Dandeli : ದ್ವಿ ಚಕ್ರ ವಾಹನ ಸ್ಕಿಡ್ ಆಗಿ ಓರ್ವ ಗಂಭೀರ
Team Udayavani, Jun 6, 2023, 12:28 PM IST
ದಾಂಡೇಲಿ: ಹತ್ತಿರ ದ್ವಿಚಕ್ರ ವಾಹನವೊಂದು ಸ್ಕಿಡ್ ಆಗಿ ಓರ್ವ ಗಂಭೀರ ಗಾಯಗೊಂಡ ಘಟನೆ ನಗರದ ಸೋಮಾನಿ ವೃತ್ತದ ಬಳಿ ಜೂ.5ರ ಸೋಮವಾರ ತಡರಾತ್ರಿ ನಡೆದಿದೆ.
ಗಾಂಧಿನಗರದ ನಿವಾಸಿ 37 ವರ್ಷದ ನೌಷದ್ ಮಹಮ್ಮದ್ ಆಶಮ್ ಸವಣೂರು ಗಾಯಗೊಂಡ ವ್ಯಕ್ತಿ.
ಬಾಂಬೂ ಗೇಟ್ ನಿಂದ ಬರುತ್ತಿದ್ದ ದ್ವಿಚಕ್ರ ವಾಹನ ಸೋಮಾನಿ ವೃತ್ತದ ಬಳಿ ಸ್ಕಿಡ್ ಆಗಿ ಬಿದ್ದ ಪರಿಣಾಮ ದ್ವಿಚಕ್ರ ವಾಹನದಲ್ಲಿದ್ದ ನೌಷದ್ ಎಂಬಾತನ ಕಾಲಿನ ಗಂಟಿಗೆ ಮತ್ತು ಕಾಲಿಗೆ ತೀವ್ರ ಸ್ವರೂಪದ ಗಾಯವಾಗಿದೆ. ತಕ್ಷಣ ಸ್ಥಳೀಯರು ಆತನನ್ನು ಆಂಬುಲೆನ್ಸ್ ಮೂಲಕ ಸಾರ್ವಜನಿಕ ಆಸ್ಪತ್ರೆಗೆ ಕಳುಹಿಸಿ ಕೊಟ್ಟಿದ್ದಾರೆ.
ಸಾರ್ವಜನಿಕ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆಯನ್ನು ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಧಾರವಾಡದ ಆಸ್ಪತ್ರೆಗೆ ಕಳುಹಿಸಿಕೊಟ್ಟಿದ್ದಾರೆ.
ಸ್ಥಳೀಯರ ಮಾಹಿತಿ ಪ್ರಕಾರ ಸೋಮಾನಿ ವೃತ್ತದಲ್ಲಿ ಬ್ಯಾನರ್ ಒಂದನ್ನು ಹಾಕಲಾಗಿದ್ದು, ಆ ಬ್ಯಾನರ್ನ ಕೆಳತುದಿಯ ಎರಡು ಕಡೆಗಳಲ್ಲಿ ಇಟ್ಟಂಗಿ ತುಂಡುಗಳನ್ನು ಕಟ್ಟಿ ಹಾಕಿರುವುದರಿಂದ ದ್ವಿಚಕ್ರ ವಾಹನ ಬರುತ್ತಿರುವ ಸಂದರ್ಭದಲ್ಲಿ ವಾಹನ ಸವಾರನಿಗೆ ಇಟ್ಟಂಗಿ ಕಾಣದೇ ಇದ್ದುದ್ದರಿಂದ ಬೈಕ್ ಸ್ಕಿಡ್ ಆಗಿದೆ.
