ಡಿಕೆಶಿ ಇಂದು ಬಿಡುಗಡೆಯಾಗುವ ವಿಶ್ವಾಸವಿದೆ: ಹೆಚ್.ಡಿ.ದೇವೇಗೌಡ
ಬಿಜೆಪಿ ವಿರೋಧಿಸುವವರ ವಿರುದ್ದ ಕೇಂದ್ರದ ಸೇಡಿನ ರಾಜಕಾರಣ
Team Udayavani, Sep 25, 2019, 11:03 AM IST
ನವದೆಹಲಿ: ಬಿಜೆಪಿ ವಿರೋಧಿಸುವವರ ವಿರುದ್ದ ನಿರಂತರ ಸೇಡಿನ ರಾಜಕಾರಣ ಮಾಡಲಾಗುತ್ತಿದೆ.ಇದು ಖಂಡಿತಾ ಒಳ್ಳೆಯ ಬೆಳವಣಿಗೆಯಲ್ಲ ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಕಿಡಿಕಾರಿದ್ದಾರೆ.
ದೆಹಲಿಯಲ್ಲಿ ತಮ್ಮನ್ನು ಭೇಟಿ ಮಾಡಲು ಬಂದ ಸಂಸದ ಡಿ.ಕೆ.ಸುರೇಶ್ ಜೊತೆ ಕೆಲ ಹೊತ್ತು ಸಮಾಲೋಚನೆ ನಡೆಸಿ ನಂತರ ಸುದ್ದಿಗಾರರೊಂದಿಗೆ ಮಾತನಾಡುತ್ತಾ , ದೇವರ ದಯೆಯಿಂದ ಡಿ.ಕೆ.ಶಿವಕುಮಾರ್ ಇವತ್ತು ಬಿಡುಗಡೆಯಾಗುವ ವಿಶ್ವಾಸವಿದೆ. ಕೇಂದ್ರ ಸರ್ಕಾರದ ದ್ವೇಷದ ರಾಜಕಾರಣ ಹೊಸದೇನಲ್ಲ. ಕಳೆದ ಐದು ವರ್ಷದಿಂದ ಬಿಜೆಪಿ ಸರ್ಕಾರ ಹೇಗೆ ನಡೆದುಕೊಳ್ಳುತ್ತಿದೆ ಎಂಬುದನ್ನು ನಾನು ಹೇಳುವ ಅಗತ್ಯವಿಲ್ಲ. ಅಧಿಕಾರ ಯಾರಿಗೂ ಶಾಶ್ವತವಲ್ಲ ಎಂಬುದನ್ನು ಅಧಿಕಾರದಲ್ಲಿರುವವರು ಮರೆಯಬಾರದು ,ತಿಹಾರ್ ಜೈಲಿನಲ್ಲಿರುವ ಶಿವಕುಮಾರ್ ಭೇಟಿಯಾಗಲು ಕಾಲಾವಕಾಶ ದೊರೆಯಲಿಲ್ಲ ಎಂದು ತಿಳಿಸಿದರು.
ಸಂಸದ ಡಿ.ಕೆ. ಸುರೇಶ್ ಮಾತನಾಡಿ, ಎಚ್.ಡಿ.ದೇವೇಗೌಡರು ಹಾಗೂ ರೇವಣ್ಣ ಅವರು ಶಿವಕುಮಾರ್ ಭೇಟಿಯಾಗಲು ಬಂದಿದ್ದರು. ಕಾಲಾವಕಾಶ ಕೊರತೆಯಿಂದ ಭೇಟಿ ಸಾಧ್ಯವಾಗಲಿಲ್ಲ. ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಕೂಡ ಪೋನ್ ಮಾಡಿ ನನ್ನ ಜತೆ ಮಾತನಾಡಿದ್ದಾರೆ. ಇಂದು ಜಾಮೀನು ಅರ್ಜಿ ತೀರ್ಪು ಇದೆ. ಡಿ.ಕೆ ಶಿವಕುಮಾರ್ ಬಿಡುಗಡೆ ಯಾಗುವ ವಿಶ್ವಾಸವಿದೆ ಎಂದು ತಿಳಿಸಿದರು.
ಈ ವೇಳೆ ಮಾಜಿ ಸಚಿವ ಎಚ್.ಡಿ.ರೇವಣ್ಣ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್ಆ್ಯಪ್ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ
Sathish Ninasam- Rachita Ram: ಮ್ಯಾಟ್ನಿಯಲ್ಲಿ ಹಾರರ್ ಶೋ
ಕೋರ್ಟ್ ಮೇಲೆ ಪಟ್ಟಭದ್ರರ ಒತ್ತಡ: ವಕೀಲರ ಪತ್ರ
Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ
ನಟ, ಕಾಂಗ್ರೆಸ್ ಮಾಜಿ ಸಂಸದ ಗೋವಿಂದ “ಶಿಂಧೆ ಸೇನೆ’ ಸೇರ್ಪಡೆ