ರಾಜ್ಯದಲ್ಲಿ ಪ್ರಾಣಿ-ಮಾನವ ಸಂಘರ್ಷ ಪ್ರಮಾಣ ಇಳಿಮುಖ


Team Udayavani, Aug 19, 2019, 3:07 AM IST

prani

ಬೆಂಗಳೂರು: ರಾಜ್ಯದಲ್ಲಿ ಪ್ರಾಣಿ, ಮಾನವ ಸಂಘರ್ಷ ಹತೋಟಿಗೆ ಬಂದಿದೆ. ಕಳೆದ ಐದು ವರ್ಷಗಳಿಗೆ ಹೋಲಿಸಿದರೆ ಪ್ರಾಣಿದಾಳಿಯಲ್ಲಿ ಸಾವಿಗೀಡಾದವರ ಸಂಖ್ಯೆ ಶೇ.50 ಇಳಿಕೆ ಕಂಡಿದ್ದರೆ, ಪ್ರಾಣಿ ದಾಳಿ ಪ್ರಕರಣಗಳೂ ಶೇ.30ರಷ್ಟು ಹತೋಟಿಗೆ ಬಂದಿವೆ. ಅರಣ್ಯ ಇಲಾಖೆಯ ತಂತ್ರಜ್ಞಾನಾಧಾರಿತ ಮುಂಜಾಗೃತಾ ಕ್ರಮಗಳು ಹಾಗೂ ಸಾರ್ವಜನಿಕರಲ್ಲಿ ಮೂಡಿಸಿದ ಜಾಗೃತಿಯಿಂದಾಗಿ ಸಂಘರ್ಷ ಹತೋಟಿಗೆ ಬಂದಿದೆ. ಇದರಿಂದ ಸಂತ್ರಸ್ತರಿಗೆ ಅರಣ್ಯ ಇಲಾಖೆ ನೀಡುವ ಪರಿಹಾರ ಧನವು ಕಳೆದ ವರ್ಷ 18 ಕೋಟಿ ರೂ.ನಿಂದ 12 ಕೋಟಿ ರೂ.ಗೆ ಇಳಿಕೆಯಾಗಿದೆ.

ಸಂಘರ್ಷ ಹತೋಟಿಗೆ ಬರಲು ಆನೆ ದಾಳಿಗೆ ಕಡಿವಾಣ ಹಾಕಿರುವುದೇ ಪ್ರಮುಖ ಕಾರಣ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ಇತ್ತೀಚಿನ ವರ್ಷಗಳಲ್ಲಿ ಕಾಡಂಚಿನ ಪ್ರದೇಶಗಳಲ್ಲಿ ಕೃಷಿ ಭೂಮಿ ವಿಸ್ತರಣೆ, ಅರಣ್ಯ ಒತ್ತುವರಿ ಹೆಚ್ಚಳ, ಅಭಿವೃದ್ಧಿಯ ಹೆಸರಿನಲ್ಲಿ ಅರಣ್ಯದ ಮೇಲೆ ಮಾನವನ ಹಸ್ತಕ್ಷೇಪ, ಆನೆ ಹಾಗೂ ಇತರ ವನ್ಯಜೀವಿಗಳ ಸಂಖ್ಯೆಯಲ್ಲಿ ಏರಿಕೆ ಹಾಗೂ ಅರಣ್ಯದಲ್ಲಿ ಆಹಾರದ ಕೊರತೆಯಂತಹ ಪ್ರಮುಖ ಕಾರಣಗಳಿಂದ ಮಾನವ-ಪ್ರಾಣಿ ಸಂಘರ್ಷ ಹೆಚ್ಚಾಗುತ್ತಿದೆ. ಇಂತಹ ದಾಳಿಗಳನ್ನು ಹತೋಟಿಗೆ ತರುವ ನಿಟ್ಟಿನಲ್ಲಿ ಅರಣ್ಯ ಇಲಾಖೆ, ಕಳೆದ ಎರಡು ವರ್ಷಗಳಿಂದ ವಿವಿಧ ಯೋಜನೆಗಳನ್ನು ಕೈಗೊಳ್ಳುತ್ತಾ ಬಂದಿತ್ತು.

ಅವುಗಳಲ್ಲಿ ಪ್ರಮುಖವಾಗಿ ಕಾಡಂಚಿನ ಗ್ರಾಮಗಳಲ್ಲಿ ಸೌರಬೇಲಿ ಅಳವಡಿಕೆ, ಆನೆ ದಾಳಿ ತಡೆಗೆ ಹೆಣ್ಣು ಆನೆಗೆ ರೇಡಿಯೋ ಕಾಲರ್‌ ಅಳವಡಿಕೆ, ಕಂದಕಗಳ ನಿರ್ಮಾಣ, ಉಪಯೋಗಿಸಿದ ರೈಲ್ವೆ ಹಳಿಯಲ್ಲಿ ತಡೆಗೋಡೆಯಂತಹ ವಿವಿಧ ಕ್ರಮಗಳನ್ನು ಕೈಗೊಂಡಿದ್ದು, ಪ್ರಕರಣಗಳು ಸಾಕಷ್ಟು ಹತೋಟಿಗೆ ಬಂದಿವೆ ಎಂದು ಅರಣ್ಯ ಇಲಾಖೆಯ ವನ್ಯಜೀವಿ ವಿಭಾಗದ ಅಧಿಕಾರಿಗಳು ತಿಳಿಸುತ್ತಾರೆ.

