ಖುದ್ದು ಹಾಜರಾತಿಗೆ ಶಾಶ್ವತ ವಿನಾಯ್ತಿ ನೀಡಿ; ನ್ಯಾಯಾಲಯಕ್ಕೆ ರಾಹುಲ್ ಗಾಂಧಿ ಮನವಿ
ಆರ್ಎಸ್ಎಸ್ ಕಾರ್ಯಕರ್ತ ರಾಜೇಶ್ ದಾಖಲಿಸಿರುವ ಮಾನನಷ್ಟ ಪ್ರಕರಣ
Team Udayavani, May 11, 2022, 8:24 PM IST
ಥಾಣೆ: ಖುದ್ದಾಗಿ ನ್ಯಾಯಾಲಯಕ್ಕೆ ಹಾಜರಾಗುವುದರಿಂದ ತನಗೆ ಶಾಶ್ವತವಾಗಿ ಬಿಡುಗಡೆ ನೀಡಬೇಕು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ; ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಭಿವಂಡಿಯ ಜೆಎಂಎಫ್ಸಿ ನ್ಯಾಯಾಲಯಕ್ಕೆ ಮನವಿ ಮಾಡಿಕೊಂಡಿದ್ದಾರೆ.
ಮಹಾತ್ಮ ಗಾಂಧಿ ಹತ್ಯೆಗೆ ರಾಷ್ಟ್ರೀಯ ಸ್ವಯಂಸೇವಕ ಸಂಘವೇ ಕಾರಣ ಎಂದು ರಾಹುಲ್; 2014ರಲ್ಲಿ ಭಿವಂಡಿ ನಗರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಆರೋಪಿಸಿದ್ದರು. ಇದನ್ನು ವಿರೋಧಿಸಿದ ಆರ್ಎಸ್ಎಸ್ ಕಾರ್ಯಕರ್ತ ರಾಜೇಶ್ ಕುಂಟೆ ಮಾನಹಾನಿ ಪ್ರಕರಣ ದಾಖಲಿಸಿದ್ದರು. ಅಂದಿನಿಂದಲೂ ಈ ಪ್ರಕರಣ ನಡೆಯುತ್ತಲೇ ಇದೆ.
2018ರಲ್ಲಿ ನ್ಯಾಯಾಲಯ ರಾಹುಲ್ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಲು ಸೂಚಿಸಿತ್ತು. ಆಗಲೂ ರಾಹುಲ್ ತಾವು ನಿರಪರಾಧಿ ಎಂದೇ ಹೇಳಿಕೊಂಡಿದ್ದರು. ಈ ಪ್ರಕರಣದಲ್ಲಿ ಆಗಾಗ ರಾಹುಲ್ ತಾವೇ ನೇರವಾಗಿ ನ್ಯಾಯಾಲಯಕ್ಕೆ ಆಗಮಿಸಬೇಕಾದ ಪರಿಸ್ಥಿತಿಯಿದೆ.
ಆದರೆ ತಾನು ಸತತವಾಗಿ ಪ್ರವಾಸದಲ್ಲಿರುತ್ತೇನೆ, ಹಾಗಾಗಿ ನ್ಯಾಯಾಲಯಕ್ಕೆ ನೇರವಾಗಿ ಬರಲು ಅಸಾಧ್ಯ. ತನ್ನ ಪರವಾಗಿ ವಕೀಲರು ಬರುವುದಕ್ಕೆ ಅವಕಾಶ ಮಾಡಿಕೊಡಬೇಕು ಎಂದು ಕೇಳಿಕೊಂಡಿದ್ದಾರೆ. ಈ ಬಗ್ಗೆ ನ್ಯಾಯಾಲಯ ಅರ್ಜಿದಾರ ರಾಜೇಶ್ಗೆ ಅಭಿಪ್ರಾಯ ತಿಳಿಸಲು ಸೂಚಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gujarat Lok Sabha Constituency: ಗುಜರಾತ್ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Loksabha Election; ದೇಶದಲ್ಲಿ ಹಂತ-1: ಮತ ಇಂದು
EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ
MUST WATCH
ಹೊಸ ಸೇರ್ಪಡೆ
Udupi-ಚಿಕ್ಕಮಗಳೂರಿನಲ್ಲಿ ಬಿಜೆಪಿಗರೂ ಜೆಪಿ-ಜೆಪಿ ಎನ್ನುತ್ತಿದ್ದಾರೆ: ನಿಕೇತ್ರಾಜ್ ಮೌರ್ಯ
Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ
Gujarat Lok Sabha Constituency: ಗುಜರಾತ್ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ
Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್