ಅಧಿಕಾರದಲ್ಲಿದ್ದಾಗ ವರದಿ ಜಾರಿಗೊಳಿಸದೆ ಕಡಲೇಕಾಯಿ ತಿನ್ನುತ್ತಿದ್ದರೆ: ಸಿ.ಟಿ.ರವಿ


Team Udayavani, Feb 12, 2020, 9:02 PM IST

ct-ravi

ಬೆಂಗಳೂರು: ಡಾ.ಸರೋಜಿನಿ ಮಹಿಷಿ ವರದಿ ಜಾರಿಗೆ ಸರ್ಕಾರ ಬದ್ಧತೆ ತೋರಿಸಿದೆ. ಆದರೆ ವರದಿ ಜಾರಿಯಾದಾಗಿನಿಂದ ಬಹು ವರ್ಷಗಳ ಕಾಲ ಅಧಿಕಾರದಲ್ಲಿದ್ದ ಪಕ್ಷಗಳಲ್ಲಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವರದಿ ಜಾರಿಗೊಳಿಸದೆ ಕಡಲೇಕಾಯಿ ತಿನ್ನುತ್ತಿದ್ದರೆ ಎಂದು ಸಚಿವ ಸಿ.ಟಿ.ರವಿ ಖಾರವಾಗಿ ಪ್ರಶ್ನಿಸಿದ್ದಾರೆ.

ವಿಧಾನಸೌಧದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ ಸರೋಜಿನಿ ಮಹಿಷಿ ವರದಿ ಜಾರಿಗೊಳಿಸುವಲ್ಲಿ ಬದ್ಧತೆ ತೋರಿಸಿದೆ. ಶಿಕ್ಷಣ ಮಾಧ್ಯಮ ಕನ್ನಡವಾಗಿರಬೇಕು ಎಂಬುದು ಸರ್ಕಾರದ ಅಪೇಕ್ಷೆ. ಆದರೆ ಮುಖ್ಯಮಂತ್ರಿಗಳೇ ಹೇಳಿದಂತೆ ಸಮಾಜದ ಸಹಕಾರವಿಲ್ಲದೇ ಯಶಸ್ಸುಗೊಳಿಸಲು ಸಾಧ್ಯವಿಲ್ಲ. ಮಕ್ಕಳಿಗೆ ಶಿಕ್ಷಣ ಮಾಧ್ಯಮವು ಪೋಷಕರ ಆಯ್ಕೆ ಎಂದು ಸುಪ್ರೀಂ ಕೋರ್ಟ್‌ ಹೇಳಿದ್ದು, ಸರ್ಕಾರವನ್ನು ಅಸಹಾಯಕವನ್ನಾಗಿ ಮಾಡಿದೆ. ಶಿಕ್ಷಣದಲ್ಲಿ ಕನ್ನಡವನ್ನು ಕಡ್ಡಾಯಗೊಳಿಸದೆ ಆಡಳಿತದಲ್ಲಿ ಕನ್ನಡ ಉಳಿಸಲು ಹೇಗೆ ಸಾಧ್ಯ. ಹೀಗೇ ಮುಂದುವರಿದರೆ ಮುಂದಿನ 3-4 ತಲೆಮಾರಿನವರಿಗೆ ಕನ್ನಡದಲ್ಲಿ ಮಾತನಾಡಿದರೆ ಅರ್ಥವಾಗದ ಸ್ಥಿತಿ ಬರಬಹುದು. ಇದೊಂದು ಜಟಿಲ ಸಮಸ್ಯೆಯಾಗಿದೆ ಎಂದು ಹೇಳಿದರು.

