2020ರ ರಜಾ ದಿನಗಳ ಘೋಷಣೆ


Team Udayavani, Nov 23, 2019, 3:07 AM IST

Vidhana-Soudha

ಬೆಂಗಳೂರು: ರಾಜ್ಯ ಸರ್ಕಾರ 2020ನೇ ಸಾಲಿನ ಸರ್ಕಾರಿ ರಜಾ ದಿನಗಳನ್ನು ಘೋಷಣೆ ಮಾಡಿದ್ದು ಅಧಿಕೃತ ಅಧಿಸೂಚನೆ ಹೊರಡಿಸಿದೆ. ಎರಡನೇ ಹಾಗೂ ನಾಲ್ಕನೇ ಶನಿವಾರ ಹಾಗೂ ಭಾನುವಾರಗಳನ್ನು ಹೊರತುಪಡಿಸಿ 18 ಸಾರ್ವತ್ರಿಕ ರಜಾ ದಿನಗಳು ಹಾಗೂ 21 ಪರಿಮಿತ ರಜಾ ದಿನಗಳನ್ನು ಘೋಷಣೆ ಮಾಡಲಾಗಿದೆ. ಕೆಲವು ಸಾರ್ವತ್ರಿಕ ರಜಾ ದಿನಗಳು ಭಾನುವಾರ ಹಾಗೂ ಎರಡನೇ ಮತ್ತು ನಾಲ್ಕನೇ ಶನಿವಾರ ಬರುವುದರಿಂದ ಪ್ರತ್ಯೇಕ ಸರ್ಕಾರಿ ರಜೆ ದಿನ ಪರಿಗಣನೆ ಮಾಡಲಾಗಿಲ್ಲ.

ಅಲ್ಲದೇ ಮುಸ್ಲಿಂ ಬಾಂಧವರಿಗೆ ಸರ್ಕಾರ ಘೋಷಣೆ ಮಾಡಿರುವ ದಿನ ಸಾರ್ವತ್ರಿಕ ರಜೆ ಬೀಳದೇ ಹೋದರೆ, ಆಗಿನ ಸಂದರ್ಭಕ್ಕೆ ಹೋಲಿಕೆ ಮಾಡಿ ರಜಾ ಬದಲಾವಣೆ ಮಾಡಿ ಘೋಷಣೆ ಮಾಡಲು ಅವಕಾಶ ಕಲ್ಪಿಸಲಾಗಿದೆ. ಸೆಪ್ಟೆಂಬರ್‌ 3ರಂದು ನಡೆಯುವ ಕೈಲ್‌ ಮುಹೂರ್ತ, ಅಕ್ಟೋಬರ್‌ 17 ರಂದು ನಡೆಯುವ ತುಲಾ ಸಂಕ್ರಮಣ, ಡಿಸೆಂಬರ್‌ 1ರಂದು ನಡೆಯುವ ಹುತ್ತರಿ ಹಬ್ಬ ಆಚರಣೆಗೆ ಕೊಡಗು ಜಿಲ್ಲೆಗೆ ಮಾತ್ರ ಅನ್ವಯ ಆಗುವಂತೆ ಸ್ಥಳೀಯ ಸಾರ್ವತ್ರಿಕ ರಜೆಯನ್ನು ಘೋಷಣೆ ಮಾಡಲಾಗಿದೆ.

ಶಿಕ್ಷಣ ಇಲಾಖೆಗೆ ಸಂಬಂಧಿಸಿದಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ಪ್ರತ್ಯೇಕವಾಗಿ ರಜಾ ದಿನಗಳನ್ನು ಘೋಷಣೆ ಮಾಡಲಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ. ಸಾರ್ವತ್ರಿಕ ರಜಾ ದಿನಗಳ ಜತೆಗೆ ರಾಜ್ಯ ಸರ್ಕಾರಿ ನೌಕರರು ಎರಡು ದಿನಗಳಿಗೆ ಮೀರದಂತೆ 2020ನೇ ಸಾಲಿನಲ್ಲಿ ಪೂರ್ವಾನುಮತಿ ಪಡೆದು ಪರಿಮಿತಿ ಪಡೆದು ಉಪಯೋಗಿಸಿಕೊಳ್ಳಬಹುದು. ಸಾಂದರ್ಭಿಕ ರಜೆಯನ್ನು ಮಂಜೂರು ಮಾಡಲು ಅಧಿಕಾರವುಳ್ಳ ಅಧಿಕಾರಿಗಳು ಮಾತ್ರ ಅನುಮತಿ ನೀಡಬೇಕೆಂದು ಸೂಚಿಸಲಾಗಿದೆ.

