ಡಿಸಿಸಿ ಬ್ಯಾಂಕ್‌ಗಳ ಕೊಡುಗೆ ಅಪಾರ, ವಿಲೀನ ಬೇಡ

ಡಿಸಿಸಿ ಬ್ಯಾಂಕ್‌ಗಳ ವಿಲೀನ: ಬೇಕೇ, ಬೇಡವೇ?

Team Udayavani, Apr 9, 2022, 5:05 AM IST

ಡಿಸಿಸಿ ಬ್ಯಾಂಕ್‌ಗಳ ಕೊಡುಗೆ ಅಪಾರ, ವಿಲೀನ ಬೇಡ

ಡಿಸಿಸಿ ಬ್ಯಾಂಕ್‌ ಗಳನ್ನು ಅಪೆಕ್ಸ್‌ ಬ್ಯಾಂಕ್‌ಗಳಲ್ಲಿ ವಿಲೀನಗೊಳಿಸಬೇಕೇ ಅಥವಾ ಬೇಡವೇ ಎಂಬ ಕುರಿತಾಗಿ ರಾಜ್ಯದಲ್ಲಿ ಚರ್ಚೆಗಳು ನಡೆಯುತ್ತಿವೆ. ವಿಲೀನದಿಂದ ಅನುಕೂಲ ಹೆಚ್ಚು ಎಂದು ರಾಜ್ಯ ಸರಕಾರ ಪ್ರತಿಪಾದಿಸಿದರೆ ಸಹಕಾರಿ ಮಹಾ ಮಂಡಲದ ಅಧ್ಯಕ್ಷರು, ವಿಲೀನ ಬೇಡವೇ ಬೇಡ ಎಂದು ಹೇಳುತ್ತಿದ್ದಾರೆ. ಹಾಗಾದರೆ ವಿಲೀನದಿಂದಾಗುವ ಲಾಭ -ನಷ್ಟಗಳ ಬಗ್ಗೆ ಒಂದು ವಾದ-ಪ್ರತಿವಾದ.

ರಾಜ್ಯದಲ್ಲಿ ಸಹಕಾರಿ ವಲಯ ಹಾಗೂ ರೈತಾಪಿ ಸಮುದಾಯಕ್ಕೆ ಡಿಸಿಸಿ ಬ್ಯಾಂಕ್‌ಗಳ ಕೊಡುಗೆ ಅಪಾರ. ಹೀಗಾಗಿ ಸರಕಾರ ಸಹಕಾರಿ ಕ್ಷೇತ್ರವನ್ನು ಇನ್ನಷ್ಟು ಬಲವರ್ಧನೆಗೊಳಿಸುವ ಕೆಲಸ ಮಾಡಬೇಕೇ ಹೊರತು ಯಾವುದೇ ಕಾರಣಕ್ಕೂ ಡಿಸಿಸಿ ಬ್ಯಾಂಕ್‌ ವಿಲೀನ ಸರಿಯಲ್ಲ.

