ಪ್ರಧಾನಿ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ದೇಶಪಾಂಡೆ
Team Udayavani, Sep 21, 2019, 8:06 PM IST
ಬೆಂಗಳೂರು: ಕಾಂಗ್ರೆಸ್ ಹಿರಿಯ ನಾಯಕ ಆರ್.ವಿ.ದೇಶಪಾಂಡೆ ಕೇಂದ್ರ ಸರಕಾರ ಕಾರ್ಪೋರೆಟ್ ವಲಯದ ತೆರಿಗೆ ಕಡಿಮೆ ಮಾಡಿರುವುದನ್ನು ಸ್ವಾಗತಿಸುವ ಮೂಲಕ ಪ್ರಧಾನಿ ನರೇಂದ್ರ ಮೋದಿಯ ಬಗ್ಗೆ ಮೃದು ಧೋರಣೆ ತೋರಿರುವುದು ರಾಜಕೀಯ ವಲಯದಲ್ಲಿ ಹುಬ್ಬೇರಿಸುವಂತೆ ಮಾಡಿದೆ.
ದೇಶದಲ್ಲಿ ವಿಪಕ್ಷಗಳ ನಾಯಕರನ್ನು ಕೇಂದ್ರ ಸರಕಾರ ಟಾರ್ಗೆಟ್ ಮಾಡುತ್ತಿದೆ ಎಂದು ಕಾಂಗ್ರೆಸ್ನ ಎಲ್ಲ ನಾಯಕರೂ ನೇರವಾಗಿ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಸರಕಾರದ ವಿರುದ್ಧ ವಾಗ್ಧಾಳಿ ನಡೆಸುತ್ತಿರುವ ಸಂದರ್ಭದಲ್ಲಿ ದೇಶಪಾಂಡೆ ಪ್ರಧಾನಿ ನಿರ್ಧಾರವನ್ನು ಸ್ವಾಗತಿಸಿರುವುದರ ಹಿಂದೆ ರಾಜಕೀಯ ಜಾಣತನ ಅಡಗಿದೆಯಾ ಎಂಬ ಮಾತುಗಳು ಕಾಂಗ್ರೆಸ್ ವಲಯದಲ್ಲಿ ಕೇಳಿ ಬರುತ್ತಿವೆ.
ಕಾಂಗ್ರೆಸ್ನಲ್ಲಿ ಆರ್ಥಿಕವಾಗಿ ಶಕ್ತಿ ಹೊಂದಿರುವ ನಾಯಕರನ್ನು ಪ್ರಧಾನಿ ನರೇಂದ್ರ ಮೋದಿ ಟಾರ್ಗೆಟ್ ಮಾಡಿ, ಅವರ ವಿರುದ್ಧ ಸಿಬಿಐ, ಇಡಿ ಮತ್ತು ಐಟಿ ಇಲಾಖೆಗಳನ್ನು ಬಳಸಿಕೊಂಡು ಅವರನ್ನು ಬಿಜೆಪಿಯತ್ತ ಸೆಳೆಯುವ ಪ್ರಯತ್ನ ಮಾಡಿದ್ದರು ಎಂಬ ಆರೋಪ ಕೇಳಿ ಬಂದಿತ್ತು. ಅದರ ಪರಿಣಾಮವಾಗಿ ಲೋಕಸಭೆ ಚುನಾವಣೆಗೂ ಮುಂಚೆಯೇ ಆರ್.ವಿ.ದೇಶಪಾಂಡೆ ಕಾಂಗ್ರೆಸ್ ತೊರೆದು ಬಿಜೆಪಿ ಸೇರುತ್ತಾರೆ ಎಂಬ ಮಾತುಗಳೂ ಕೇಳಿ ಬರುತ್ತಿದ್ದವು. ಬಿಜೆಪಿ ಕೂಡ ದೇಶಪಾಂಡೆಯವರಿಗೆ ಐಟಿ ಇಲಾಖೆಯ ಪರೋಕ್ಷ ಎಚ್ಚರಿಕೆ ನೀಡುವ ಮೂಲಕ ಅವರನ್ನು ಸೈಲೆಂಟ್ ಆಗಿರುವಂತೆ ಮಾಡಿದ್ದರು ಎಂದು ಹೇಳಲಾಗಿತ್ತು.
ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿ ಜನ್ಮದಿನಕ್ಕೂ ಶುಭಾಶಯ ಕೋರಿ ಅವರನ್ನು ಹೊಗಳಿ ಟ್ವೀಟ್ ಮಾಡಿದ್ದ ಆರ್.ವಿ.ದೇಶಪಾಂಡೆ ಈಗ ಕಾರ್ಪೊರೇಟ್ ತೆರಿಗೆ ಕಡಿಮೆ ಮಾಡಿರುವುದನ್ನು ಸ್ವಾಗತಿಸುವ ಮೂಲಕ ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗುವಂತೆ ಮಾಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