇಲ್ಲಿನ ಗ್ರಾಮಸ್ಥರು.

ಖರ್ಚು-ವೆಚ್ಚ ತನಿಖೆ ಅಗತ್ಯ
ಇಲ್ಲಿನ ಸರಕಾರಿ ಜಮೀನಿನಲ್ಲಿ ? ಕೆರೆ ಹೂಳು ಎತ್ತುವುದು? ಎನ್ನುವ ಶಿರೋನಾಮೆಯಡಿ ನರೇಗಾದಡಿ ಕೇವಲ ಕೂಲಿ ಕೆಲಸ ಮಾತ್ರವಲ್ಲದೇ ಇತರೆ ಕಾಮಗಾರಿಗಳು ನಡೆದಿವೆ. ಜಂಗಲ್‌ ಕಟಿಂಗ್‌, ಕೆರೆ ಒಳಗಟ್ಟೆ ನಿರ್ಮಾಣ, ವಡ್ಡು ನಿರ್ಮಾಣ ಹೆಸರಿನಲ್ಲಿ ಕೋಟ್ಯಂತರ ರೂ. ಖರ್ಚು
ಮಾಡಲಾಗಿದ್ದು, ಇಲ್ಲದ ಕೆರೆಗೆ ಇಷ್ಟೊಂದು ಹಣ ಹೇಗೆ ಖರ್ಚಾಯಿತು? ಎನ್ನುವುದೇ ಪ್ರಶ್ನೆ. ಗ್ರಾಮ ಪಂಚಾಯಿತಿ ಅಧಿ ಕಾರಿಗಳು ಆಡಳಿತ ಮಂಡಳಿಯಲ್ಲಿನ ಕೆಲ ಸದಸ್ಯರ ಕುಮ್ಮಕ್ಕಿನಿಂದಲೇ ಭ್ರಷ್ಟಾಚಾರ ನಡೆದಿದ್ದು ಈ ಬಗ್ಗೆ ತನಿಖೆ ನಡೆಸಿ ಕ್ರಮ ಕೈಗೊಳ್ಳುವುದು ಅಗತ್ಯವಿದೆ.

ಪಾಮನಕಲ್ಲೂರು ಪಂಚಾಯಿತಿ ವ್ಯಾಪ್ತಿಯ ಚಿಲ್ಕರಾಗಿ ಬಳಿಯ ಸರಕಾರಿ ಜಮೀನು ಸ್ಥಾನಿಕ ಪರಿಶೀಲನೆ ಮಾಡಲಾಗಿದೆ. ಕಂದಾಯ ಭೂಮಿಯಲ್ಲಿ ಪಂಚಾಯಿತಿಯವರು ಕೆಲಸ ಮಾಡಿರುವುದು ದೃಢವಾಗಿದೆ. ಇಲಾಖೆಗಳ ನಡುವಿನ ಸಂಪರ್ಕ ಕೊರತೆಯಿಂದ ಇದಾಗಿದೆ. ಸದ್ಯಕ್ಕೆ ಜಮೀನಿನ ಎಲ್ಲ ದಾಖಲೆಗಳನ್ನು ಸಂಗ್ರಹಿಸಿಕೊಳ್ಳಲಾಗುತ್ತಿದ್ದು ಬಳಿಕ ಕ್ರಮ ಕೈಗೊಳ್ಳುತ್ತೇವೆ.

ಕವಿತಾ ಆರ್‌.ತಹಸೀಲ್ದಾರ್‌, ಮಸ್ಕಿ

*ಮಲ್ಲಿಕಾರ್ಜುನ ಚಿಲ್ಕರಾಗಿ

ಟಾಪ್ ನ್ಯೂಸ್

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weewq

BJP ಟಿಕೆಟ್ ಕೊಡದಿದ್ದರೆ ನನ್ನ ದಾರಿ ನೋಡಿಕೊಳ್ಳುವೆ: ಬಿ.ವಿ.ನಾಯಕ ಆಕ್ರೋಶ

1-wqewqe

BJP; ರಾಯಚೂರಿನಲ್ಲೂ ‘ಗೋ ಬ್ಯಾಕ್ ಅಮರೇಶ್ವರ ನಾಯಕ’ ಕೂಗು!

SSLC ಕನ್ನಡ ಪ್ರಶ್ನೆಪತ್ರಿಕೆ ಜಾಲತಾಣದಲ್ಲಿ ಸೋರಿಕೆ?

SSLC ಕನ್ನಡ ಪ್ರಶ್ನೆಪತ್ರಿಕೆ ಜಾಲತಾಣದಲ್ಲಿ ಸೋರಿಕೆ?

1-sadasdas

Raichur: ಬಾಲಕಿ ಮೇಲೆ ಹಂದಿ ಮಾರಣಾಂತಿಕ ದಾಳಿ

Raichur; ಸೋನು ಗೌಡ ಕಾರಿಗೆ ಮುತ್ತಿಗೆ ಯತ್ನ

Raichur; ಸೋನು ಗೌಡ ಕಾರಿಗೆ ಮುತ್ತಿಗೆ ಯತ್ನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.