ದ್ವೀಪದ ಊರಿಗೆ ಶಾಪವಾದ ನದಿ ಸಂಪರ್ಕ!

ಪುಲ್ಲಾಜೆ ಮಂದಿಗೆ ಹಗ್ಗವೇ ಜೀವಸೇತು

Team Udayavani, Jun 7, 2020, 5:30 AM IST

ದ್ವೀಪದ ಊರಿಗೆ ಶಾಪವಾದ ನದಿ ಸಂಪರ್ಕ!

ಸಾಂದರ್ಭಿಕ ಚಿತ್ರ

ವಿಶೇಷ ವರದಿ-ಬೆಳ್ತಂಗಡಿ: ನಾಗರಿಕತೆ ಎಷ್ಟೇ ಮುಂದುವರಿದಿದ್ದರೂ ಸೌಲಭ್ಯಗಳು ಮಾತ್ರ ಪಟ್ಟಣ ವ್ಯಾಪ್ತಿಗಷ್ಟೇ ಸೀಮಿತ ಎಂಬುದಕ್ಕೆ ಬೆಳ್ತಂಗಡಿ ತಾಲೂಕಿನ ಹಲವು ಗ್ರಾಮಗಳೇ ಸಾಕ್ಷಿ.

ತಾಲೂಕಿನ ನೆರಿಯ ಗ್ರಾಮದ ಪುಲ್ಲಾಜೆ ಪ್ರದೇಶದ ಸುಮಾರು 65 ಕುಟುಂಬಗಳು ಪ್ರತಿ ಮಳೆಗಾಲಕ್ಕೂ ಅಗತ್ಯ ಆವಶ್ಯಕತೆ ಪೂರೈಸಲು ನರಕ ಯಾತನೆ ಅನುಭವಿಸುತ್ತಿವೆ. ಶಾಸಕ ಹರೀಶ್‌ ಪೂಂಜ 1 ಕೋ.ರೂ. ಅನುದಾನ ಮೀಸಲಿರಿಸಿದ್ದು, ಈ ವರ್ಷ ಸೇತುವೆ ನಿರ್ಮಾಣದ ಭರವಸೆ ನೀಡಿದ್ದರು. ಇನ್ನೇನು ಕಾಮಗಾರಿ ಆರಂಭಿಸುವಷ್ಟರಲ್ಲಿ ಕೋವಿಡ್-19 ಲಾಕ್‌ಡೌನ್‌ ಅಡಕಾಯಿಸಿತ್ತು. ಈ ವರ್ಷ ವಾದರೂ ಸೇತುವೆ ನಿರ್ಮಾಣದ ತವಕದಲ್ಲಿದ್ದ ಮಂದಿಗೆ ನಿರಾಸೆ ಮೂಡಿಸಿದೆ. ಆದ್ದರಿಂದ ಈ ಬಾರಿಯೂ ಸಂಚಾರ ದುಸ್ತರವಾಗಲಿದೆ.

ಹಗ್ಗದಲ್ಲಿ ಜೀವ; ತಪ್ಪದ ವನವಾಸ
ಬೆಳ್ತಂಗಡಿಯಿಂದ 35 ಕಿ.ಮೀ. ದೂರವಿರುವ ನೆರಿಯ ಗ್ರಾಮದ ಅಣಿಯೂರಿನಿಂದ ಸುಮಾರು 8 ಕಿ.ಮೀ.ದೂರದಲ್ಲಿ ಪುಲ್ಲಾಜೆ ಪ್ರದೇಶ ವಿದೆ. ಮಾರ್ಗ ಮಧ್ಯೆ ನೆರಿಯ ಹೊಳೆ ಹರಿದು ಹೋಗುತ್ತಿದೆ. ಅಣಿಯೂರಿನಿಂದ ಪುಲ್ಲಾಜೆಯನ್ನು ಸಂಪರ್ಕಿಸಲು ಏಕ ಮಾತ್ರ ದಾರಿಯಾಗಿದ್ದು, ಆದರೆ ಹೊಳೆಗೆ ಸೇತುವೆ ಇಲ್ಲದೆ ಪ್ರತಿ ಮಳೆಗಾಲದಲ್ಲಿ ನದಿ ದಾಟಲು ಹಗ್ಗದ ಆಸರೆಯನ್ನೇ ಪಡೆಯುತ್ತಿದ್ದಾರೆ ಇಲ್ಲಿನ ಮಂದಿ.