ಈ ಸಂದರ್ಭದಲ್ಲಿ ಸೋಮಾನಿ ವೃತ್ತದ ಸುತ್ತಲು ಆಳವಡಿಸಲಾದ ರಾಡ್ ಕಾಲಿನ ಗಂಟಿಗೆ ಬಲವಾಗಿ ಬಿದ್ದಿದ್ದರಿಂದ ಗಂಭೀರ ಗಾಯವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಗಾಯಗೊಂಡ ವ್ಯಕ್ತಿ ದ್ವಿ ಚಕ್ರ ವಾಹನವನ್ನು ಚಲಾಯಿಸುತ್ತಿದ್ದಾನೆಯೇ ಅಥವಾ ಹಿಂಬದಿ ಸವಾರನಾಗಿದ್ದನೇ ಎನ್ನುವುದು ಇನ್ನಷ್ಟೇ ತಿಳಿದು ಬರಬೇಕಾಗಿದೆ. ಘಟನೆಯ ಬಗ್ಗೆ ಹೆಚ್ಚಿನ ಮಾಹಿತಿ ಪೊಲೀಸ್ ತನಿಖೆಯಿಂದ ತಿಳಿದು ಬರಬೇಕಾಗಿದೆ.
ದಾಂಡೇಲಿ ನಗರ ಠಾಣೆಯ ಪೊಲೀಸರು ಭೇಟಿ ನೀಡಿ ಮುಂದಿನ ಕ್ರಮ ಕೈಗೊಂಡಿದ್ದಾರೆ. ಸಾರ್ವಜನಿಕ ಆಸ್ಪತ್ರೆಯ ವೈದ್ಯರು ಮತ್ತು ಸಿಬ್ಬಂದಿಗಳ ಸ್ಪಂದನೆಗೆ ಮತ್ತು ಮಾನವೀಯ ಕಾರ್ಯಕ್ಕೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ.
ಸೋಮಾನಿ ವೃತ್ತದಲ್ಲಿ ಯಾವುದೇ ರೀತಿಯ ಬ್ಯಾನರ್, ನಾಮಫಲಕವನ್ನು ಅತೀ ಕೆಳಗೆ ಕಟ್ಟದಂತೆ ನಗರ ಸಭೆಯವರು ಅಗತ್ಯ ಕ್ರಮವನ್ನು ಕೈಗೊಳ್ಳಬೇಕು. ಇಲ್ಲವಾದಲ್ಲಿ ಇಂತಹ ಘಟನೆಗಳು ಹೆಚ್ಚಾಗಿ ನಡೆಯುವ ಸಾಧ್ಯತೆಯನ್ನು ಅಲ್ಲಗಳೆಯುವಂತಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ
ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ
Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್
Bhatkal Theft: ನಗರ, ಗ್ರಾಮೀಣ ಪ್ರದೇಶದ ಹಲವೆಡೆ ಮುಂಜಾನೆ ಸರಣಿ ಕಳ್ಳತನ
Road Mishap: ಹೈಕಾಡಿಯಲ್ಲಿ ಕಾರು ಅಪಘಾತ: ನಾಲ್ವರಿಗೆ ಗಾಯ
MUST WATCH
ಹೊಸ ಸೇರ್ಪಡೆ
Lok Sabha Election 2024: ಝಾರ್ಖಂಡ್, ಛತ್ತೀಸ್ಗಢದಲ್ಲಿ ಗೆಲುವು ಯಾರಿಗೆ?
ಗ್ಯಾಂಗ್ ಸ್ಟರ್ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್ ಮನೆಯಿಂದ ಕ್ಯಾಬ್ ಬುಕ್: ಯುವಕ ಅರೆಸ್ಟ್
Hubli; ಆಡಳಿತ ಪಕ್ಷದಿಂದಲೇ ತನಿಖೆ ದಾರಿ ತಪ್ಪಿಸುವ ಕೆಲಸ: ನೇಹಾ ತಂದೆ ನಿರಂಜನಯ್ಯ ಆರೋಪ
O2 movie review; ಸುಂದರ ಬೀದಿಯ ತಣ್ಣನೆಯ ಗಾಳಿಯಂತೆ…
Neha Case: ನೇಹಾ ಅಮಾನುಷ ಹತ್ಯೆಗೆ ಜೆ.ಪಿ.ಹೆಗ್ಡೆ ಖಂಡನೆ