ಪುತ್ತೂರು, ಸುಳ್ಯ ತಾಲೂಕು: ಜ್ವರ ಬಾಧಿತರ ಸಂಖ್ಯೆ ಹೆಚ್ಚಳ ಡೆಂಗ್ಯೂ ಜ್ವರ: ಮಹಿಳೆ ಸಾವು


Team Udayavani, Jun 13, 2020, 6:07 AM IST

ಪುತ್ತೂರು, ಸುಳ್ಯ ತಾಲೂಕು: ಜ್ವರ ಬಾಧಿತರ ಸಂಖ್ಯೆ ಹೆಚ್ಚಳ ಡೆಂಗ್ಯೂ ಜ್ವರ: ಮಹಿಳೆ ಸಾವು

ಪುತ್ತೂರು/ಸುಳ್ಯ: ಕೋವಿಡ್-19 ಮಹಾಮಾರಿ ನಡುವೆ ಪುತ್ತೂರು ಮತ್ತು ಸುಳ್ಯ ತಾಲೂಕಿನ ಹಲವು ಗ್ರಾಮಗಳಲ್ಲಿ ಡೆಂಗ್ಯೂ ಜ್ವರ ಬಾಧೆ ಕಾಣಿಸಿಕೊಂಡಿದೆ. ಪುತ್ತೂರು ತಾಲೂಕಿನ ಬೆಟ್ಟಂಪಾಡಿಯಲ್ಲಿ ಜೂ. 11ರಂದು ಓರ್ವ ಮಹಿಳೆ ಡೆಂಗ್ಯೂಗೆ ಬಲಿಯಾದ ಬೆನ್ನಲ್ಲೇ ಆತಂಕ ಮನೆ ಮಾಡಿದೆ.

ಸರಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಜ್ವರ ಬಾಧಿತರ ಸಂಖ್ಯೆ ಹೆಚ್ಚಳಗೊಳ್ಳುತ್ತಿದ್ದು, ಪರಿಸ್ಥಿತಿ ಎದುರಿಸಲು ಆರೋಗ್ಯ ಇಲಾಖೆ ಕೂಡ ಸಿದ್ಧತೆಯಲ್ಲಿ ತೊಡಗಿದೆ. ಜೂನ್‌ ತಿಂಗಳ 10 ದಿನಗಳಲ್ಲಿ ಎರಡು ತಾಲೂಕಿನಲ್ಲಿ 100ಕ್ಕೂ ಹೆಚ್ಚು ಪ್ರಕರಣಗಳು ಕಂಡು ಬಂದಿವೆ. ಸಾಂಕ್ರಾಮಿಕ ಜ್ವರ ಹಬ್ಬುವಿಕೆ ಪ್ರಮಾಣ ಕೂಡ ವೃದ್ಧಿ ಆಗುತ್ತಿದೆ.

ಈ ಹಿಂದೆ ತತ್ತರಿಸಿದ ತಾಲೂಕು
ಐದಾರು ವರ್ಷಗಳ ಕಾಲ ಚಿಕುನ್‌ ಗುನ್ಯಾ, ಡೆಂಗ್ಯೂ ಜ್ವರ ಉಭಯ ತಾಲೂಕುಗಳ ಜನಜೀವನವನ್ನೇ ತತ್ತರಿಸಿತ್ತು. ಸೊಳ್ಳೆಯಿಂದ ಹಬ್ಬುವ ಈ ಎರಡು ಕಾಯಿಲೆಗಳ ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ತನ್ನ ಪರಿಮಿತಿಯಲ್ಲಿ ಪ್ರಯತ್ನಿಸಿದ್ದರೂ ಕೃಷಿ ಆಧಾರಿತ ಪರಿಸರದಲ್ಲಿ ಸೊಳ್ಳೆ ನಿಯಂತ್ರಣ ಸಾಧ್ಯವಾಗದ ಕಾರಣ, ಜ್ವರ ಬಾಧೆಯಿಂದ ಜನರಿಗೆ ಮುಕ್ತಿ ಸಿಗಲಿಲ್ಲ. ಈ ವರ್ಷವು ಮುಂಗಾರು ಮಳೆ ಆರಂಭಕ್ಕೆ ಮೂರು ತಿಂಗಳು ಮೊದಲೇ ಡೆಂಗ್ಯೂ ಜ್ವರ ಬಾಧೆ ಕಾಡಿದ್ದು ಈಗ ಏರಿಕೆ ಕಾಣುತ್ತಿದೆ.