ಏಪ್ರಿಲ್‌ 1 ರಂದು ವಾಣಿಜ್ಯ ಹಾಗೂ ಸಹಕಾರಿ ಬ್ಯಾಂಕುಗಳ ವಾರ್ಷಿಕ ವ್ಯವಹಾರದ ಮುಕ್ತಾಯದ ದಿನವಾಗಿರುವುದರಿಂದ ಅಂದು ವಾಣಿಜ್ಯ ಮತ್ತು ಸಹಕಾರಿ ಬ್ಯಾಂಕುಗಳಿಗೆ ಮಾತ್ರ ರಜೆ ಘೋಷಣೆ ಮಾಡಲಾಗಿದೆ. ಪರಿಮಿತ ರಜಾದಿನಗಳಲ್ಲಿ ಏಪ್ರಿಲ್‌ 11ರಂದು ಬರುವ ಪವಿತ್ರ ಶನಿವಾರ ಎರಡನೇ ಶನಿವಾರ ಬಂದಿದ್ದು, ಮಾರ್ಚ್‌ 29ರಂದು ನಡೆಯುವ ದೇವರ ದಾಸಿಮಯ್ಯ ಜಯಂತಿ ಭಾನುವಾರ ಬಂದಿದ್ದು, ಸೆಪ್ಟೆಂಬರ್‌ 17 ರಂದು ನಡೆಯುವ ವಿಶ್ವಕರ್ಮ ಜಯಂತಿಯು ಮಹಾಲಯ ಅಮವಾಸ್ಯೆಯ ದಿನವೇ ಬಂದಿರುವುದರಿಂದ ಪ್ರತ್ಯೇಕ ರಜೆ ನೀಡಲಾಗುವುದಿಲ್ಲ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಈ ರಜೆ ದಿನಗಳ ಹೊರತಾಗಿ ಕೆಲವು ಸಾರ್ವತ್ರಿಕ ರಜಾ ದಿನಗಳು ಭಾನುವಾರ ಬಂದಿರುವುದರಿಂದ ಪ್ರತ್ಯೇಕ ಸರ್ಕಾರಿ ರಜೆಗಳಾಗಿ ಪರಿಗಣಿಸಲಾಗಿಲ್ಲ.
26-1-20 ಗಣರಾಜ್ಯೋತ್ಸವ
26-04-20 ಬಸವ ಜಯಂತಿ, ಅಕ್ಷಯ ತೃತಿಯ
30-08-20 ಮೊಹರಂ ಕೊನೇ ದಿನ
25-10-20 ಆಯುಧ ಪೂಜೆ
1-11-20 ಕನ್ನಡ ರಾಜ್ಯೋತ್ಸವ
14-11-20 ನರಕ ಚತುರ್ದಶಿ (ಎರಡನೇ ಶನಿವಾರ)
22-08-20 ವರಸಿದ್ಧಿ ವಿನಾಯಕ ವೃತ (4ನೇ ಶನಿವಾರ)

