Deepavali: ಗೋಮಯದಿಂದ ಶುದ್ಧಿಗೊಂಡ ನೆಲದ ಮೇಲೆ ರಂಗೋಲಿ ಮಂಗಳದ ಚಿಹ್ನೆ

ದೇವರಿಗೂ ದೀಪ ಹಚ್ಚುವ ಪರಿಪಾಠ ಅನೇಕ ಮನೆಗಳಲ್ಲಿ ಇಲ್ಲ.

Team Udayavani, Nov 13, 2023, 6:05 PM IST

Deepavali: ಗೋಮಯದಿಂದ ಶುದ್ಧಿಗೊಂಡ ನೆಲದ ಮೇಲೆ ರಂಗೋಲಿ ಮಂಗಳದ ಚಿಹ್ನೆ

ಹಿಂದೆ ನಮ್ಮ ಪೂರ್ವಜರೆಲ್ಲ ಗೋಮಯದಿಂದ ನೆಲ ಸಾರಿಸುತ್ತಿದ್ದರು. ಗೋಮಯ ಆಯ್ದುಕೊಳ್ಳುವಾಗ ವಿಶಿಷ್ಟ ನಿಯಮಗಳಿದ್ದವು. ಕರು ಹಾಕಿರುವ ಹಸುವಿನ ತಾಜಾ ಸೆಗಣಿಯೇ ಗೋಮಯವಾಗುತ್ತಿತ್ತು. ಸೂರ್ಯನ ಕಿರಣದಡಿಯಲ್ಲಿ ಗೋಮಾಳಗಳಲ್ಲಿ ಮೇಯ್ದು ಬರುವ ದೇಸೀ ದನಗಳ ತಾಜಾ ಸೆಗಣಿಯಲ್ಲಿ ಕ್ರಿಮಿನಾಶಕ ಅಂಶಗಳಿವೆ ಎಂಬುದು ವೈಜ್ಞಾನಿಕ. ನಮ್ಮ ಕಾರ್ಯಗಳಿಗೆ ಅಡಚಣೆ ಉಂಟು ಮಾಡದಂತೆ ಉಪದ್ರವಕಾರಿ ಕೀಟಾಣುಗಳನ್ನು ದೂರವಿಡುವುದು ಅನಿವಾರ್ಯ. ಅವುಗಳ ಹತವೇ ನಮ್ಮ ಉದ್ದೇಶವಲ್ಲ; ಆದರೆ ನಮಗರಿವಿಲ್ಲದೆಯೇ ಅವು ಹತವಾದರೆ ಅದಕ್ಕಾಗಿ ಸೃಷ್ಟಿಕರ್ತನನ್ನೇ ಸ್ಮರಿಸುವುದು ಸಂಪ್ರದಾಯ.

ಗೋಮಯದಿಂದ ಶುದ್ಧಿಗೊಂಡ ನೆಲದ ಮೇಲೆ ರಂಗೋಲಿ ಇಡುವುದು ಮಂಗಳದ ಇನ್ನೊಂದು ಚಿಹ್ನೆ. ನಿತ್ಯವೂ ನಾವು ವಾಸಿಸುವ ಸ್ಥಳಗಳ ಎದುರು ಭಾಗದಲ್ಲಿ ಸೂರ್ಯೋದಯಕ್ಕೂ ಮುಂಚೆ ನೀರು-ಗೋಮಯ ಹಾಕಿ ಸಾರಿಸಿ ರಂಗೋಲಿ ಇಡುವುದು ನಡೆಯಬೇಕಾದ ಕೆಲಸ. ವಿಶೇಷ ದಿನಗಳಲ್ಲಿ ಮಾವಿನ ಎಲೆ, ಬಾಳೆ ಗಿಡಗಳಿಂದ ಬಾಗಿಲು ಅಲಂಕರಿಸಿ ದೇವತೆಗಳ ಆಹ್ವಾನಕ್ಕೆ ತಯಾರಿ ನಡೆಸಿಕೊಳ್ಳುವುದು ಮಂಗಳಕರ ಚಿಹ್ನೆ. ಸಂಜೆಯಾಯಿತೆಂದರೆ ಭಾರತೀಯ ನಾರಿಯರು
ಮನೆಯೊಳಗಡೆ ದೀಪ ಉರಿಸಿ ಈ ಶ್ಲೋಕ ಹೇಳುತ್ತಿದ್ದರು.

