Dandeli:ಬೀದಿ ನಾಯಿಗಳ ದಾಳಿಯಿಂದ ಜಿಂಕೆಯನ್ನು ರಕ್ಷಿಸಿ ಅರಣ್ಯ ಇಲಾಖೆಗೆ ಒಪ್ಪಿಸಿದ ಸ್ಥಳೀಯರು
Team Udayavani, Jun 10, 2023, 3:18 PM IST
ದಾಂಡೇಲಿ: ಬೀದಿ ನಾಯಿಗಳ ದಾಳಿಗೊಳಗಾದ ಜಿಂಕೆಯನ್ನು ರಕ್ಷಿಸಿ ಅರಣ್ಯ ಇಲಾಖೆಗೆ ಒಪ್ಪಿಸಿದ ಮಾನವೀಯ ಘಟನೆ ಜೂ.10 ರ ಶನಿವಾರ ನಗರದ ಹಳೆದಾಂಡೇಲಿಯಲ್ಲಿ ನಡೆದಿದೆ.
ನಗರದ ಹಳೆದಾಂಡೇಲಿಯಲ್ಲಿ ಆಹಾರವನ್ನರಸಿ ಬಂದಿದ್ದ ಜಿಂಕೆಯೊಂದನ್ನು ಬೀದಿ ನಾಯಿಗಳು ಬೆನ್ನಟ್ಟಿ ದಾಳಿ ಮಾಡುತ್ತಿರುವುದನ್ನು ಗಮನಿಸಿದ ಸ್ಥಳೀಯರು ಮತ್ತು ಅಲ್ಲೆ ಇದ್ದ ಕಮ್ಯೂನಿಟಿ ಸಭಾಭವನದ ಸಿಬ್ಬಂದಿಗಳು ಸೇರಿ ಬೀದಿ ನಾಯಿಗಳನ್ನು ಓಡಿಸಿ, ಜಿಂಕೆಯನ್ನು ರಕ್ಷಿಸಿದ್ದಾರೆ.
ಜಿಂಕೆಯನ್ನು ಬೀದಿನಾಯಿಗಳು ಬೆನ್ನಟ್ಟಿ ದಾಳಿ ಮಾಡಿ ಕಚ್ಚಿ ಗಾಯಗೊಳಿಸಿದ್ದವು. ಈ ಸಮಯದಲ್ಲಿ ಸ್ಥಳೀಯರು ಮತ್ತು ಸೈಯದ್ ಸಭಾಭವನದ ಸಿಬ್ಬಂದಿಗಳು ಸೇರಿ ನಾಯಿಗಳನ್ನು ಓಡಿಸಿ, ಜಿಂಕೆಯನ್ನು ರಕ್ಷಿಸಿ, ಸೈಯದ್ ಸಭಾಭವನದಲ್ಲಿ ಇರಿಸಿ, ಉಪಚರಿಸಿ, ಗಾಯಗೊಂಡ ಕಡೆ ಅರಶಿನ ಹಚ್ಚಿ ಬಳಿಕ ಅರಣ್ಯ ಇಲಾಖೆಗೆ ಮಾಹಿತಿ ನೀಡಿದರು.
ಸ್ಥಳಕ್ಕಾಗಮಿಸಿದ ಉಪ ವಲಯಾರಣ್ಯಾಧಿಕಾರಿ ಸಂದೀಪ್ ನಾಯ್ಕ ನೇತೃತ್ವದ ತಂಡ ಜಿಂಕೆಯನ್ನು ವಶಕ್ಕೆ ಪಡೆದು, ಪಶುವೈದ್ಯ ಆಸ್ಪತ್ರೆಗೆ ಕೊಂಡೊಯ್ದು ಚಿಕಿತ್ಸೆ ನೀಡಿ, ಮರಳಿ ಕಾಡಿಗೆ ಬಿಟ್ಟು ಬಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?