ಶಿಕ್ಷಣ ಇಲಾಖೆ ಸಮಸ್ಯೆ ಬಗೆಹರಿಸಲು ಚರ್ಚೆ


Team Udayavani, Sep 12, 2019, 3:07 AM IST

shikshana

ಬೆಂಗಳೂರು: ವರ್ಗಾವಣೆ ಕಾಯ್ದೆ ತಿದ್ದುಪಡಿ, ಸರ್ಕಾರಿ ಶಾಲೆ ಗುಣಮಟ್ಟ ಸೇರಿದಂತೆ ಶಿಕ್ಷಣ ಕ್ಷೇತ್ರದ ಸುಧಾರಣೆ ಕುರಿತು ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಎಸ್‌.ಸುರೇಶ್‌ ಕುಮಾರ್‌ ಅವರು ವಿಧಾನಪರಿಷತ್‌ ಸದಸ್ಯರೊಂದಿಗೆ ಸಭೆ ನಡೆಸಿ ಹಲವು ಸಲಹೆ ಪಡೆದರು. ನಗರದ ನೃಪತುಂಗ ರಸ್ತೆಯ ಸರ್ವಶಿಕ್ಷಾ ಅಭಿಯಾನದ ಕಚೇರಿಯಲ್ಲಿ ಬುಧವಾರ ನಡೆದ ಸಭೆಯಲ್ಲಿ ಶಿಕ್ಷಣ ಕ್ಷೇತ್ರದ ಸುಧಾರಣೆಗೆ ಸಂಬಂಧಿಸಿದಂತೆ ಸಮಾಲೋಚನೆ ನಡೆಸಿದರು.

ಬಳಿಕ ಮಾತನಾಡಿದ ಸಚಿವ ಸುರೇಶ್‌ ಕುಮಾರ್‌, ಶಿಕ್ಷಣ ಕ್ಷೇತ್ರ ಪ್ರತಿನಿಧಿಸುತ್ತಿರುವ ಮೇಲ್ಮನೆ ಶಾಸಕರ ಸಲಹೆ, ಮಾರ್ಗದರ್ಶನ ಪಡೆದಿದ್ದೇನೆ. ಇಲಾಖೆಯಲ್ಲಿ ಕಾನೂನು ತೊಡಕು ಇಲ್ಲದ ವಿಷಯ, ಹಣಕಾಸಿಗೆ ಹೊರೆಯಾಗದ ಪ್ರಕರಣಗಳನ್ನು ಕಾಲಮಿತಿ ಯಲ್ಲಿ ಬಗೆಹರಿಸಲು ಕಾರ್ಯಯೋಜನೆ ರೂಪಿಸಲಾಗುವುದೆಂದರು.

ನಿರ್ದಿಷ್ಟ ಪ್ರಕರಣ ಗಮನಕ್ಕೆ ತನ್ನಿ: ವರ್ಗಾವಣೆ ವೇಳೆ ಕ್ಯಾನ್ಸರ್‌ ಮೊದಲಾದ ಗಂಭೀರ ಆರೋಗ್ಯ ಸಮಸ್ಯೆ ಹೊಂದಿರುವ ಶಿಕ್ಷಕರಿಗೆ ವರ್ಗಾವಣೆಯಿಂದ ವಿನಾಯ್ತಿ ನೀಡಿದ ನಂತರವೂ ಪ್ರಕರಣಗಳು ಉಳಿದಿದ್ದರೆ, ಅಂತಹ ನಿರ್ದಿಷ್ಟ ಪ್ರಕರಣ ಗಳನ್ನು ತಮ್ಮ ಗಮನಕ್ಕೆ ತಂದರೆ ತಕ್ಷಣವೇ ಕ್ರಮ ಕೈಗೊಳ್ಳಲು ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರಿಗೆ ಸೂಚನೆ ನೀಡುತ್ತೇನೆಂದರು.

ಶಿಕ್ಷಣ ಇಲಾಖೆಯಲ್ಲಿ ಇನ್ನೂ ಸಾಕಷ್ಟು ಸಮಸ್ಯೆ ಇದೆ. ಎಲ್ಲವನ್ನೂ ಏಕಕಾಲಕ್ಕೆ ಪರಿಹರಿಸುವುದು ಕಷ್ಟ. ಜ್ವಲಂತ ಸಮಸ್ಯೆಗಳ ಕುರಿತು ಸದ್ಯ ಗಮನ ಹರಿಸಲಾಗುವುದು ಎಂದು ವಿಧಾನ ಪರಿಷತ್‌ ಹಿರಿಯ ಸದಸ್ಯ ಬಸವರಾಜ ಹೊರಟ್ಟಿ ಸಲಹೆ ನೀಡಿದರು. ಹಾಗೆಯೇ ಶಿಕ್ಷಕರ ಹಲವು ಸಮಸ್ಯೆಗಳ ಕುರಿತಂತೆ ವಿಧಾನ ಪರಿಷತ್‌ ಸದಸ್ಯರು ಸಚಿವರ ಗಮನ ಸೆಳೆದರು.

