ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಜೂ. 4 ರಂದು ಫ‌ಲಿತಾಂಶ

Team Udayavani, Apr 27, 2024, 1:21 AM IST

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಮಂಗಳೂರು/ಉಡುಪಿ:ಹಲವು ದಿನಗಳ ಪ್ರಚಾರ, ಆರೋಪ – ಪ್ರತ್ಯಾರೋಪದ ಬಳಿಕ ದಕ್ಷಿಣ ಕನ್ನಡ ಹಾಗೂ ಉಡುಪಿ -ಚಿಕ್ಕಮಗಳೂರು ಲೋಕಸಭಾ ಕ್ಷೇತ್ರಗಳಲ್ಲಿ ಶುಕ್ರವಾರ ಮತದಾನ ಶಾಂತಿಯುತವಾಗಿ ನಡೆದಿದ್ದು, ಕಣದಲ್ಲಿರುವ ಒಂಭತ್ತು ಮಂದಿ ಅಭ್ಯರ್ಥಿಗಳ ಭವಿಷ್ಯ ಇದೀಗ ಮತಪೆಟ್ಟಿಗೆಯಲ್ಲಿ ಭದ್ರವಾಗಿದ್ದು, ಸ್ಟ್ರಾಂಗ್‌ ರೂಮ್‌ನಲ್ಲಿ ಇರಿಸಲಾಗಿದೆ.

ಮತದಾನ ಮುಗಿದ ಬಳಿಕ ಮತಗಟ್ಟೆಗಳಿಂದ ಮತಯಂತ್ರಗಳನ್ನು ಆಯಾ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಡಿ- ಮಸ್ಟರಿಂಗ್‌ ಕೇಂದ್ರಗಳಿಗೆ ರಾತ್ರಿ ತರಲಾಯಿತು. ಡಿ-ಮಸ್ಟರಿಂಗ್‌ ಪ್ರಕ್ರಿಯೆ ನಡೆದ ಬಳಿಕ ಮಂಗಳೂರು ಸುರತ್ಕಲ್‌ನ ಎನ್‌ಐಟಿಕೆಯಲ್ಲಿರುವ ಸ್ಟ್ರಾಂಗ್‌ ರೂಂಗೆ ಮತಯಂತ್ರಗಳನ್ನು ಸ್ಥಳಾಂತರಿಸಲಾಗಿದೆ.

ವಿವಿಪ್ಯಾಟ್‌, ಇವಿಎಂ ಮೆಷಿನ್‌ ಅನ್ನು ಬಿಗುಭದ್ರತೆಯಲ್ಲಿ ಎನ್‌ಐಟಿಕೆಯಲ್ಲಿ ಇರಿಸಲಾಗಿದ್ದು, ಶಸ್ತ್ರಸಜ್ಜಿತ ಅರೆಮಿಲಿಟರಿ ಪಡೆ ಮತ್ತು ಪೊಲೀಸರಿಂದ ವಿಶೇಷ ಭದ್ರತೆ ಒದಗಿಸಲಾಗಿದೆ. ಮತಎಣಿಕೆಗೆ ಸುಮಾರು ಇನ್ನು 40 ದಿನಗಳು ಇರುವುದರಿಂದ ಸ್ಟ್ರಾಂಗ್‌ ರೂಮ್‌ನಲ್ಲಿ ಇರಿಸಲಾದ ಮತಯಂತ್ರಗಳನ್ನು ಪಾಳಿಯಲ್ಲಿ ಭದ್ರತಾ ಸಿಬಂದಿ ಕಾಯಲಿದ್ದಾರೆ.

