ದ್ವೀಪದ ಊರಿಗೆ ಶಾಪವಾದ ನದಿ ಸಂಪರ್ಕ!

ಪುಲ್ಲಾಜೆ ಮಂದಿಗೆ ಹಗ್ಗವೇ ಜೀವಸೇತು

Team Udayavani, Jun 7, 2020, 5:30 AM IST

ದ್ವೀಪದ ಊರಿಗೆ ಶಾಪವಾದ ನದಿ ಸಂಪರ್ಕ!

ಸಾಂದರ್ಭಿಕ ಚಿತ್ರ

ವಿಶೇಷ ವರದಿ-ಬೆಳ್ತಂಗಡಿ: ನಾಗರಿಕತೆ ಎಷ್ಟೇ ಮುಂದುವರಿದಿದ್ದರೂ ಸೌಲಭ್ಯಗಳು ಮಾತ್ರ ಪಟ್ಟಣ ವ್ಯಾಪ್ತಿಗಷ್ಟೇ ಸೀಮಿತ ಎಂಬುದಕ್ಕೆ ಬೆಳ್ತಂಗಡಿ ತಾಲೂಕಿನ ಹಲವು ಗ್ರಾಮಗಳೇ ಸಾಕ್ಷಿ.

ತಾಲೂಕಿನ ನೆರಿಯ ಗ್ರಾಮದ ಪುಲ್ಲಾಜೆ ಪ್ರದೇಶದ ಸುಮಾರು 65 ಕುಟುಂಬಗಳು ಪ್ರತಿ ಮಳೆಗಾಲಕ್ಕೂ ಅಗತ್ಯ ಆವಶ್ಯಕತೆ ಪೂರೈಸಲು ನರಕ ಯಾತನೆ ಅನುಭವಿಸುತ್ತಿವೆ. ಶಾಸಕ ಹರೀಶ್‌ ಪೂಂಜ 1 ಕೋ.ರೂ. ಅನುದಾನ ಮೀಸಲಿರಿಸಿದ್ದು, ಈ ವರ್ಷ ಸೇತುವೆ ನಿರ್ಮಾಣದ ಭರವಸೆ ನೀಡಿದ್ದರು. ಇನ್ನೇನು ಕಾಮಗಾರಿ ಆರಂಭಿಸುವಷ್ಟರಲ್ಲಿ ಕೋವಿಡ್-19 ಲಾಕ್‌ಡೌನ್‌ ಅಡಕಾಯಿಸಿತ್ತು. ಈ ವರ್ಷ ವಾದರೂ ಸೇತುವೆ ನಿರ್ಮಾಣದ ತವಕದಲ್ಲಿದ್ದ ಮಂದಿಗೆ ನಿರಾಸೆ ಮೂಡಿಸಿದೆ. ಆದ್ದರಿಂದ ಈ ಬಾರಿಯೂ ಸಂಚಾರ ದುಸ್ತರವಾಗಲಿದೆ.

ಹಗ್ಗದಲ್ಲಿ ಜೀವ; ತಪ್ಪದ ವನವಾಸ
ಬೆಳ್ತಂಗಡಿಯಿಂದ 35 ಕಿ.ಮೀ. ದೂರವಿರುವ ನೆರಿಯ ಗ್ರಾಮದ ಅಣಿಯೂರಿನಿಂದ ಸುಮಾರು 8 ಕಿ.ಮೀ.ದೂರದಲ್ಲಿ ಪುಲ್ಲಾಜೆ ಪ್ರದೇಶ ವಿದೆ. ಮಾರ್ಗ ಮಧ್ಯೆ ನೆರಿಯ ಹೊಳೆ ಹರಿದು ಹೋಗುತ್ತಿದೆ. ಅಣಿಯೂರಿನಿಂದ ಪುಲ್ಲಾಜೆಯನ್ನು ಸಂಪರ್ಕಿಸಲು ಏಕ ಮಾತ್ರ ದಾರಿಯಾಗಿದ್ದು, ಆದರೆ ಹೊಳೆಗೆ ಸೇತುವೆ ಇಲ್ಲದೆ ಪ್ರತಿ ಮಳೆಗಾಲದಲ್ಲಿ ನದಿ ದಾಟಲು ಹಗ್ಗದ ಆಸರೆಯನ್ನೇ ಪಡೆಯುತ್ತಿದ್ದಾರೆ ಇಲ್ಲಿನ ಮಂದಿ.