1969ರಲ್ಲಿ ಹಣಕಾಸು ಖಾತೆಯನ್ನೂ ತಮ್ಮಲ್ಲೆ ಇರಿಸಿಕೊಂಡಿದ್ದ ಮಾಜಿ ಪ್ರಧಾನಿ ಇಂದಿರಾಗಾಂಧಿ ಅವರು ರಾಷ್ಟ್ರದ ಬ್ಯಾಂಕ್‌ಗಳ ರಾಷ್ಟ್ರೀಕರಣಕ್ಕೆ ನಾಂದಿ ಹಾಡಿದರು. 1969-70ರಿಂದ ಬ್ಯಾಂಕ್‌ಗಳು ಸಹಕಾರ ಸಂಘಗಳ ಮೂಲಕ ರೈತರಿಗೆ, ಬಡವರಿಗೆ ಎಲ್ಲ ರೀತಿಯ ಸಾಲ ಸೌಲಭ್ಯಗಳನ್ನು ನೀಡುತ್ತಿದ್ದವು. 1975-76ರಲ್ಲಿ ಸಹಕಾರ ಸಂಘಗಳ ಮೂಲಕ ರೈತರಿಗೆ ನೀಡುತ್ತಿದ್ದ ಸಾಲವನ್ನು ನಿಲ್ಲಿಸಿದ ಕಾರಣ ಎಲ್ಲ ಸಹಕಾರ ಸಂಘಗಳು ಮತ್ತೆ ಜಿಲ್ಲಾ ಸಹಕಾರ ಸಂಘಗಳ ಮೊರೆ ಹೋಗಿ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‌ಗಳ ಮೂಲಕ ಸಾಲ ನೀಡುತ್ತಾ ಬಂದಿವೆ.
ರಾಜ್ಯದಲ್ಲಿರುವ ಡಿಸಿಸಿ ಬ್ಯಾಂಕ್‌ಗಳನ್ನು ಸಮರ್ಥ ಬ್ಯಾಂಕ್‌ಗಳನ್ನಾಗಿ ಮಾಡಬೇಕೇ ವಿನಾ ಅವುಗಳನ್ನು ವಿಲೀನಗೊಳಿಸಿ ದುರ್ಬಲ ಬ್ಯಾಂಕ್‌ಗಳನ್ನಾಗಿ ಮಾಡಬಾರದು. ಕೇಂದ್ರ ಸರಕಾರ ಸಾರ್ವಜನಿಕ ಬ್ಯಾಂಕ್‌ಗಳಿಗೆ ಬಂಡವಾಳ ಸೇರ್ಪಡೆ ಮಾಡುವಂತೆ ರಾಜ್ಯದಲ್ಲಿ ಕಷ್ಟದಲ್ಲಿ ಇಲ್ಲವೇ ತೊಂದರೆಯಲ್ಲಿ ಸಿಲುಕಿರುವ ಬ್ಯಾಂಕ್‌ಗಳಿಗೆ ಅದರಲ್ಲೂ ಡಿಸಿಸಿ ಬ್ಯಾಂಕ್‌ಗಳಿಗೆ ರಾಜ್ಯ ಸರಕಾರ ಬಂಡವಾಳ ಸೇರ್ಪಡೆ ಮಾಡಬೇಕಾಗಿದೆ.

2022ರ ಜನವರಿಯಲ್ಲಿ ಕಲಬುರಗಿ ಹಾಗೂ ಯಾದಗಿರಿ ಜಿಲ್ಲಾ ಕೋ-ಆಪರೇಟಿವ್‌ ಬ್ಯಾಂಕ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದ ರೀತಿಯಲ್ಲಿ ಗುಜರಾತ್‌ ಹಾಗೂ ಮಹಾರಾಷ್ಟ್ರ ರಾಜ್ಯಗಳ ಮಾದರಿಯಲ್ಲಿ ಸಹಕಾರ ಕ್ಷೇತ್ರವನ್ನು ಬಲಪಡಿಸಬೇಕಾಗಿದೆ. ಸಹಕಾರ ಚಳವಳಿಯಿಂದ ಅಲ್ಲಿನ ರೈತಾಪಿ ಜನರ ಜೀವನ ಸುಧಾರಿಸಿದೆ ಹಾಗೂ ಅಲ್ಲಿನ ಜನರಿಗೆ ಸಹಕಾರ ಕ್ಷೇತ್ರವೇ ಜೀವನದ ಅಂಗವಾಗಿದೆ. ದೇಶಾದ್ಯಂತ ಸಹಕಾರಿ ಕ್ಷೇತ್ರವನ್ನು ಬಲಪಡಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಅಮಿತ್‌ ಶಾ ಅವರನ್ನು ಸಹಕಾರ ಸಚಿವರನ್ನಾಗಿ ಮಾಡಿದ್ದಾರೆ. ಈ ನಿಟ್ಟಿನಲ್ಲಿ ಕೇಂದ್ರ ಸಚಿವ ಅಮಿತ್‌ ಶಾ ಅವರು ಕೂಡ ದಿಟ್ಟ ಹೆಜ್ಜೆ ತೆಗೆದುಕೊಳ್ಳುತ್ತಾರೆ ಎಂಬ ನಂಬಿಕೆ ಇದೆ.

