ಅಣೆಕಟ್ಟಿಗೆ ಹಾನಿ; 350 ಎಕ್ರೆಗೆ ಉಪ್ಪು ನೀರು

ಕೆಮ್ಮಣ್ಣು ಪಡುತೋನ್ಸೆ ಗ್ರಾಮದ ಕಂಡಾಳ, ಕಂಬಳಬರಿ ಪರಿಸರ

Team Udayavani, Jun 3, 2020, 5:14 AM IST

ಅಣೆಕಟ್ಟಿಗೆ ಹಾನಿ; 350 ಎಕ್ರೆಗೆ ಉಪ್ಪು ನೀರು

ಮಲ್ಪೆ: ಕೆಮ್ಮಣ್ಣು ತೋನ್ಸೆ ಗ್ರಾ. ಪಂ. ವ್ಯಾಪ್ತಿಯ ಕಂಡಾಳ, ಕಂಬಳಕಂಡ, ಕಂಬಳಬರಿ, ಪಡುಮನೆ ಬೈಲು, ಗುಳಿಬೆಟ್ಟು ದೇವಸ್ಥಾನಬೈಲು ಪರಿಸರದ ಸುಮಾರು 350 ಎಕ್ರೆ ಗದ್ದೆಗೆ ಉಪ್ಪು ನೀರು ನುಗ್ಗಿದೆ.

ಈ ಭಾಗದ ಹಲವು ಬಾವಿಗಳ ನೀರಿಗೂ ಉಪ್ಪಿನ ಅಂಶ ಸೇರಿದ್ದು, ಉಪ್ಪು ನೀರು ತಡೆಗೆ ಸೂಕ್ತ ಕ್ರಮ ಕೈಗೊಳ್ಳದ ಕಾರಣ ಸಮಸ್ಯೆ ಎದುರಾಗಿದೆ. ಗ್ರಾ.ಪಂ.ಗೆ ಹಲವು ಬಾರಿ ದೂರು ನೀಡಿದರೂ ಪರಿ ಹಾರ ಸಿಕ್ಕಿಲ್ಲ ಎನ್ನುತ್ತಾರೆ ಸ್ಥಳೀಯರು.

