ಉಡುಪಿಯಲ್ಲಿ ಐಟಿ ಪಾರ್ಕ್‌ಗೆ ಆಗ್ರಹ: ಕೇಂದ್ರಕ್ಕೆ ಪೇಜಾವರ ಶ್ರೀಗಳ ಪತ್ರ


Team Udayavani, Feb 1, 2023, 7:05 AM IST

ಉಡುಪಿಯಲ್ಲಿ ಐಟಿ ಪಾರ್ಕ್‌ಗೆ ಆಗ್ರಹ: ಕೇಂದ್ರಕ್ಕೆ ಪೇಜಾವರ ಶ್ರೀಗಳ ಪತ್ರ

ಉಡುಪಿ: ಜಿಲ್ಲೆಯು ರಜತೋತ್ಸವ ಆಚರಿಸಿಕೊಳ್ಳುತ್ತಿದೆ. ಆರ್ಥಿಕತೆ ವೃದ್ಧಿ, ಪ್ರತಿಭಾ ಪಲಾಯನ ತಡೆಯಲು ಹಾಗೂ ಕೃಷಿ ಪುನಶ್ಚೇತನ, ಕೌಟುಂಬಿಕ ಜೀವನ ವ್ಯವಸ್ಥೆ ಸುಧಾರಣೆಗಾಗಿ ಜಿಲ್ಲೆಯಲ್ಲಿ ಸಾಫ್ಟ್‌ ವೇರ್‌ ಐಟಿ ಪಾರ್ಕ್‌ ಒಂದನ್ನು ಶೀಘ್ರವೇ ನಿರ್ಮಿಸುವಂತೆ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಕೇಂದ್ರ ಸರಕಾರಕ್ಕೆ ಪತ್ರ ಬರೆದಿದ್ದಾರೆ.

ಕೇಂದ್ರ ಸರಕಾರದ ಕೌಶಲಾಭಿ ವೃದ್ಧಿ, ಎಂಟರ್‌ಪ್ರನ್ಯೂರ್‌ಶಿಪ್‌, ಎಲೆಕ್ಟ್ರಾನಿಕ್ಸ್‌, ಮಾಹಿತಿ ತಂತ್ರಜ್ಞಾನ ಇಲಾಖೆ ಸಚಿವ ರಾಜೀವ್‌ ಚಂದ್ರಶೇಖರ್‌ ಅವರಿಗೆ ತಿಂಗಳ ಹಿಂದೆಯೇ ಪತ್ರ ಬರೆದಿದ್ದು, ರಾಜ್ಯದ ಐಟಿ ಬಿಟಿ ಸಚಿವ ಡಾ| ಅಶ್ವತ್ಥ ನಾರಾಯಣ ಅವರಲ್ಲೂ ಶ್ರೀಗಳು ಚರ್ಚಿಸಿದ್ದಾರೆ. ಕೇಂದ್ರ ಸಚಿವೆ ಶೋಭಾ ಅವ ರಿಗೂ ಪತ್ರದ ಪ್ರತಿ ಕಳುಹಿಸಿದ್ದು, ಅವರು ಕೂಡಲೇ ಈ ಬಗ್ಗೆ ಪ್ರಸ್ತಾವನೆಯನ್ನು ರಾಜ್ಯ ಸರಕಾರಕ್ಕೆ ಕಳುಹಿಸುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ ಹಿನ್ನೆಲೆಯಲ್ಲಿ ಪ್ರಸ್ತಾವನೆ ಸಿದ್ಧವಾಗುತ್ತಿದೆ ಎಂಬ ಮಾಹಿತಿಯನ್ನು ಮಠದ ಮೂಲಗಳು ನೀಡಿವೆ.

ಉಡುಪಿ, ದ.ಕ. ಜಿಲ್ಲೆಗಳು ಶೈಕ್ಷಣಿಕವಾಗಿ ಉತ್ತಮ ಸಾಧನೆ ತೋರುತ್ತಿದ್ದು, ಪ್ರತೀ ವರ್ಷ ಸಾವಿ ರಾರು ಪ್ರತಿಭಾವಂತ ಐಟಿ ಪದವೀಧರರು ಶಿಕ್ಷಣ ಮುಗಿಸಿ ಹೊರಬರುತ್ತಿದ್ದಾರೆ.

