ಪಿಲಿಕುಳದ ಹನುಮಾನ್ ಲಂಗೂರ್ “ರಾಜು’ ಸಾವು
Team Udayavani, Oct 5, 2021, 8:28 PM IST
ಮಹಾನಗರ: ಪಿಲಿಕುಳ ಜೈವಿಕ ಉದ್ಯಾನವನದ 21 ವರ್ಷ ಪ್ರಾಯದ ಹನುಮಾನ್ ಲಂಗೂರ್ “ರಾಜು’ ಮೃತಪಟ್ಟಿದೆ.
ಪಿಲಿಕುಳ ಮೃಗಾಲಯದ ಆರಂಭದ ದಿನಗಳಲ್ಲಿ ರಾಜುವನ್ನು ಪಡುಬಿದ್ರಿಯ ಬಾರ್ ಒಂದರಿಂದ ರಕ್ಷಿಸಲಾಗಿತ್ತು. ಮಾಲಕ ಮತ್ತು ಗಿರಾಕಿಗಳಿಗೆ ಅತ್ಯಂತ ಪ್ರೀತಿ ಪಾತ್ರವಾಗಿದ್ದ “ರಾಜು’ ಮದ್ಯಪಾನದ ಚಟ ಅಂಟಿಸಿಕೊಂಡು ಅನಾರೋಗ್ಯಕ್ಕೆ ಈಡಾ ಗಿತ್ತು. ಅದನ್ನು ಪಿಲಿಕುಳಕ್ಕೆ ತರಲಾಗಿತ್ತು.
ಮೃಗಾಲಯದಲ್ಲಿ ನಿಧಾನವಾಗಿ ಅಮಲು ಸೇವನೆಯ ಅಭ್ಯಾಸವನ್ನು ಬಿಡಿಸಿ ವಿವಿಧ ಜಾತಿಯ ಹಣ್ಣು ಹಂಪಲುಗಳನ್ನು ಸೇವಿಸಲು ಒಗ್ಗಿಕೊಂಡಿತ್ತು ಮತ್ತು ಮೃಗಾಲಯದ ಸಂದರ್ಶಕರಿಗೆ ಬಹಳ ಆಕರ್ಷಕವಾಗಿ ಪ್ರೀತಿಪಾತ್ರವಾಗಿತ್ತು.
ಇದನ್ನೂ ಓದಿ:ರಸ್ತೆ ಬದಿ ನಿಲ್ಲಿಸಿಟ್ಟಿದ್ದ ಟ್ರಕ್ ಗಳ ಗಾಳಿ ತೆಗೆದು ಎಚ್ಚರಿಕೆ ನೀಡಿದ ಪೊಲೀಸರು
ಪ್ರಸ್ತುತ ಪಿಲಿಕುಳ ಮೃಗಾಲಯದಲ್ಲಿ ನಾಲ್ಕು ಹನುಮಾನ್ ಲಂಗೂರ್ಗಳಿದ್ದು ಅವುಗಳಿಗಾಗಿ ವಿಶಾಲವಾದ ತೆರೆದ ಮರ ಮಟ್ಟುಗಳಿಂದ ಕೂಡಿದ ಆವರಣವನ್ನು ನಿರ್ಮಿಸಲಾಗಿದೆ. ಹನುಮಾನ್ ಲಂಗೂರ್ಗಳ ಸಾಮಾನ್ಯ ಆಯಸ್ಸು 18-20 ವರ್ಷ ಎಂದು ಜೈವಿಕ ಉದ್ಯಾನವನದ ನಿರ್ದೇಶಕ ಎಚ್.ಜೆ. ಭಂಡಾರಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
MUST WATCH
ಹೊಸ ಸೇರ್ಪಡೆ
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