ಏಳು ದಶಕಗಳ ಕನಸು
ವಿದ್ಯಾರ್ಥಿಗಳು, ಗರ್ಭಿಣಿಯರು, ವೃದ್ಧರು, ಕೂಲಿ ಕೆಲಸಗಾರರು ಹಗ್ಗದ ಆಸರೆ ಯಿಂದ ನದಿ ದಾಟಬೇಕು ಆಯ ತಪ್ಪಿದಲ್ಲಿ ಜೀವ ನದಿಪಾಲಾಗುವ ಭಯದಲ್ಲೇ ಪ್ರತಿ ವರ್ಷ ಹರಸಾಹಸದಿಂದ ದಾಟುತ್ತಿದ್ದಾರೆ. ಮಳೆಗಾಲದಲ್ಲಿ ದ್ವೀಪ ವಾಸಿಗಳಂತಾಗುವ ಇವರ ಸಂಕಷ್ಟ ಪರಿ ಹರಿಸಲು ಎಲ್ಲ ರಾಜಕೀಯ ಪಕ್ಷಗಳೂ ಮತಬ್ಯಾಂಕ್‌ ರಾಜಕೀಯ ನಡೆ ಸುತ್ತಾ ಬಂದಿವೆ ಹೊರತು ಭರವಸೆ ಈಡೇರಿಸಿಲ್ಲ. ಪರಿಣಾಮ ಏಳು ದಶಕಗಳ ಕನಸು ನನಸಾಗಿಲ್ಲ.

6 ತಿಂಗಳುಗಳ ಸಾಮಗ್ರಿ !
ಪುಲ್ಲಾಜೆಯ 65 ಕುಟುಂಬಗಳಲ್ಲಿ ಸುಮಾರು ಒಂದು ಸಾವಿರ ಮಂದಿ ವಾಸಿಸುತ್ತಿದ್ದಾರೆ. ಪ್ರತಿವರ್ಷ ಮಳೆಗಾಲ ಆರಂಭದಲ್ಲಿ 6 ತಿಂಗಳುಗಳ ಆಹಾರ ಸಾಮಗ್ರಿ ಸಹಿತ ಇತರ ಅಗತ್ಯ ವಸ್ತುಗಳನ್ನು ಸಂಗ್ರಹಿಸಬೇಕಾಗುತ್ತದೆ.ನದಿ ನೀರು ಹೆಚ್ಚಾದಲ್ಲಿ ಮಕ್ಕಳಿಗೆ ಶಾಲೆ ಇಲ್ಲ,ಮನೆ ಮಂದಿಗೆ ವನವಾಸವೇ ಎಲ್ಲ.ಮೊಬೈಲ್‌ ನೆಟ್‌ವಕ್‌ ಇಲ್ಲದ ಈ ಊರಲ್ಲಿ ಪ.ಜಾ., ಪ.ಪಂ, ಮಲೆಕುಡಿಯ, ಗೌಡ ಸಹಿತ ಇತರ ಸಮುದಾಯಗಳ ಮಂದಿ ವಾಸಿಸುತ್ತಿದ್ದಾರೆ.

ಮಳೆಗಾಲ ಮುಗಿದ
ತತ್‌ಕ್ಷಣ ಕಾಮಗಾರಿ
ಪುಲ್ಲಾಜೆಗೆ 1 ಕೋ.ರೂ. ವೆಚ್ಚದಲ್ಲಿ ಸೇತುವೆ ನಿರ್ಮಾಣಕ್ಕೆ ಅನುದಾನ ಮೀಸಲಿರಿಸಲಾಗಿದೆ. ಮೇ 26ರಂದು ಅಧಿಕಾರಿಗಳೊಂದಿಗೆ ಭೇಟಿ ನೀಡಿ ಸ್ಥಳ ಪರಿಶೀಲಿಸಿದ್ದೇನೆ. ತಾಂತ್ರಿಕ ತೊಂದರೆಗಳಿಂದ ಅಡಚಣೆಯಾಗಿದೆ. ಪ್ರತಿ ಕುಟುಂಬದ ಹಿತದೃಷ್ಟಿಯಿಂದ ಮಳೆಗಾಲ ಮುಗಿದ ತತ್‌ಕ್ಷಣ ಕಾಮಗಾರಿ ಕೈಗೆತ್ತಿಕೊಳ್ಳಲಾಗುವುದು.
 - ಹರೀಶ್‌ ಪೂಂಜ, ಶಾಸಕರು

ಟಾಪ್ ನ್ಯೂಸ್

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.