ಕಿಂಡಿಯಲ್ಲಿ ನುಗ್ಗುತ್ತಿದೆ ನೀರು
ಸುವರ್ಣಾ ನದಿಗೆ ಹೊಂದಿಕೊಂಡು ಕೆಪ್ಪತೋಡು ಇದ್ದು, ನೀರಿನ ಪ್ರವಾಹ ಅಧಿಕವಾಗಿದ್ದಾಗ ಗದ್ದೆಗೆ ಹರಿಯುತ್ತಿದೆ. ಪರಿಣಾಮ ಪರಿಸರದ ಗದ್ದೆ ಉಪ್ಪು ನೀರಿನ ಅಂಶವನ್ನು ಹೀರಿದೆ. ಈ ಭಾಗದ ಕಿಂಡಿ ಅಣೆಕಟ್ಟಿಗೆ ಅಳವಡಿಸಲಾದ ಹಲಗೆಗಳು ಮುರಿದು ಬೀಳುವ ಹಂತದಲ್ಲಿವೆ. ಹಲಗೆಗಳನ್ನು ಸರಿಯಾಗಿ ಅಳವಡಿಸದ ಪರಿಣಾಮ ಉಪ್ಪು ನೀರು ಒಳಗೆ ಹರಿದು ಬರುತ್ತಿದೆ. ನೂರಾರು ಎಕರೆ ಕೃಷಿ ಭೂಮಿಗೆ ಉಪ್ಪು ನೀರು ನುಗ್ಗಿದ್ದರಿಂದ ಬೇಸಾಯ ಮಾಡಲು ಸಾಧ್ಯವಿಲ್ಲದಂತಾಗಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ಬಾವಿ ನೀರೂ ಉಪ್ಪು
ಈ ಪ್ರದೇಶದ ಸುಮಾರು 300ರಷ್ಟು ಮನೆಗಳ ಬಾವಿ ನೀರು ಉಪ್ಪಾಗಿದ್ದು, ಕುಡಿಯುವ ನೀರಿನ ಸಮಸ್ಯೆ ಕಾಡಿದೆ. ಗ್ರಾ. ಪಂ. ನೀರನ್ನು ಆಶ್ರಯಿಸದೆ ಬಾವಿಯ ನೀರನ್ನೇ ಉಪಯೋಗಿಸುತ್ತಿದ್ದ ಸಾರ್ವಜನಿಕರು ಕುಡಿಯುವ ನೀರಿಗಾಗಿ ದೂರದ ಬಾವಿಯನ್ನು ಆಶ್ರಯಿಸಬೇಕಾದ ಪರಿಸ್ಥಿತಿ ಎದುರಾಗಿದೆ. ಈ ಬಗ್ಗೆ ದೂರು ನೀಡಿದರೂ ಪ್ರಯೋಜನವಾಗಿಲ್ಲ ಎಂದು ಸ್ಥಳೀಯರಾದ ನಾಗರಾಜ್‌ ಶೆಟ್ಟಿ ಕಂಡಾಳ, ಮೋಹನ್‌ ಸುವರ್ಣ, ರಿತೇಶ್‌ ಶೆಟ್ಟಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಪ್ರಸ್ತಾವನೆ ಸಲ್ಲಿಕೆ
ಅಣೆಕಟ್ಟು ಸಂಪೂರ್ಣ ಹಾನಿ ಯಾಗಿದ್ದರಿಂದ ಹೊಸದಾಗಿ ನಿರ್ಮಾಣ ಮಾಡಬೇಕಾಗಿದೆ. ಗ್ರಾ.ಪಂ.ಗೆ ಬರುವ ಅನು ದಾನದಲ್ಲಿ ಈ ಕಾಮಗಾರಿ ನಡೆಸಲು ಸಾಧ್ಯವಿಲ್ಲ. ಹಾಗಾಗಿ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಿ ದೇªವೆ. ಶಾಸಕ ಕೆ.ರಘುಪತಿ ಭಟ್‌ ಗ್ರಾಮಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಅವರಲ್ಲೂ ಮನವಿ ಮಾಡಿದ್ದೇವೆ. ಶೀಘ್ರ ಅನುದಾನ ಒದಗಿಸುವ ಭರವಸೆ ನೀಡಿದ್ದಾರೆ.
-ಫೌಸಿಯಾ ಸಾದಿಕ್‌,
ಅಧ್ಯಕ್ಷರು, ಕೆಮ್ಮಣ್ಣು ತೋನ್ಸೆ ಗ್ರಾ.ಪಂ.

ಪ್ರತಿಭಟನೆಯೇ ದಾರಿ
ಸುಮಾರು 5-6 ವರ್ಷಗಳ ಹಿಂದೆ ಈ ಪ್ರದೇಶದಲ್ಲಿ ವರ್ಷದಲ್ಲಿ ಒಟ್ಟು ಮೂರು ಭತ್ತದ ಬೆಳೆಗಳನ್ನು ಮತ್ತು ತರಕಾರಿ ಬೆಳೆಸಲಾಗುತ್ತಿತ್ತು. ಆದರೆ ಇತೀ¤ಚಿನ ಕೆಲವು ವರ್ಷಗಳಲ್ಲಿ ಉಪ್ಪು ನೀರು ನುಗ್ಗುವುದರಿಂದ ಕೃಷಿಗೆ ಆಯೋಗ್ಯವಾಗಿದೆ. ಇದರಿಂದ ಭತ್ತದ ಗದ್ದೆ ಬೇಸಾಯ ಮಾಡುವ ರೈತರ ಪ್ರಮಾಣವೂ ಕಡಿಮೆಯಾಗಿದೆ. ಸಂಬಂಧಪಟ್ಟ ಆಡಳಿತಕ್ಕೆ ಅನೇಕ ಬಾರಿ ಮನವಿ ಮಾಡಿದರೂ ಸಮಸ್ಯೆ ಬಗೆಹರಿದಿಲ್ಲ. ಉಪ್ಪು ನೀರಿನ ತಡೆಗೆ ಸೂಕ್ತ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ಪ್ರತಿಭಟನೆಯೇ ಮುಂದಿನ ಹೆಜ್ಜೆ.
-ದಾಮೋದರ ಸುವರ್ಣ, ಕಂಬಳಬರಿ

ಟಾಪ್ ನ್ಯೂಸ್

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

16-adu-jeevitham

Movie Review: ಆಡು ಜೀವಿದಂ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.