ಮಹಾಲಿಂಗಪುರ ತಾಲೂಕಿಗೆ ಒತ್ತಾಯಿಸಿ ಎ.14 ರಿಂದ ಧರಣಿ ಸತ್ಯಾಗ್ರಹ
Team Udayavani, Apr 9, 2022, 11:34 PM IST
ಮಹಾಲಿಂಗಪುರ : ಮಹಾಲಿಂಗಪುರ ಪಟ್ಟಣವನ್ನು ತಾಲೂಕು ಕೇಂದ್ರಕ್ಕಾಗಿ ಒತ್ತಾಯಿಸಿ ಏ.14 ರಿಂದ ಪಟ್ಟಣದ ಚನ್ನಮ್ಮ ವೃತ್ತದಲ್ಲಿ ಧರಣಿ ಸತ್ಯಾಗ್ರಹ ನಡೆಸಲಾಗುವದು ಎಂದು ತಾಲೂಕು ಹೋರಾಟ ಸಮಿತಿಯ ಮಹಾಲಿಂಗಪ್ಪ ಕೋಳಿಗುಡ್ಡ, ಧರೆಪ್ಪ ಸಾಂಗ್ಲಿಕರ್ ಹೇಳಿದರು.
ಶನಿವಾರ ಪಟ್ಟಣದ ಬನಶಂಕರಿ ಸಾಂಸ್ಕೃತಿಕ ಭವನದಲ್ಲಿ ಜರುಗಿದ ಮಹಾಲಿಂಗಪುರ ತಾಲೂಕು ಹೋರಾಟ ಸಮಿತಿಯ ವಿಶೇಷ ಸಭೆಯಲ್ಲಿ ಮಹಾಲಿಂಗಪುರ ಹಾಗೂ ಸುತ್ತಮುತ್ತಲಿನ 9 ಗ್ರಾಮಗಳ ಹಿರಿಯರ ಸಭೆಯಲ್ಲಿ ಯಾವುದೇ ಕಾರಣಕ್ಕೂ ಮಹಾಲಿಂಗಪುರ ಪಟ್ಟಣ ಹಾಗೂ ಸುತ್ತಮುತ್ತಲಿನ 9 ಗ್ರಾಮಗಳನ್ನು ನೂತನ ತೇರದಾಳ ತಾಲೂಕಿಗೆ ಸೇರಿಸಬಾರದು.ಮುಖ್ಯವಾಗಿ ಮಹಾಲಿಂಗಪುರ ಪಟ್ಟಣ ಮತ್ತು ಸುತ್ತಲಿನ 9 ಗ್ರಾಮಗಳು ಹಾಗೂ ಮುಧೋಳ ರನ್ನಬೆಳಗಲಿ, ಅಕ್ಕಿಮರಡಿ, ನಾಗರಾಳ ಸೇರಿದಂತೆ ಹಲವು ಗ್ರಾಮಗಳನ್ನು ಸೇರಿಸಿ ಮಹಾಲಿಂಗಪುರ ಪಟ್ಟಣವನ್ನು ನೂತನ ತಾಲೂಕು ಕೇಂದ್ರವನ್ನಾಗಿ ಘೋಷಿಸಬೇಕೆಂದು ಒತ್ತಾಯಿಸಿ, ನಮ್ಮ ಬೇಡಿಕೆ ಈಡೆರುವರೆಗೂ ಯಾವುದೇ ರಾಜಕೀಯ ತಂತ್ರ, ಪ್ರಭಾವಕ್ಕೆ ಒಳಗಾಗದೇ ಪಕ್ಷಾತೀತವಾಗಿ ಧರಣಿ ಸತ್ಯಾಗ್ರಹ ನಡೆಸಲು ಸರ್ವಾನುಮತದ ನಿರ್ಣಯವನ್ನು ಕೈಗೊಳ್ಳಲಾಯಿತು.
