ಶಿಕ್ಷಕರು, ಎಸ್‌ಡಿಎಂಸಿಗೂ ತಿಳಿಸದೇ ಶಾಲೆಯಲ್ಲಿ 10 ಬೃಹತ್‌ ಮರಗಳ ಹನನ


Team Udayavani, Jan 24, 2021, 12:49 PM IST

ಶಿಕ್ಷಕರು, ಎಸ್‌ಡಿಎಂಸಿಗೂ ತಿಳಿಸದೇ ಶಾಲೆಯಲ್ಲಿ 10 ಬೃಹತ್‌ ಮರಗಳ ಹನನ

ಎಚ್‌.ಡಿ.ಕೋಟೆ: ತಾಲೂಕಿನ ಎನ್‌.ಎನ್‌.ಹಳ್ಳಿ ಗಿರಿಜನ ಕಾಲೋನಿ ಸರ್ಕಾರ ಶಾಲೆ ಆವರಣದಲ್ಲಿ ಬೆಳೆದಿದ್ದ ಲಕ್ಷಾಂತರ ರೂ. ಮೌಲ್ಯದ ಬೃಹದಾಕಾರದ 10 ಮರಗಳನ್ನು ಕಡಿದಿರುವುದು ವಿವಾದಕ್ಕೆ ಗುರಿಯಾಗಿದೆ. ಶಾಲಾ ಶಿಕ್ಷಕರು, ಎಸ್‌ಡಿಎಂಸಿ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಗಮನಕ್ಕೂ ತಾರದೇ ಮರಗಳನ್ನು ಕಡಿಯಲಾಗಿದೆ. ಏಕಾಏಕಿ ಮರಗಳನ್ನು ಕಡಿದಿರುವುದರ ಹಿಂದೆ ಅಕ್ರಮಗಳು ನಡೆದಿವೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಶಾಲಾ ಆವರಣದಲ್ಲಿ ಹಲವು ವರ್ಷಗಳಿಂದ ಹಾಡಿಯ ಆದಿವಾಸಿಗರು ಸಿಲ್ವರ್‌, ನೀಲಗಿರಿ, ನೇರಳ ಇನ್ನಿತರ ಮರಗಳನ್ನು ಮಕ್ಕಳಂತೆ ಪೋಷಿಸಿ ಬೆಳೆಸಿದ್ದರು. ಅವುಗಳಲ್ಲಿ ಸುಮಾರು 20
ಮರಗಳು ಬಹು ಎತ್ತರಕ್ಕೆ ಬೆಳೆದಿದ್ದವು. ಗಾಳಿ-ಮಳೆಗೆ ಆಕಸ್ಮಿಕವಾಗಿ ಮರಗಳು ಮುರಿದು ಬಿದ್ದರೆ ಶಾಲೆ ಕಟ್ಟಡ ಹಾಗೂ ಮಕ್ಕಳಿಗೂ ಅಪಾಯ ಆಗುವ ಸಾಧ್ಯತೆ ಇತ್ತು.

ಹೀಗಾಗಿ ಶಾಲೆ ಮುಖ್ಯಶಿಕ್ಷಕಿ ಶಾಲಾಭಿವೃದ್ಧಿ ಸಮಿತಿ ಸಭೆಯ ತೀರ್ಮಾನದಂತೆ ಮರ ಕಡಿಸಿ ಬಂದ ಹಣದಿಂದ ಶಾಲಾಭಿವೃದ್ಧಿಗೆ ಬಳಸಿಕೊಳ್ಳಲು ನಿರ್ಧರಿಸಿದ್ದರು. ಅದರಂತೆ ಅರಣ್ಯ ಇಲಾಖೆಗೆ ಕಳೆದ ಒಂದು ವರ್ಷದಿಂದಲೂ 6-7 ಪತ್ರಗಳನ್ನು ಬರೆದು
ಮರ ಕಡಿಯಲು ಅನುಮತಿ ಕೇಳಿದ್ದರು. ಇಷ್ಟೆಲ್ಲಾ ಪತ್ರ ವ್ಯವಹಾರ ನಡೆಸಿದ್ದರೂ ಅರಣ್ಯ ಇಲಾಖೆಯಿಂದ ಯಾವುದೇ ಅಧಿಕೃತ ಆದೇಶ ಬಂದಿರಲಿಲ್ಲ.

ಈ ನಡುವೆ, ಇದೀಗ ಶಾಲಾ ಶಿಕ್ಷಕರು, ಎಸ್‌ಡಿಎಂಸಿ ಸದಸ್ಯರು ಹಾಗೂ ಕ್ಷೇತ್ರ ಶಿಕ್ಷಣಾಧಿಗಳ ಗಮನಕ್ಕೆ ತಾರದೇ 10 ಮರಗಳನ್ನು ನೆಲಕ್ಕುರುಳಿಸಲಾಗಿದೆ. ಶಾಲೆ ಹಾಗೂ ಗ್ರಾಮಸ್ಥರಿಗೆ ಮಾಹಿತಿ ನೀಡದೆಯೇ ಮರಗಳನ್ನು ಕಡಿದಿರುವುದು ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ.

