ದಕ್ಷಿಣ ಕನ್ನಡ ಜಿಲ್ಲೆ: ಹೊಸ ಪ್ರಕರಣವಿಲ್ಲ :ಗುಣಮುಖರಾಗಿ 13 ಮಂದಿ ಬಿಡುಗಡೆ
Team Udayavani, Jun 2, 2020, 8:22 PM IST
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಂಗಳವಾರ ಕೋವಿಡ್ ಪಾಸಿಟಿವ್ ಪ್ರಕರಣ ವರದಿಯಾಗಿಲ್ಲ. ಕೋವಿಡ್ ನಿಂದ ಗುಣಮುಖರಾಗಿ 13 ಮಂದಿ ಆಸ್ಪತ್ರೆಯಿಂದ ಬಿಡುಗಡೆ ಗೊಂಡಿದ್ದಾರೆ. ಈ ವರೆಗೆ ಒಟ್ಟು 69 ಮಂದಿ ಆಸ್ಪತ್ರೆಯಿಂದ ತೆರಳಿದ್ದಾರೆ.
40 ವರ್ಷ ಪ್ರಾಯದ ಮಹಿಳೆ, 40 ವರ್ಷ ಪ್ರಾಯದ ಪುರುಷ, 35 ವರ್ಷ ಪ್ರಾಯದ ಮಹಿಳೆ, 42 ವರ್ಷ ಪ್ರಾಯದ ಪುರುಷ, 18 ವರ್ಷ ಪ್ರಾಯದ ಯುವತಿ, 25 ವರ್ಷ ಪ್ರಾಯದ ಯುವತಿ, 35 ವರ್ಷ ಪ್ರಾಯದ ಪುರುಷ, 60 ವರ್ಷ ಪ್ರಾಯದ ಪುರುಷ, 26 ವರ್ಷ ಪ್ರಾಯದ ಯುವತಿ, 22 ವರ್ಷ ಪ್ರಾಯದ ಯುವಕ, 39 ವರ್ಷ ಪ್ರಾಯದ ಪುರುಷ, 45 ವರ್ಷ ಪ್ರಾಯದ ಮಹಿಳೆ ಹಾಗೂ 63 ವರ್ಷ ಪ್ರಾಯದ ಮಹಿಳೆ ಬಿಡುಗಡೆಗೊಂಡವರು. ಈ ಪೈಕಿ 40 ವರ್ಷ ಪ್ರಾಯದ ಮಹಿಳೆ ಕೋವಿಡ್ ನೊಂದಿಗೆ ಮೂತ್ರಕೋಶದ ತೊಂದರೆ, ಮಧುಮೇಹದಿಂದ ಬಳಲುತ್ತಿದ್ದರು. ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗಿತ್ತು. ಜೂ. 1ರಂದು ಅವರ ಗಂಟಲ ದ್ರವ ಮಾದರಿಯನ್ನು ಪರೀಕ್ಷೆ ನಡೆಸಲಾಗಿದ್ದು, ಕೋವಿಡ್ ನೆಗೆಟಿವ್ ಬಂದಿದೆ. ಈ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಸಿಂಧೂ. ಬಿ. ರೂಪೇಶ್ ತಿಳಿಸಿದ್ದಾರೆ.
113 ವರದಿ ನೆಗೆಟಿವ್
ಜಿಲ್ಲೆಯಲ್ಲಿ ಮಂಗಳವಾರ ಸ್ವೀಕರಿಸಲಾದ 113 ಮಂದಿಯ ಗಂಟಲ ದ್ರವ ಮಾದರಿ ನೆಗೆಟಿವ್ ಆಗಿದೆ. 50 ಮಾದರಿಯನ್ನು ಹೊಸದಾಗಿ ಪರೀಕ್ಷೆಗೆ ಕಳುಹಿಸಲಾಗಿದ್ದು, ಒಟ್ಟು 80 ಮಂದಿಯ ಪರೀಕ್ಷಾ ವರದಿ ಬರಲು ಬಾಕಿ ಇದೆ. ಇಬ್ಬರು ತೀವ್ರ ಉಸಿರಾಟದ ಸಮಸ್ಯೆಗಾಗಿ ವಿವಿಧ ಆಸ್ಪತ್ರೆಗಳಲ್ಲಿ ದಾಖಲಾಗಿದ್ದಾರೆ. 64 ಮಂದಿಯನ್ನು ಹೊಸದಾಗಿ ತಪಾಸಣೆಗೊಳಪಡಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