Desi Swara: ಜ.14:ಬೆಂಗಳೂರಿನಲ್ಲಿ” ಅರಬ್ಬರ ನಾಡಿನಲ್ಲಿ ಕನ್ನಡಿಗರು” ಪುಸ್ತಕ ಬಿಡುಗಡೆ

20ಕ್ಕೂ ಹೆಚ್ಚು ಒಮಾನ್‌ ಕನ್ನಡಿಗರ ಬರಹ ದಾಖಲು

Team Udayavani, Jan 13, 2024, 2:46 PM IST

Oman

ವ್ಯಾಪಾರ ಮತ್ತು ಉದ್ಯೋಗಕ್ಕಾಗಿ ಜನ ವಲಸೆ ಹೋಗುವುದು ಸರ್ವೇ ಸಾಮಾನ್ಯ. ಒಂದು ದೇಶದಿಂದ ಇನ್ನೊಂದು ದೇಶಕ್ಕೆ ಜನ ಶತ ಶತಮಾನದಿಂದಲೂ ವಲಸೆ ಹೋಗುತ್ತಿದ್ದಾರೆ. ಭಾರತೀಯರು ಸಹ ಇನ್ನೂರಕ್ಕೂ ಅಧಿಕ ದೇಶಗಳಲ್ಲಿ ವಿಶ್ವದಾದ್ಯಂತ ನೆಲೆಸಿ ಉದ್ಯೋಗ ಮತ್ತು ಉದ್ಯಮದಲ್ಲಿ ತೊಡಗಿಸಿಕೊಂಡಿರುವುದನ್ನ ನಾವು ಕಾಣಬಹುದು. ಕೊಲ್ಲಿ ರಾಷ್ಟ್ರಗಳಲ್ಲಿ ತೈಲ ಆವಿಷ್ಕರಣೆಯ ಅನಂತರ ಉದ್ಯೋಗ ಮತ್ತು ವ್ಯವಹಾರಕ್ಕಾಗಿ ಲಕ್ಷಾಂತರ ಭಾರತೀಯರು ಇಲ್ಲಿಗೆ ವಲಸೆ ಬಂದು ನೆಲೆಸಿ¨ªಾರೆ. ಅವರಲ್ಲಿ ಹೆಚ್ಚಿನ ಸಂಖ್ಯೆಯ ಕನ್ನಡಿಗರು ಸಹ ಇದ್ದಾರೆ. ಅರಬ್‌ ರಾಷ್ಟ್ರಗಳು ಭಾರತದೊಂದಿಗಿನ ವಾಣಿಜ್ಯ ಸಂಭಂದ ಸುಮಾರು ಐದು ಸಾವಿರ ವರ್ಷಗಳ ಹಿಂದಿನಷ್ಟು ಹಳೆಯದು. ಹರಪ್ಪ ಮೊಹೆಂಜೋದಾರೋ ಕಾಲದಿಂದಲೂ ಹಿಂದಿದ್ದ ಆ ಬಾಂಧವ್ಯ ಇಂದಿಗೂ ಮುಂದುವರಿದಿದೆ.

ಕರುನಾಡಿನ ಬಹಳಷ್ಟು ಕನ್ನಡಿಗರಿಗೆ ಒಮಾನ್‌ ದೇಶದ ಬಗ್ಗೆ ಅಷ್ಟೇನು ಪರಿಚಯವಿಲ್ಲ. ಕೆಲವರಿಗೆ ಒಮಾನ್‌ ದೇಶ ಗಲ್ಫ್‌ ರಾಷ್ಟ್ರ ಮತ್ತು ಅರಬ್‌ ಮುಸ್ಲಿಂ ರಾಷ್ಟ್ರ ಅಂತ ಗೊತ್ತಿದೆ. ಇಲ್ಲಿ ಅತೀ ಕಡಿಮೆ ದರದಲ್ಲಿ ಪೆಟ್ರೋಲ್‌ ಸಿಗುತ್ತದೆ, ಬಿರು ಬಿಸಿಲಿನ ಜಾಗ, ಅತೀ ಹೆಚ್ಚು ಮರುಭೂಮಿ ಹೊಂದಿರುವ ಪ್ರದೇಶ ಹಾಗೂ ಇಲ್ಲಿ ಕಡಿಮೆ ಮಳೆ ಬೀಳುತ್ತದೆ. ಸೌದಿ ಅರೇಬಿಯಾ, ದುಬೈ ಹತ್ತಿರದಲ್ಲಿ ಈ ದೇಶವಿದೆ ಎಂದು ತಿಳಿದುಕೊಂಡಿದ್ದಾರೆ. ಅದೆಲ್ಲವೂ ನಿಜ.

