ಲಾಕ್ಡೌನ್ ಉಲ್ಲಂಘಿಸಿದ್ರೆ ಕಠಿಣ ಕ್ರಮ
ಕಾನೂನಿನ ಮುಂದೆ ಎಲ್ಲರೂ ಸಮಾನರು ಎಂಬ ಅರಿವಿರಲಿ | ಮನೆಯಿಂದ ಹೊರಬರಲು ಕಾರಣ ಹುಡುಕದಿರಿ
Team Udayavani, Apr 8, 2020, 10:56 AM IST
ದಾವಣಗೆರೆ: ಕೊರೊನಾ ವೈರಸ್ ತಡೆಗಟ್ಟುವ ನಿಟ್ಟಿನಲ್ಲಿ ಜಾರಿಯಲ್ಲಿರುವ ಲಾಕ್ಡೌನ್ ಉಲ್ಲಂಘಿಸುವರ ವಿರುದ್ಧ ಅತ್ಯಂತ ಕಠಿಣ, ನಿರ್ದಾಕ್ಷಿಣ್ಯ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಜಿ. ಬೀಳಗಿ ಮತ್ತೂಮ್ಮೆ ಎಚ್ಚರಿಸಿದ್ದಾರೆ.
ಶಬ್ಬ್ ಎ ಬರಾತ್ ಮತ್ತು ಗುಡ್ ಫ್ತೈಡೆ ಹಿನ್ನೆಲೆಯಲ್ಲಿ ಮಂಗಳವಾರ ಜಿಲ್ಲಾ ಪೊಲೀಸ್ ಇಲಾಖೆ ಸಭಾಂಗಣದಲ್ಲಿ ಏರ್ಪಡಿಸಿದ್ದ ನಾಗರಿಕ ಸೌಹಾರ್ದ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಇನ್ನು ಮುಂದೆ ಲಾಕ್ಡೌನ್ ಉಲ್ಲಂಘಿಸುವರು ಯಾರಿಗೇ ಆಗಲಿ ಏನು ಕ್ರಮ ತೆಗೆದುಕೊಳ್ಳಬೇಕು ಆ ಕ್ರಮ ತೆಗೆದುಕೊಳ್ಳಲಾಗುವುದು ಮತ್ತು ಎಲ್ಲಿಗೆ ಕಳಿಸಬೇಕೋ ಅಲ್ಲಿಗೇ ಕಳಿಸಲಾಗುವುದು ಎಂದು ಮಾರ್ಮಿಕವಾಗಿ ಎಚ್ಚರಿಸಿದರು. ಸ್ವತಃ ಮುಖ್ಯಮಂತ್ರಿಯವರೇ ಲಾಕ್ ಡೌನ್ ಉಲ್ಲಂಘಿಸುವರ ವಿರುದ್ಧ ಎಲ್ಲಾ ರೀತಿಯ ಕ್ರಮಕ್ಕೆ ಪೊಲೀಸ್ ಇಲಾಖೆಗೆ ಮುಕ್ತ ಅವಕಾಶ ನೀಡಿದ್ದಾರೆ. ಹಾಗಾಗಿ ಯಾರೂ ಸಹ ಉಲ್ಲಂಘನೆ ಮಾಡಬಾರದು. ಈವರೆಗೆ ಮನವಿ ಮಾಡಿದ್ದು, ಆರತಿ ಮಾಡಿ ತಿಳಿವಳಿಕೆ ಹೇಳಿದ್ದು ಆಯಿತು. ಆದರೂ, ಕೆಲವರು ಏನು ಮಾಡುತ್ತಾರೋ ನೋಡೋಣ ಎಂದು ಗುಂಪು ಗುಂಪಾಗಿ ಸೇರುವುದು, ಓಡಾಡುವುದು ಮಾಡುತ್ತಿದ್ದಾರೆ. ಇನ್ನು ಮುಂದೆ ಅಂತಹ ಧೋರಣೆ ನಡೆಯುವುದೇ ಇಲ್ಲ. ಅತಿ ಕಠಿಣ ಮತ್ತು ನಿರ್ದಾಕ್ಷಿಣ್ಯ ಕ್ರಮ ತೆಗೆದುಕೊಳ್ಳಲಾಗುವುದು. ಯಾರೇ ಆಗಲಿ ಎಲ್ಲರೂ ಕಾನೂನು ಮುಂದೆ ಸಮಾನರು ಎಂಬುದನ್ನ
ನೆನೆಪಿನಲ್ಲಿಟ್ಟುಕೊಳ್ಳಬೇಕು ಎಂದು ತಿಳಿಸಿದರು.