ಗುಜರಾತ್‌, ಮಹಾರಾಷ್ಟ್ರ, ಹಾಗೂ ಆಂಧ್ರಪ್ರದೇಶ ರಾಜ್ಯಗಳನ್ನು ಉದಾಹರಣೆಯಾಗಿ ಇಟ್ಟುಕೊಂಡು ಡಿಸಿಸಿ ಬ್ಯಾಂಕ್‌ಗಳನ್ನು ಬಲಪಡಿಸಬೇಕೇ ವಿನಾ ಅವುಗಳನ್ನು ಕೇರಳ ಹಾಗೂ ಛತ್ತೀಸ್‌ಗಢ ರಾಜ್ಯಗಳ ಬ್ಯಾಂಕ್‌ಗಳಿಗೆ ಹೋಲಿಕೆ ಮಾಡಬಾರದು. ಕೇಂದ್ರ ಸರಕಾರ ಹೇಗೆ ತೊಂದರೆಯಲ್ಲಿರುವ ಸಾರ್ವಜನಿಕ ಕ್ಷೇತ್ರದ ಬ್ಯಾಂಕ್‌ಗಳಿಗೆ ಬಂಡವಾಳ ನೀಡುತ್ತಿ­ದೆಯೋ ಅದೇ ರೀತಿಯಲ್ಲಿ ರಾಜ್ಯ ಸರಕಾರಗಳು ಸಹ ಡಿಸಿಸಿ ಬ್ಯಾಂಕ್‌ಗಳಿಗೆ ಬೆನ್ನೆಲುಬಾಗಿ ನಿಲ್ಲಬೇಕು.

ಇತ್ತೀಚೆಗೆ ಲೋಕಸಭೆಯಲ್ಲಿ ರಾಜ್ಯ ಹಣಕಾಸು ಸಚಿವರು ಮಾಹಿತಿ ನೀಡಿದಂತೆ 2022-23ರ ಅವಧಿಯಲ್ಲಿ ಸಾರ್ವಜನಿಕ ಕ್ಷೇತ್ರದ ಬ್ಯಾಂಕ್‌ಗಳಿಗೆ 15,000 ಕೋಟಿ ರೂ. ಬಂಡವಾಳ ಸೇರ್ಪಡೆ ಮಾಡಲಾಗಿದೆ. ಮೊದಲು ಅಂದಾಜು ಮಾಡಿದಂತೆ 20,000 ಕೋಟಿ ರೂ.ಗಳಿಂದ 15,000 ಕೋಟಿ ರೂ.ಹಣವನ್ನು ಬಿಡುಗಡೆ ಮಾಡಿದೆ. ಅದರಲ್ಲಿ ಸಿಂಹಪಾಲು ಸೆಂಟ್ರಲ್‌ ಬ್ಯಾಂಕ್‌ ಆಫ್ ಇಂಡಿಯಾ ಹಾಗೂ ಪಂಜಾಬ್‌ ಸಿಂಧ್‌ ಬ್ಯಾಂಕ್‌ಗೆ ದೊರೆತಿದೆ. ಈ ಬಂಡವಾಳ ಸೇರ್ಪಡೆಯಿಂದ ಈ ಎರಡು ಬ್ಯಾಂಕ್‌ಗಳು ವರ್ತಮಾನ ಹಣಕಾಸಿನ ನಿಯಂತ್ರಣ ಆವಶ್ಯಕತೆಗಳನ್ನು ಪೂರ್ಣಗೊಳಿಸಿದಂತಾಗುತ್ತಿದೆ.

ಇದೇ ರೀತಿ 2021ರ ಮಾರ್ಚ್‌ನಲ್ಲಿ 14500 ಕೋಟಿ ರೂ.ಅನ್ನು 4 ಬ್ಯಾಂಕ್‌ಗಳಿಗೆ ಹಂಚಿಕೆ ಮಾಡಲಾಗಿದೆ. ಸೆಂಟ್ರಲ್‌ ಬ್ಯಾಂಕ್‌ ಆಫ್ ಇಂಡಿಯಾಗೆ 4800 ಕೋಟಿ ರೂ.ಯುಕೋ ಬ್ಯಾಂಕ್‌ಗೆ 2600 ಕೋಟಿ ರೂ. ಬ್ಯಾಂಕ್‌ ಆಫ್ ಇಂಡಿಯಾಗೆ 3000 ಕೋಟಿ ರೂ.,ಇಂಡಿಯನ್‌ ಓವರ್‌ಸೀಸ್‌ ಬ್ಯಾಂಕ್‌ಗೆ 4100 ಕೋಟಿ ರೂ. ನೀಡಲಾಗಿದೆ.

