ಆನ್‌ಲೈನ್‌ನಲ್ಲಿ ಉದ್ಯೋಗ ಮಾಹಿತಿಗೆ ನಿರ್ಧಾರ!


Team Udayavani, May 22, 2020, 7:28 AM IST

udyo mahi

ಬೆಂಗಳೂರು: ಕೋವಿಡ್‌ 19ನಿಂದ ಆನ್‌ಲೈನ್‌ ತರಗತಿ ಸಹಿತವಾಗಿ ಆನ್‌ಲೈನ್‌ ವ್ಯವಹಾರ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಕಾಲೇಜು ಶಿಕ್ಷಣ ಇಲಾಖೆ ಆನ್‌ಲೈನ್‌ ಮೂಲಕವೇ ಉದ್ಯೋಗ ಮಾಹಿತಿಯನ್ನು ವಿದ್ಯಾರ್ಥಿಗಳಿಗೆ ನೀಡಲು ನಿರ್ಧರಿಸಿದೆ. ಎಲ್ಲ ಕಾಲೇಜುಗಳಲ್ಲೂ ಪ್ಲೇಸ್‌ಮೆಂಟ್‌ ಸೆಲ್‌( ಉದ್ಯೋಗ ಮಾಹಿತಿ ಕೋಶ) ಇದೆ. ಆದರೆ, ಲಾಕ್‌ಡೌನ್‌ ಪರಿಣಾಮ ಕಳೆದ ಎರಡು ತಿಂಗಳಿಂದ ಈ ಕೋಶ ಸರಿಯಾಗಿ ಕಾರ್ಯನಿರ್ವಹಿಸುತ್ತಿಲ್ಲ.

ಹೀಗಾಗಿ ಈ ಕೋಶದ ಮೂಲಕ ವಿದ್ಯಾರ್ಥಿಗಳಿಗೆ ಸಿಗಬೇಕಾದ ಮಾಹಿತಿಯನ್ನು ಆನ್‌ಲೈನ್‌ ಮೂಲಕ ಒದಗಿಸಲು ಕಾಲೇಜು ಶಿಕ್ಷಣ ಇಲಾಖೆ ಮುಂದಾಗಿದ್ದು, ಎನ್‌ಐಸಿ ಸಹಯೋಗದಲ್ಲಿ ವೆಬ್‌ಸೈಟ್‌ ಉನ್ನತೀಕರಿಸುವ ಕಾರ್ಯವೂ ಆರಂಭಿಸಿದೆ. ಯುವ ಸಬಲೀಕರಣ  ಘಟಕ ಮತ್ತು ಉದ್ಯೋಗ ಮಾಹಿತಿ ಕೋಶ ಜತೆಯಾಗಿ ವಿದ್ಯಾರ್ಥಿಗಳಿಗೆ ಆನ್‌ ಲೈನ್‌ ಉದ್ಯೋಗ ಮೇಳ ಸಂಘಟಿಸುವ ಬಗ್ಗೆಯೂ ಚಿಂತನೆ ನಡೆದಿದೆ ಎಂದು ಕಾಲೇಜು ಶಿಕ್ಷಣ ಇಲಾಖೆ ಹಿರಿಯ ಅಧಿಕಾರಿಯೊಬ್ಬರು ಉದಯವಾಣಿಗೆ  ಮಾಹಿತಿ ನೀಡಿದರು.

ಉದ್ಯೋಗ ನೀಡುವ ಸಂಸ್ಥೆ ಮತ್ತು ವಿದ್ಯಾರ್ಥಿ ನಡುವೆ ನೇರ ಮುಖಾಮುಖೀ ಸಂದರ್ಶನದ ವೇಳೆ ಮಾತ್ರ ಇರುತ್ತದೆ. ಇದಕ್ಕಿಂತ ಪೂರ್ವದ ಎಲ್ಲ ಹಂತಗಳು ಆನ್‌ಲೈನ್‌ ಮೂಲಕವೇ ನಡೆಯಲಿದೆ. ಸಂದರ್ಶನ ಕೂಡ  ಆನ್‌ಲೈನ್‌ ಮೂಲಕ ನಡೆಸುವ ಬಗ್ಗೆಯೂ ಚರ್ಚೆಗಳು ಆರಂಭವಾಗಿದೆ. ಆದರೆ, ಸದ್ಯಕ್ಕೆ ಮಾಹಿತಿ ವಿನಿಮಯ ಪ್ರಕ್ರಿಯೆ ಮಾತ್ರ ಆನ್‌ಲೈನ್‌ ನಲ್ಲಿ ಇರಲಿದೆ ಎಂದು ವಿವರಿಸಿದರು.