ಮಳೆ ನೀರಿನ ಶೇಖರಣೆಯ ಸ್ಥಳ, ಅಡಿಕೆ, ರಬ್ಬರ್‌ ತೋಟಗಳಲ್ಲಿ ಸೊಳ್ಳೆ ವಿಪರೀತ ಪ್ರಮಾಣದಲ್ಲಿ ಕಾಣಿಸಿಕೊಂಡಿದೆ. ಮನೆ ಪರಿಸರದಲ್ಲಿ ರಾತ್ರಿ ವೇಳೆ ಸೊಳ್ಳೆ ಕಾಟ ಹೆಚ್ಚಾಗಿದೆ. ದೀರ್ಘ‌ ಬಿಸಿಲು ಅಥವಾ ನಿರಂತರ ಮಳೆ ಬಂದು ಹೊಂಡದಿಂದ ನೀರು ಆವಿಯಾಗಿ ಅಥವಾ ಹರಿದು ಹೋದಲ್ಲಿ ಸೊಳ್ಳೆ ಉತ್ಪಾದನೆಗೆ ಕಡಿವಾಣ ಬಿದ್ದು, ಪರಿಸ್ಥಿತಿ ನಿಯಂತ್ರಣಕ್ಕೆ ಬರಲಿದೆ ಅನ್ನುತ್ತದೆ ಆರೋಗ್ಯ ಇಲಾಖೆ.

ಆರೋಗ್ಯ ಇಲಾಖೆಯಿಂದ ಜಾಗೃತಿ
ಎರಡು ವರ್ಷಗಳ ಪರಿಸ್ಥಿತಿ ಅರಿತಿರುವ ಆರೋಗ್ಯ ಇಲಾಖೆ ಈಗಾಗಲೇ ಸಾಂಕ್ರಾಮಿಕ ರೋಗ ತಡೆಗೆ ಜಾಗೃತಿ ಕಾರ್ಯಕ್ರಮ ಹಮ್ಮಿಕೊಂಡಿದೆ. ಅಲ್ಲಲ್ಲಿ ಫಾಗಿಂಗ್‌, ಜಾಥಾ, ಆಶಾ ಕಾರ್ಯಕರ್ತರ ಮುಖೇನ ಮನೆ-ಮನೆ ಭೇಟಿ, ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಮುನ್ನೆಚ್ಚೆರಿಕೆಯ ಕರಪತ್ರ ಇತ್ಯಾದಿ ಕ್ರಮಕ್ಕೆ ಮುಂದಾಗಿದೆ.

ಜನವರಿ-ಜೂನ್‌ ವರೆಗಿನ ಪ್ರಕರಣ
ಜನವರಿಯಿಂದ ಜೂನ್‌ 10ರ ತನಕ ಕಡಬ ಪ್ರಾ. ಆ. ಕೇಂದ್ರದ ವ್ಯಾಪ್ತಿಯಲ್ಲಿ 5, ಕೊಯಿಲ-24, ಪುತ್ತೂರು ತಾಲೂ ಕಿನ ಉಪ್ಪಿನಂಗಡಿ ಪ್ರಾಥಮಿಕ ಆರೋಗ್ಯ ಕೇಂದ್ರದ ವ್ಯಾಪ್ತಿಯಲ್ಲಿ 17, ಈಶ್ವರ ಮಂಗಲ-4, ನೆಲ್ಯಾಡಿ-3, ಕಾಣಿ ಯೂರು-1, ಕೊಳ್ತಿಗೆ-4, ಪಾಣಾಜೆ-128, ಸರ್ವೆ-9, ಶಿರಾಡಿ-6, ತಿಂಗಳಾಡಿ-39 ಪ್ರಕರಣಗಳು ಕಂಡು ಬಂದಿವೆ. ಜನವರಿ ಯಿಂದ ಜೂನ್‌ 7ರ ತನಕ ಉಭಯ ತಾಲೂಕುಗಳಲ್ಲಿ ಒಟ್ಟು 258 ಡೆಂಗ್ಯೂ ಜ್ವರ ಪ್ರಕರಣಗಳು ದೃಢಪಟ್ಟಿವೆ.

ಜಾಗೃತಿಯೇ ಸವಾಲು!
ಮನೆ ಪರಿಸರದಲ್ಲಿ ಸ್ವಚ್ಛತೆ ಇಲ್ಲದಿರುವುದು, ದೀರ್ಘ‌ ಕಾಲ ನೀರು ಶೇಖರಣೆ, ಹೊಂಡಗಳಲ್ಲಿ ನೀರು ತುಂಬಿರುವುದು ಲಾರ್ವಗಳ ಸೃಷ್ಟಿಗೆ ಕಾರಣವಾಗುತ್ತದೆ. ಇಂತಹ ರೋಗ ಹರಡಬಲ್ಲ ತಾಣಗಳ ನಿರ್ಮೂಲನೆ ಬಗ್ಗೆ ಎಚ್ಚರಿಕೆ ವಹಿಸುವಂತೆ ಆರೋಗ್ಯ ಇಲಾಖೆ ಸಿಬಂದಿ ಮನೆ ಮನೆಗೆ ತೆರಳಿ ಮನವಿ ಮಾಡಿದರೂ ಇದರ ಪರಿಪಾಲನೆ ಬಗ್ಗೆ‌ ಜನರಲ್ಲಿನ ನಿರ್ಲಕ್ಷ್ಯ ಕೂಡ ರೋಗ ಹಬ್ಬಲು ಕಾರಣವಾಗಿದೆ.