ಸುಳ್ಯ, ಬೆಳ್ತಂಗಡಿ ಮೊದಲಾದ ಕ್ಷೇತ್ರಗಳಿಂದ ಮತಯಂತ್ರಗಳು ಸ್ಟ್ರಾಂಗ್‌ ಸೇರುವಾಗ ತಡರಾತ್ರಿಯಾಗಿತ್ತು. ಮತಯಂತ್ರಗಳ ಡಿ-ಮಸ್ಟರಿಂಗ್‌ ಪ್ರಕ್ರಿಯೆ ಮುಗಿಯುತ್ತಲೇ ಮತಗಟ್ಟೆಗೆ ನಿಯೋಜಿತರಾಗಿದ್ದ ಸಿಬಂದಿ ನಿಟ್ಟುಸಿರು ಬಿಟ್ಟರು. ಮಹಿಳಾ ಸಿಬಂದಿಯನ್ನು ಜಿಲ್ಲಾಡಳಿತ ಆಯಾ ಕ್ಷೇತ್ರದಲ್ಲೇ ಚುನಾವಣ ಕರ್ತವ್ಯಕ್ಕೆ ನಿಯೋಜಿಸಿತ್ತಾದರೂ, ಪ್ರಕ್ರಿಯೆ ತಡವಾದ ಹಿನ್ನೆಲೆಯಲ್ಲಿ ಕುಟುಂಬದ ಸದಸ್ಯರು ಡಿಮಸ್ಟರಿಂಗ್‌ ಕೇಂದ್ರದ ಬಳಿ ಕಾಯುತ್ತಿದ್ದ ದೃಶ್ಯಗಳು ಶುಕ್ರವಾರ ರಾತ್ರಿ ವೇಳೆ ಕಂಡು ಬಂದಿತು.

ಮತ ಎಣಿಕೆಯತ್ತ ಚಿತ್ತ
ಅಭ್ಯರ್ಥಿಗಳು, ರಾಜಕೀಯ ಪಕ್ಷಗಳ ಮುಖಂಡರು, ಕಾರ್ಯಕರ್ತರು ಹಾಗೂ ಮತದಾರನ ಚಿತ್ತ ಮತ ಎಣಿಕೆಯತ್ತ ಹರಿದಿದೆ. ಈಗಾಗಲೇ ಆಯಾ ಪಕ್ಷಗಳ ಮುಖಂಡರು, ಕಾರ್ಯಕರ್ತರು ಹಾಗೂ ರಾಜಕೀಯ ಉತ್ಸಾಹಿಗಳು ಗೆಲ್ಲುವ ಕುದುರೆ ಯಾವುದು ಎಂಬ ಚರ್ಚೆ ಆರಂಭಿಸಿದ್ದಾರೆ.

ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾ ಧಿಕಾರಿ ಮುಲ್ಲೈ ಮುಗಿಲನ್‌ ಎಂ.ಪಿ., ಮಂಗಳೂರು ನಗರ ಪೊಲೀಸ್‌ ಆಯುಕ್ತ ಅನುಪಮ್‌ ಅಗರ್‌ವಾಲ್‌, ಜಿಲ್ಲಾ ಪೊಲೀಸ್‌ ವರಿಷ್ಠಾ ಧಿಕಾರಿ ರಿಷ್ಯಂತ್‌ ಸಿ.ಬಿ. ಹಾಗೂ ಚುನಾವಣ ಪೊಲೀಸ್‌ ವೀಕ್ಷಕರಾದ ಬಿನಿತಾ ಠಾಕೂರ್‌ ಅವರು ಎನ್‌ಐಟಿಕೆ ಕೇಂದ್ರಕ್ಕೆ ಈಗಾಗಲೇ ಭೇಟಿ ನೀಡಿ, ಸಿದ್ಧತೆ ಪರಿಶೀಲಿಸಿದರು.