ಈ ಶ್ಲೋಕದಲ್ಲಿ “ಮಮ ಶತ್ರು ಹತಾರ್ಥಾಯ’ ಎಂದರೆ ನಮ್ಮ ಶತ್ರು ಕತ್ತಲೆ ಎಂದರ್ಥ. ಈ ಜನ್ಮದಲ್ಲಿ ವ್ಯಾವಹಾರಿಕವಾಗಿ ನಮಗೆ ಆಗದ ಜನರನ್ನು ಶತ್ರುಗಳೆಂದು ಭಾವಿಸಬಾರದು. ಹಾಗೆ ಭಾವಿಸುವುದು ನಮ್ಮ ದುಷ್ಟತನವೆನಿಸಿಕೊಳ್ಳುತ್ತದೆ. ನಮಗೂ, ಅವರಿಗೂ ಯಾವುದೋ ಕಾರ್ಯಕಾರಣದಿಂದ ಉಂಟಾದ ರಾಗದ್ವೇಷ ಆ ಕಾರಣಕ್ಕಾಗಿ ಮಾತ್ರ ಮೀಸಲಾಗಿರಲಿ;

ಅಲ್ಲಿಂದಾಚೆಗೆ ಎಲ್ಲ ವಿಷಯಗಳಲ್ಲೂ ಅವರು ನಮ್ಮ ದ್ವೇಷಿಗಳೆಂದು ಭಾವಿಸದಿರುವುದು ಸನಾತನ ನೀತಿ. ಮಹಾಭಾರತದಲ್ಲಿ ರಣರಂಗದಲ್ಲಿ ತೊಡೆ ಮುರಿದು ಬಿದ್ದ ದುರ್ಯೋಧನನನ್ನು ಕೃಷ್ಣನ ಅನುಜ್ಞೆಯ ಮೇರೆಗೆ ಭೀಮನು ಕೊಂದು ಹಾಕಿದ. ಸತ್ತ ಸುಯೋಧನನ ಶಿರವನ್ನು ಭೀಮ ಕಾಲಿನಿಂದ ತುಳಿದ. ಆಗ ಕೃಷ್ಣ ಒಂದು ಮಾತನ್ನು ಹೇಳಿದ್ದಾ ನೆ. ಜೀವಿಗೆ ಶಿರದ ಭಾಗವೇ ಪ್ರಮುಖ. ಅದನ್ನು ತುಳಿದು ಅವಮಾನಿಸಬಾರದು.

ಜೀವವಿರಲಿ, ಇಲ್ಲದಿರಲಿ ಪ್ರತ್ಯಕ್ಷವಾಗಿ ಜೀವಿಯ ಭೌತಿಕ ಶರೀರ ಎದುರು ಕಂಡಾಗ, ಕಾಲಿನಿಂದ ತಲೆ ತುಳಿಯಬಾರದು. ಹಿಂದೊಂದು ಜಾವದಲ್ಲಿ ಜೀವದಲ್ಲಿದ್ದ ಆ ಜೀವಿಗೆ ತಲೆಯೇ ಕೇಂದ್ರ ಸ್ಥಾನವಾಗಿತ್ತು. ತಲೆಯಿಲ್ಲದಿದ್ದರೆ ಜೀವಿ ಅಪೂರ್ಣ. ತಲೆಯಲ್ಲಿರುವ ಮೆದುಳಿನಿಂದ ಮನಸ್ಸಿನ ಚಟುವಟಿಕೆಗಳು ನಡೆಸಲ್ಪಡುತ್ತವೆ. ಹೀಗಾಗಿ ಭೀಮ ನೀನು ಸುಯೋಧನನ ಪಾರ್ಥಿವ ಶರೀರದ ಶಿರವನ್ನು ಕಾಲಿನಿಂದ ತುಳಿದದ್ದು ತಪ್ಪು. ಇದು ಕೃಷ್ಣನ ಧರ್ಮಪಾಲನೆ ತಿಳಿಸುತ್ತದೆ. ಇಂದು ಎಣ್ಣೆಯ ದೀಪಗಳ ಹಂಗಿಲ್ಲ. ದೇವರಿಗೂ ದೀಪ ಹಚ್ಚುವ ಪರಿಪಾಠ ಅನೇಕ ಮನೆಗಳಲ್ಲಿ ಇಲ್ಲ.

