HC: ಸಾಲ ಬಾಕಿ ಪ್ರಕರಣ: ಜಾರಕಿಹೊಳಿ ವಿರುದ್ಧ ಸದ್ಯ ಕ್ರಮ ಕೈಗೊಳ್ಳದಂತೆ ಹೈಕೋರ್ಟ್‌ ಸೂಚನೆ

-ಮಗನ ಮದುವೆ ಹಿನ್ನೆಲೆಯಲ್ಲಿ ಹೈಕೋರ್ಟ್‌ನಿಂದ ಈ "ಪರಿಹಾರ'

Team Udayavani, Feb 9, 2024, 9:47 PM IST

ramesh jarakiholi

ಬೆಂಗಳೂರು: ಅಪೆಕ್ಸ್‌ ಬ್ಯಾಂಕಿನಿಂದ ಪಡೆದ 439 ಕೋಟಿ ರೂ. ಸಾಲ ಮರು ಪಾವತಿ ಮಾಡದ ಆರೋಪ ಎದುರಿಸುತ್ತಿರುವ ಬಿಜೆಪಿ ಶಾಸಕ ರಮೇಶ್‌ ಜಾರಕಿಹೊಳಿ ವಿರುದ್ಧ ಮುಂದಿನ ವಿಚಾರಣೆವರೆಗೆ ಯಾವುದೇ ಕ್ರಮಕ್ಕೆ ಮುಂದಾಗಬಾರದು ಎಂದು ಹೈಕೋರ್ಟ್‌ ನಿರ್ದೇಶನ ನೀಡಿದೆ.

ತಮ್ಮ ವಿರುದ್ಧ ದಾಖಲಾಗಿರುವ ಪ್ರಕರಣವನ್ನು ರದ್ದುಪಡಿಸುವಂತೆ ಕೋರಿ ರಮೇಶ್‌ ಜಾರಕಿಹೊಳಿ ಹಾಗೂ ಇತರರು ಸಲ್ಲಿಸಿದ ಅರ್ಜಿಯನ್ನು ನ್ಯಾಯಮೂರ್ತಿ ಕೃಷ್ಣ ಎಸ್‌. ದೀಕ್ಷಿತ್‌ ಅವರಿದ್ದ ಏಕಸದಸ್ಯ ನ್ಯಾಯಪೀಠ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ಅರ್ಜಿದಾರ ರಮೇಶ್‌ ಜಾರಕಿಹೊಳಿ ಪರ ವಕೀಲರು, ಫೆ.26ರಂದು ಅರ್ಜಿದಾರರ ಮಗನ ಮದುವೆ ನಿಶ್ಚಯವಾಗಿದೆ. ಈ ಸಂದರ್ಭದಲ್ಲಿ ತನಿಖಾಧಿಕಾರಿಗಳು ಅವರನ್ನು ಬಂಧಿಸುವ ಸಾಧ್ಯತೆಯಿದೆ. ಆ ಹಿನ್ನೆಲೆಯಲ್ಲಿ ತಮ್ಮ ಕಕ್ಷಿದಾರರಿಗೆ ರಕ್ಷಣೆ ಬೇಕು ಎಂದು ಮನವಿ ಮಾಡಿದರು.

ಇದನ್ನು ಪರಿಗಣಿಸಿದ ನ್ಯಾಯಪೀಠ, ಹಿಂದೂ ಧರ್ಮದ ಸಂಪ್ರದಾಯಗಳ ಪ್ರಕಾರ ಮಗನ ಮದುವೆಯಲ್ಲಿ ತಂದೆ ಹಾಜರಿರುವುದು ಅತ್ಯಗತ್ಯ. ಆದ ಕಾರಣ ಮುಂದಿನ ವಿಚಾರಣೆವರೆಗೆ ಪ್ರಕರಣ ಮೊದಲ ಅರ್ಜಿದಾರರಾಗಿರುವ ರಮೇಶ್‌ ಜಾರಕಿಹೊಳಿ ಅವರ ವಿರುದ್ಧ ಯಾವುದೇ ಕ್ರಮಕ್ಕೆ ಮುಂದಾಗಬಾರದು ಎಂದು ತನಿಖಾಧಿಕಾರಿಗಳಿಗೆ ನಿರ್ದೇಶನ ನೀಡಿತು. ಆದರೆ, ಪ್ರಕರಣದ ಇತರ ಅರ್ಜಿದಾರರ ವಿರುದ್ಧ ತನಿಖೆ ನಡೆಸುವುದಕ್ಕೆ ಯಾವುದೇ ಅಡ್ಡಿ ಇಲ್ಲ ಎಂದು ನ್ಯಾಯಪೀಠ ಇದೇ ವೇಳೆ ಸ್ಪಷ್ಟಪಡಿಸಿತು.