ವಿಧಾನಪರಿಷತ್‌ ಸದಸ್ಯರಾದ ಪುಟ್ಟಣ್ಣ, ಎಸ್‌.ವಿ.ಸಂಕನೂರ, ಶರಣಪ್ಪ ಮಟ್ಟೂರು ಮತ್ತಿತರರು ಸಲಹೆ-ಸೂಚನೆ ನೀಡಿದರು. ಇಲಾಖೆ ಪ್ರಧಾನ ಕಾರ್ಯದರ್ಶಿ ಎಸ್‌.ಆರ್‌. ಉಮಾಶಂಕರ್‌, ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತ ಡಾ.ಕೆ.ಜಿ.ಜಗದೀಶ್‌, ಸರ್ವ ಶಿಕ್ಷಾ ಅಭಿಯಾನದ ಯೋಜನಾ ನಿರ್ದೇಶಕ ಡಾ.ಟಿ.ಎಂ.ರೇಜು, ಪಿಯು ಇಲಾಖೆ ನಿರ್ದೇಶಕಿ ಕನಗವಲ್ಲಿ, ಪ್ರೌಢಶಿಕ್ಷಣ ಮಂಡಳಿ ನಿರ್ದೇಶಕಿ ವಿ.ಸುಮಂಗಳಾ ಉಪಸ್ಥಿತರಿದ್ದರು.

ಶಿಕ್ಷಕ-ವಿದ್ಯಾರ್ಥಿ ಸ್ನೇಹಿ ವರ್ಗಾವಣೆ ನೀತಿ: ಶಿಕ್ಷಕರ ವರ್ಗಾವಣೆ ಪ್ರಕ್ರಿಯೆಗೆ ತೊಡಕಾದ ಕುರಿತಂತೆ ಶಾಸಕರು ನೀಡಿದ ಸಲಹೆ ಆಲಿಸಿ ಕಾಯ್ದೆಗೆ ತಿದ್ದುಪಡಿ ತರುವ ಮೊದಲು ವಿಧಾನಪರಿಷತ್ತಿನ ಸದಸ್ಯರ ಸಭೆ ಕರೆಯಲಾಗುವುದು. ಅಲ್ಲದೇ, ವಿಧಾನಪರಿಷತ್ತಿನ ಸದಸ್ಯರ ಸಮಿತಿ ರಚಿಸಿ ತಿದ್ದುಪಡಿಗೆ ಸಂಬಂಧಿಸಿದಂತೆ ವರದಿ ಪಡೆಯಲಿದ್ದೇವೆ. ಕಳೆದ ಬಾರಿ ವಿಧಾನಮಂಡಲದ ಎರಡೂ ಸದನಗಳಲ್ಲಿ ಧರಣಿ ವೇಳೆ ಮಸೂದೆ ಅಂಗೀಕಾರಗೊಂಡಿತ್ತು. ಈ ಬಾರಿ ಚರ್ಚೆಗೆ ಅವಕಾಶ ಕಲ್ಪಿಸಲಾಗುತ್ತದೆ. ಶಿಕ್ಷಕ ಹಾಗೂ ವಿದ್ಯಾರ್ಥಿ ಸ್ನೇಹಿ ವರ್ಗಾವಣೆ ನೀತಿ ಜಾರಿಗೆ ತರಲಾಗುವುದು ಎಂದು ಸಚಿವ ಸುರೇಶ್‌ಕುಮಾರ್‌ ಭರವಸೆ ನೀಡಿದರು.

ಸಭೆಯ ಪ್ರಮುಖ ನಿರ್ಣಯ: ಶಿಕ್ಷಣ ತಜ್ಞರು ಹಾಗೂ ಸಾಹಿತಿಗಳನ್ನು ಒಳಗೊಂಡ ನಿಯೋಗ, ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಮಾತೃಭಾಷೆ ಶಿಕ್ಷಣದ ಮಹತ್ವವನ್ನು ಸರ್ಕಾರಕ್ಕೆ ಮನದಟ್ಟು ಮಾಡಿಸುವುದು. ಪ್ರಸಕ್ತ ಸಾಲಿನಲ್ಲಿ ಆರಂಭವಾಗಿ ರುವ ಸಾವಿರ ಕರ್ನಾಟಕ ಪಬ್ಲಿಕ್‌ ಶಾಲೆಗಳನ್ನು ರದ್ದು ಮಾಡುವಂತೆ ಆಗ್ರಹಿಸುವುದು. ಜತೆಗೆ, ಕನ್ನಡ ಮಾಧ್ಯಮ ಶಾಲೆಗಳ ಸಮಗ್ರ ಅಭಿವೃದ್ಧಿಗೆ ಒತ್ತಾಯಿಸುವುದು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.