ಲೋಕಸಭೆಯಲ್ಲಿ ಮಾತನಾಡಿದ ಕೇಂದ್ರದ ರಾಜ್ಯ ಹಣಕಾಸು ಸಚಿವರು ಕಳೆದ 5 ವರ್ಷಗಳಲ್ಲಿ 2,86,043 ಕೋಟಿ ರೂ.ಬಂಡವಾಳ ಸೇರ್ಪಡೆ ರಾಷ್ಟ್ರೀಕೃತ ಬ್ಯಾಂಕ್‌ಗಳಿಗೆ ಮಾಡಲಾಗಿದೆ ಎಂದು ಹೇಳಿದ್ದಾರೆ. ದೇಶದಲ್ಲಿರುವ ಎಲ್ಲ ಸಹಕಾರಿ ಕ್ಷೇತ್ರದ ಬ್ಯಾಂಕ್‌ಗಳನ್ನು ಬಲಪಡಿಸಬೇಕೇ ವಿನಾ ಅವುಗಳನ್ನು ವಿಲೀನಗೊಳಿಸಿ, ನಾಶಮಾಡಬಾರದು ಅಥವಾ ಕ್ಷೀಣಿಸಬಾರದು. ಈಗ ಚಾಲ್ತಿಯಲ್ಲಿರುವ 3 ಹಂತದ ಸಹಕಾರಿ ಅಂದರೆ ಅಪೆಕ್ಸ್‌ ಬ್ಯಾಂಕ್‌, ಡಿಸಿಸಿ ಬ್ಯಾಂಕ್‌, ಪಿಎಸಿಎಸ್‌ಗಳನ್ನು ಮುಂದುವರಿಸುತ್ತಾ, ಪ್ರೋತ್ಸಾಹ ನೀಡಿ ಬಲವರ್ಧನೆ ಮಾಡಲು ರಾಜ್ಯ ಸರಕಾರ ಕೈ ಜೋಡಿಸಬೇಕಾಗಿದೆ.

ಇಲ್ಲಿ ಗಮನಿಸಬೇಕಾದ ಅಂಶ ಎಂದರೆ ರಾಜ್ಯದಲ್ಲಿ 21 ಡಿಸಿಸಿ ಬ್ಯಾಂಕ್‌ಗಳು ಲಾಭದಾಯಕವಾಗಿ ಕಾರ್ಯ ನಿರ್ವಹಿಸುತ್ತಿದ್ದು ಯಾವ ಬ್ಯಾಂಕ್‌ ಕೂಡ ಮುಚ್ಚಿಲ್ಲ. ಡಿಸಿಸಿ ಬ್ಯಾಂಕ್‌ ಮುಖಾಂತರ ಅಲ್ಪಾವಧಿ ಸಾಲ, ದೀರ್ಘಾವಧಿ ಸಾಲ, ಮಹಿಳಾ ಸ್ವಸಹಾಯ ಸಂಘ, ಪುರುಷ ಸ್ವಸಹಾಯ ಸಾಲ, ಪಶುಸಂಗೋಪನಾ ಸಾಲ, ಚಿನ್ನಾಭರಣ ಸಾಲ, ಅಡಮಾನ ಸಾಲ, ವಾಹನ ಸಾಲ ನೀಡಲಾಗುತ್ತಿದೆ. ಇದರಲ್ಲಿ ಅಲ್ಪಾವಧಿ ಸಾಲ, ದೀರ್ಘಾವಧಿ ಸಾಲ, ಮಹಿಳಾ ಸ್ವಸಹಾಯ ಸಂಘ, ಪುರುಷ ಸ್ವಸಹಾಯ ಸಂಘಕ್ಕೆ ಮಾತ್ರ ನಬಾರ್ಡ್‌ನಿಂದ ರಿಫೈನಾನ್ಸ್‌ ಸಾಲ ದೊರೆಯುತ್ತಿದ್ದು ಇನ್ನುಳಿದ ಸಾಲಗಳನ್ನು ಡಿಸಿಸಿ ಬ್ಯಾಂಕ್‌ಗಳು ಸ್ವಂತ ಬಂಡವಾಳದಲ್ಲಿ ನೀಡುತ್ತಾ ಬಂದಿರುತ್ತವೆ.