ಆದರೆ ಅದಕ್ಕನುಗುಣವಾಗಿ ಉದ್ಯೋಗದ ವ್ಯವಸ್ಥೆ ಇಲ್ಲಿ ಇಲ್ಲದಿರುವುದರಿಂದ ಬೆಂಗಳೂರು, ಮುಂಬಯಿ, ಪುಣೆ, ಚೆನ್ನೈ ಹೀಗೆ ಹೊರಜಿಲ್ಲೆ, ರಾಜ್ಯ, ದೇಶಕ್ಕೆ ತೆರಳುತ್ತಿದ್ದಾರೆ. ಪರಿಣಾಮವಾಗಿ ಪ್ರತಿಭಾ ಪಲಾಯನವಾಗಿ ಇಲ್ಲಿನ ಕೌಟುಂಬಿಕಜೀವನದ ಮೇಲೂ ಹೊಡೆತ ಬೀಳುತ್ತಿದೆ. ನೂರಾರು ಮನೆಗಳಲ್ಲಿ ವೃದ್ಧ ಹೆತ್ತವರಿಗೆ ಇಳಿ ವಯಸ್ಸಿನಲ್ಲಿ ಆಸರೆ ಇಲ್ಲದಂತಾಗಿದೆ. ಕೃಷಿ ಚಟುವಟಿಕೆಗಳಿಗೂ ಹಿನ್ನಡೆಯಾಗುತ್ತಿದೆ.

ಈ ಸಾಮಾಜಿಕ ಸಮಸ್ಯೆಗಳ ಪರಿಹಾರ ಮತ್ತು ಜಿಲ್ಲೆಯ ಆರ್ಥಿಕತೆ ವೃದ್ಧಿಗೆ ಪೂರಕವಾಗಿ ಜಿಲ್ಲೆಯಲ್ಲಿ ಕನಿಷ್ಠ ನೂರು ಎಕರೆ ಪ್ರದೇಶದಲ್ಲಿ ಸಾಫ್ಟ್ವೇರ್‌ ಪಾರ್ಕ್‌ ನಿರ್ಮಿಸಬೇಕು. ಈ ಉದ್ದೇಶಕ್ಕೆ ಮೂಲಸೌಕರ್ಯ ಅಭಿವೃದ್ಧಿಗಾಗಿ 500 ಕೋಟಿ ರೂ.ಗಳಷ್ಟು ಅನುದಾನವನ್ನು ಶೀಘ್ರ ಒದಗಿಸುವಂತೆ ಪತ್ರದಲ್ಲಿ ಶ್ರೀಗಳು ಉಲ್ಲೇಖಿಸಿದ್ದಾರೆ.

ಉಡುಪಿಯಲ್ಲಿ ಐಟಿ ಪಾರ್ಕ್‌ ನಿರ್ಮಾಣವಾದರೆ ಸ್ಥಳೀಯ ಐಟಿ ಪದವೀಧರರಿಗೆ ಜಿಲ್ಲೆಯಲ್ಲೇ ಉದ್ಯೋಗ ದೊರೆಯುತ್ತದೆ ಮತ್ತು ಕೃಷಿ ಮೊದಲಾದ ಪೂರಕ ಚಟುವಟಿಕೆಗಳಿಗೂ ಹೊಸ ಶಕ್ತಿ ಸಿಗಲಿದೆ. ಜಿಲ್ಲೆಯಲ್ಲಿ ಐಟಿ ಉದ್ಯಮಕ್ಕೆ ಇರುವ ವಿಪುಲ ಅವಕಾಶಗಳನ್ನು ಶೀಘ್ರ ಬಳಸಿಕೊಳ್ಳುವಂತೆಯೂ ಶ್ರೀಗಳು ವಿವರಿಸಿದ್ದಾರೆ. ಈ ಪತ್ರಕ್ಕೆ ಕೇಂದ್ರ ಸಚಿವ ರಾಜೀವ್‌ ಚಂದ್ರಶೇಖರ್‌ ಸೂಕ್ತವಾಗಿ ಸ್ಪಂದಿಸಿದ್ದು, ರಾಜ್ಯದಿಂದ ಪ್ರಸ್ತಾವನೆ ಬಂದ ತತ್‌ಕ್ಷಣ ಕಾರ್ಯ ಪ್ರವೃತ್ತರಾಗುವುದಾಗಿ ತಿಳಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಟಾಪ್ ನ್ಯೂಸ್

