ಮೋದಿ ಸರ್ಕಾರದ ಯೋಜನೆ ಜನರಿಗೆ ತಲುಪಿಸಿ; ಡಾ. ಕೆ. ಲಕ್ಷ್ಮಣ್
ಅಧಿಕಾರವನ್ನು ಸೇವೆಗೆ ಬಳಸಿಕೊಳ್ಳಬೇಕೆಂಬ ಸಿದ್ಧಾಂತವನ್ನು ಹೊಂದಿದೆ
Team Udayavani, Jun 17, 2022, 1:39 PM IST
ಯಲಹಂಕ: ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಯಶಸ್ವಿಯಾಗಿ 8 ವರ್ಷ ಪೂರೈ ಸಿದ್ದು, ಈ ಅವಧಿಯಲ್ಲಿ ಜಾರಿಗೊಳಿಸಿದ ಜನಪರ ಯೋಜನೆಗಳನ್ನು ಜನರಿಗೆ ತಲುಪಿಸಬೇಕಿದೆ ಎಂದು ಬಿಜೆಪಿ ಒಬಿಸಿ ಮೋರ್ಚಾ ರಾಷ್ಟ್ರಾಧ್ಯಕ್ಷ ಡಾ| ಕೆ. ಲಕ್ಷ್ಮಣ್ ತಿಳಿಸಿದರು.
ಯಲಹಂಕದ ಹೋಟೆಲ್ ರಮಡಾದಲ್ಲಿ ಗುರುವಾ ರ ಆರಂಭಗೊಂಡ ಬಿಜೆಪಿ ಒಬಿಸಿ ಮೋರ್ಚಾದ ಮೂರು ದಿನಗಳ ರಾಷ್ಟ್ರೀಯ ಪ್ರಶಿಕ್ಷಣ ವರ್ಗ ಸಭೆಯಲ್ಲಿ ಮಾತನಾಡಿದ ಅವರು, ಅಧಿಕಾರವು ಸೇವೆಗೆ ಸಾಧನವಾಗಬೇಕು. ಬಿಜೆಪಿ, ಪ್ರಜಾಸತ್ತಾತ್ಮಕ ದೇಶ ಮತ್ತು ಸಂವಿಧಾನಕ್ಕೆ ಹೆಚ್ಚು ಗೌರವ ಕೊಡುತ್ತದೆ. ಬಿಜೆಪಿ ಇತರ ಪಕ್ಷಗಳಿಗಿಂತ ಭಿನ್ನವಾಗಿದೆ. ಅಧಿಕಾರವನ್ನು ಸೇವೆಗೆ ಬಳಸಿಕೊಳ್ಳಬೇಕೆಂಬ ಸಿದ್ಧಾಂತವನ್ನು ಹೊಂದಿದೆ ಎಂದು ತಿಳಿಸಿದರು.
18 ಕೋಟಿಗೂ ಹೆಚ್ಚು ಸದಸ್ಯರಿರುವ ವಿಶ್ವದ ಅತ್ಯಂತ ದೊಡ್ಡ ರಾಜಕೀಯ ಪಕ್ಷವೆನಿಸಿದ ಬಿಜೆಪಿ, ಪ್ರಶಿಕ್ಷಣವು ಕಾರ್ಯಕರ್ತರು ಚುನಾವಣೆ ಗೆಲ್ಲುವುದಕ್ಕಿಂತ ಹೆಚ್ಚು ಪ್ರಮುಖ ಎಂದರು. ಒಬಿಸಿ ಮೋರ್ಚಾ ರಾಷ್ಟ್ರೀಯ ಉಪಾಧ್ಯಕ್ಷ ಬಿ.ಎಲ್.ವರ್ಮ ಮಾತನಾಡಿ, ರಾಜೀವ್ ಗಾಂಧಿಯವರು ಭ್ರಷ್ಟಾಚಾರ ಇರುವುದನ್ನು ಮತ್ತು ಅನುದಾನದ ಒಂದು ರೂಪಾಯಿ ಪೈಕಿ ಕೇವಲ 15 ಪೈಸೆ ಅಭಿವೃದ್ಧಿಗೆ ಬಳಕೆ ಆಗುವುದನ್ನು ಸ್ವತಃ ಒಪ್ಪಿಕೊಂಡಿದ್ದರು. ಆದರೆ, ಮೋದಿ ಅವ ರು 100ಕ್ಕೆ 100ರಷ್ಟು ಮೊತ್ತ ಫಲಾನುಭವಿಯನ್ನು ತಲುಪುವಂತೆ ನೋಡಿಕೊಂಡಿದ್ದಾರೆ. ಒಬಿಸಿ ವರ್ಗಕ್ಕೆ ಕೇಂದ್ರದ ಯೋಜನೆಗಳ ಗರಿಷ್ಠ ಪ್ರಯೋಜನ ಲಭಿಸಿದೆ ಎಂದರು.
ಕಾರ್ಯಕ್ರಮದಲ್ಲಿ ಬಿಜೆಪಿ ಒಬಿಸಿ ಮೋರ್ಚಾ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳಾದ ಸಂಗಮ್ ಲಾಲ್ ಗುಪ್ತ, ಯಶಪಾಲ್ ಸುವರ್ಣ, ನಿಖೀಲ್ ಆನಂದ್, ಉತ್ತರ ಪ್ರದೇಶ ರಾಜ್ಯದ ಸಚಿವ ನರೇಂದ್ರ ಕಶ್ಯಪ್, ರಾಜ್ಯದ ಸಚಿವ ಎನ್.ಮುನಿರತ್ನ, ಬಿಡಿಎ ಅಧ್ಯಕ್ಷ, ಶಾಸಕ ಎಸ್.ಆರ್. ವಿಶ್ವನಾಥ್, ಒಬಿಸಿ ಮೋರ್ಚಾ ರಾಜ್ಯ ಅಧ್ಯಕ್ಷ ನೆ.ಲ.ನರೇಂದ್ರಬಾಬು, ವಿವಿಧ ರಾಜ್ಯಗಳ ಆಹ್ವಾನಿತ ಪದಾಧಿಕಾರಿಗಳು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ
PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