ಏಳು ದಶಕಗಳ ಕನಸು
ವಿದ್ಯಾರ್ಥಿಗಳು, ಗರ್ಭಿಣಿಯರು, ವೃದ್ಧರು, ಕೂಲಿ ಕೆಲಸಗಾರರು ಹಗ್ಗದ ಆಸರೆ ಯಿಂದ ನದಿ ದಾಟಬೇಕು ಆಯ ತಪ್ಪಿದಲ್ಲಿ ಜೀವ ನದಿಪಾಲಾಗುವ ಭಯದಲ್ಲೇ ಪ್ರತಿ ವರ್ಷ ಹರಸಾಹಸದಿಂದ ದಾಟುತ್ತಿದ್ದಾರೆ. ಮಳೆಗಾಲದಲ್ಲಿ ದ್ವೀಪ ವಾಸಿಗಳಂತಾಗುವ ಇವರ ಸಂಕಷ್ಟ ಪರಿ ಹರಿಸಲು ಎಲ್ಲ ರಾಜಕೀಯ ಪಕ್ಷಗಳೂ ಮತಬ್ಯಾಂಕ್‌ ರಾಜಕೀಯ ನಡೆ ಸುತ್ತಾ ಬಂದಿವೆ ಹೊರತು ಭರವಸೆ ಈಡೇರಿಸಿಲ್ಲ. ಪರಿಣಾಮ ಏಳು ದಶಕಗಳ ಕನಸು ನನಸಾಗಿಲ್ಲ.

6 ತಿಂಗಳುಗಳ ಸಾಮಗ್ರಿ !
ಪುಲ್ಲಾಜೆಯ 65 ಕುಟುಂಬಗಳಲ್ಲಿ ಸುಮಾರು ಒಂದು ಸಾವಿರ ಮಂದಿ ವಾಸಿಸುತ್ತಿದ್ದಾರೆ. ಪ್ರತಿವರ್ಷ ಮಳೆಗಾಲ ಆರಂಭದಲ್ಲಿ 6 ತಿಂಗಳುಗಳ ಆಹಾರ ಸಾಮಗ್ರಿ ಸಹಿತ ಇತರ ಅಗತ್ಯ ವಸ್ತುಗಳನ್ನು ಸಂಗ್ರಹಿಸಬೇಕಾಗುತ್ತದೆ.ನದಿ ನೀರು ಹೆಚ್ಚಾದಲ್ಲಿ ಮಕ್ಕಳಿಗೆ ಶಾಲೆ ಇಲ್ಲ,ಮನೆ ಮಂದಿಗೆ ವನವಾಸವೇ ಎಲ್ಲ.ಮೊಬೈಲ್‌ ನೆಟ್‌ವಕ್‌ ಇಲ್ಲದ ಈ ಊರಲ್ಲಿ ಪ.ಜಾ., ಪ.ಪಂ, ಮಲೆಕುಡಿಯ, ಗೌಡ ಸಹಿತ ಇತರ ಸಮುದಾಯಗಳ ಮಂದಿ ವಾಸಿಸುತ್ತಿದ್ದಾರೆ.

ಮಳೆಗಾಲ ಮುಗಿದ
ತತ್‌ಕ್ಷಣ ಕಾಮಗಾರಿ
ಪುಲ್ಲಾಜೆಗೆ 1 ಕೋ.ರೂ. ವೆಚ್ಚದಲ್ಲಿ ಸೇತುವೆ ನಿರ್ಮಾಣಕ್ಕೆ ಅನುದಾನ ಮೀಸಲಿರಿಸಲಾಗಿದೆ. ಮೇ 26ರಂದು ಅಧಿಕಾರಿಗಳೊಂದಿಗೆ ಭೇಟಿ ನೀಡಿ ಸ್ಥಳ ಪರಿಶೀಲಿಸಿದ್ದೇನೆ. ತಾಂತ್ರಿಕ ತೊಂದರೆಗಳಿಂದ ಅಡಚಣೆಯಾಗಿದೆ. ಪ್ರತಿ ಕುಟುಂಬದ ಹಿತದೃಷ್ಟಿಯಿಂದ ಮಳೆಗಾಲ ಮುಗಿದ ತತ್‌ಕ್ಷಣ ಕಾಮಗಾರಿ ಕೈಗೆತ್ತಿಕೊಳ್ಳಲಾಗುವುದು.
 - ಹರೀಶ್‌ ಪೂಂಜ, ಶಾಸಕರು