ಚುನಾವಣಾ ಕರ್ತವ್ಯಕ್ಕೆ ಹಾಜರಾಗದ ಅಧಿಕಾರಿ ವಿರುದ್ಧ ಕ್ರಮಕ್ಕೆ ಜಿಲ್ಲಾಧಿಕಾರಿ ಸೂಚನೆ

ಚುನಾವಣಾ ಕರ್ತವ್ಯಕ್ಕೆ ಹಾಜರಾಗದ ಅಧಿಕಾರಿ ವಿರುದ್ಧ ಕ್ರಮಕ್ಕೆ ಜಿಲ್ಲಾಧಿಕಾರಿ ಸೂಚನೆ

ಅಭ್ಯರ್ಥಿಗಳು ತಮ್ಮ ಅಪರಾಧದ ಬಗ್ಗೆ ಪತ್ರಿಕೆಗಳಲ್ಲಿ ಪ್ರಕಟಿಸಬೇಕು; ಪವನ್ ಕುಮಾರ್

ಅಭ್ಯರ್ಥಿಗಳು ತಮ್ಮ ಅಪರಾಧದ ಬಗ್ಗೆ ಪತ್ರಿಕೆಗಳಲ್ಲಿ ಪ್ರಕಟಿಸಬೇಕು; ಪವನ್ ಕುಮಾರ್

1-sadsadsd

ಪ್ರಧಾನಿಯವರ ಮನೆಯ ಹೊರಗೆ ಧರಣಿ ನಡೆಸುತ್ತೇನೆ: ಮಮತಾ ಬ್ಯಾನರ್ಜಿ

ಅಧಿಕ ಲಾಭಾಂಶ ನೀಡುವುದಾಗಿ ಹಣ ಪಡೆದು ಎನ್ ಐಟಿಕೆ ವಿದ್ಯಾರ್ಥಿಯಿಂದ 27.96 ಲ.ರೂ ವಂಚನೆ

ಧರ್ಮಸ್ಥಳ: ಲಾರಿ- ಬೈಕ್ ಡಿಕ್ಕಿ: ಓರ್ವ ಸಾವು, ಮತ್ತೋರ್ವ ಗಂಭೀರ

ಧರ್ಮಸ್ಥಳ: ಲಾರಿ- ಬೈಕ್ ಡಿಕ್ಕಿ: ಓರ್ವ ಸಾವು, ಮತ್ತೋರ್ವ ಗಂಭೀರ

ವಿಚಾರಣೆ ನೆಪದಲ್ಲಿ ಖೈದಿಗಳ ಹಲ್ಲನ್ನೇ ಕಿತ್ತ ಐಪಿಎಸ್ ಅಧಿಕಾರಿ ಕರ್ತವ್ಯದಿಂದ ಅಮಾನತು

ವಿಚಾರಣೆ ನೆಪದಲ್ಲಿ ಖೈದಿಗಳ ಹಲ್ಲನ್ನೇ ಕಿತ್ತ ಐಪಿಎಸ್ ಅಧಿಕಾರಿ ಕರ್ತವ್ಯದಿಂದ ಅಮಾನತು

goa budget

ಗೋವಾ ಬಜೆಟ್ ಮಂಡಿಸಿದ ಮುಖ್ಯಮಂತ್ರಿ ಪ್ರಮೋದ್ ಸಾವಂತ್‌



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಂದಾರ್ತಿ ದೇವಸ್ಥಾನಕ್ಕೆ ರಜತ ರಥ ಸಮರ್ಪಣೆ