ಇದೇ ವೇಳೆ ಅರ್ಜಿದಾರರು ಅಪೆಕ್ಸ್‌ ಬ್ಯಾಂಕಿನಿಂದ ಪಡೆದಿರುವ ಸಾಲ ಮತ್ತು ಮರು ಪಾವತಿ ಮಾಡಿರುವುದಕ್ಕೆ ಸಂಬಂಧಿಸಿದಂತೆ ಸಂಪೂರ್ಣ ವಿವರಣೆಯನ್ನು ಮುಂದಿನ ವಿಚಾರಣೆ ವೇಳೆ ಸಲ್ಲಿಸುವಂತೆಯೂ ಸೂಚನೆ ನೀಡಿದ ನ್ಯಾಯಪೀಠ ವಿಚಾರಣೆಯನ್ನು ಮುಂದೂಡಿತು.

ಪ್ರಕರಣದ ಹಿನ್ನೆಲೆ:
ಬೆಳಗಾವಿಯ ಗೋಕಾಕದಲ್ಲಿರುವ ಸೌಭಾಗ್ಯಲಕ್ಷ್ಮಿಶುಗರ್‌ ಲಿಮಿಟೆಡ್‌ನ‌ಲ್ಲಿ ಯಂತ್ರೋಪಕರಣ ಅಳವಡಿಕೆ, ವಿಸ್ತರಣೆ ಮತ್ತು ನಿರ್ವಹಣೆಗಾಗಿ ರಮೇಶ್‌ ಜಾರಕಿಹೊಳಿ 2013ರಿಂದ 2017ರ ಅವಧಿಯಲ್ಲಿ 439 ಕೋಟಿ ರೂ. ಸಾಲ ಪಡೆದಿದ್ದರು. ಅದನ್ನು ಮರು ಪಾವತಿ ಮಾಡಿರಲಿಲ್ಲ. ಸಾಲ ಪಡೆದಾಗ ಜಾರಕಿಹೊಳಿ ಕಾರ್ಖಾನೆಯ ವ್ಯವಸ್ಥಾಪಕ ನಿರ್ದೇಶಕರಾಗಿದ್ದಿ, ವಸಂತ್‌ ಮತ್ತು ಶಂಕರ್‌ ನಿರ್ದೇಶಕರಾಗಿದ್ದರು. ಸಾಲ ಇರುವ ಸಂದರ್ಭದಲ್ಲಿ ನಿರ್ದೇಶಕರನ್ನು ಬದಲಿಸುವಂತಿಲ್ಲ ಎಂಬ ಷರತ್ತು ವಿಧಿಸಲಾಗಿತ್ತು. ಆದರೆ, ಜಾರಕಿಹೊಳಿ ರಾಜಿನಾಮೆ ನೀಡಿದ್ದರು. ಆ ಸ್ಥಾನಕ್ಕೆ ಬೇರೊಬ್ಬರನ್ನು ನೇಮಕ ಮಾಡಲಾಗಿತ್ತು. ಈ ವಿಚಾರವನ್ನು ತಮ್ಮ ಗಮನಕ್ಕೆ ತಂದಿಲ್ಲ ಎಂದು ಕರ್ನಾಟಕ ರಾಜ್ಯ ಸಹಕಾರ ಅಪೆಕ್ಸ್‌ ಬ್ಯಾಂಕ್‌ ಲಿಮಿಟೆಡ್‌ನ‌ ವ್ಯವಸ್ಥಾಪಕ ನಿರ್ದೇಶಕರು ಜನವರಿ 5ರಂದು ದೂರು ನೀಡಿದ್ದರು. ಇದನ್ನು ಆಧರಿಸಿ ವಿವಿಪುರಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅದನ್ನು ಹೈಕೋರ್ಟ್‌ನಲ್ಲಿ ಪ್ರಶ್ನಿಸಲಾಗಿದೆ.

ಟಾಪ್ ನ್ಯೂಸ್

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.