2020 ಸಾರ್ವತ್ರಿಕ ರಜಾ ದಿನಗಳು
15-1-20 ಮಕರ ಸಂಕ್ರಾಂತಿ
21-2-20 ಮಹಾಶಿವರಾತ್ರಿ
25-3-20 ಯುಗಾದಿ ಹಬ್ಬ
6-4-20 ಮಹಾವೀರ ಜಯಂತಿ
10-4-20 ಗುಡ್‌ ಫ್ರೈಡೆ
14-4-20 ಡಾ.ಅಂಬೇಡ್ಕರ್‌ ಜಯಂತಿ
01-5-20 ಕಾರ್ಮಿಕ ದಿನಾಚರಣೆ
25-5-20 ಕುತುಬ್‌ ಎ. ರಂಜಾನ್‌
01-8-20 ಬಕ್ರೀದ್‌
15-8-20 ಸ್ವಾತಂತ್ರ್ಯ ದಿನಾಚರಣೆ
17-9-20 ಮಹಾಲಯ ಅಮಾವಾಸ್ಯೆ
02-10-20 ಗಾಂಧಿ ಜಯಂತಿ
26-10-20 ವಿಜಯ ದಶಮಿ
30-10-20 ಈದ್‌ ಮಿಲಾದ್‌
31-10-20 ಮಹರ್ಷಿ ವಾಲ್ಮೀಕಿ ಜಯಂತಿ
16-11-20 ಬಲಿಪಾಡ್ಯಮಿ ದೀಪಾವಳಿ
03-12-20 ಕನಕದಾಸ ಜಯಂತಿ
25-12-20 ಕ್ರಿಸ್‌ ಮಸ್‌

ಪರಿಮಿತ ರಜಾದಿನ
1-1-20 ಹೊಸ ವರ್ಷಾರಂಭ
3-2-20 ಮಾಧ್ವನವಮಿ
9-3-20 ಹೋಳಿ ಹಬ್ಬ
2-4-20 ರಾಮನವಮಿ
9-4-20 ಸಬ್‌ ಎ ಬರಾತ್‌
13-4-20 ಸೌರಮಾನ ಯುಗಾದಿ
28-4-20 ಶಂಕರಾಚಾರ್ಯ ಜಯಂತಿ
7-5-20 ಬುದ್ಧ ಪೂರ್ಣಿಮೆ
20-5-20 ಷಬ್‌ ಎ ಬಕ್ರೀದ್‌
22-5-20 ಜುಮಾತ್‌ ಉಲ್‌ ವಿದಾ
31-7-20 ವರಮಹಾಲಕ್ಷ್ಮೀ ಹಬ್ಬ
11-8-20 ಶ್ರೀಕೃಷ್ಣ ಜನ್ಮಾಷ್ಠಮಿ
21-8-20 ಸ್ವರ್ಣಗೌರಿ ವೃತ
31-8-20 ಓಣಂ ಹಬ್ಬ, ಅನಂತ ಪದ್ಮನಾಭ ವೃತ, ಋಗ್‌ ಉಪಾಕರ್ಮ
1-9-20 ಯಜುರ್‌ ಉಪಾಕರ್ಮ
2-9-20 ಬ್ರಹ್ಮಶ್ರೀ ನಾರಾಯಣ ಗುರೂಜಿ ಜಯಂತಿ
8-9-20 ಕನ್ಯಾಕುಮಾರಿಯಮ್ಮ ಜಯಂತಿ
17-10-20 ತುಲಾ ಸಂಕ್ರಮಣ
30-11-20 ಗುರುನಾನಕ್‌ ಜಯಂತಿ
1-12-20 ಹುತ್ತರಿ ಹಬ್ಬ
24-12-20 ಕ್ರಿಸ್‌ಮಸ್‌ ಈವ್‌

ಟಾಪ್ ನ್ಯೂಸ್

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

11

ಕ್ರಿಕೆಟ್‌ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್‌11ನಲ್ಲಿ ಒಲಿಯಿತು 1.5 ಕೋಟಿ

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

Lok Sabha Election ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-gadaga

Gadaga: 28 ರಂದು ಯುವಚೈತನ್ಯ ಕಾರ್ಯಕ್ರಮ: ಜ್ಯೂ. ಕೆ.ಎಚ್. ಪಾಟೀಲ

1-qwewweq

K. Jayaprakash Hegde; ಮೀನುಗಾರಿಕೆ, ಪ್ರವಾಸೋದ್ಯಮದ ಅಭಿವೃದ್ದಿಗೆ ಹೆಚ್ಚಿನ ಆಧ್ಯತೆ 

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

11

ಕ್ರಿಕೆಟ್‌ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್‌11ನಲ್ಲಿ ಒಲಿಯಿತು 1.5 ಕೋಟಿ

1-asdasdas

IPL; ಸ್ಟಾಯಿನಿಸ್‌ ಏಟಿಗೆ ತವರಲ್ಲೆ ಚಾಂಪಿಯನ್‌ ಚೆನ್ನೈ ಠುಸ್‌!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.