ಮಂಗಳೂರಿನಲ್ಲೂ 15 ತಿಂಗಳು ಸೇವೆ ಸಲ್ಲಿಸಿದ್ದ ಕ್ಯಾಪ್ಟನ್ ದೀಪಕ್ ವಸಂತ್ ಸಾಠೆ
Team Udayavani, Aug 9, 2020, 3:23 PM IST
ಮಂಗಳೂರು: ಕಲ್ಲಿಕೋಟೆಯ ಕರಿಪುರ ನಿಲ್ದಾಣದಲ್ಲಿ ಸಂಭವಿಸಿದ ಏರ್ ಇಂಡಿಯಾ ಎಕ್ಸ್ ಪ್ರಸ್ ವಿಮಾನ ದುರಂತದಲ್ಲಿ ಮೃತಪಟ್ಟಿರುವ ಪೈಲಟ್ ಕ್ಯಾಪ್ಟನ್ ದೀಪಕ್ ವಸಂತ ಸಾಠೆ ಅವರು 2015-16ರಲ್ಲಿ ಮಂಗಳೂರು ಏರ್ ಇಂಡಿಯಾ ಬೇಸ್ನಲ್ಲಿಯೂ ಪೈಲಟ್ ಆಗಿ 15 ತಿಂಗಳು ಸೇವೆ ಸಲ್ಲಿಸಿದ್ದರು.
ಆ ಅವಧಿಯಲ್ಲಿ ಅವರು ಮಂಗಳೂರಿನಲ್ಲಿ ಕದ್ರಿ ಪಾರ್ಕ್ ಬಳಿಯ ಪ್ಲಾಟ್ನಲ್ಲಿ ಪತ್ನಿಯ ಜತೆ ವಾಸವಾಗಿದ್ದರು. ಅವರಿಗೆ ಮಂಗಳೂರಿನಲ್ಲಿಯೂ ಹಲವು ಮಂದಿ ಸ್ನೇಹಿತರು-ಪರಿಚಿತರು ಇದ್ದರು. ಸ್ನೇಹಮಯಿ ಹಾಗೂ ನಗುಮುಖದ ಸರಳ ವೃಕ್ತಿತ್ವದವರಾಗಿದ್ದು ಅಪಾರ್ಟ್ಮೆಂಟ್ನಲ್ಲಿ ನೆಲೆಸಿದ್ದಾಗಲೂ ಎಲ್ಲರೊಂದಿಗೆ ಸ್ನೇಹದಿಂದಿದ್ದರು ಎಂದು “ನಾಗಿ’ ಅಪಾರ್ಟ್ಮೆಂಟ್ನ ನಿವಾಸಿಗಳು ಜ್ಞಾಪಿಸಿಕೊಳ್ಳುತ್ತಾರೆ.
ವಸಂತ ಸಾಠೆಯವರ ಜತೆಗಿನ ಒಡನಾಟವನ್ನು ಸ್ಮರಿಸಿಕೊಂಡಿರುವ ಮಂಗಳೂರಿನ ರಿಯಲ್ ಎಸ್ಟೇಟ್ ಉದ್ಯಮಿ ಲ್ಯಾನ್ಸ್ಲಾಟ್ ಸಲ್ದಾನ ಅವರು, “ಸಾಠೆಯವರು ದಕ್ಷ ಹಾಗೂ ಅನುಭವಿ ಪೈಲಟ್ ಆಗಿದ್ದರು. ವಾಯು ಸೇನೆಯಲ್ಲಿ ಸೇವೆ ಸಲ್ಲಿಸಿದ್ದ ಅವರು ಅತ್ಯಂತ ಶಿಸ್ತಿನ ವ್ಯಕ್ತಿಯಾಗಿದ್ದರು’ ಎಂದಿದ್ದಾರೆ.
ಸಾಠೆ ಅವರು ತಮ್ಮ ಜತೆ 1988-90ರ ಅವಧಿಯಲ್ಲಿ ವಾಯುಸೇನೆಯಲ್ಲಿ ಜತೆಯಾಗಿ ಕೆಲಸ ಮಾಡಿದ್ದರು ಎಂಬುದಾಗಿ ವಾಯುಸೇನೆಯ ನಿವೃತ್ತ ವಿಂಗ್ ಕಮಾಂಡರ್ ಆಗಿರುವ ಜಿ.ಬಿ. ಅತ್ರಿ ನೆನಪಿಸಿಕೊಳ್ಳುತ್ತಾರೆ. ಅವರ ಸಮಯ ಪ್ರಜ್ಞೆ ಹಾಗೂ ಕೊನೆಯ ಕ್ಷಣದ ತೀರ್ಮಾನಗಳು ವಿಮಾನ ಬೆಂಕಿಗಾಹುತಿಯಾಗುವಂತಹ ಬಹುದೊಡ್ಡ ದುರಂತದಿಂದ ಪಾರು ಮಾಡಿದೆ’ ಎಂದು ಅತ್ರಿ “ಉದಯವಾಣಿ’ಗೆ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್ ಮಧ್ವರಾಜ್
Hassan Lok sabha Constituency: ಪ್ರಜ್ವಲ್ ರೇವಣ್ಣ ನಾಮಪತ್ರ ಸಲ್ಲಿಕೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Bike thief: ಬಜಪೆ ಪೊಲೀಸರಿಂದ ಅಂತರ್ ಜಿಲ್ಲಾ ಬೈಕ್ ಕಳ್ಳನ ಬಂಧನ
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