ಮಂದಾರ್ತಿ ದೇವಸ್ಥಾನಕ್ಕೆ ರಜತ ರಥ ಸಮರ್ಪಣೆ

ಉಡುಪಿ, ದಕ್ಷಿಣಕನ್ನಡ ಜಿಲ್ಲೆಯ ನಾಲ್ವರು ಅಧಿಕಾರಿ, ಸಿಬಂದಿಗೆ ಮುಖ್ಯಮಂತ್ರಿ ಪದಕ

ಉಡುಪಿ, ದಕ್ಷಿಣಕನ್ನಡ ಜಿಲ್ಲೆಯ ನಾಲ್ವರು ಅಧಿಕಾರಿ, ಸಿಬಂದಿಗೆ ಮುಖ್ಯಮಂತ್ರಿ ಪದಕ

ಆಸ್ಟ್ರೇಲಿಯಾದ ಸ್ಟೀರಿಂಗ್‌ ಕಮಿಟಿ ಸಭೆ: ರಘುವೀರ್‌ ಪೈಗೆ ಆಹ್ವಾನ

ಆಸ್ಟ್ರೇಲಿಯಾದ ಸ್ಟೀರಿಂಗ್‌ ಕಮಿಟಿ ಸಭೆ: ರಘುವೀರ್‌ ಪೈಗೆ ಆಹ್ವಾನ

ಕುತ್ಯಾರು: ತಿಂಗಳ ಹಿಂದೆ ಖರೀದಿಸಿದ ರಿಕ್ಷಾದಲ್ಲಿ ಬಾಡಿಗೆ ಹೋದ ವ್ಯಕ್ತಿ ನಾಪತ್ತೆ

ಕುತ್ಯಾರು: ತಿಂಗಳ ಹಿಂದೆ ಖರೀದಿಸಿದ ರಿಕ್ಷಾದಲ್ಲಿ ಬಾಡಿಗೆ ಹೋದ ವ್ಯಕ್ತಿ ನಾಪತ್ತೆ

ಕೋಟ ಡಾ. ಶಿವರಾಮ ಕಾರಂತರ ಆಪ್ತ ಸಹಾಯಕಿ ಮಾಲಿನಿ ಮಲ್ಯ ನಿಧನ

ಕೋಟ ಡಾ. ಶಿವರಾಮ ಕಾರಂತರ ಆಪ್ತ ಸಹಾಯಕಿ ಮಾಲಿನಿ ಮಲ್ಯ ನಿಧನ

MUST WATCH

udayavani youtube

ಸ್ನೇಕ್ ಶಾಮ್ ಹಾವುಗಳ ರಕ್ಷಣೆಗೆ ಮುಂದಾಗಲು ಇದೇ ಕಾರಣ | ಸ್ನೇಕ್ ಶ್ಯಾಮ್ ಮನದಾಳದ ಮಾತು

udayavani youtube

ಎವರೆಸ್ಟ್ ಹತ್ತುವವರ ಊಟ ತಿಂಡಿ ಕ್ರಮ ಹೇಗಿರುತ್ತೆ ನೋಡಿ !

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

ಹೊಸ ಸೇರ್ಪಡೆ

1-sasdsad

ದೆಹಲಿ-ಎನ್‌ಸಿಆರ್‌ನಲ್ಲಿ ಗುಡುಗು ಸಹಿತ ಮಳೆ; 9 ವಿಮಾನಗಳು ಬೇರೆಡೆಗೆ

1-asdsdsd

ಜಿಲ್ಲೆಯಲ್ಲಿ 1,239 ರೌಡಿಶೀಟರ್ ಗಳು: ವಿಜಯಪುರ ಡಿಸಿ ಡಾ.ವಿ.ಬಿ.ದಾನಮ್ಮನವರ

ಚುನಾವಣಾ ಕರ್ತವ್ಯಕ್ಕೆ ಹಾಜರಾಗದ ಅಧಿಕಾರಿ ವಿರುದ್ಧ ಕ್ರಮಕ್ಕೆ ಜಿಲ್ಲಾಧಿಕಾರಿ ಸೂಚನೆ

ಚುನಾವಣಾ ಕರ್ತವ್ಯಕ್ಕೆ ಹಾಜರಾಗದ ಅಧಿಕಾರಿ ವಿರುದ್ಧ ಕ್ರಮಕ್ಕೆ ಜಿಲ್ಲಾಧಿಕಾರಿ ಸೂಚನೆ

1-qe21ew2qe

ಅಭ್ಯರ್ಥಿಗಳು ಅಪರಾಧದ ಬಗ್ಗೆ ಪತ್ರಿಕೆಗಳಲ್ಲಿ ಪ್ರಕಟಿಸಬೇಕು: ಬಳ್ಳಾರಿ ಡಿಸಿ ಪವನ್ ಕುಮಾರ್

ಅಭ್ಯರ್ಥಿಗಳು ತಮ್ಮ ಅಪರಾಧದ ಬಗ್ಗೆ ಪತ್ರಿಕೆಗಳಲ್ಲಿ ಪ್ರಕಟಿಸಬೇಕು; ಪವನ್ ಕುಮಾರ್

ಅಭ್ಯರ್ಥಿಗಳು ತಮ್ಮ ಅಪರಾಧದ ಬಗ್ಗೆ ಪತ್ರಿಕೆಗಳಲ್ಲಿ ಪ್ರಕಟಿಸಬೇಕು; ಪವನ್ ಕುಮಾರ್