Bill: ಕ್ರಿಮಿನಲ್ ಕಾನೂನುಗಳ ತಿದ್ದುಪಡಿ ವಿಧೇಯಕ ಕುರಿತು ಚರ್ಚೆ
- ಲೋಕಸಭೆಯಲ್ಲಿ ಪರ-ವಿರೋಧ ಅಭಿಪ್ರಾಯ ಮಂಡನೆ
Team Udayavani, Dec 19, 2023, 9:37 PM IST
ನವದೆಹಲಿ: ಪ್ರತಿಪಕ್ಷಗಳ ಮೂರನೇ ಎರಡರಷ್ಟು ಸಂಸದರ ಅನುಪಸ್ಥಿತಿಯಲ್ಲೇ ಮಂಗಳವಾರ ಕ್ರಿಮಿನಲ್ ಕಾನೂನುಗಳ ತಿದ್ದುಪಡಿ ವಿಧೇಯಕಗಳ ಕುರಿತ ಚರ್ಚೆ ಲೋಕಸಭೆಯಲ್ಲಿ ಆರಂಭಗೊಂಡಿದೆ.
ಪರಿಷ್ಕೃತ ಭಾರತೀಯ ನ್ಯಾಯ ಸಂಹಿತಾ, ಭಾರತೀಯ ನಾಗರಿಕ ಸುರಕ್ಷತಾ ಸಂಹಿತಾ ಮತ್ತು ಭಾರತೀಯ ಸಾಕ್ಷ್ಯ ವಿಧೇಯಕಗಳ ಕುರಿತು ಕಳೆದ ಗುರುವಾರವೇ ಚರ್ಚೆ ಆರಂಭವಾಗಬೇಕಿತ್ತು. ಆದರೆ, ಪ್ರತಿಪಕ್ಷಗಳ ಗದ್ದಲದಿಂದಾಗಿ ಅದು ಸಾಧ್ಯವಾಗಿರಲಿಲ್ಲ. ಮಂಗಳವಾರ ಈ ಮೂರೂ ವಿಧೇಯಕಗಳ ಕುರಿತು ಚರ್ಚೆ ನಡೆದಿದ್ದು, ಕೆಲವು ಸಂಸದರು “ಈ ವಿಧೇಯಕಗಳು ಶಿಕ್ಷೆಯಲ್ಲ, ನ್ಯಾಯವನ್ನು ಕಲ್ಪಿಸಿಕೊಡಲಿದೆ’ ಎಂದು ವಿಧೇಯಕದ ಪರ ಮಾತನಾಡಿದರೆ, ಇನ್ನು ಕೆಲವರು ವಿಧೇಯಕದಲ್ಲಿನ ಲೋಪಗಳ ಬಗ್ಗೆ ಮಾತನಾಡಿದ್ದಾರೆ.
ಭಾರತೀಯ ದಂಡ ಸಂಹಿತೆಯಲ್ಲಿ ದಂಡದತ್ತಲೇ ಗಮನ ಕೇಂದ್ರೀಕರಿಸಲಾಗಿತ್ತು. ಆದರೆ, ಹೊಸ ವಿಧೇಯಕದಲ್ಲಿ ನ್ಯಾಯ ಒದಗಿಸುವತ್ತ ಆದ್ಯತೆ ನೀಡಲಾಗಿದೆ ಎಂದು ಬಿಜೆಪಿ ನಾಯಕ, ಮಾಜಿ ಸಚಿವ ರವಿಶಂಕರ್ ಪ್ರಸಾದ್ ಹೇಳಿದ್ದಾರೆ. ಚರ್ಚೆಯಲ್ಲಿ ಪಾಲ್ಗೊಂಡು ಮಾತಾಡಿದ ಬಿಜೆಡಿಯ ಭತೃìಹರಿ ಮೆಹ್ತಾಬ್ ಅವರು, ಹೊಸ ವಿಧೇಯಕಗಳು ಕಾನೂನು ಜಾರಿ ಸಂಸ್ಥೆಗಳಿಗೆ ಅತಿಯಾದ ಅಧಿಕಾರವನ್ನು ಕೊಡುತ್ತದೆ. ಪ್ರತಿಪಕ್ಷಗಳನ್ನು ಹಣಿಯಲು ರಾಜಕೀಯ ಅಸ್ತ್ರವನ್ನಾಗಿಯೂ ಇದು ಬಳಕೆಯಾಗುವ ಅಪಾಯವಿದೆ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ
MUST WATCH
ಹೊಸ ಸೇರ್ಪಡೆ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