Accident: ಅಪಘಾತದಲ್ಲಿ ಸಾವು- ಬೆಂಗಳೂರು ದ್ವಿತೀಯ!

ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಖಾತೆ ವರದಿಯಲ್ಲಿ ಉಲ್ಲೇಖ

Team Udayavani, Nov 2, 2023, 12:53 AM IST

accident 2

ಹೊಸದಿಲ್ಲಿ: ದೇಶದಲ್ಲಿ ದಿನದಿಂದ ದಿನಕ್ಕೆ ಅಪಘಾತಗಳ ಸಂಖ್ಯೆ ಹೆಚ್ಚಾಗುತ್ತಲೇ ಇದ್ದು, ರಸ್ತೆ ಅಪಘಾತದಲ್ಲಿ ಅಸುನೀಗುವವರ ಸಂಖ್ಯೆಯಲ್ಲಿ ಕರ್ನಾಟಕದ ರಾಜಧಾನಿ ಬೆಂಗಳೂರು ದೇಶದಲ್ಲಿಯೇ ಎರಡನೇ ಸ್ಥಾನದಲ್ಲಿದೆ.

ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ ಬಿಡುಗಡೆ ಮಾಡಿದ ವರದಿಯಲ್ಲಿ ಈ ಆಘಾತಕಾರಿ ಅಂಶವನ್ನು ಉಲ್ಲೇಖೀಸಲಾಗಿದೆ. 2022ನೇ ಸಾಲಿಗೆ ಸಂಬಂಧಿಸಿದ ಮಾಹಿತಿ ಇದಾಗಿದ್ದು, ಕಳೆದ ವರ್ಷ ಉದ್ಯಾನನಗರಿಯಲ್ಲಿ ಮಿತಿ ಮೀರಿದ ವೇಗದ ಸಂಚಾರದಿಂದಾಗಿ 772 ಮಂದಿ ಅಸುನೀಗಿದ್ದರೆ, 3,189 ಮಂದಿ ಗಾಯಗೊಂಡಿದ್ದಾರೆ. ಇದರ ಹಿಂದಿನ ವರ್ಷ 654 ಮಂದಿ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದರು. ಇದರ ಜತೆಗೆ ದೇಶದ ಮಾಹಿತಿ ತಂತ್ರಜ್ಞಾನ ರಾಜಧಾನಿಯಲ್ಲಿ ಕಳೆದ ವರ್ಷ 3,822 ಅಪಘಾತ ಪ್ರಕರಣಗಳು ನಡೆದಿವೆ ಎಂದು ವರದಿಯಲ್ಲಿ ಉಲ್ಲೇಖೀಸಲಾಗಿದೆ. 2022ರಲ್ಲಿ ಅಪಘಾತಗಳ ಪ್ರಮಾಣ ಶೇ. 9.4ರಷ್ಟು ಹೆಚ್ಚಾಗಿದೆ.

ವಿಚಿತ್ರವೆಂದರೆ  ನೆರೆಯ ತಮಿಳುನಾಡಿನಲ್ಲಿ   ಅಪಘಾತಗಳ ಸಂಖ್ಯೆ ಹೆಚ್ಚಾಗಿದೆ. ಕಳೆದ ವರ್ಷ ಈ ರಾಜ್ಯದಲ್ಲಿ 64,105 ಅಪಘಾತಗಳು ಸಂಭವಿಸಿದೆ. ಚೆನ್ನೈಯಲ್ಲಿ ಅಪಘಾತದಿಂದ ಸಾವನ್ನಪ್ಪುವರ ಸಂಖ್ಯೆ ಕಡಿಮೆಯಾಗಿದೆ. 2021ರಲ್ಲಿ 998 ಮಂದಿ ಸಾವನ್ನಪ್ಪಿದ್ದರೆ, 2022ರಲ್ಲಿ 507 ಮಂದಿ ಮೃತಪಟ್ಟಿದ್ದಾರೆ. ಅಲ್ಲಿ ಕೈಗೊಂಡ ಕ್ರಮಗಳಿಂದಾಗಿ ಅಪಘಾತ ಪ್ರಕರಣಗಳು ತಗ್ಗಿವೆ.

ಮೆಟ್ರೋ ನಗರಗಳಲ್ಲಿ ಅತೀ ವೇಗದಿಂದ ವಾಹನ ಚಲಾಯಿಸಿ ಅಸುನೀಗಿರುವ ಲೆಕ್ಕಾಚಾರ ತೆಗೆದು ಕೊಂಡರೆ ಕಳೆದ ವರ್ಷ ಹೊಸದಿಲ್ಲಿಯಲ್ಲಿ 1,500 ಮಂದಿ ಅಸುನೀಗಿದ್ದರೆ, ಬೆಂಗಳೂರಿನಲ್ಲಿ 711, ಜೈಪುರ ದಲ್ಲಿ 683 ಮಂದಿ ಜೀವ ಕಳೆದುಕೊಂಡಿದ್ದಾರೆ.

17,089 ಸಾವು

ದೇಶದ ಐವತ್ತು ದೊಡ್ಡ ನಗರಗಳಲ್ಲಿ 17,089 ಮಂದಿ ಅಪಘಾತಗಳಿಂದ ಕೊನೆಯುಸಿರೆಳೆದಿದ್ದರೆ, 69 ಸಾವಿರ ಮಂದಿ ಗಾಯಗೊಂಡಿದ್ದಾರೆ.  ಸಣ್ಣ ಪ್ರಮಾಣದ ನಗರಗಳಲ್ಲಿ 2022ರಲ್ಲಿ  ಅಪಘಾತ ಪ್ರಮಾಣ ಶೇ. 14 ಹೆಚ್ಚಾಗಿದೆ. ಅದು ರಾಷ್ಟ್ರೀಯ ಸರಾಸರಿಗಿಂತ ಹೆಚ್ಚಾಗಿದೆ.

ಟಾಪ್ ನ್ಯೂಸ್

1-qeweqweqwe

IPL; ಹೈದರಾಬಾದ್ ಎದುರು ಚೆನ್ನೈ ಗೆ 78 ರನ್‌ಗಳ ಅಮೋಘ ಜಯ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qeweqweqwe

IPL; ಹೈದರಾಬಾದ್ ಎದುರು ಚೆನ್ನೈ ಗೆ 78 ರನ್‌ಗಳ ಅಮೋಘ ಜಯ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

ಮಣಿಪಾಲ ಸಂಸ್ಥೆಗಳಿಗೆ ಜಾಗತಿಕ ಸ್ಥಾನ ಕಲ್ಪಿಸಿದ ಡಾ|ರಾಮದಾಸ್‌ ಪೈ

ಮಣಿಪಾಲ ಸಂಸ್ಥೆಗಳಿಗೆ ಜಾಗತಿಕ ಸ್ಥಾನ ಕಲ್ಪಿಸಿದ ಡಾ|ರಾಮದಾಸ್‌ ಪೈ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.