ಸಿಆರ್‌ಝಡ್‌ ಅಧಿಸೂಚನೆ 2019ರಲ್ಲಿ ಹೆಚ್ಚಿನ ಚಟುವಟಿಕೆಗೆ ಅವಕಾಶ: ಡಿಸಿ


Team Udayavani, Sep 28, 2021, 8:37 PM IST

ಸಿಆರ್‌ಝಡ್‌ ಅಧಿಸೂಚನೆ 2019ರಲ್ಲಿ ಹೆಚ್ಚಿನ ಚಟುವಟಿಕೆಗೆ ಅವಕಾಶ: ಡಿಸಿ

ಉಡುಪಿ: ಕರಾವಳಿ ನಿಯಂತ್ರಣ ವಲಯ ಅಧಿಸೂಚನೆ 2019ರಲ್ಲಿ ಅಭಿವೃದ್ಧಿ ಚಟುವಟಿಕೆ ಕೈಗೊಳ್ಳಲು ಹೆಚ್ಚಿನ ರಿಯಾಯಿತಿ ದೊರೆಯಲಿದ್ದು, ಈ ಕುರಿತು ತಯಾರಿಸಿದ ಕರಡು ಯೋಜನೆಯ ಕುರಿತಂತೆ ಸಾರ್ವಜನಿಕರು ಸಲ್ಲಿಸುವ ಅಹವಾಲು ಗಳನ್ನು ಪರಿಗಣಿಸಲಾಗುವುದು ಎಂದು ಜಿಲ್ಲಾಧಿಕಾರಿ ಕೂರ್ಮಾ ರಾವ್‌ ಎಂ. ಹೇಳಿದರು.

ಮಂಗಳವಾರ ರಜತಾದ್ರಿಯ ಅಟಲ್‌ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ಕರಾವಳಿ ನಿಯಂತ್ರಣ ವಲಯ ಅಧಿಸೂಚನೆ 2019ರ ಪ್ರಕಾರ ತಯಾರಿಸಿದ ಕರಡು ಕರಾವಳಿ ವಲಯ ನಿರ್ವಹಣ ಯೋಜನೆಯ ಸಾರ್ವಜನಿಕ ಅಹವಾಲು ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಕರಡು ಯೋಜನೆಯಲ್ಲಿ ಉಬ್ಬರ ವಿಳಿತದ ಪ್ರಭಾವಕ್ಕೆ ಒಳಗಾದ ಜಲನಿ ಕಾಯಗಳ ಭರತರೇಖೆಯಿಂದ 100 ಮೀ. ವರೆಗೆ ಇದ್ದ ಸಿಆರ್‌ಝಡ್‌ ಪ್ರದೇಶವನ್ನು 50 ಮೀ.ಗೆ ಕಡಿಮೆಗೊಳಿಸಿದೆ. ಕುದ್ರು ದ್ವೀಪಗಳಿಗೆ 100 ಮೀ.ವರೆಗೆ ಇದ್ದ ಸಿಆರ್‌ಝಡ್‌ ಪ್ರದೇಶವನ್ನು 20 ಮೀ.ಗೆ ಕಡಿಮೆಗೊಳಿಸಿದೆ. ಪ.ಪಂ., ಪುರಸಭೆ, ನಗರಸಭೆ ಅಥವಾ ಸ್ಥಳೀಯ ನಗರಾಭಿವೃದ್ಧಿ ಯೋಜನ ಪ್ರಾಧಿಕಾರಕ್ಕೆ ಸೇರಿಸಿ ಘೋಷಣೆಯಾದ ಗ್ರಾಮಗಳನ್ನು ಕರಾವಳಿ ನಿಯಂತ್ರಣ ವಲಯ 3 ರಿಂದ 2ಕ್ಕೆ ಬದಲಾಯಿಸಲಾಗಿದೆ. 2011 ರ ಜನಗಣತಿ ಆಧಾರದ ಮೇಲೆ ಚದರ ಕಿ.ಮೀ.ಗೆ 2,161ಕ್ಕಿಂತ ಹೆಚ್ಚಿನ ಜನಸಂಖ್ಯೆಯುಳ್ಳ ಗ್ರಾಮಗಳನ್ನು ಕರಾವಳಿ ನಿಯಂತ್ರಣ ವಲಯ 3ಎ ಎಂದು ವಿಂಗಡಿಸಿ, ಅಭಿ ವೃದ್ಧಿ ನಿಷಿದ್ದ ಪ್ರದೇಶದ ವ್ಯಾಪ್ತಿಯನ್ನು ಸಮುದ್ರದ ಭರತ ರೇಖೆಯಿಂದ 50 ಮೀ.ಗೆ ಸೀಮಿತಗೊಳಿಸಲಾಗಿದೆ ಎಂದರು.