ಸುರತ್ಕಲ್‌ನ ಎನ್‌ಐಟಿಕೆ ಆವರಣದಲ್ಲಿ ಮತ್ತು ಉಡುಪಿಯ ಸೇಂಟ್‌ಸಿಸಿಲಿ ಪ್ರೌಢ ಶಾಲೆಯಲ್ಲಿ ಜೂ. 4ರಂದು ಮತ ಎಣಿಕೆ ನಡೆಯಲಿದೆ. ಒಟ್ಟಿನಲ್ಲಿ ಫ‌ಲಿತಾಂಶಕ್ಕಾಗಿ ಸುಮಾರು ಒಂದು ತಿಂಗಳಿಗೂ ಹೆಚ್ಚು ಕಾಲ ಕಾಯುವ ಅನಿವಾರ್ಯ ಇದೆ.

 

 

ಟಾಪ್ ನ್ಯೂಸ್

11-

Sulya: ಕಾರು-ಬೈಕ್‌ ಅಪಘಾತ; ಸವಾರನಿಗೆ ಗಾಯ

G. T. Devegowda; ಲೈಂಗಿಕ ದೌರ್ಜನ್ಯ ಪ್ರಕರಣ ಗೊತ್ತಿದ್ದರೆ ಟಿಕೆಟ್‌ ನೀಡುತ್ತಿರಲಿಲ್ಲ

G. T. Devegowda; ಲೈಂಗಿಕ ದೌರ್ಜನ್ಯ ಪ್ರಕರಣ ಗೊತ್ತಿದ್ದರೆ ಟಿಕೆಟ್‌ ನೀಡುತ್ತಿರಲಿಲ್ಲ

Dharwad; ಮತದಾನಕ್ಕಾಗಿ ತವರಿಗೆ ಮರಳಿದ ವಿನಯ್ ಕುಲಕರ್ಣಿ; ಸಪ್ತಾಪೂರದಲ್ಲಿ ಕಿಕ್ಕಿರದ ಜನರು

Dharwad; ಮತದಾನಕ್ಕಾಗಿ ತವರಿಗೆ ಮರಳಿದ ವಿನಯ್ ಕುಲಕರ್ಣಿ; ಸಪ್ತಾಪೂರದಲ್ಲಿ ಕಿಕ್ಕಿರಿದ ಜನರು

Prajwal Revanna ಪ್ರಕರಣವನ್ನು ಸಿಬಿಐಗೆ ವಹಿಸಲಿ: ಜಗದೀಶ್‌ ಶೆಟ್ಟರ್‌

Prajwal Revanna ಪ್ರಕರಣವನ್ನು ಸಿಬಿಐಗೆ ವಹಿಸಲಿ: ಜಗದೀಶ್‌ ಶೆಟ್ಟರ್‌

Karnataka BJP ಪೋಸ್ಟ್ ಡಿಲೀಟ್ ಮಾಡಲು ಟ್ವಿಟರ್ ಗೆ ಸೂಚಿಸಿದ ಚುನಾವಣಾ ಆಯೋಗ

Karnataka BJP ಪೋಸ್ಟ್ ಡಿಲೀಟ್ ಮಾಡಲು ಟ್ವಿಟರ್ ಗೆ ಸೂಚಿಸಿದ ಚುನಾವಣಾ ಆಯೋಗ

Dandeli ಮತದಾನದ ದಿನವೇ ಗ್ಯಾರೇಜ್ ಸೇರಿದ ಪಿಎಸ್ಐ ವಾಹನ

Dandeli ಮತದಾನದ ದಿನವೇ ಗ್ಯಾರೇಜ್ ಸೇರಿದ ಪಿಎಸ್ಐ ವಾಹನ

8-panaji

Panaji: ಮತದಾರರನ್ನು ಸೆಳೆದ ಇಕೋ ಫ್ರೆಂಡ್ಲಿ ಮತಕೇಂದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru Airport; 40.40 ಲಕ್ಷ ರೂ. ಮೌಲ್ಯದ ಚಿನ್ನ ವಶ

