ಕಲಬುರಗಿಗೆ ಬಾರದ ಡಿಸಿಎಂ ಗೋವಿಂದ ಕಾರಜೋಳ


Team Udayavani, Jan 25, 2020, 3:10 AM IST

kalburgige

ಕಲಬುರಗಿ: 32 ವರ್ಷಗಳ ನಂತರ ಕಲಬುರಗಿಯಲ್ಲಿ ನಡೆಯಲಿರುವ ಅಖಿಲ ಭಾರತ 85ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕೇವಲ 11 ದಿನ ಬಾಕಿ ಉಳಿದಿದ್ದು, ಸಮ್ಮೇಳನದ ಸಿದ್ಧತೆ ಬಹಳಷ್ಟಾಗಬೇಕಿದೆ. ಕಲಬುರಗಿ ಮಹಾನಗರ ಹಾಗೂ ಜಿಲ್ಲೆಯಲ್ಲಿ ಸಮ್ಮೇಳನ ಕುರಿತು ಇನ್ನೂ ಹಬ್ಬದ ವಾತಾವರಣ ಮೂಡಿಲ್ಲ. ಹಿಂದಿನ ಎಲ್ಲ ಸಮ್ಮೇಳನ ದಾಖಲೆ ಮುರಿಯುವಂತೆ ಪ್ರಸ್ತುತ ಸಮ್ಮೇಳನಕ್ಕೆ 20 ಸಾವಿರ ಪ್ರತಿನಿಧಿಗಳ ನೋಂದಣಿಯಾಗಿದೆ.

ಇವರಿಗೆಲ್ಲ ಅಗತ್ಯ ವಸತಿ, ಸಾರಿಗೆ ಸೌಕರ್ಯ ಕಲ್ಪಿಸುವುದು ಸೇರಿ ನಾಡಿನಾದ್ಯಂತ ಬರುವ ಲಕ್ಷಕ್ಕೂ ಅಧಿಕ ಜನರಿಗೆ ಆತಿಥ್ಯ ಕಲ್ಪಿಸುವುದು ಸವಾಲಾಗಿದೆ. ಹೀಗಾಗಿ ಸಿದ್ಧತೆ ಸಮರೋಪಾದಿಯಲ್ಲಿ ಸಾಗಬೇಕಿದೆ. ಆದರೆ ಸಮ್ಮೇಳನ ಸ್ವಾಗತ ಸಮಿತಿ ಅಧ್ಯಕ್ಷರಾಗಿರುವ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಸಮ್ಮೇಳನ ನಡೆಯುವ ಗುಲ್ಬರ್ಗ ವಿವಿ ಆವರಣದ ಸ್ಥಳವನ್ನೇ ಇಂದಿಗೂ ವೀಕ್ಷಿಸಿಲ್ಲ.

ಸಮ್ಮೇಳನಕ್ಕೆ ನಯಾಪೈಸೆ ಅನುದಾನ ಬಿಡುಗಡೆಯಾಗಿಲ್ಲ. ಇದರಿಂದ ಸಿದ್ಧತೆಗೆ ಹೊಡೆತ ಬಿದ್ದಿದೆ. ಜಿಲ್ಲೆಯ ಶಾಸಕರು ತಲಾ 10 ಲಕ್ಷ ರೂ. ನೀಡುವಂತೆ ಆಂತರಿಕವಾಗಿ ಸಚಿವ ಗೋವಿಂದ ಕಾರಜೋಳ ಹೇಳಿದ್ದಾರೆ ಎನ್ನಲಾಗಿದೆ. ಆದರೆ ಯಾರೊಬ್ಬ ಶಾಸಕರೂ ಹಣ ನೀಡಲು ಮುಂದೆ ಬಂದಿಲ್ಲ. ಬದಲಾಗಿ ತಿಂಗಳ ಗೌರವ ಧನ ಘೋಷಣೆ ಮಾಡಿದ್ದಾರೆ.

ಸಮ್ಮೇಳನದ ಸಂಚಾಲಕರಾಗಿರುವ ಜಿಲ್ಲಾಧಿಕಾರಿ ಬಿ.ಶರತ್‌ ಆರ್ಥಿಕ ಸಂಪನ್ಮೂಲ ಕ್ರೋಢೀಕರಣಕ್ಕೆ ಶ್ರಮಿಸುತ್ತಿದ್ದಾರೆ. ಮೊದಲು ಅಂದಾಜು 18 ಕೋಟಿ ರೂ. ವೆಚ್ಚದ ಕ್ರಿಯಾ ಯೋಜನೆ ರೂಪಿಸಲಾಗಿತ್ತು. ನಂತರ 14 ಕೋಟಿ ರೂ.ಗೆ ಇಳಿಕೆ ಮಾಡಿ ಸರ್ಕಾರಕ್ಕೆ ಪ್ರಸ್ತಾವನೆ ಕಳುಹಿಸಿದ್ದಾರೆ. ಸಮ್ಮೇಳನಕ್ಕೆ ದೇಣಿಗೆ ನೀಡುವಂತೆ ಜಿಲ್ಲಾಧಿಕಾರಿಗಳು ಸಂಘ-ಸಂಸ್ಥೆಗಳಿಗೆ ಹಾಗೂ ಸರ್ಕಾರಿ ನೌಕರರಿಗೆ ಮನವಿ ಮಾಡಿದ್ದಾರೆ. ಮೂರು ದಿನಗಳ ಹಿಂದೆ ಅನುದಾನ ಬಿಡುಗಡೆ ನಿಟ್ಟಿನಲ್ಲಿ ಬೆಂಗಳೂರಿಗೆ ಹೋಗಿ ಬಂದಿದ್ದಾರೆ.