ಟಾಪ್ ನ್ಯೂಸ್

SS Rajamouli:‌ ಬರಲಿದೆಯಾ ʼRRRʼ ಸೀಕ್ವೆಲ್?: ಜಪಾನ್‌ನಲ್ಲಿ ಸುಳಿವು ಕೊಟ್ಟ ರಾಜಮೌಳಿ

SS Rajamouli:‌ ಬರಲಿದೆಯಾ ʼRRRʼ ಸೀಕ್ವೆಲ್?: ಜಪಾನ್‌ನಲ್ಲಿ ಸುಳಿವು ಕೊಟ್ಟ ರಾಜಮೌಳಿ

Yadgiri: ಜೆಡಿಎಸ್ ಪಕ್ಷಕ್ಕೆ ಅಂಗಲಾಚುವ ಸ್ಥಿತಿ ಬಂದಿಲ್ಲ… ಶಾಸಕ‌ ಕಂದಕೂರು

Yadgiri: ಜೆಡಿಎಸ್ ಪಕ್ಷಕ್ಕೆ ಅಂಗಲಾಚುವ ಸ್ಥಿತಿ ಬಂದಿಲ್ಲ… ಶಾಸಕ‌ ಕಂದಕೂರು

OTT: ಸದ್ದಿಲ್ಲದೆ ಓಟಿಟಿಗೆ ಬಂತು ʼಒಂದು ಸರಳ ಪ್ರೇಮಕಥೆ’: ಯಾವುದರಲ್ಲಿ ಸ್ಟ್ರೀಮಿಂಗ್?‌

OTT: ಸದ್ದಿಲ್ಲದೆ ಓಟಿಟಿಗೆ ಬಂತು ʼಒಂದು ಸರಳ ಪ್ರೇಮಕಥೆ’: ಯಾವುದರಲ್ಲಿ ಸ್ಟ್ರೀಮಿಂಗ್?‌

Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್‌ ಎಫ್‌ ಕೆನಡಿ ಹಿಟ್ಲರ್‌ ನನ್ನು ಬಂಧಿಸಿದ್ದು!

Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್‌ ಎಫ್‌ ಕೆನಡಿ ಹಿಟ್ಲರ್‌ ನನ್ನು ಬಂಧಿಸಿದ್ದು!

17

ನಿರ್ಮಾಪಕನಾದ ರಾಜಮೌಳಿ ಪುತ್ರ: ಎರಡು ಹೊಸ ಸಿನಿಮಾ ಅನೌನ್ಸ್; ಲೀಡ್‌ ರೋಲ್ ನಲ್ಲಿ ಫಾಫಾ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

Apex

CAA: ದೇಶದಲ್ಲಿ ಸಿಎಎ ಜಾರಿಗೆ ತಡೆ ನೀಡಲ್ಲ, 3 ವಾರದೊಳಗೆ ಉತ್ತರ ನೀಡಿ: ಸುಪ್ರೀಂಕೋರ್ಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-mng