ಹೀಗಾಗಿ ದೀಪಗಳ ಮಹತ್ವದ ಅರಿವಿಲ್ಲ. ದೀಪಗಳನ್ನು ಉರಿಸುವಾಗ ಅವುಗಳಿಂದ ಉತ್ಪತ್ತಿಯಾದ ಹೊಗೆ ವಾಯು ಸೇರುತ್ತದೆ. ಹೀಗಾಗಿ ವಾಯು ಮಲೀನಗೊಳಿಸುವ ಹೊಗೆ ಆದಷ್ಟೂ ಆಗದ ರೀತಿಯಲ್ಲಿ ದೀಪಗಳನ್ನು ಉರಿಸುತ್ತಿದ್ದರು. ಉದಾಹರಣೆಗೆ ಎಳ್ಳೆಣ್ಣೆಯ ದೀಪ ಉರಿಸುವುದರಿಂದ ಅದರ ಹೊಗೆ ಸುತ್ತಲಿನ ವಾತಾವರಣ ಸೇರಿ-ಉಸಿರಾಟ ಮೂಲಕ ನಮ್ಮೊಳಗೆ ಸೇರಿ ಮನದ
ಕ್ಲೇಶನಾಶಕ್ಕೆ ಕಾರಣವಾಗುತ್ತದೆ. ತುಪ್ಪದ ದೀಪ ಕೂಡ ಹಾಗೆ. ಸೀಮೆಎಣ್ಣೆ ದೀಪವನ್ನು ದೇವರ ಮುಂದೆ ಬೆಳಗಲ್ಲ. ಏಕೆಂದರೆ ಕಲ್ಲೆಣ್ಣೆಯ ಹೊಗೆ ಆರೋಗ್ಯಕ್ಕೆ ಹಾನಿಕರ.

ಮನುಷ್ಯ ಪರಿಶ್ರಮದಿಂದ ತಯಾರಿಸಿಕೊಂಡ ಕಡಲೆಕಾಯಿ ಎಣ್ಣೆ ಶೇಂಗಾ ಎಣ್ಣೆ, ಹರಳೆಣ್ಣೆ, ಎಳ್ಳೆಣ್ಣೆ, ಕೊಬ್ಬರಿ ಎಣ್ಣೆ ಇಂತಹ ಎಣ್ಣೆಗಳನ್ನು ಮಾತ್ರ ದೀಪಗಳಿಗೆ ಬಳಸಲಾಗುತ್ತದೆ.

ಟಾಪ್ ನ್ಯೂಸ್

1-wddsa-das

Toxic: ಯಶ್ ಸಿನಿಮಾದಿಂದ ಹೊರಹೋದ ಕರೀನಾ ಕಪೂರ್?

kore

KLE ಸಂಸ್ಥೆ ಬೆಳೆದಿದ್ದು ದಾನಿಗಳಿಂದ, ಕಾಂಗ್ರೆಸ್‍ನಿಂದ ಅಲ್ಲ‌: ಪ್ರಭಾಕರ ಕೋರೆ

Gangavathi: ಮಳೆಗಾಗಿ ಪ್ರಾರ್ಥಿಸಿ ಕಪ್ಪೆಗಳಿಗೆ ಮದುವೆ ಮಾಡಿದ ಗ್ರಾಮಸ್ಥರು…

Gangavathi: ಮಳೆಗಾಗಿ ಪ್ರಾರ್ಥಿಸಿ ಕಪ್ಪೆಗಳಿಗೆ ಮದುವೆ ಮಾಡಿದ ಗ್ರಾಮಸ್ಥರು…

Heavy Rain: ಹುಣಸೂರು ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಆಲಿಕಲ್ಲು ಮಳೆ…

Heavy Rain: ಹುಣಸೂರು ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಆಲಿಕಲ್ಲು ಮಳೆ…