ಜತೆಗೆ ಒಮಾನ್‌ ಒಂದು ಸುಂದರ ದೇಶ, ಇಲ್ಲಿ ನಿಸರ್ಗ ನಿರ್ಮಿತ ರಮ್ಯ ಮನೋಹರ ತಾಣಗಳಿವೆ. ಶಾಂತಿ ಪ್ರಿಯ ಹಾಗೂ ಸ್ನೇಹಪರ ಸ್ವಭಾವವುಳ್ಳ ಒಮಾನಿಗಳು ಪ್ರಜೆಗಳು ಇಲ್ಲಿ ನೆಲೆಸಿರುವ ಎಲ್ಲ ದೇಶದ ವಲಸೆ ಉದ್ಯೋಗಿಗಳನ್ನ ಗೌರವದಿಂದ ಕಾಣುತ್ತಾರೆ. ಇಲ್ಲಿ ಭಾರತೀಯರು ಸೇರಿದಂತೆ ಇತರ ದೇಶದವರು ಸುಮಾರು ಇಪ್ಪತ್ತು ಲಕ್ಷಕ್ಕೂ ಹೆಚ್ಚಿನ ವಲಸೆ ಉದ್ಯೋಗಿಗಳು ಇಲ್ಲಿ ನೆಲೆಸಿದ್ದಾ ರೆ.

ಭಾರತದೊಂದಿಗೆ ಉತ್ತಮ ಸಂಬಂಧ ಹೊಂದಿರುವ ಈ ದೇಶವನ್ನು ನಮ್ಮ ಕರುನಾಡಿನ ಕನ್ನಡಿಗರಿಗೆ ತಮ್ಮ ಅನುಭವದ ಮಾತುಗಳಿಂದ ಪರಿಚಯಿಸಬೇಕು ಎನ್ನುವ ಆಲೋಚನೆಯಿಂದ ಲೇಖಕರಾದ ಪಿ.ಎಸ್‌.ರಂಗನಾಥ ಅವರೊಂದು ವಿಭಿನ್ನ ಪ್ರಯತ್ನ ಮಾಡಿ ಅರಬ್ಬರ ನಾಡಿನಲ್ಲಿ ಕನ್ನಡಿಗರು ಎನ್ನುವ ಕೃತಿಯನ್ನು ಸಂಪಾದಿಸಿದ್ದಾರೆ. ಈ ಪುಸ್ತಕದ ಲೇಖಕರು ಒಬ್ಬರು, ಇಬ್ಬರಲ್ಲ. ಒಮಾನ್‌ ರಾಷ್ಟ್ರದಲ್ಲಿ ದಶಕಗಳಿಂದ ನೆಲೆಸಿರುವ ಸುಮಾರು ಇಪ್ಪತ್ತಕ್ಕೂ ಹೆಚ್ಚಿನ ಕನ್ನಡಿಗರಿಂದ ಅವರ ಅನುಭವ ಲೇಖನಗಳನ್ನು ಬರೆಯಿಸಿದ್ದಾರೆ. ಇದರಲ್ಲಿ ಎಂಜಿನಿಯರ್‌ಗಳು, ವೈದ್ಯರುಗಳು, ಅಧ್ಯಾಪಕರು ಮತ್ತು ಶಿಕ್ಷಕರು ಇದ್ದಾರೆ.