ಚೆಂಡೆ ಬಡಿಯುತ್ತ ಬಂದು ತಂಡದಿಂದ ಪ್ರಶ್ನೆ: ಚಕಮಕಿ, ದೂರು ದಾಖಲು

ಕೂಜಿಮಲೆಗೆ ಭೇಟಿ ನೀಡಿದ್ದು 4 ನಕ್ಸಲರು: ಸಶಸ್ತ್ರಧಾರಿ ತಲಾ ಇಬ್ಬರು ಮಹಿಳೆಯರು,ಪುರುಷರ ಸಂಚಾರ

ಕೂಜಿಮಲೆಗೆ ಭೇಟಿ ನೀಡಿದ್ದು 4 ನಕ್ಸಲರು: ಸಶಸ್ತ್ರಧಾರಿ ತಲಾ ಇಬ್ಬರು ಮಹಿಳೆಯರು,ಪುರುಷರ ಸಂಚಾರ

Arecanut Market  ಅಡಿಕೆ ಧಾರಣೆ ಏರಿಕೆ :170ಕ್ಕೆ ತಲುಪಿದ ಕೊಕ್ಕೊ

Arecanut Market ಅಡಿಕೆ ಧಾರಣೆ ಏರಿಕೆ :170ಕ್ಕೆ ತಲುಪಿದ ಕೊಕ್ಕೊ

Belthangady ಅಪಘಾತ ಪ್ರಕರಣ: ಚಾಲಕನಿಗೆ ಶಿಕ್ಷೆ

Belthangady ಅಪಘಾತ ಪ್ರಕರಣ: ಚಾಲಕನಿಗೆ ಶಿಕ್ಷೆ

Bus ಕಿಟಕಿಯಿಂದ ಇಳಿಯಲು ಯತ್ನಿಸಿದ್ದ‌ ವ್ಯಕ್ತಿ ರಸ್ತೆಗೆ ಬಿದ್ದು ಸಾವು

Bus ಕಿಟಕಿಯಿಂದ ಇಳಿಯಲು ಯತ್ನಿಸಿದ್ದ‌ ವ್ಯಕ್ತಿ ರಸ್ತೆಗೆ ಬಿದ್ದು ಸಾವು

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

SS Rajamouli:‌ ಬರಲಿದೆಯಾ ʼRRRʼ ಸೀಕ್ವೆಲ್?: ಜಪಾನ್‌ನಲ್ಲಿ ಸುಳಿವು ಕೊಟ್ಟ ರಾಜಮೌಳಿ

SS Rajamouli:‌ ಬರಲಿದೆಯಾ ʼRRRʼ ಸೀಕ್ವೆಲ್?: ಜಪಾನ್‌ನಲ್ಲಿ ಸುಳಿವು ಕೊಟ್ಟ ರಾಜಮೌಳಿ

Yadgiri: ಜೆಡಿಎಸ್ ಪಕ್ಷಕ್ಕೆ ಅಂಗಲಾಚುವ ಸ್ಥಿತಿ ಬಂದಿಲ್ಲ… ಶಾಸಕ‌ ಕಂದಕೂರು

Yadgiri: ಜೆಡಿಎಸ್ ಪಕ್ಷಕ್ಕೆ ಅಂಗಲಾಚುವ ಸ್ಥಿತಿ ಬಂದಿಲ್ಲ… ಶಾಸಕ‌ ಕಂದಕೂರು

ಇಂಡಿಯನ್ ಆಯಿಲ್ ಕಂಪನಿಗೆ ನಿರ್ದೇಶಕರಾಗಿ (ಎಚ್‌ಆರ್) ರಶ್ಮಿ ಗೋವಿಲ್ ಅಧಿಕಾರ ಸ್ವೀಕಾರ

ಇಂಡಿಯನ್ ಆಯಿಲ್ ಕಂಪನಿಗೆ ನಿರ್ದೇಶಕರಾಗಿ (ಎಚ್‌ಆರ್) ರಶ್ಮಿ ಗೋವಿಲ್ ಅಧಿಕಾರ ಸ್ವೀಕಾರ

OTT: ಸದ್ದಿಲ್ಲದೆ ಓಟಿಟಿಗೆ ಬಂತು ʼಒಂದು ಸರಳ ಪ್ರೇಮಕಥೆ’: ಯಾವುದರಲ್ಲಿ ಸ್ಟ್ರೀಮಿಂಗ್?‌

OTT: ಸದ್ದಿಲ್ಲದೆ ಓಟಿಟಿಗೆ ಬಂತು ʼಒಂದು ಸರಳ ಪ್ರೇಮಕಥೆ’: ಯಾವುದರಲ್ಲಿ ಸ್ಟ್ರೀಮಿಂಗ್?‌

Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್‌ ಎಫ್‌ ಕೆನಡಿ ಹಿಟ್ಲರ್‌ ನನ್ನು ಬಂಧಿಸಿದ್ದು!

Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್‌ ಎಫ್‌ ಕೆನಡಿ ಹಿಟ್ಲರ್‌ ನನ್ನು ಬಂಧಿಸಿದ್ದು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.