Mangaluru Airport; 40.40 ಲಕ್ಷ ರೂ. ಮೌಲ್ಯದ ಚಿನ್ನ ವಶ

Mangaluru Airport; ನಾಲ್ಕು ತಿಂಗಳಲ್ಲಿ 4.45 ಕೋ.ರೂ. ಮೌಲ್ಯದ “ಚಿನ್ನ’ದ ಬೇಟೆ

Mangaluru Airport; ನಾಲ್ಕು ತಿಂಗಳಲ್ಲಿ 4.45 ಕೋ.ರೂ. ಮೌಲ್ಯದ “ಚಿನ್ನ’ದ ಬೇಟೆ

ಇಂದು ವಿಶ್ವ ಅಸ್ತಮಾ ದಿನ; ದೈಹಿಕ- ಮಾನಸಿಕವಾಗಿ ಕುಗ್ಗಿಸುವ “ಅಸ್ತಮಾ’

ಇಂದು ವಿಶ್ವ ಅಸ್ತಮಾ ದಿನ; ದೈಹಿಕ- ಮಾನಸಿಕವಾಗಿ ಕುಗ್ಗಿಸುವ “ಅಸ್ತಮಾ’

ತಾಪಮಾನದಲ್ಲಿ ಏರಿಕೆ; ಮುಂಜಾಗ್ರತಾ ಕ್ರಮವಾಗಿ ವೆನ್ಲಾಕ್‌ ನಲ್ಲಿ 6 ಬೆಡ್‌ ಮೀಸಲು

D.K ತಾಪಮಾನದಲ್ಲಿ ಏರಿಕೆ; ಮುಂಜಾಗ್ರತಾ ಕ್ರಮವಾಗಿ ವೆನ್ಲಾಕ್‌ ನಲ್ಲಿ 6 ಬೆಡ್‌ ಮೀಸಲು

May 9: ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ಮೊದಲ ತಂಡದಿಂದ ಹಜ್‌ ಯಾತ್ರೆ

May 9: ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ಮೊದಲ ತಂಡದಿಂದ ಹಜ್‌ ಯಾತ್ರೆ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

11-

Sulya: ಕಾರು-ಬೈಕ್‌ ಅಪಘಾತ; ಸವಾರನಿಗೆ ಗಾಯ

Raichur; ಚುನಾವಣೆ ನಿರತ ಬಿಎಲ್‌ಒ ಸಾವು

Raichur; ಚುನಾವಣೆ ಕರ್ತವ್ಯನಿರತ ಬಿಎಲ್‌ಒ ಸಾವು

10-

Koratagere: ಪಟ್ಟಣಕ್ಕೆ 10 ದಿನಕ್ಕೊಮ್ಮೆ ನೀರು ಸರಬರಾಜು

G. T. Devegowda; ಲೈಂಗಿಕ ದೌರ್ಜನ್ಯ ಪ್ರಕರಣ ಗೊತ್ತಿದ್ದರೆ ಟಿಕೆಟ್‌ ನೀಡುತ್ತಿರಲಿಲ್ಲ

G. T. Devegowda; ಲೈಂಗಿಕ ದೌರ್ಜನ್ಯ ಪ್ರಕರಣ ಗೊತ್ತಿದ್ದರೆ ಟಿಕೆಟ್‌ ನೀಡುತ್ತಿರಲಿಲ್ಲ

Dharwad; ಮತದಾನಕ್ಕಾಗಿ ತವರಿಗೆ ಮರಳಿದ ವಿನಯ್ ಕುಲಕರ್ಣಿ; ಸಪ್ತಾಪೂರದಲ್ಲಿ ಕಿಕ್ಕಿರದ ಜನರು

Dharwad; ಮತದಾನಕ್ಕಾಗಿ ತವರಿಗೆ ಮರಳಿದ ವಿನಯ್ ಕುಲಕರ್ಣಿ; ಸಪ್ತಾಪೂರದಲ್ಲಿ ಕಿಕ್ಕಿರಿದ ಜನರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.