ತಂತ್ರಜ್ಞಾನ ಅಳವಡಿಕೆಯಿಂದ ಹತೋಟಿ: ಆನೆ ಸಂತತಿಯಲ್ಲಿ ರಾಜ್ಯ ಮೊದಲ ಸ್ಥಾನದಲ್ಲಿದ್ದು, ಹಿಂದಿನ ಗಣತಿಯಂತೆ 6,000ಕ್ಕೂ ಹೆಚ್ಚು ಆನೆಗಳಿವೆ. ಹೀಗಾಗಿ, ರಾಜ್ಯದಲ್ಲಿ ಆನೆ-ಮಾನವ ಸಂಘರ್ಷವೇ ಹೆಚ್ಚಿದ್ದು, ಒಟ್ಟಾರೆ ದಾಳಿ ಪ್ರಕರಣಗಳಲ್ಲಿ ಆನೆಯಿಂದಾದ ದಾಳಿಗಳು ಶೇ.60ಕ್ಕೂ ಹೆಚ್ಚಿವೆ. ಪ್ರಾಣಿದಾಳಿಯಿಂದ 3 ವರ್ಷಗಳಲ್ಲಿ 108 ಮಂದಿ ಸಾವಿಗೀಡಾಗಿದ್ದರೆ, ಆ ಪೈಕಿ ಆನೆದಾಳಿಯಿಂದಲೇ 72 ಮಂದಿ ಸಾವಿಗೀಡಾಗಿದ್ದಾರೆ.

ಹೀಗಾಗಿ, ರೈಲು ಹಳಿ ತಡೆಗೋಡೆ ನಿರ್ಮಾಣ ಹಾಗೂ ರೇಡಿಯೊ ಕಾಲರ್‌ ತಂತ್ರಜ್ಞಾನ ಬಳಸಿ ಕಾಡಾನೆ ದಾಳಿಗೆ ಅರಣ್ಯ ಇಲಾಖೆ ಮುಂದಾಗಿತ್ತು. ಆನೆ ದಾಳಿ ಹೆಚ್ಚು ಕಂಡು ಬರುವ ಹಾಸನ, ಕೊಡಗು, ಚಾಮರಾಜನಗರ ಅರಣ್ಯ ವೃತ್ತದ ಪ್ರದೇಶಗಳಲ್ಲಿ 60 ಕಿ.ಮೀ. ನಷ್ಟು ಅರಣ್ಯದಂಚಿನಲ್ಲಿ ರೈಲು ಹಳಿ ತಡೆಗೋಡೆ ನಿರ್ಮಾಣ ಹಾಗೂ 10ಕ್ಕೂ ಹೆಚ್ಚು ಹೆಣ್ಣಾನೆಗಳಿಗೆ ರೇಡಿಯೊ ಕಾಲರ್‌ ಅಳವಡಿಸಿ ಯಶಸ್ಸು ಕಂಡು ಕೊಂಡಿದೆ. ಆನೆ ಹಿಂಡಿನಲ್ಲಿ ಸದಾ ಒಂದು ಹೆಣ್ಣಾನೆ ಇರುತ್ತದೆ ಅಥವಾ ಆನೆಗಳು ಹೆಣ್ಣಾನೆ ಹಿಂದೆಯೇ ಸುತ್ತುತ್ತವೆ.

ಹೀಗಾಗಿ, ಗುಂಪಿನ ಒಂದು ಹೆಣ್ಣಾನೆಗೆ ಈ ರೇಡಿಯೊ ಕಾಲರ್‌ ಅಳವಡಿಸಲಾಗಿದೆ. ಇದರಿಂದ ಕಾಡಾನೆಗಳ ಚಲನವಲನಗಳ ಬಗ್ಗೆ ಮಾಹಿತಿ ಸಂಗ್ರಹಿಸಿ ಕಾಡಾನೆಗಳ ಇರುವಿಕೆಯ ಬಗ್ಗೆ ಜಿಪಿಎಸ್‌ ಮೂಲಕ ಮೊಬೈಲ್‌ ಆ್ಯಪ್‌ಗೆ ಮಾಹಿತಿ ಸಿಗಲಿದೆ. ಅರಣ್ಯ ಇಲಾಖೆ ಸಮಿಪದ ಕಚೇರಿಯ ಮೂಲಕ ಗ್ರಾಮಸ್ಥರಿಗೆ ಹಾಗೂ ಬೆಳೆಗಾರರಿಗೆ ತಕ್ಷಣ ಮೊಬೈಲ್‌ ಸಂದೇಶ ರವಾನಿಸುತ್ತದೆ. ಜತೆಗೆ ರಾಪಿಡ್‌ ರೆಸ್ಪಾನ್ಸ್‌ ತಂಡ ಸ್ಥಳಕ್ಕೆ ಆಗಮಿಸಿ ಆನೆಗಳನ್ನು ಓಡಿಸುವ ಕಾರ್ಯಾಚರಣೆ ನಡೆಸಲಿದೆ. ಇನ್ನು ರೇಡಿಯೊ ಕಾಲರ್‌ ಒಂದಕ್ಕೆ 1.8 ಲಕ್ಷ ರೂ. ವೆಚ್ಚವಾಗಿದೆ ಎಂದು ಅಧಿಕಾರಿಗಳು ತಿಳಿಸಿದರು.