ಸಿಗಡಿ ಕೃಷಿ ತೊಂದರೆ: ಪರಿಶೀಲನೆ
ಸಿಗಡಿ ಕೃಷಿಕ ಸಂಘದ ಕಾರ್ಯದರ್ಶಿ ಶ್ರೀಧರ ಹೆಗಡೆ ಹಾಗೂ ಹಂಗಳೂರು ಗ್ರಾಮದ ಸಿಗಡಿ ಕೃಷಿಕರು, ಸಿಗಡಿ ಬೆಳೆಯುವ ಪ್ರದೇಶವನ್ನು ವೈಮಾನಿಕ ಸಮೀಕ್ಷೆಯಲ್ಲಿ ಹೊಳೆ ಎಂದು ಪರಿಗಣಿಸಿದ್ದು, ಇದರಿಂದ ಸಿಗಡಿ ಕೃಷಿಗೆ ತೊಂದರೆಯಾಗಲಿದೆ. ಈ ಬಗ್ಗೆ ಪರಿಶೀಲಿಸುವಂತೆ ಕೋರಿದರು.

ಇದನ್ನೂ ಓದಿ:ಸಿಧು ಬೆನ್ನಲ್ಲೆ ಸಚಿವೆ ಸ್ಥಾನಕ್ಕೆ ರಜಿಯಾ ರಾಜೀನಾಮೆ | ಏನಾಗ್ತಿದೆ ಪಂಜಾಬ್ ರಾಜಕೀಯ ?

ಇದಕ್ಕೆ ಉತ್ತರಿಸಿದ ಜಿಲ್ಲಾಧಿಕಾರಿ ಸಿಗಡಿ ಕೃಷಿಗೆ ಯೋಜನೆಯಿಂದ ಯಾವುದೇ ತೊಂದರೆಯಿಲ್ಲ. ಹೊಸದಾಗಿ ಸಿಗಡಿ ಕೃಷಿ ಮಾಡುವವರು ಅನುಮತಿ ಪಡೆಯಬೇಕಾಗುತ್ತದೆ. ಈಗಾಗಲೇ ಮಾಡುತ್ತಿರುವವರು ನವೀಕರಣ ಮಾಡಬೇಕು. ಸಿಗಡಿ ಕೃಷಿಗೆ ಅನುಮತಿ ನೀಡಲಾಗುತ್ತದೆ. ಹೊಳೆ ಎಂದು ನಮೂದಿಸಿರುವುದನ್ನು ಸರಿಪಡಿಸಲಾಗು ವುದು ಎಂದರು.

ಮರಳು ದಿಬ್ಬ ತೆರವುಗೊಳಿಸಿ
ಹೇರಿಕುದ್ರು, ಕನ್ನಡಕುದ್ರುಗಳಲ್ಲಿ ಹೊಳೆ ಮಧ್ಯೆ ಕಾಂಡ್ಲಾ ಗಿಡಗಳನ್ನು ನೆಟ್ಟಿರುವ ಕಾರಣ ನೀರು ಹರಿಯಲು ತೊಂದರೆ ಯಾಗಿ ಮರಳು ಶೇಖರಣೆಯಾಗಿದೆ.

ಇದರಿಂದ ಹರಿಯುವ ನೀರು ಗ್ರಾಮಗಳಿಗೆ ಹಿಮ್ಮುಖವಾಗಿ ಬಂದು ಪ್ರವಾಹ ಪರಿಸ್ಥಿತಿ ಬರಲಿದ್ದು ಕೂಡಲೇ ಅಲ್ಲಿರುವ ಮರಳು ದಿಬ್ಬ ತೆರವುಗೊಳಿಸುವಂತೆ ಗ್ರಾಮಸ್ಥರು ಕೋರಿದರು.

ಮೀನುಗಾರರಿಗೆ ತೊಂದರೆಯಾಗದಿರಲಿ
ಮೀನುಗಾರಿಕಾ ಇಲಾಖೆ ಸಹಾಯಕ ನಿರ್ದೇಶಕ ಗಣೇಶ್‌ ಮಾತನಾಡಿ, ಸಿಆರ್‌ಝಡ್‌ನಿಂದ ಮೀನುಗಾರರಿಗೆ ಯಾವುದೇ ತೊಂದರೆಯಾಗದಂತೆ ನಿಯಮಗಳನ್ನು ರೂಪಿಸಬೇಕು. ನಕ್ಷೆಯಲ್ಲಿ ಗಂಗೊಳ್ಳಿ, ಹಂಗಾರಕಟ್ಟೆ ಮತ್ತು ಹೆಜಮಾಡಿ ಬಂದರುಗಳನ್ನು ಗುರುತಿಸಬೇಕು
ಎಂದರು.