ಈ ಎಲ್ಲ ಬರಹಗಾರರು ತಮ್ಮ ಸ್ವಂತ ಅನುಭವದ ಜತೆಗೆ ಒಮಾನ್‌ನಲ್ಲಿ ನಡೆದ ಮತ್ತು ಕೇಳಿದ ಹಲವಾರು ಅನುಭವ ಕಥನಗಳು ಮತ್ತು ಸ್ಫೂರ್ತಿದಾಯಕ ಲೇಖನುಗಳು ಇಲ್ಲಿ ದಾಖಲಾಗಿವೆ. ಈ ಪುಸ್ತಕದ ಮೂಲಕ ಕನ್ನಡಿಗ ಓದುಗರಿಗೆ ಒಮಾನ್‌ನಲ್ಲಿನ ಇವರೆಲ್ಲರ ಬದುಕು, ಬವಣೆ, ಖುಷಿ ವಿಚಾರ ಇತ್ಯಾದಿಗಳನ್ನ ಪರಿಚಯಿಸುವ ವಿಭಿನ್ನ ಪ್ರಯತ್ನವನ್ನು ಮಾಡಿದ್ದಾರೆ. ಒಮಾನ್‌ನಲ್ಲಿ ಕನ್ನಡ ಸೇವೆ ಮಾಡುತ್ತಿರುವ ಸಂಘ ಸಂಸ್ಥೆಗಳು, ಸಾಂಸ್ಕೃತಿಕ, ಧಾರ್ಮಿಕ ಕಾರ್ಯಕ್ರಮ ನಡೆಸುತ್ತಿರುವ ಸಂಘಟನೆಗಳು, ಕತೆ, ಕವನ ಲೇಖನಗಳನ್ನ ಬರೆಯುತ್ತಿರುವ ಬರಹಗಾರರು, ಕನ್ನಡದ ಸಾಧಕರು ಮತ್ತು ನಮ್ಮ ಮಕ್ಕಳಿಗೆ ಕನ್ನಡ ಕಲಿಸುತ್ತಿರುವ ಶಿಕ್ಷಕರು ಇವರೆಲ್ಲರ ಪರಿಚಯ ಮತ್ತು ಒಮಾನ್‌ ಅನುಭವ ಕಥನಗಳು ಹೀಗೆ ವಿವಿಧ ವಿಷಯಗಳನ್ನು ಈ ಪುಸ್ತಕ ಒಳಗೊಂಡಿದೆ. ಒಮಾನ್‌ ದೇಶದಲ್ಲಿ ನೆಲೆಗೊಂಡಿರುವ ಕನ್ನಡಿಗರ ಸಾಂಸ್ಕೃತಿಕ ಲೋಕವನ್ನು ಈ ಪುಸ್ತಕದ ಮೂಲಕ ಅರಿತುಕೊಳ್ಳಬಹುದು.

ಕೊಲ್ಲಿ ರಾಷ್ಟ್ರಗಳಲ್ಲಿ ನೆಲೆಸಿರುವ ಕನ್ನಡಿಗರ ಪರವಾದ ಮೊದಲ ಪುಸ್ತಕವು ಇದಾಗಿದೆ. ಪಿ.ಎಸ್‌.ರಂಗನಾಥ್‌ ಅವರು ಸುಮಾರು 14 ವರ್ಷಗಳಿಂದ ಒಮಾನ್‌ ರಾಷ್ಟ್ರದ ರಾಜಧಾನಿ ಮಸ್ಕತ್‌ ನಲ್ಲಿ ನೆಲೆಸಿ ಉದ್ಯೋಗ ಮಾಡುತ್ತಿದ್ದಾ ರೆ. ಅದಕ್ಕೂ ಮುಂಚೆ ದುಬೈ ಮತ್ತು ಕುವೈಟ್‌ನಲ್ಲಿ 4 ವರ್ಷಗಳ ಕಾಲ ನೆಲೆಸಿದ್ದರು. ಕಳೆದ ಒಂದೂವರೆ ದಶಕಕ್ಕಿಂತಲೂ ಹೆಚ್ಚಿನ ಕಾಲ ಗಲ್ಫ್‌ ರಾಷ್ಟ್ರಗಳಲ್ಲಿ ನೆಲೆಸಿರುವುದರಿಂದ ಇಲ್ಲಿನ ಸಂಪೂರ್ಣ ಚಿತ್ರಣವನ್ನು ಪುಸ್ತಕದ ರೂಪದಲ್ಲಿ ಯಾಕೆ ಹೊರತರಬಾರದು ಎನ್ನುವ ಆಲೋಚನೆಯ ಫ‌ಲಶೃತಿಯೇ ಈ ಪುಸ್ತಕ. ಇದೊಂದು ವಿನೂತನ ಪ್ರಯತ್ನ ಎಂದು ಹೇಳಬಹುದು. ಇದೇ ಜ.14ರಂದು ರವಿವಾರ ಬೆಂಗಳೂರಿನ ಚಾಮರಾಜಪೇಟೆಯ ಕನ್ನಡ ಸಾಹಿತ್ಯ ಪರಿಷತ್‌ನಲ್ಲಿ ಈ ಕೃತಿಯು ಬಿಡುಗಡೆಯಾಗಲಿದೆ.

ಟಾಪ್ ನ್ಯೂಸ್

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.