ಬಜಪೆ ಪಟ್ಟಣ ಪಂಚಾಯತ್‌ ಘೋಷಣೆ: ಗರಿಗೆದರಿದ ನಿರೀಕ್ಷೆ!

ಬಜಪೆ ಪ.ಪಂ.ಗೆ ರಾಜ್ಯ ಸಚಿವ ಸಂಪುಟದ ಅಸ್ತು; ರಾಜ್ಯಪಾಲರ ಅಂಕಿತಕ್ಕೆ ಬಾಕಿ

Team Udayavani, Nov 23, 2020, 4:36 AM IST

ಬಜಪೆ ಪಟ್ಟಣ ಪಂಚಾಯತ್‌ ಘೋಷಣೆ: ಗರಿಗೆದರಿದ ನಿರೀಕ್ಷೆ!

ಬಜಪೆ: ಬಹು ಬೇಡಿಕೆಯ ಬಜಪೆ ಮತ್ತು ಮಳವೂರು ಗ್ರಾ.ಪಂ.ಗಳನ್ನೊಳಗೊಂಡ ಬಜಪೆ ಪಟ್ಟಣ ಪಂಚಾಯತ್‌ಗೆ ರಾಜ್ಯ ಸಚಿವ ಸಂಪುಟದ ಅನುಮೋದನೆ ದೊರಕಿದೆ. ರಾಜ್ಯಪಾಲರಿಂದ ಇನ್ನು ಗಜೆಟ್‌ ನೋಟಿಫಿಕೇಶನ್‌ ಪ್ರಕ್ರಿಯೆ ಮಾತ್ರ ಬಾಕಿ ಉಳಿದಿದೆ. ಇದು ಪೂರ್ಣಗೊಂಡರೆ ಬಹುಕಾಲದ ಬೇಡಿಕೆಯೊಂದು ಈಡೇರಿದಂತಾಗುತ್ತದೆ. ಬಜಪೆ, ಮಳವೂರು ಹಾಗೂ ಕೆಂಜಾರು ಗ್ರಾಮಗಳ ವ್ಯಾಪ್ತಿಯನ್ನು ಬಜಪೆ ಪಟ್ಟಣ ಪಂಚಾಯತ್‌ ಒಳಗೊಂಡಿರುತ್ತದೆ.

ಮಾಜಿ, ಹಾಲಿ ಶಾಸಕರ ಶ್ರಮ
ಬಜಪೆ ಮತ್ತು ಮಳವೂರು ಗ್ರಾ.ಪಂ. ಗಳ ನ್ನೊಳಗೊಂಡ ಬಜಪೆ ಪಟ್ಟಣ ಪಂಚಾಯತ್‌ ರೂಪಿಸುವ ಬಗ್ಗೆ 2017ರಲ್ಲಿ ಅಂದಿನ ಶಾಸಕ ಕೆ. ಅಭಯಚಂದ್ರ ಅವರು ಪೌರಾಡಳಿತ, ಸ್ಥಳೀಯ ಸಂಸ್ಥೆಗಳು, ಸಾರ್ವಜನಿಕ ಉದ್ದಿಮೆ ಸಚಿವ ಈಶ್ವರ ಬಿ. ಖಂಡ್ರೆ ಅವರಿಗೆ ಮನವಿ ಸಲ್ಲಿಸಿದ್ದರು. ಜತೆಗೆ ಕಿನ್ನಿಗೋಳಿ ಮತ್ತು ಮೆನ್ನಬೆಟ್ಟು ಗ್ರಾ.ಪಂ.ಗಳನ್ನೊಳಗೊಂಡ ಕಿನ್ನಿಗೋಳಿ ಪಟ್ಟಣ ಪಂಚಾಯತ್‌ ಘೋಷಣೆಗೆ ಮನವಿ ಮಾಡಿದ್ದರು. ಸಚಿವರು ಬಜಪೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೂಲಕ ರಾಜ್ಯ, ನೆರೆಯ ರಾಜ್ಯದ ಜನರು ವಿದೇಶಕ್ಕೆ ಹೋಗುತ್ತಿರುವುದರಿಂದ ಆ ಪ್ರದೇಶಕ್ಕೆ ಹೆಚ್ಚುವರಿ ಮೂಲ ಸೌಕರ್ಯ ಕಲ್ಪಿಸುವ ಅಗತ್ಯವಿದೆ ಎಂಬ ಶಾಸಕರ ಮನವಿ ಪರಿಗಣಿಸಿ, ಮೇಲ್ದರ್ಜೆಗೇರಿಸುವ ಪ್ರಸ್ತಾವವನ್ನು ಸಲ್ಲಿಸಲು ಸೂಚಿಸಿ ಟಿಪ್ಪಣಿ ಬರೆದಿದ್ದರು. ಆದರೆ ಅನು ಮೋದನೆಗೊಂಡಿರಲಿಲ್ಲ.