ಆನ್‌ಲೈನ್‌ ಉದ್ಯೋಗ ಮೇಳ ಹೇಗೆ?: ಕಾಲೇಜು ಶಿಕ್ಷಣ ಇಲಾಖೆಯ ವೆಬ್‌ಸೈಟ್‌ನಲ್ಲಿ ಇದಕ್ಕಾಗಿಯೇ ಪ್ರತ್ಯೇಕ ಕೊಂಡಿಯೊಂದನ್ನು(ಲಿಂಕ್‌) ಉನ್ನತೀಕರಿಸಲಾಗುತ್ತಿದೆ. ಈ ಕೊಂಡಿಯ ಮೂಲಕ ವಿದ್ಯಾರ್ಥಿಗಳು ತಮ್ಮ ಶೈಕ್ಷಣಿಕ ಸಾಧನೆಯಾಧಾರಿತ ಸ್ವವಿವರ ಅಪ್ಲೋಡ್‌ ಮಾಡಲಿದ್ದಾರೆ. ಸಂಬಂಧಪಟ್ಟ ಸಂಸ್ಥೆಯ ಪ್ರತಿನಿಧಿಗಳು ವಿದ್ಯಾರ್ಥಿಯ ಸ್ವ ವಿವರ ಪರಿಶೀಲಿಸಿ, ತಮ್ಮಲ್ಲಿರುವ ಉದ್ಯೋಗಾವಕಾಶದ ಲಭ್ಯತೆಯ ಆಧಾರದಲ್ಲಿ ಪಟ್ಟಿ ಅಂತಿಮಗೊಳಿಸಿ, ಕಾಲೇಜು  ಶಿಕ್ಷಣ ಇಲಾಖೆಯ ಉದ್ಯೋಗ ಮಾಹಿತಿ ಕೋಶಕ್ಕೆ ನೀಡಲಿವೆ.

ಅಲ್ಲಿಂದ ವಿದ್ಯಾರ್ಥಿಗಳಿಗೆ ಸೂಕ್ತ ಮಾಹಿತಿ ಒದಗಿಸಿ, ಯಾವಾಗ ಸಂದರ್ಶನಕ್ಕೆ ಬರಬೇಕು ಎಂಬಿತ್ಯಾದಿ ವಿವರ ತಿಳಿಸಲಿದ್ದಾರೆ. ವಿದ್ಯಾರ್ಥಿಗಳು ನೇರವಾಗಿ ಸಂದರ್ಶನದಲ್ಲಿ  ಭಾಗವಹಿಸಿದರೆ ಸಾಕಾಗುತ್ತದೆ. ಅಲ್ಲಿಯೇ ಉದ್ಯೋಗಕ್ಕೆ ಸೇರುವ ಆದೇಶ ಪ್ರತಿಯನ್ನು ಸಂಸ್ಥೆಯಿಂದ ನೀಡಲಾಗುತ್ತದೆ ಎಂದು ಉದ್ಯೋಗ ಕೋಶದ ಅಧಿಕಾರಿ ಮಾಹಿತಿ ನೀಡಿದರು.

ಉದ್ಯೋಗದ ಮಾಹಿತಿ ಆನ್‌ಲೈನ್‌ ಮೂಲಕ ನೀಡುವ ಮತ್ತು ಆನ್‌ಲೈನ್‌ ಉದ್ಯೋಗ ಮೇಳಕ್ಕೆ ಅನುಕೂಲ ಆಗುವಂತೆ ಎನ್‌ಐಸಿ ಜತೆ ಸೇರಿ ಸಾಫ್ಟ್ವೇರ್‌ ಅಪ್‌ಡೇಟ್‌ ಮಾಡುತ್ತಿದ್ದೇವೆ. ವಿದ್ಯಾರ್ಥಿಗಳಿಗೆ ಶೀಘ್ರ ಈ ವ್ಯವಸ್ಥೆ ಸಿಗುವಂತೆ  ಮಾಡುತ್ತೇವೆ.
-ಪ್ರೊ.ಎಸ್‌.ಮಲ್ಲೇಶ್ವರಪ್ಪ, ನಿರ್ದೇಶಕ, ಕಾಲೇಜು ಶಿಕ್ಷಣ ಇಲಾಖೆ

* ರಾಜು ಖಾರ್ವಿ ಕೊಡೇರಿ

ಟಾಪ್ ನ್ಯೂಸ್

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

mamata

EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weweqwe

Globant; ಮನೆಯಿಂದಲೇ 30,000 ಮಂದಿ ಕೆಲಸ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.