ರಾತ್ರಿ ಹೊತ್ತು ಸೊಳ್ಳೆ ಕಾಟದಿಂದ ಪಾರಾಗಲು ಸೊಳ್ಳೆ ಪರದೆ ಬಳಸಬೇಕು. ಜ್ವರ ಬಂದ ಸಂದರ್ಭ ಸ್ವಯಂ ಚಿಕಿತ್ಸೆಗೆ ಒಳಗಾಗುವುದರಿಂದ ರೋಗ ಉಲ್ಬಣಗೊಂಡು ಪ್ರಾಣಕ್ಕೆ ಎರವಾದ ಉದಾಹರಣೆಗಳಿವೆ. ಹಾಗಾಗಿ ರೋಗ ಬಂದ ತತ್‌ಕ್ಷಣ ಸಮೀಪದ ಆಸ್ಪತ್ರೆಗೆ ಭೇಟಿ ನೀಡಿ ಔಷಧ ಪಡೆದುಕೊಳ್ಳಬೇಕು ಎನ್ನುತ್ತಾರೆ ಆರೋಗ್ಯ ಅಧಿಕಾರಿಗಳು.

ಜಾಗೃತಿ ಅಗತ್ಯ
ತಾಲೂಕಿನ ಅರಂ ತೋಡು, ಮಡಪ್ಪಾಡಿ, ಮರ್ಕಂಜ, ಜಾಲ್ಸೂರು ಮೊದಲಾದೆಡೆ ಡೆಂಗ್ಯೂ ಪ್ರಕರಣ ಕಂಡು ಬಂದಿದ್ದು, ಪ್ರಸ್ತುತ ನಿಯಂತ್ರಣಕ್ಕೆ ಬಂದಿದೆ. ಜಾಗೃತಿ ಬಗ್ಗೆ ಮನೆ ಮನೆಗೆ ತೆರಳಿ ಅರಿವು ಮೂಡಿ ಸಲಾಗುತ್ತಿದೆ. ಮುನ್ನೆಚ್ಚೆರಿಕೆ ಕ್ರಮಗಳ ಬಗ್ಗೆ ಜನರು ಆದ್ಯತೆ ನೀಡಿದರೆ ಮಾತ್ರ ನಿಯಂತ್ರಣ ಸಾಧ್ಯವಿದೆ.
– ಡಾ| ಸುಬ್ರಹ್ಮಣ್ಯ ಎ.,
ತಾ| ಆರೋಗ್ಯಧಿಕಾರಿ, ಸುಳ್ಯ

ಟಾಪ್ ನ್ಯೂಸ್

1-asasa

Vote; ಬೇರೆಲ್ಲ ಬದಿಗಿಡಿ ಇಂದು ತಪ್ಪದೆ ಮತ ಚಲಾಯಿಸಿ! :ನೀವು ಗಮನಿಸಬೇಕಾದದ್ದು..

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

1-waadassda

OBC-Muslim ಮೀಸಲು ವಿವಾದ ತಾರಕಕ್ಕೆ: ಪ್ರಧಾನಿ ಹೇಳಿಕೆ ಅಲ್ಲಗಳೆದ ಸಿದ್ದರಾಮಯ್ಯ

1-weqwqewqwq

Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!

33

Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ

voter

ಈ ಲೋಕ ಚುನಾವಣೆ ವಿಶ್ವದಲ್ಲೇ ಅತ್ಯಂತ ದುಬಾರಿ ಚುನಾವಣೆ!

1-weeewq

Hyderabad: ಓವೈಸಿ ಪ್ರತಿಸ್ಪರ್ಧಿ, ಬಿಜೆಪಿಯ ಮಾಧವಿ ಆಸ್ತಿ 221.37 ಕೋಟಿ ರೂ.


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್‌ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ

ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್‌ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ

1-asasa

Vote; ಬೇರೆಲ್ಲ ಬದಿಗಿಡಿ ಇಂದು ತಪ್ಪದೆ ಮತ ಚಲಾಯಿಸಿ! :ನೀವು ಗಮನಿಸಬೇಕಾದದ್ದು..

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

20

Election illegal: ನಿನ್ನೆ 2.31 ಕೋ. ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.