ಇದೀಗ ಹಾಲಿ ಶಾಸಕ ಉಮಾನಾಥ ಕೋಟ್ಯಾನ್‌ ಅವರ ಸತತ ಪ್ರಯತ್ನ, ಮನವಿಯ ಮೇರೆಗೆ ಸಂಪುಟ ಸಭೆಯಲ್ಲಿ ಅನುಮೋದನೆ ದೊರಕಿದೆ. ಪಂಚಾಯತ್‌ನ ಸಾಮಾನ್ಯ ಸಭೆಯ ನಿರ್ಣಯ, ಪ.ಪಂ.ಗೆ ಬೇಕಾದ ಅರ್ಹತೆಯ ಪಟ್ಟಿಗಳನ್ನು ತಯಾರಿಸಿ ವಿವರವಾದ ವರದಿಯನ್ನು ಸಲ್ಲಿಸುವಲ್ಲಿ ಅಧಿಕಾರಿಗಳ ಆಸಕ್ತಿ, ಶ್ರಮ ಇಲ್ಲಿದೆ.

ಹಲವು ಯೋಜನೆಗಳು
ಬಜಪೆ ಪಟ್ಟಣ ಪಂಚಾಯತ್‌ ಘೋಷಣೆಯಿಂದ ಸರಕಾರದ ವಿವಿಧ ಯೋಜನೆಗಳ ಮೂಲಕ ವಿಶೇಷ ಅನುದಾನ ದೊರಕುವುದರಿಂದ ಸ್ಥಳೀಯ ಅಭಿವೃದ್ಧಿಯ ನಿರೀಕ್ಷೆ ಗರಿಗೆದರಿದೆ. ಎಸ್‌.ಎಫ್‌.ಸಿ. ಅನುದಾನ, 15ನೇ ಹಣಕಾಸು ಆಯೋಗದಡಿ ಸುಮಾರು 3 ಕೋ.ರೂ., ನಗರೋತ್ಥಾನ ಯೋಜನೆಯಲ್ಲಿ ವಿಶೇಷ ಅನುದಾನ ಒದಗಿಬರುವುದರಿಂದ ಮೂಲಸೌಲಭ್ಯ, ರಸ್ತೆ ಅಭಿವೃದ್ಧಿಗೆ ಪೂರಕವಾಗಲಿದೆ.

ಇನ್ನು ಕೌನ್ಸಿಲರ್‌ಗಳು
ಇನ್ನು ಮುಂದೆ ಗ್ರಾಮ ಪಂಚಾಯತ್‌ ಸದಸ್ಯರು, ತಾಲೂಕು ಪಂಚಾಯತ್‌ ಸದಸ್ಯರು, ಜಿ.ಪಂ. ಸದಸ್ಯರು ಇರುವುದಿಲ್ಲ. ಅದರ ಬದಲು ಜನಪ್ರತಿನಿಧಿಯಾಗಿ ಕೌನ್ಸಿಲರ್‌ ಇರುತ್ತಾರೆ. ಸುಮಾರು 600ರಿಂದ 1,000 ಮತದಾರರಿಗೆ ಓರ್ವ ಕೌನ್ಸೆಲರ್‌ಇರುತ್ತಾರೆ. ಇದು ಕೆಲವು ಕಡೆ ಹೆಚ್ಚು ಕಡಿಮೆ ಇರುತ್ತದೆ.