ಕೇವಲ ಎರಡು ಸಭೆ ನಡೆಸಿದ ಡಿಸಿಎಂ: ಸಮ್ಮೇಳನದ ಸ್ವಾಗತ ಸಮಿತಿ ಅಧ್ಯಕ್ಷರಾಗಿರುವ ಡಿಸಿಎಂ ಗೋವಿಂದ ಕಾರಜೋಳ ಸಮ್ಮೇಳನ ಸಂಬಂಧ ಕೇವಲ ಎರಡು ಸಭೆ ನಡೆಸಿದ್ದಾರೆ. ಒಂದು ಸ್ವಾಗತ ಸಮಿತಿ ರಚನಾ ಸಭೆ, ಮತ್ತೂಂದು ಉಪಸಮಿತಿ ಸಭೆ ನಡೆಸಿದ್ದನ್ನು ಬಿಟ್ಟರೆ, ನಂತರ ಯಾವುದೇ ಸಭೆ ನಡೆಸಿಲ್ಲ. ಆಶ್ಚರ್ಯಕರ ಸಂಗತಿ ಎಂದರೆ ಸಮ್ಮೇಳನವನ್ನು ಮೊದಲು ಗುಲ್ಬರ್ಗ ವಿವಿ ಕ್ರೀಡಾಂಗಣದಲ್ಲಿ ನಡೆಸಲು ಉದ್ದೇಶಿಸಲಾಗಿತ್ತು. ನಂತರ ವಿವಿ ಪರೀಕ್ಷಾ ಭವನ ಹಿಂದುಗಡೆ ಪ್ರದೇಶ ಅಂತಿಮ ಮಾಡಲಾಯಿತು. ಆದರೆ ಈ ಸ್ಥಳವನ್ನು ಡಿಸಿಎಂ ಒಮ್ಮೆಯೂ ಅವಲೋಕಿಸಿಲ್ಲ. ಸಾಹಿತಿಗಳು, ಸಾಹಿತ್ಯಾಸಕ್ತರು “ಕಲಬುರಗಿ ಕಡೆ ಕಾರಜೋಳ ಸಾಹೇಬ್ರು ಕಾಲಿಡುವುದು ಯಾವಾಗ’ ಎಂದು ಪ್ರಶ್ನಿಸುತ್ತಿದ್ದಾರೆ.

ಮೆರವಣಿಗೆ 6 ಕಿ.ಮೀ. ಅಲ್ಲ, 3 ಕಿ.ಮೀ.!: ಸಮ್ಮೇಳನಾಧ್ಯಕ್ಷರಾಗಿ ಡಾ| ಎಚ್‌.ಎಸ್‌. ವೆಂಕಟೇಶಮೂರ್ತಿ ಆಯ್ಕೆಯಾದ ಸಂದರ್ಭದಲ್ಲಿ ಕಲ್ಯಾಣ ಕರ್ನಾಟಕ ಭಾಗದ ಸಾಹಿತಿಗಳು ಸಮ್ಮೇಳನಾಧ್ಯಕ್ಷರಾಗಬೇಕಿತ್ತು ಎನ್ನುವ ಸಣ್ಣ ಅಪಸ್ವರ ಹಾಗೂ ಅಸಮಾಧಾನ ಉಂಟಾಗಿತ್ತು. ಒಂದು ಹಂತದಲ್ಲಿ ಸಮ್ಮೇಳನಾಧ್ಯಕ್ಷರ ಬದಲಾವಣೆಯಾದರೆ ಒಳಿತು ಎನ್ನುವ ಸಲಹೆಯೂ ಸ್ವಾಗತ ಸಮಿತಿ ರಚನಾ ಸಭೆಯಲ್ಲಿ ಕೇಳಿ ಬಂದಿತ್ತು. ಈಗ ಸಮ್ಮೇಳನಾಧ್ಯಕ್ಷರ ಮೆರವಣಿಗೆ ಎಲ್ಲಿಂದ ಪ್ರಾರಂಭವಾಗಬೇಕೆಂಬ ಗೊಂದಲ ಆರಂಭವಾಗಿದೆ.

