ಕೋವಿಡ್-19 ಸೋಂಕಿತರನ್ನು ಆಸ್ಪತ್ರೆಗೆ ಸಾಗಿಸುವಲ್ಲಿ ವಿಳಂಬ; ಪ್ರತಿಭಟನೆ
Team Udayavani, Jun 9, 2020, 5:18 AM IST
ಉಪ್ಪುಂದ: ಕೋವಿಡ್-19 ತಪಾಸಣೆಯಲ್ಲಿ ಸೋಂಕು ದೃಢ ಪಟ್ಟಿದೆ ಎಂದು ಹೇಳಿ, ಮನೆಗಳನ್ನು ಸೀಲ್ಡೌನ್ ಮಾಡಿದ ಬಳಿಕ ನಾಲ್ಕು ದಿನ ಕಳೆದರೂ ಅಂಥವರನ್ನು ಆಸ್ಪತ್ರೆಗೆ ಸಾಗಿಸದೆ ಸತಾಯಿಸಿದ ಕ್ರಮದಿಂದ ಆಕ್ರೋಶಗೊಂಡ ಮರವಂತೆಯ ಕೆಲವರು ಆ್ಯಂಬುಲೆನ್ಸ್ ಮತ್ತು ಆರೋಗ್ಯ ಸಿಬಂದಿ ವಿರುದ್ಧ ಪ್ರತಿಭಟಿಸಿದ ಘಟನೆ ನಡೆದಿದೆ.
ಮುಂಬಯಿಯಿಂದ ಬಂದಿದ್ದ ಅಲ್ಲಿನ ಇಬ್ಬರು ಮಹಿಳೆಯರು ಮತ್ತು ಆರು ಮಂದಿ ಪುರುಷರು ಕೊಲ್ಲೂರಿನಲ್ಲಿ 14 ದಿನಗಳ ಕ್ವಾರಂಟೈನ್ ಅವಧಿ ಮುಗಿಸಿ ಊರಿಗೆ ಬಂದಿದ್ದರು. ನಾಲ್ಕು ದಿನಗಳ ಹಿಂದೆ ಅವರಿಗೆ ಸೋಂಕು ದೃಢಪಟ್ಟಿದೆ ಎಂದು ದೂರವಾಣಿ ಕರೆ ಬಂದಿತ್ತು.
ದೂರವಾಣಿ ಕರೆ ಬಂದ ಕೂಡಲೇ ಸ್ಥಳೀಯಾಡಳಿತ ಅವರ ಮನೆಗಳನ್ನು ಸೀಲ್ಡೌನ್ ಮಾಡಿತ್ತು.
ಆದರೆ ಇವರನ್ನು ಕರೆದೊಯ್ಯಲು ಎರಡು ದಿನಗಳಾದರೂ ಆ್ಯಂಬುಲೆನ್ಸ್ ಬಂದಿರಲಿಲ್ಲ. ಇದು ಸ್ಥಳೀಯರು ಆಕ್ರೋಶಿತರಾಗುವಂತೆ ಮಾಡಿತ್ತು.
ಶನಿವಾರ ಸಂಜೆ ಅವರನ್ನೆಲ್ಲ ಮರವಂತೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಬರಹೇಳಲಾಯಿತು. ಮೊದಲೇ ಕೋವಿಡ್-19 ಪಾಸಿಟಿವ್ ಬಂದ ಸುದ್ದಿಯಿಂದ ಕಂಗಾಲಾಗಿದ್ದ ಅವರು ಸಿಬಂದಿಯನ್ನು ತರಾಟೆಗೆ ತೆಗೆದುಕೊಂಡರು.
ಅಂತಿಮವಾಗಿ ಪೊಲೀಸರು, ಗ್ರಾ.ಪಂ. ಉಪಾಧ್ಯಕ್ಷ ಗಣೇಶ ಪೂಜಾರಿ, ಗ್ರಾಮ ಲೆಕ್ಕಾಧಿಕಾರಿ ದಿನೇಶ ಸೇರಿ ಎಲ್ಲರನ್ನೂ ಮನವೊಲಿಸಿದ ಬಳಿಕ ಆ್ಯಂಬುಲೆನ್ಸ್ ಹತ್ತಿದರು.ಇದೇ ಸನ್ನಿವೇಶ ಬೈಂದೂರು ತಾಲೂಕಿನ ಹಲವೆಡೆ ನಡೆದಿದೆ. ಇದಕ್ಕೆ ಕಾರಣ ವರದಿ ಬರುವ ಮೊದಲೇ ಕ್ವಾರಂಟೈನ್ನಲ್ಲಿದ್ದವರನ್ನು ಮನೆಗೆ ಕಳುಹಿಸಿರುವುದು, ತಾಲೂಕಿನಲ್ಲಿ ಒಮ್ಮೆಲೇ ನೂರಾರು ಸಂಖ್ಯೆಯಲ್ಲಿ ಸೋಂಕು ದೃಢಪಟ್ಟಿರುವುದು ಇಲಾಖೆಗಳ ನಡುವೆ ಸಮನ್ವಯ ಇಲ್ಲದಿರುವುದು ಕಾರಣವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ
Udupi; ಮಸ್ಟರಿಂಗ್ ಕೇಂದ್ರದಲ್ಲಿ ಸಕಲ ತಯಾರಿ
ಅಭಿವೃದ್ಧಿ ಎಂದರೆ ಏನೆಂದು ತೋರಿಸಲು ಈ ಬಾರಿ ಅವಕಾಶ ಕೊಡಿ: ಜೆ.ಪಿ. ಹೆಗ್ಡೆ
ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.
ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