ಮೃತರ ಕುಟುಂಬಕ್ಕೆ ಪರಿಹಾರ ಹೆಚ್ಚಳವಾಗಲಿಲ್ಲ: ಮಾನವ ಮತ್ತು ಪ್ರಾಣಿ ಸಂಘರ್ಷದಲ್ಲಿ ಮೃತಪಟ್ಟವರ ಕುಟುಂಬಕ್ಕೆ ನೀಡುತ್ತಿರುವ ಪರಿಹಾರ ಧನವನ್ನು 5 ಲಕ್ಷ ರೂ.ನಿಂದ 10 ಲಕ್ಷ ರೂ.ಗೆ ಹೆಚ್ಚಿಸಬೇಕೆಂದು ಅರಣ್ಯ ಇಲಾಖೆಯ ವನ್ಯಜೀವಿ ಮಂಡಳಿ ಕಳೆದ ವರ್ಷವೇ ಸಭೆ ನಡೆಸಿ ಹಣಕಾಸು ಇಲಾಖೆಗೆ ಪ್ರಸ್ತಾವನೆ ಸಲ್ಲಿಸಿತ್ತು. ಈ ಕುರಿತು ವನ್ಯಜೀವಿ ಮಂಡಳಿ ಸಭೆಯಲ್ಲಿ ಹಿಂದಿನ ಮುಖ್ಯಮಂತ್ರಿಯವರು ಸಹಮತ ವ್ಯಕ್ತಪಡಿಸಿದ್ದರು. ಮೈತ್ರಿ ಉಳಿಸಿಕೊಳ್ಳುವ ಹೋರಾಟದಲ್ಲಿ ಈ ಪ್ರಸ್ತಾವನೆಗೆ ಇಂದಿಗೂ ಅನುಮೋದನೆ ದೊರೆತಿಲ್ಲ.

ಪ್ರಾಣಿದಾಳಿ ವಿವರ
ವರ್ಷ ಸಾವು ಬೆಳೆ ಹಾನಿ ಒಟ್ಟು ಪ್ರಕರಣಗಳು
2014 -15 53 27,327 29,067
2016-17 48 18,985 21,326
2017-18 38 27,525 30,789
2018-19 25 16,185 19,120

ಪ್ರಾಣಿ ದಾಳಿ ಪ್ರಕರಣಗಳಲ್ಲಿ ಆನೆ ದಾಳಿಯೇ ಹೆಚ್ಚಿತ್ತು. ಆನೆಗಳಿಗೆ ದಾಳಿಯಾಗುವ ಪ್ರದೇಶಗಳನ್ನು ಗುರುತಿಸಿ ರೇಡಿಯೋ ಕಾಲರ್‌ ಅಳವಡಿಕೆ ಮಾಡಲಾಗಿದೆ. ಈ ತಂತ್ರಜ್ಞಾನದ ಸಹಾಯದಿಂದ ಸಾಕಷ್ಟು ಪ್ರಮಾಣದಲ್ಲಿ ದಾಳಿಗಳು ಹತೋಟಿಗೆ ಬಂದಿವೆ. ಮಾನವ ಸಾವು ಪ್ರಕರಣಗಳು ಕೂಡ ಕುಗ್ಗಿದ್ದು, ಮುಂದಿನ ದಿನಗಳಲ್ಲಿ ಪ್ರಾಣಿದಾಳಿ ತಡೆಗೆ ಮತ್ತಷ್ಟು ತಂತ್ರಜ್ಞಾನವನ್ನು ಅಳವಡಿಸಿ, ಮಾನವ-ಪ್ರಾಣಿ ಸಂಘರ್ಷವನ್ನು ಇನ್ನಷ್ಟು ಕಡಿಮೆ ಮಾಡಲಾಗುವುದು.
-ಸಂಜಯ್‌ ಮೋಹನ್‌, ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ. (ವನ್ಯಜೀವಿ)

* ಜಯಪ್ರಕಾಶ್‌ ಬಿರಾದಾರ್‌

ಟಾಪ್ ನ್ಯೂಸ್

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

17-uv-fusion

Holi: ಹೋಳಿ ಹುಣ್ಣಿಮೆ ಹಿನ್ನೆಲೆ

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

16-fusion

UV Fusion: ಎಳೆಯರಿಗೂ ಒಂದಿಷ್ಟು ಸಮಯ ಮೀಸಲಿಡೋಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.