ಏ.14 ರಂದು ಮುಂಜಾನೆ 10 ಗಂಟೆಗೆ ಮಹಾಲಿಂಗೇಶ್ವರ ದೇವಾಲಯದಲ್ಲಿ ಪೂಜೆ ಸಲ್ಲಿಸಿ, ನಡಚೌಕಿ, ಜವಳಿ ಬಜಾರ, ಗಾಂಧಿ ವೃತ್ತದ ಮಾರ್ಗವಾಗಿ ಚನ್ನಮ್ಮ ವೃತ್ತದಲ್ಲಿ ನಿರ್ಮಿಸುವ ಮಹಾಲಿಂಗಪುರ ತಾಲೂಕು ಹೋರಾಟ ವೇದಿಕೆವರೆ ಬೃಹತ್ ಮೆರವಣಿಗೆ ಮೂಲಕ ಪಾದಯಾತ್ರೆ ನಡೆಸಿ ಧರಣಿ ಸತ್ಯಾಗ್ರಹವನ್ನು ಆರಂಭಿಸಲು ನಿರ್ಧರಿಸಲಾಯಿತು. ಸಭೆಯಲ್ಲಿ ರನ್ನಬೆಳಗಲಿ ಹಿರಿಯರಾದ ಸಿದ್ದುಗೌಡ ಪಾಟೀಲ್, ಪಂಡಿತ್ ಪೂಜಾರಿ, ಅಶೋಕ ಸಿದ್ದಾಪೂರ, ಚಿಕ್ಕಪ್ಪ ನಾಯಕ, ಅಕ್ಕಿಮರಡಿಯ ಮಡಿವಾಳಯ್ಯ ಕಂಬಿ, ಕಿರಣ ಜಗದಾಳ, ಕುಮಾರ ಮಂಟೂರ, ಸಂತೋಷ ಜಗದಾಳ,ಕಲ್ಲಪ್ಪ ತಳವಾರ, ಹೊಳೆಬಸು ಮಠದ, ಢವಳೇಶ್ವರದ ಸಿದ್ದನಗೌಡ ಪಾಟೀಲ್, ಮಾರುತಿ ಹವಾಲ್ದಾರ್, ಕೆಸರಗೊಪ್ಪದ ಭೀಮಸಿ ಸಸಾಲಟ್ಟಿ, ಚನ್ನು ದೇಸಾಯಿ, ದುಂಡಪ್ಪ ಜಾಧವ,ಬಸವರಾಜ ಮರನೂರ, ಮಾರಾಪೂರದ ಮಹಾದೇವ ಮೇಟಿ(ಮಾರಾಪೂರ), ಮಹಾಲಿಂಗಪುರದ ಯಲ್ಲನಗೌಡ ಪಾಟೀಲ್ , ನಿಂಗಪ್ಪ ಬಾಳಿಕಾಯಿ, ಮಲ್ಲಪ್ಪ ಭಾಂವಿಕಟ್ಟಿ, ಮನೋಹರ ಶಿರೋಳ, ಜಾವೇದ ಬಾಗವಾನ, ಬಂದು ಪಕಾಲಿ, ಸಂಗಪ್ಪ ಹಲ್ಲಿ, ಶ್ರೀಶೈಲ ಪ್ಪ ಉಳ್ಳಾಗಡ್ಡಿ, ಜಯವಂತ ಕಾಗಿ, ಶ್ರೀಶೈಲಪ್ಪ ಹಿಪ್ಪರಗಿ, ಹಣಮಂತ ಜಮಾದಾರ, ಸಿದ್ದು ಶಿರೋಳ,ಮಹಾಲಿಂಗ ಹಿಕಡಿ, ಸೇರಿದಂತೆ ಹಲವರು ಸಭೆಯಲ್ಲಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ
Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ
Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್ ಹೇಳಿಕೆ
ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…
Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ
MUST WATCH
ಹೊಸ ಸೇರ್ಪಡೆ
Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ
Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್ಗೆ 48 ಗಂಟೆ ಪ್ರಚಾರ ನಿಷೇಧ
Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ
Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್ ಹೇಳಿಕೆ
ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…