ಸ್ಥಳೀಯರಿಂದ ಪ್ರತಿಭಟನೆಗೆ ನಿರ್ಧಾರ

ಕೋಡಿ ಸೇತುವೆ ಕಾಮಗಾರಿ ಸ್ಥಗಿತ ; ಒಂದು ಸೇತುವೆ ಬಹುತೇಕ ಪೂರ್ಣ

Team Udayavani, Sep 27, 2021, 5:47 AM IST

ಸ್ಥಳೀಯರಿಂದ ಪ್ರತಿಭಟನೆಗೆ ನಿರ್ಧಾರ

ಕುಂದಾಪುರ: ವಿನಾಯಕ ಥಿಯೇಟರ್‌ ಬಳಿಯಿಂದ ಕೋಡಿ ಪ್ರದೇಶಕ್ಕೆ ತೆರಳುವ ರಸ್ತೆಯಲ್ಲಿ ಎರಡು ಸೇತುವೆಗಳ ನಿರ್ಮಾಣ ಕಾರ್ಯ ನಡೆಯುತ್ತಿದೆ. ಈಗ ಮಳೆಗಾಲದ ನೆಪದಲ್ಲಿ ಕಾಮಗಾರಿ ಸ್ಥಗಿತವಾಗಿದ್ದು ಇನ್ನೂಪುನರಾರಂಭಿಸದ ಕಾರಣ ಸ್ಥಳೀಯರು ಪ್ರತಿಭಟನೆ ನಡೆಸಲು ಸಿದ್ಧತೆ ನಡೆಸಿದ್ದಾರೆ.

ಒಂದು ಸೇತುವೆ ಬಹುತೇಕ ಪೂರ್ಣವಾಗಿದ್ದರೂ ಓಡಾಟಕ್ಕೆ ಇನ್ನೂ ಬಿಟ್ಟುಕೊಟ್ಟಿಲ್ಲ. ಇನ್ನೊಂದು ಕಾಮಗಾರಿ ಆರಂಭದ ಹಂತದಲ್ಲಿದೆ.ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರ ಪ್ರಯತ್ನದಿಂದ ಕೋಡಿಯ ಎರಡು ಸೇತುವೆಗಾಗಿ 2 ಕೋ.ರೂ. ವೆಚ್ಚದಲ್ಲಿ ಮಂಜೂರಾಗಿತ್ತು. ಕಾಮಗಾರಿ ಆರಂಭವಾಗಿ ಮಾರ್ಚ್‌, ಎಪ್ರಿಲ್‌ ವೇಳೆಗೆ ಪೂರ್ಣ ಆಗಬೇಕಿತ್ತು. ಲಾಕ್‌ಡೌನ್‌ ಆರಂಭವಾದ ಕಾರಣ ಕಾಮಗಾರಿ ನನೆಗುದಿಗೆ ಬಿತ್ತು.ಜತೆಗೆ ಕಾಮಗಾರಿಯಲ್ಲಿ ಒಂದಷ್ಟು ಮಾರ್ಪಾಡು ಮಾಡಲ್ಪಟ್ಟಿತ್ತು. ಸ್ಥಳೀಯ ಮನೆಗಳು ಬಿರುಕು ಬಿಡತೊಡಗಿದಾಗ ಮೂಲ ನಕ್ಷೆಯಲ್ಲಿ ಒಂದಷ್ಟು ಮಾರ್ಪಾಟು ಮಾಡಲಾಯಿತು.

ತಾತ್ಕಾಲಿಕ ಒಡ್ಡು ತೆರವು
ಈ ಮಧ್ಯೆ ಕಾಮಗಾರಿ ಆರಂಭಿಸಿ ಬಾಕಿಯಾದ ಬಳಿಕ ಮಳೆಗಾಲ ಆರಂಭ ವಾಯಿತು. ಆಗ ತಾತ್ಕಾಲಿಕವಾಗಿ ಮಾಡಿದ್ದ ಒಡ್ಡನ್ನು ತೆರವು ಮಾಡಬೇಕಾಗಿ ಬಂತು. ಇಲ್ಲದಿದ್ದರೆ ಬೀಜಾಡಿ, ಕೋಟೇಶ್ವರ ಮೊದಲಾದೆಡೆಯ ಭತ್ತದ ಗದ್ದೆಗಳು ನೀರಿನಲ್ಲಿ ಮುಳುಗುವ ಆತಂಕ ಇತ್ತು. ಇದರ ಬಳಿಕ ತಾತ್ಕಾಲಿಕವಾಗಿ ಕೋಡಿ ರಸ್ತೆಯೇ ಓಡಾಟಕ್ಕೆ ನಿರ್ಬಂಧಕ್ಕೊಳಗಾಯಿತು. ಅದಕ್ಕೂ ಮುನ್ನ ಘನವಾಹನಗಳು ಕೋಟೇಶ್ವರ, ಹಳೆ ಅಳಿವೆ ಮೂಲಕ ಓಡಾಟ ಆರಂಭಸಿದ್ದವು. ಫೆಬ್ರವರಿಯಿಂದ ಈಗಿನವರೆಗೂ ಅಲ್ಲಿಯೇ ಓಡಾಡುತ್ತಿವೆ.