ಸಮ್ಮೇಳನದ ಆಮಂತ್ರಣ ಪತ್ರಿಕೆಯಲ್ಲಿ ಸಮ್ಮೇಳನಾಧ್ಯಕ್ಷರ ಮೆರವಣಿಗೆ ಕಲಬುರಗಿ ನಗರದ ಸಾರ್ವಜನಿಕ ಉದ್ಯಾನವನದ ಡಾ| ಎಸ್‌.ಎಂ. ಪಂಡಿತ ರಂಗಮಂದಿರದಿಂದ ಆರಂಭವಾಗುವುದು ಎಂದು ಪ್ರಕಟವಾಗಿದೆ. ಆದರೆ ಸಮ್ಮೇಳನದ ಮೆರವಣಿಗೆ ಆರು ಕಿ.ಮೀ. ದೂರವಾಗುವುದರಿಂದ ಕಡಿತ ಮಾಡಿ ನಗರದ ಸೇಡಂ ರಸ್ತೆಯ ಚಂದ್ರಕಾಂತ ಪಾಟೀಲ ಶಾಲೆಯಿಂದ ಸಮ್ಮೇಳನಾಧ್ಯಕ್ಷರ ಮೆರವಣಿಗೆ ಹೊರಡಬೇಕೆಂಬ ನಿಟ್ಟಿನಲ್ಲಿ ನಿರ್ಧಾರ ಕೈಗೊಳ್ಳಲಾಗುತ್ತಿದೆ. ಆರು ಕಿ.ಮೀ. ದೂರವನ್ನು 3 ಕಿ.ಮೀ. ಸೀಮಿತಗೊಳಿಸಬೇಕೆಂಬ ಚರ್ಚೆ ಬಲವಾಗಿದೆ.

ನೌಕರರ ದೇಣಿಗೆಯೂ ಗೊಂದಲದಲ್ಲಿ: ರಾಜ್ಯ ಸರ್ಕಾರಿ ನೌಕರರ ಸಂಘದಿಂದ ಸಮ್ಮೇಳನಕ್ಕೆ ನೀಡಲಿರುವ ಮೂರು ಕೋಟಿ ರೂ.ಗೂ ಅಧಿಕ ದೇಣಿಗೆ ಗೊಂದಲದಲ್ಲಿ ಮುಳುಗಿದೆ. ಸಂಘದ ಕಲಬುರಗಿ ಜಿಲ್ಲಾಧ್ಯಕ್ಷ ರಾಜು ಲೇಂಗಟಿ ಮೂರು ಕೋಟಿ ರೂ. ದೇಣಿಗೆ ಚೆಕ್‌ನ್ನು ಜಿಲ್ಲಾಧಿಕಾರಿ ಬಿ. ಶರತ್‌ ಅವರಿಗೆ ನೀಡಲು ಮುಂದಾಗುತ್ತಿದ್ದಂತೆ ಸಂಘದ ರಾಜ್ಯಾಧ್ಯಕ್ಷರು ಇದಕ್ಕೆ ತಡೆಯೊಡ್ಡಿದ್ದಾರೆ. ಸಮ್ಮೇಳನ ಸಂಬಂಧ ತಮ್ಮನ್ನು ವಿಶ್ವಾಸಕ್ಕೆ ತೆಗೆದು ಕೊಂಡಿಲ್ಲ. ಸಮ್ಮೇಳನದುದ್ದಕ್ಕೂ ಎಲ್ಲೂ ತಮ್ಮ ಹೆಸರು ಪ್ರಸ್ತಾಪಿಸಿಲ್ಲ. ನಮ್ಮನ್ನೇ ವಿಶ್ವಾಸಕ್ಕೆ ತೆಗೆದುಕೊಂಡಿಲ್ಲ ಎಂದಾದ ಮೇಲೆ ದೇಣಿಗೆ ನೀಡುವುದನ್ನು ಕಾಯ್ದು ನೋಡೋಣ ಎಂದಿದ್ದಾರಂತೆ. ಹೀಗಾಗಿ ಜ.24ರಂದು ಸಲ್ಲಿಸಬೇಕೆಂ ದಿರುವ ದೇಣಿಗೆ ಚೆಕ್‌ ಮುಂದಕ್ಕೆ ಹೋಗಿದೆ.

* ಹಣಮಂತರಾವ ಭೈರಾಮಡಗಿ

ಟಾಪ್ ನ್ಯೂಸ್

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

Brahmavar ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

1-ewqe

Olympics ಅರ್ಹತೆ ತಪ್ಪುವ ಭೀತಿಯಲ್ಲಿ ದೀಪಕ್‌, ಸುಜೀತ್‌

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

1-wqewqewq

Doping: ಶಾಲು ಚೌಧರಿ ದೋಷಮುಕ್ತ

ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

Brahmavar ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.