ನಡೆದಿದ್ದೇನು?: ಕಳೆದ 4-5 ದಿನಗಳ ಹಿಂದೆ ಮನು ಎಂಬುವವರೊಬ್ಬರು “ಶಾಲೆಯಲ್ಲಿನ ಮರಗಳ ಹರಾಜು ನನಗೆ ಸಿಕ್ಕಿದೆ. ಹೀಗಾಗಿ ಮರ ಕಡಿಯಲು ಬಂದಿರುವುದಾಗಿ’ ಶಾಲೆಗೆ ಆಗಮಿಸಿದ್ದಾರೆ. ಇದಕ್ಕೆ ವಿರೋಧ ವ್ಯಕ್ತಪಡಿಸಿದ ಶಿಕ್ಷಕರು ಹಾಗೂ ಗ್ರಾಮಸ್ಥರು, “ನಮಗೆ ಅರಣ್ಯ ಇಲಾಖೆಯಿಂದ ಯಾವುದೇ ಅಧಿಕೃತ ಆದೇಶ ಬಂದಿಲ್ಲ. ಅರಣ್ಯ ಇಲಾಖೆ ಅಥವಾ ಬಿಇಒ ಆದೇಶ ಬೇಕು’ ಎಂದು ಹೇಳಿ ಆತನನ್ನು ತಡೆದಿದ್ದಾರೆ.  ಮರಗಳನ್ನು ಕಡಿಯಲು ಅವಕಾಶ ಮಾಡಿಕೊಟ್ಟಿಲ್ಲ. ಇಷ್ಟೆಲ್ಲ ವಿರೋಧಗಳ ನಡುವೆಯೂ ಶನಿವಾರ ಬೆಳಗ್ಗೆ ಶಾಲಾ ಆವರಣದಲ್ಲಿ ಬೆಳೆದಿದ್ದ 20 ಮರಗಳ ಪೈಕಿ 10 ಮರಗಳನ್ನು ಕಡಿಯಲಾಗಿದೆ. ಈ ಸಂದರ್ಭದಲ್ಲಿ ಮನು ಮತ್ತು ಹಾಡಿಯ ಮಂದಿ, ಶಾಲಾ ಶಿಕ್ಷಕಿ ನಡುವೆ ಮಾತಿನ ಚಕಮಕಿ ನಡೆದಿದೆ. ಇದೇ ವೇಳೆ ಅರಣ್ಯ ಇಲಾಖೆ ಹಿರಿಯ ಅಧಿಕಾರಿಗಳು ಮತ್ತು ತಹಶೀಲ್ದಾರ್‌ ಸೇರಿದಂತೆ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ವಿಷಯ ಮಟ್ಟಿಸಿದ್ದಾರೆ. ಹೀಗಾಗಿ ಮರ ಕಡಿಯುವುದಕ್ಕೆ ತಾತ್ಕಾಲಿಕವಾಗಿ ತಡೆ ಹಿಡಿಯಲಾಯಿತು.

ಅಷ್ಟರಲ್ಲಾಗಲೇ 10 ಮರಗಳು ನೆಲಕ್ಕುರುಳಿಸಲಾಗಿತ್ತು. ಬೃಹದಾಕಾರದ 20 ಮರಗಳನ್ನು ಕೇವಲ 21 ಸಾವಿರ ರೂ.ಗೆ ಹರಾಜು ನೀಡಿರುವುದು ಸರಿಯಲ್ಲ. ಗ್ರಾಮದಲ್ಲಿ ಹರಾಜು ನಡೆದೇ ಇಲ್ಲ. ಬೆಳೆಸಿದ ಮರಗಳನ್ನೇ ಕಡಿದ ಮೇಲೆ ನಮಗೆ ಈ ಶಾಲೆನೂ ಬೇಡ. ನಮ್ಮ ಮಕ್ಕಳನ್ನು ಶಾಲೆಗೂ ಕಳುಹಿಸುವುದಿಲ್ಲ ಎಂದು ಗಿರಿಜನ ಮಹಿಳೆ ಸುಶೀಲಾ ಸೇರಿದಂತೆ ನಿವಾಸಿಗಳು ಕಿಡಿಕಾರಿದ್ದಾರೆ.

ಅರಣ್ಯ ಇಲಾಖೆ ಅಧಿಕಾರಿ ಪ್ರತಿಕ್ರಿಯೆ
ಎಚ್‌.ಡಿ.ಕೋಟೆ ತಾಲೂಕಿನ ಎನ್‌.ಎನ್‌.ಹಳ್ಳಿ ಗಿರಿಜನ ಕಾಲೋನಿಯ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಬೆಳೆದಿದ್ದ ಮರಗಳನ್ನು ಕತ್ತರಿಸಲು ನಿಯಮ ಪಾಲಿಸಲಾಗಿದೆ. ಮರಗಳನ್ನು ಕತ್ತರಿಸಲು ಒಂದು ವರ್ಷದ ಹಿಂದೆಯೇ ಬಂದ
ಅರ್ಜಿಯನ್ನಾಧರಿಸಿ ಹರಾಜು ಪಕ್ರಿಯೆ ನಡೆಸಲಾಗಿದೆ. ಈಗ ಕಡಿಯುತ್ತಿರುವ ಮರಗಳ ಬಳಿಯ ಲ್ಲಿಯೇ ಹರಾಜು ಪ್ರಕ್ರಿಯೆ ನಡೆಸಲಾಗಿದೆ ಎಂದು ಅರಣ್ಯ ಇಲಾಖೆ ಅಧಿಕಾರಿ ಪ್ರಶಾಂತ್‌ ತಿಳಿಸಿದ್ದಾರೆ.

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.