ರಾಷ್ಟ್ರದಲ್ಲಿ ಒಟ್ಟು ಡಿಸಿಸಿ ಬ್ಯಾಂಕ್‌ಗಳ ಮುಖಾಂತರ ಅಂದಾಜು 25 ಲಕ್ಷ ರೈತರಿಗೆ 19 ಸಾವಿರ ಕೋಟಿ ರೂ. ಸಾಲ ವಿತರಿಸಿದ್ದು, ಇದರಲ್ಲಿ 10 ಸಾವಿರ ಕೋಟಿ ರೂ.ಮಾತ್ರ ನಬಾರ್ಡ್‌ನಿಂದ ರಿಫೈನಾನ್ಸ್‌ ನೀಡುತ್ತಿದೆ. ಇನ್ನುಳಿದ 9 ಸಾವಿರ ಕೋಟಿ ರೂ. ಡಿಸಿಸಿ ಬ್ಯಾಂಕ್‌ಗಳು ಸ್ವಂತ ಬಂಡವಾಳದಿಂದ ಸಾಲ ನೀಡುತ್ತಾ ಬಂದಿರುತ್ತವೆ. ಅಲ್ಪಾವಧಿ ಸಾಲಕ್ಕೆ ರಾಜ್ಯ ಸರಕಾರದಿಂದ 2018-19ರಲ್ಲಿ ಶೇ.7.10ರಷ್ಟು, 2019-20ರಲ್ಲಿ ಶೇ.6.80ರಷ್ಟು ಹಾಗೂ 2020-21ರಲ್ಲಿ ಶೇ.5.60ರಷ್ಟು ಬಡ್ಡಿ ಸಹಾಯಧನ ನೀಡಿರುತ್ತದೆ. ಇದು ಪ್ರತೀ ವರ್ಷ ಬರಬರುತ್ತಾ ಕಮ್ಮಿಯಾಗಿರುತ್ತದೆ. ಆದರೂ ಸಹ ಯಾವುದೇ ಡಿಸಿಸಿ ಬ್ಯಾಂಕ್‌ಗಳು ನಷ್ಟಕ್ಕೆ ಹೋಗಿಲ್ಲ.

– ಜಿ.ಟಿ.ದೇವೇಗೌಡ, ಮಾಜಿ ಸಚಿವರು, ರಾಜ್ಯ ಸಹಕಾರ ಮಹಾ ಮಂಡಲದ ಅಧ್ಯಕ್ಷರು

ಟಾಪ್ ನ್ಯೂಸ್

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Ram Navami Astrology 2024:ಶ್ರೀರಾಮ ನವಮಿ ಯೋಗ ಫಲಾಫಲ-12 ರಾಶಿಗಳ ಮೇಲಿನ ಪರಿಣಾಮ ಹೇಗಿದೆ?

Ram Navami Astrology 2024:ಶ್ರೀರಾಮ ನವಮಿ ಯೋಗ ಫಲಾಫಲ-12 ರಾಶಿಗಳ ಮೇಲಿನ ಪರಿಣಾಮ ಹೇಗಿದೆ?

Rama Navami 2024: ರಾಮ ನವಮಿ ಇತಿಹಾಸವೇನು? ಆಚರಣೆ ಮಾಡುವ ವಿಧಾನ ಹೇಗೆ…

Rama Navami 2024: ರಾಮ ನವಮಿ ಇತಿಹಾಸವೇನು? ಆಚರಣೆ ಮಾಡುವ ವಿಧಾನ ಹೇಗೆ…

Rama Navami: ಶ್ರೀ ರಾಮನ ಹೆಜ್ಜೆಗಳು ಬದುಕಿನ ಆದರ್ಶವಾಗಲಿ… ಪೇಜಾವರ ಶ್ರೀ

Rama Navami: ಶ್ರೀ ರಾಮನ ಹೆಜ್ಜೆಗಳು ಬದುಕಿನ ಆದರ್ಶವಾಗಲಿ… ಪೇಜಾವರ ಶ್ರೀ

April 17ರಂದು ಶ್ರೀರಾಮ ನವಮಿ: ಅಯೋಧ್ಯೆಯಲ್ಲಿ ವಿಶೇಷ ಪೂಜೆ, ಉತ್ಸವ

Rama Navami 2024: April 17ರಂದು ಶ್ರೀರಾಮ ನವಮಿ- ಅಯೋಧ್ಯೆಯಲ್ಲಿ ವಿಶೇಷ ಪೂಜೆ, ಉತ್ಸವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.