ಪ್ರಜ್ವಲ್ ನನ್ನು ವಿದೇಶಕ್ಕೆ ಕಳುಹಿಸಿದ್ದೇ ಸಿದ್ದರಾಮಯ್ಯ: ಆರ್.ಅಶೋಕ್ ಆರೋಪ

Bidar; ಪ್ರಜ್ವಲ್ ನನ್ನು ವಿದೇಶಕ್ಕೆ ಕಳುಹಿಸಿದ್ದೇ ಸಿದ್ದರಾಮಯ್ಯ: ಆರ್.ಅಶೋಕ್ ಆರೋಪ

1-wewewqe

Bengaluru ತಂಪೆರೆದ ವರುಣ; ಕೆಲವೆಡೆ ಹಾನಿ: 4 ದಿನ ಮುಂದುವರಿಯುವ ಸಾಧ್ಯತೆ

Yadagiri: ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆ; ಪ್ರಕರಣ ದಾಖಲು

Yadagiri: ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆ; ಪ್ರಕರಣ ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Deepavali 2023: ಬೆಳಕಿನ ಹಬ್ಬ…ನೀರು ತುಂಬುವ ಹಬ್ಬ

Deepavali 2023: ಬೆಳಕಿನ ಹಬ್ಬ…ನೀರು ತುಂಬುವ ಹಬ್ಬ

Deepavali 2023: ದೀಪಾವಳಿಯ ಬಲಿಪಾಡ್ಯಮಿ… ಪೂಜ್ಯನೀಯ ಗೋ ಪೂಜೆ

Deepavali 2023: ದೀಪಾವಳಿಯ ಬಲಿಪಾಡ್ಯಮಿ… ಪೂಜ್ಯನೀಯ ಗೋ ಪೂಜೆ

Deepavali 2023; ದೀಪಾವಳಿಗೂ ಲಕ್ಷ್ಮಿದೇವಿಗೂ ಅವಿನಾಭಾವ ಸಂಬಂಧ

Deepavali 2023; ದೀಪಾವಳಿಗೂ ಲಕ್ಷ್ಮಿದೇವಿಗೂ ಅವಿನಾಭಾವ ಸಂಬಂಧ

Deepavali 2023; ಹಳ್ಳಿಗಳಲ್ಲಿ ಆಚರಿಸುವ ಪಾಂಡವರ ಪೂಜೆ

Deepavali 2023; ಹಳ್ಳಿಗಳಲ್ಲಿ ಆಚರಿಸುವ ಪಾಂಡವರ ಪೂಜೆ

Deepavali: ಮತ್ತೆ ಮೂಡಿತು ಬೆಳಕು

Deepavali: ಮತ್ತೆ ಮೂಡಿತು ಬೆಳಕು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಇಂಡಿಯಾ ಒಕ್ಕೂಟಕ್ಕೆ ನಾಯಕರೂ ಇಲ್ಲ, ನೇತೃತ್ವವೂ ಇಲ್ಲ: ಸಿ.ಟಿ ರವಿ

ಇಂಡಿಯಾ ಒಕ್ಕೂಟಕ್ಕೆ ನಾಯಕರೂ ಇಲ್ಲ, ನೇತೃತ್ವವೂ ಇಲ್ಲ: ಸಿ.ಟಿ ರವಿ

1-wddsa-das

Toxic: ಯಶ್ ಸಿನಿಮಾದಿಂದ ಹೊರಹೋದ ಕರೀನಾ ಕಪೂರ್?

Karnataka Lok Sabha Poll: ಮೇ 7ಕ್ಕೆ 2ನೇ ಹಂತದ ಮತದಾನ: ಮತ್ತೆ ಬಸ್‌ ದರ ದುಪ್ಪಟ್ಟು

Karnataka Lok Sabha Poll: ಮೇ 7ಕ್ಕೆ 2ನೇ ಹಂತದ ಮತದಾನ: ಮತ್ತೆ ಬಸ್‌ ದರ ದುಪ್ಪಟ್ಟು

kore

KLE ಸಂಸ್ಥೆ ಬೆಳೆದಿದ್ದು ದಾನಿಗಳಿಂದ, ಕಾಂಗ್ರೆಸ್‍ನಿಂದ ಅಲ್ಲ‌: ಪ್ರಭಾಕರ ಕೋರೆ

Gangavathi: ಮಳೆಗಾಗಿ ಪ್ರಾರ್ಥಿಸಿ ಕಪ್ಪೆಗಳಿಗೆ ಮದುವೆ ಮಾಡಿದ ಗ್ರಾಮಸ್ಥರು…

Gangavathi: ಮಳೆಗಾಗಿ ಪ್ರಾರ್ಥಿಸಿ ಕಪ್ಪೆಗಳಿಗೆ ಮದುವೆ ಮಾಡಿದ ಗ್ರಾಮಸ್ಥರು…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.