ಇದನ್ನೂ ಓದಿ:6 ತಿಂಗಳ ಜೀವಿತಾವಧಿಯಿದ್ದರೂ, 7 ವರ್ಷ ಪೂರೈಸಿದ ಮಾಮ್‌!

ಈಗ ಶಾಲಾ ಕಾಲೇಜುಗಳು ಪ್ರಾರಂಭ
ವಾಗಿವೆ. ಕೋಡಿ ಸಮುದ್ರತೀರ, ಲೈಟ್‌ಹೌಸ್‌, ಸೀವಾಕ್‌ ಮೊದಲಾದೆಡೆಗೆ ಪ್ರವಾಸಿಗರು ಬರುತ್ತಿದ್ದಾರೆ. ಇವರಿಗೆಲ್ಲ ವಿನಾಯಕ ಬಳಿಯಿಂದ ಕೋಡಿಗೆ ಹೋಗಲು ಅಸಾಧ್ಯವಾಗಿರುವುದು ಸಮಸ್ಯೆಯಾಗಿದೆ. ಶಾಲಾ ಕಾಲೇಜು ವಿದ್ಯಾರ್ಥಿಗಳಿಗಂತೂ ತೀರಾ ಸಮಸ್ಯೆಯಾಗಿದೆ. ರಿಕ್ಷಾ ದವರೂ ಕೊಂಕಣ ಸುತ್ತಿ ಮೈಲಾರಕ್ಕೆ ಹೋದಂತೆ ಸುತ್ತು ಬಳಸಿ ಹೋಗ ಬೇಕಾದ ಕಾರಣ ಬಾಡಿಗೆ ದರವನ್ನು ಪ್ರಯಾಣಿಕರ ಮೇಲೆಯೇ ಹೇರಬೇಕಿದೆ. ಇಲಾಖೆಯಂತೂ ಕೂಡಲೇ ಕಾಮಗಾರಿ ಆರಂಭ ಎನ್ನುತ್ತಿದೆ. ಆದರೆ ಇದರ‌ ಲಕ್ಷಣ ಕಾಣುತ್ತಿಲ್ಲ. ಇದರಿಂದ ಜನತೆ ಇನ್ನು ಪ್ರತಿಭಟನೆ ನಡೆಸಲು ನಿರ್ಧರಿಸಿದ್ದಾರೆ.

ಶೀಘ್ರ ಆರಂಭ
ಕಾಮಗಾರಿ ಆರಂಭಿಸಲು ಗುತ್ತಿಗೆದಾರರಿಗೆ ಸೂಚನೆ ನೀಡಲಾಗಿದೆ. ಫೆಬ್ರವರಿಯಲ್ಲಿ ಕೆಲಸದ ಆದೇಶವಾಗಿದ್ದು ಅದರ ಪ್ರಕಾರ ಅವರು ನವಂಬರ್‌ ಒಳಗೆ ಬಿಟ್ಟುಕೊಡಲೇಬೇಕಾಗುತ್ತದೆ. ಈ ನಿಟ್ಟಿನಲ್ಲಿ ಕಾಮಗಾರಿ ತತ್‌ಕ್ಷಣ ಆರಂಭಿಸಲಾಗುವುದು.
-ಹರ್ಷವರ್ಧನ್‌,
ಸಹಾಯಕ ಎಂಜಿನಿಯರ್‌, ಲೋಕೋಪಯೋಗಿ ಇಲಾಖೆ, ಕುಂದಾಪುರ

ಟಾಪ್ ನ್ಯೂಸ್

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ನೇಣು ಬಿಗಿದು ಆತ್ಮಹತ್ಯೆ

Udupi: ನೇಣು ಬಿಗಿದು ಆತ್ಮಹತ್ಯೆ

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

ಕನ್ನಡಕುದ್ರು: ತೆಂಗಿನ ಮರಗಳಿಗೆ ಕೀಟ ಬಾಧೆ: ಕೃಷಿ ವಿಜ್ಞಾನಿಗಳ ತಂಡ ಭೇಟಿ; ಪರಿಶೀಲನೆ

ಕನ್ನಡಕುದ್ರು: ತೆಂಗಿನ ಮರಗಳಿಗೆ ಕೀಟ ಬಾಧೆ: ಕೃಷಿ ವಿಜ್ಞಾನಿಗಳ ತಂಡ ಭೇಟಿ; ಪರಿಶೀಲನೆ

“ಆಟ’ಕ್ಕೆ ಅಂತಾರಾಷ್ಟ್ರೀಯ ದಿನ ನಿಗದಿಗೆ ಹಕ್ಕೊತ್ತಾಯ

“ಆಟ’ಕ್ಕೆ ಅಂತಾರಾಷ್ಟ್ರೀಯ ದಿನ ನಿಗದಿಗೆ ಹಕ್ಕೊತ್ತಾಯ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

38

Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್‌

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.