ಖಾಸಗಿ ವಲಯದಲ್ಲಿ ವರದಿ ಜಾರಿ ಹೇಳುವಷ್ಟು ಸುಲಭವಾಗಿಲ್ಲ. ಹಂತ ಹಂತವಾಗಿ ಜಾರಿಗೊಳಿಸಬೇಕಾಗುತ್ತದೆ. ಉತ್ಪಾದನಾ ವಲಯದ ಮೇಲೆ ಪರಿಣಾಮ ಬೀರರಂತೆ ಮುಂದಡಿ ಇಡಬೇಕಾಗುತ್ತದೆ. ಖಾಸಗಿ ವಲಯಕ್ಕೆ ಕುಶಲ ನೌಕರರ ಅಗತ್ಯವಿದೆ. ಆದರೆ ಹೋಟೆಲ್‌ಗ‌ಳಿಗೆ ನೌಕರರು ಸಿಗದ ಸ್ಥಿತಿ ಇದೆ. ಹಾಗಾಗಿ ಖಾಸಗಿ ವಲಯದಲ್ಲಿ ಜಾರಿಯಿಂದ ಉಂಟಾಗುವ ಪರಿಣಾಮಗಳ ಅವಲೋಕನ ಅಗತ್ಯವಿದೆ. ಸೂಕ್ತ ಕೌಶಲ್ಯ ತರಬೇತಿ ಕೊಡಿಸಿ ಎಲ್ಲೆಡೆ ಲಭ್ಯವಾಗುವ ಸ್ಥಿತಿ ನಿರ್ಮಿಸಬೇಕು. ಇಲ್ಲದಿದ್ದರೆ ಕೈಗಾರಿಕೆ ಮುಚ್ಚಿಸುವುದಷ್ಟೇ ನಡೆಯಲಿದೆ ಎಂದು ತಿಳಿಸಿದರು.

ಸರೋಜಿನಿ ಮಹಿಷಿ ವರದಿ ಜಾರಿಗೆ ಆಗ್ರಹಿಸಿ ಕರ್ನಾಟಕ ಬಂದ್‌ಗೆ ಕರೆ ನೀಡಿರುವ ಹೋರಾಟಗಾರರಿಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಂಬಲ ಸೂಚಿಸಿರುವುದು ಹಾಸ್ಯಾಸ್ಪದ. ವರದಿ ಜಾರಿಯಾದ ದಿನದಿಂದ ಬಹು ವರ್ಷಗಳ ಕಾಲ ಅಧಿಕಾರದಲ್ಲಿ ಇದ್ದುದು ಸಿದ್ದರಾಮಯ್ಯ ಹಾಗೂ ಅವರಿದ್ದ ಜನತಾ ಪಕ್ಷ, ಕಾಂಗ್ರೆಸ್‌ ಪಕ್ಷ. ಆಗೆಲ್ಲಾ ಅವರು ಕಡಲೇಕಾಯಿ ತಿನ್ನುತ್ತಿದ್ದರೆ?ಅಧಿಕಾರ ಕಳೆದುಕೊಂಡ ಕೂಡಲೇ ವರದಿ ಜಾರಿಗೆ ಒತ್ತಾಯಿಸುವವರಿಗೆ ಬೆಂಬಲ ನೀಡುತ್ತಾರೆ. ಅಧಿಕಾರದಲ್ಲಿದ್ದಾಗ ಅವರೇನು ಮೈಮರೆತು ಮಲಗಿದ್ದರೆ ಎಂದು ಪ್ರಶ್ನಿಸಿದರು.

ವರದಿ ಮಂಡನೆಯಾದಾಗ ಅಧಿಕಾರದಲ್ಲಿದ್ದ ಪಕ್ಷಗಳಲ್ಲಿ ಸಿದ್ದರಾಮಯ್ಯ ಅವರಿದ್ದರು. ಉಪಮುಖ್ಯಮಂತ್ರಿ, ಮುಖ್ಯಮಂತ್ರಿಯಾಗಿ ಅಧಿಕಾರದಲ್ಲಿದ್ದಾಗೆಲ್ಲಾ ಅವರಿಗೆ ವರದಿ ಜಾರಿಗೊಳಿಸಬೇಕು ಎನ್ನಿಸಲಿಲ್ಲ. ಇದೀಗ ವರದಿ ಜಾರಿ ಹೋರಾಟಕ್ಕೆ ಬೆಂಬಲ ನೀಡಿರುವುದು ಹಾಸ್ಯಾಸ್ಪದ. ಹಾಗೆಯೇ ಅವರ ಮಾತನ್ನು ನಂಬುವುದು ಯಾವುದರ ಪರಮಾವಧಿ ಎಂದು ನಾನು ಬಾಯಿ ಬಿಟ್ಟು ಹೇಳಬೇಕಿಲ್ಲ. ಸಿದ್ದರಾಮಯ್ಯ ಅವರು ಅಧಿಕಾರದಲ್ಲಿದ್ದಾಗ ಸೋನಿಯಮ್ಮನ ಭೂತ ಇತ್ತೆ ಎಂದು ಕೇಳಿದರೆ ಅವರಿಗೆ ಕೋಪ ಬರುತ್ತದೆ ಎಂದು ವ್ಯಂಗ್ಯವಾಡಿದರು.