ಕೊರೊನಾ ವೈರಸ್ ಹಿನ್ನೆಲೆಯಲ್ಲಿ ಪರಿಸ್ಥಿತಿ ಗಂಭೀರವಾಗಿದೆ. ಇಂತಹ ಸಂದರ್ಭದಲ್ಲಿ ಲಾಭ ಮಾಡುವ ಅಗತ್ಯ ಯಾರಿಗೂ ಇಲ್ಲ. ಎಲ್ಲರೂ ಮನೆಯಲ್ಲಿ ಇರುವುದೇ ಸಮಾಜಕ್ಕೆ ನೀಡುವಂತಹ ದೊಡ್ಡ ಸೇವೆ. ಮನೆಯಲ್ಲಿ ಹೊರ ಬರುವುದಕ್ಕೆ ಇಲ್ಲಸಲ್ಲದ ಕಾರಣ ಹುಡುಕಬೇಡಿ. ಮನೆಯಲ್ಲಿ ಇರುವುದಕ್ಕೆ ಕಾರಣ ಹುಡುಕಿ. ಕೊರೊನಾದಂತಹ ಸಂದರ್ಭದಲ್ಲಿ ಜಾತಿ, ಧರ್ಮ, ವರ್ಗ ಎಲ್ಲವನ್ನೂ ಬದಿಗೊತ್ತಿ, ಮನುಷ್ಯರಾಗಿ ಕೆಲಸ ಮಾಡೋಣ. ಸಂಕುಚಿತ ಭಾವನೆ ದೂರ ಮಾಡೋಣ. ಸರ್ಕಾರ ಸವಲತ್ತು ತಲುಪಿಸಲು ಮತ್ತು ಲಾಕ್ಡೌನ್ ಯಶಸ್ವಿಯಾಗಿ ಪಾಲನೆಯಾಗಲು ಎಲ್ಲರೂ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.
ಜಿಲ್ಲಾ ರಕ್ಷಣಾಧಿಕಾರಿ ಹನುಮಂತರಾಯ ಮಾತನಾಡಿ, ಕೊರೊನಾ ವೈರಸ್ ಹರಡದಂತೆ ಮತ್ತು ಎಲ್ಲರೂ ಆರೋಗ್ಯವಾಗಿ ಇರಬೇಕು ಎನ್ನುವ ಉದ್ದೇಶದಿಂದ ಲಾಕ್ಡೌನ್ ಜಾರಿಯಲ್ಲಿದೆ. ಎಲ್ಲರೂ ಮನೆಯಲ್ಲಿ ಇರುವುದೇ ಈಗ ಮಾಡಬೇಕಾಗಿರುವ ಕೆಲಸ. ಎಲ್ಲಾ ಕಡೆ ನಾಕಾಬಂಧಿ ಮಾಡಿದ್ದರೂ ಏನೋ ನೆಪ ಹೇಳಿಕೊಂಡು ಹೊರಗೆ ಓಡಾಡುವುದ ನಿಲ್ಲಿಸಬೇಕು. ಸರ್ಕಾರದ ನಿಯಮವನ್ನ ಎಲ್ಲರೂ ಪಾಲಿಸಬೇಕು. ಶಬ್ಬ್ ಎ ಬರಾತ್ ದಿನ ಎಲ್ಲಾ ಖಬರ್ ಸ್ಥಾನಗಳಿಗೆ ಗೇಟ್ ಹಾಕಿ. ಪೊಲೀಸ್ ಬಂದೋಬಸ್ತ್ ಮಾಡಲಾಗುವುದು. ಮನೆಯಲ್ಲೇ ತಮ್ಮ ಹಿರಿಯರಿಗೆ ಗೌರವಾದರ ಸಲ್ಲಿಸಿ ಎಂದು ಮನವಿ ಮಾಡಿದರು.
ವಿವಿಧ ಮುಖಂಡರು, ಸರಳವಾಗಿ, ಮನೆಯಲ್ಲೇ ಅತ್ಯಂತ ಸರಳವಾಗಿ ಶಬ್ಬ್ ಎ ಬರಾತ್ ಮತ್ತು ಗುಡ್ ಫ್ತೈಡೆ ಆಚರಣೆಗೆ ಮನವಿ ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ
Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್ಗೆ ಜೀವ ಬೆದರಿಕೆ
Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ
Lok Sabha Election: ಕಾಂಗ್ರೆಸ್ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ
Davanagere: ಮತದಾನ ಜಾಗೃತಿ ಲಾಂಛನದಲ್ಲಿ ಅಪರೂಪದ ಪ್ರಾಣಿ ಚಿತ್ರ ಬಳಕೆ
MUST WATCH
ಹೊಸ ಸೇರ್ಪಡೆ
Shikaripur; ಸಂಭ್ರಮದ ಹುಚ್ಚರಾಯಸ್ವಾಮಿ ಬ್ರಹ್ಮ ರಥೋತ್ಸವ:ಯಡಿಯೂರಪ್ಪ ಕುಟುಂಬ ಭಾಗಿ
Odisha ಕಾಲೇಜಿನ ವಿಡಿಯೋ ಉಡುಪಿಯದ್ದು ಎಂದು ವೈರಲ್: ಕೇಸ್ ದಾಖಲು
Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ
Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ
Dr Rajkumar: ಇಂದು ರಾಜ್ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