ಬಜಪೆ ಪಟ್ಟಣ ಪಂಚಾಯತ್‌ನ ವರದಿ, ಮಾರ್ಗದರ್ಶನವನ್ನು ಅನುಸರಿಸಿ ಕಿನ್ನಿಗೋಳಿ ಪಟ್ಟಣ ಪಂಚಾಯತ್‌ ಕೂಡ ವರದಿಯನ್ನು ಸಲ್ಲಿಸಿತ್ತು. ಬಜಪೆ ಗ್ರಾಮ ಪಂಚಾಯತ್‌ ಹಾಗೂ ಕಿನ್ನಿಗೋಳಿ ಗ್ರಾಮ ಪಂಚಾಯತ್‌ ಈ ನಿಟ್ಟಿನಲ್ಲಿ ಒಂದಾಗಿ ಕಾರ್ಯ ನಿರ್ವಹಿಸಿತ್ತು. ಅದರಂತೆ ಅನುಮೋದನೆಯೂ ಸಿಕ್ಕಿದ್ದು ಎರಡೂ ಕಡೆ ಸಂಭ್ರಮಕ್ಕೆ ಕಾರಣವಾಯಿತು.

ಫಲಿಸಿದ ಉದಯವಾಣಿಯ ವರದಿ
ಬಜಪೆ, ಮಳವೂರು ಗ್ರಾಮ ಪಂಚಾ ಯತ್‌ಗಳನ್ನೊಳಗೊಂಡ ಬಜಪೆ ಪಟ್ಟಣ ಪಂಚಾಯತ್‌ ಅರ್ಹತೆಯ ಬಗ್ಗೆ 2017ರಲ್ಲಿ ಉದಯವಾಣಿ ದಿನಪತ್ರಿಕೆಯು ಈ ಬಗ್ಗೆ ಸವಿವರವಾದ ವರದಿಯನ್ನು ಪ್ರಕಟಿಸಿತ್ತು.

ಅಭಿವೃದ್ಧಿಗೆ ಪೂರಕ
ಬಜಪೆ ಮತ್ತು ಕಿನ್ನಿಗೋಳಿ ಪಟ್ಟಣ ಪಂಚಾಯತ್‌ ಘೋಷಣೆಯಾಗಿದ್ದು ಅಭಿವೃದ್ಧಿ ಕಾರ್ಯಗಳು ನಡೆಯಲಿವೆ. ಬೆಳೆಯುತ್ತಿರುವ ಬಜಪೆ, ಮಳವೂರು ಪಂಚಾಯತ್‌ ವ್ಯಾಪ್ತಿಯಲ್ಲಿ ಎಂಎಸ್‌ಇಝಡ್‌, ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಗಳು ಇದ್ದು, ಹೆಚ್ಚಿನ ಅನುದಾನ ಬರುವುದರಿಂದ ಮೂಲಸೌಲಭ್ಯಗಳನ್ನು ಕಲ್ಪಿಸಬಹುದು. ಇದು ಸ್ಥಳೀಯವಾಗಿ ಅಭಿವೃದ್ಧಿಗೆ ಪೂರಕವಾಗಲಿದೆ.
-ಉಮಾನಾಥ ಕೋಟ್ಯಾನ್‌, ಶಾಸಕರು

ಟಾಪ್ ನ್ಯೂಸ್

Kohli IPL 2024

IPL; 10 ಸೀಸನ್‌, 400 ರನ್‌: ಕೊಹ್ಲಿ ಸಾಧನೆ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-wewqewq

T20 World Cup; ಯುವರಾಜ್‌ ಸಿಂಗ್‌ ರಾಯಭಾರಿ: ಐಸಿಸಿ ಘೋಷಣೆ 

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

1-ewewqe

IPL; ಕೆಕೆಆರ್‌ ನೀಡಿದ 262 ರನ್ ಗುರಿ ತಲುಪಿ ದಾಖಲೆ ಬರೆದ ಪಂಜಾಬ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kohli IPL 2024

IPL; 10 ಸೀಸನ್‌, 400 ರನ್‌: ಕೊಹ್ಲಿ ಸಾಧನೆ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-wewqewq

T20 World Cup; ಯುವರಾಜ್‌ ಸಿಂಗ್‌ ರಾಯಭಾರಿ: ಐಸಿಸಿ ಘೋಷಣೆ 

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kohli IPL 2024

IPL; 10 ಸೀಸನ್‌, 400 ರನ್‌: ಕೊಹ್ಲಿ ಸಾಧನೆ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-wewqewq

T20 World Cup; ಯುವರಾಜ್‌ ಸಿಂಗ್‌ ರಾಯಭಾರಿ: ಐಸಿಸಿ ಘೋಷಣೆ 

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.