ಅಹವಾಲು ಸಲ್ಲಿಕೆ
ಸಾರ್ವಜನಿಕ ಅಹವಾಲು ಸಭೆಯಲ್ಲಿ ಸಲ್ಲಿಕೆಯಾಗಿರುವ ಎಲ್ಲ ಅಹವಾಲುಗಳನ್ನು ರಾಜ್ಯಕ್ಕೆ ಕಳುಹಿಸಲಾಗುವುದು. ಅಲ್ಲಿಂದ ಅದು ಅಗತ್ಯ ಬದಲಾವಣೆಯಾಗಿ ಕೇಂದ್ರಕ್ಕೆ ಸಲ್ಲಿಕೆಯಾಗಲಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.ಸಿ.ಆರ್‌.ಝಡ್‌ ಪ್ರಾದೇಶಿಕ ನಿರ್ದೇಶಕ ಶ್ರೀಪತಿ ಬಿ.ಎಸ್‌. ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು, ಸಾರ್ವಜನಿಕರು ಉಪಸ್ಥಿತರಿದ್ದರು.

ಅಭಿವೃದ್ಧಿ
ಚಟುವಟಿಕೆಗೆ ಸಹಕಾರಿ
ಕರಡು ನಕಾಶೆಯಲ್ಲಿ ಜಿಲ್ಲೆಯ ಕೋಟೆ, ಮಟ್ಟು, ಪಾಂಗಾಳ, ಬಡಾ, ಬೈಂದೂರು, ಪಡುವರಿ, ಯಡ್ತರೆ, ತಗ್ಗರ್ಸೆ ಗ್ರಾಮಗಳನ್ನು ಕರಾವಳಿ ನಿಯಂತ್ರಣ ವಲಯ 3ರಿಂದ 2ಕ್ಕೆ ಸೇರಿಸಿರುವುದರಿಂದ ಈ ಪ್ರದೇಶದಲ್ಲಿ ಅಭಿವೃದ್ಧಿ ಚಟುವಟಿಕೆಗಳನ್ನು ನಡೆಸಲು ಹೆಚ್ಚಿನ ರಿಯಾಯಿತಿ ದೊರೆಯಲಿದೆ. ಗಂಗೊಳ್ಳಿ ಗ್ರಾಮವನ್ನು ಕರಾವಳಿ ನಿಯಂತ್ರಣ ವಲಯ 3ಎಗೆ ಸೇರಿಸಲಾಗಿದೆ ಎಂದು ಡಿಸಿ ಹೇಳಿದರು.

ಟಾಪ್ ನ್ಯೂಸ್

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election 2024 ಕೊಡುವವನ ಪಾತ್ರ ನಿರ್ವಹಿಸಲು ಮತದಾರ ಸಜ್ಜು

Lok Sabha Election 2024 ಕೊಡುವವನ ಪಾತ್ರ ನಿರ್ವಹಿಸಲು ಮತದಾರ ಸಜ್ಜು

Udupi; ಎ. 24ರ ಬಳಿಕ ಹೊರಗಿನವರು ಕ್ಷೇತ್ರದಲ್ಲಿರುವಂತಿಲ್ಲ: ಜಿಲ್ಲಾಧಿಕಾರಿ

Udupi; ಎ. 24ರ ಬಳಿಕ ಹೊರಗಿನವರು ಕ್ಷೇತ್ರದಲ್ಲಿರುವಂತಿಲ್ಲ: ಜಿಲ್ಲಾಧಿಕಾರಿ

Kota Srinivas Poojary; ಮೀನುಗಾರರ ಸಮಸ್ಯೆ, ಬೇಡಿಕೆಗಳಿಗೆ ಧ್ವನಿಯಾಗುವೆ

Kota Srinivas Poojary; ಮೀನುಗಾರರ ಸಮಸ್ಯೆ, ಬೇಡಿಕೆಗಳಿಗೆ ಧ್ವನಿಯಾಗುವೆ

Veerappa Moily; ದೇಶಕ್ಕೆ ಕ್ರಿಕೆಟ್‌ ಕಾಮೆಂಟ್ರಿಯನ್‌ ಬೇಕಿಲ್ಲ

Veerappa Moily; ದೇಶಕ್ಕೆ ಕ್ರಿಕೆಟ್‌ ಕಾಮೆಂಟ್ರಿಯನ್‌ ಬೇಕಿಲ್ಲ

Manipal; ಟ್ಯಾಪ್ಮಿ 38ನೇ ಘಟಿಕೋತ್ಸವ: 510 ಎಂಬಿಎ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ

Manipal; ಟ್ಯಾಪ್ಮಿ 38ನೇ ಘಟಿಕೋತ್ಸವ: 510 ಎಂಬಿಎ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.