ಬಂದ್‌ಗೆ ಕರೆ ನೀಡಿರುವ ಚಳವಳಿಗಾರರನ್ನು ನಾನು, ಉಪಮುಖ್ಯಮಂತ್ರಿಗಳಾದ ಗೋವಿಂದ ಕಾರಜೋಳ, ಡಾ.ಸಿ.ಎನ್‌.ಅಶ್ವತ್ಥ ನಾರಾಯಣ, ಸಚಿವರಾದ ಎಸ್‌.ಸುರೇಶ್‌ ಕುಮಾರ್‌ ಅವರು ಭೇಟಿಯಾಗಿ ಮಾತುಕತೆ ನಡೆಸಿದ್ದೇವೆ. ಮುಖ್ಯಮಂತ್ರಿಗಳು ಕೂಡ ಕರೆಸಿ ಮಾತನಾಡಿದ್ದಾರೆ.

ನಾವು ಎಲ್ಲ ರೀತಿಯ ಪ್ರಯತ್ನ ಮಾಡಿದ್ದೇವೆ. ಕನ್ನಡದ ಬಗ್ಗೆ ನಮ್ಮದು ಸೋಗಲಾಡಿತನದ ಬದ್ಧತೆಯಲ್ಲ. ಸಹಜ ಬದ್ಧತೆ. ಬಂದ್‌ ಕರೆ ಹಿಂಪಡೆಯುವಂತೆ ಸಾಕಷ್ಟು ಬಾರಿ ಮನವಿ ಮಾಡಲಾಗಿದೆ ಎಂದು ಹೇಳಿದರು.
ಪುನರ್‌ ಪರಿಶೀಲನೆ ಅರ್ಜಿ ಬಗ್ಗೆ ಪರಿಶೀಲನೆ ಶಿಕ್ಷಣ ಮಾಧ್ಯಮ ಸಂಬಂಧ ಸುಪ್ರೀಂ ಕೋರ್ಟ್‌ ತೀರ್ಪಿಗೆ ಸಂಬಂಧಪಟ್ಟಂತೆ ಪುನರ್‌ ಪರಿಶೀಲನೆಗೆ ಅರ್ಜಿ ಸಲ್ಲಿಸಲು ಅವಕಾಶದ ಸಾಧ್ಯಾಸಾಧ್ಯತೆ ಬಗ್ಗೆ ಪ್ರತಿಪಕ್ಷಗಳ ನಾಯಕರು, ಸಾಹಿತಿಗಳು, ಚಿಂತಕರನ್ನು ಕರೆಸಿ ಚರ್ಚಿಸಲು ನಿರ್ಧರಿಸಲಾಗಿದೆ. ಒಂದೊಮ್ಮೆ ಪುನರ್‌ ಪರಿಶೀಲನೆ ಅರ್ಜಿ ಸಲ್ಲಿಕೆಗೆ ಅವಕಾಶವಿಲ್ಲದಿದ್ದರೆ ಸಂವಿಧಾನದ ತಿದ್ದುಪಡಿಗೆ ಒತ್ತಾಯಿಸಲು ನಾನಾ ರಾಜ್ಯಗಳ ಸಹಕಾರ ಕೋರಲು ಚಿಂತಿಸಲಾಗಿದೆ. ಮಾತೃಭಾಷೆ ಶಿಕ್ಷಣ ಮಾಧ್ಯಮವಾಗದಿದ್ದರೆ ಕನ್ನಡ ಮಾತ್ರವಲ್ಲದೇ ಎಲ್ಲ ಪ್ರಾದೇಶಿಕ ಭಾಷೆಗಳು 3- 4 ದಶಕಗಳ ಬಳಿಕ ಕೇವಲ ಆಡುಭಾಷೆ, ಬೆರಕರೆ ಮಾತಾಗಿ ಉಳಿಯಲಿವೆ. ಇಂಗ್ಲಿಷ್‌ ಭಾಷೆ ಕನ್ನಡಕ್ಕಷ್ಟೇ ಅಪಾಯವಲ್ಲ. ತಮಿಳು, ತೆಲುಗು, ಮಲಯಾಳ ನಂತರ ನಿಧಾನವಾಗಿ ಹಿಂದಿಯನ್ನೂ ಕೊಲ್ಲುತ್ತದೆ ಎಂದು ಆತಂಕ ವ್ಯಕ್ತಪಡಿಸಿದರು.

ಟಾಪ್ ನ್ಯೂಸ್

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.